AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಇಂದ್ರಜಿತ್​ ಲಂಕೇಶ್​ ಸುದ್ದಿಗೋಷ್ಠಿ: ಮೇರುನಟ ಹೇಗಿರಬೇಕು ಎಂದು ರಾಜ್​ಕುಮಾರ್​ ನೋಡಿ ಕಲಿಯಲಿ; ದರ್ಶನ್​ಗೆ ಇಂದ್ರಜಿತ್​ ಬುದ್ಧಿವಾದ

Indrajit lankesh Press meet: ದರ್ಶನ್​ ವಿರುದ್ಧ ಗಂಭೀರ ಆರೋಪ ಮಾಡಿದ್ದ ಇಂದ್ರಜಿತ್​ ಲಂಕೇಶ್​ ಅವರು ಇಂದು (ಜುಲೈ 16) ಸುದ್ದಿಗೋಷ್ಠಿ ನಡೆಸಿದ್ದರು. ಹೀಗಾಗಿ, ಅವರು ಸುದ್ದಿಗೋಷ್ಠಿ ನಡೆಸಿದ ಬೆಂಗಳೂರಿನ ಇಂದ್ರಜಿತ್​ ಲಂಕೇಶ್ ಕಚೇರಿಗೆ ಭದ್ರತೆ ನೀಡಲಾಗಿದೆ

ಇಂದ್ರಜಿತ್​ ಲಂಕೇಶ್​ ಸುದ್ದಿಗೋಷ್ಠಿ: ಮೇರುನಟ ಹೇಗಿರಬೇಕು ಎಂದು ರಾಜ್​ಕುಮಾರ್​ ನೋಡಿ ಕಲಿಯಲಿ; ದರ್ಶನ್​ಗೆ ಇಂದ್ರಜಿತ್​ ಬುದ್ಧಿವಾದ
ಇಂದ್ರಜಿತ್​ ಲಂಕೇಶ್​
TV9 Web
| Edited By: |

Updated on:Jul 16, 2021 | 6:28 PM

Share

ಮೈಸೂರಿನ ಸಂದೇಶ್​ ದಿ ಪ್ರಿನ್ಸ್​ ಹೋಟೆಲ್​ ಸಿಬ್ಬಂದಿ ಗಂಗಾಧರ್​ ಅವರ ಮೇಲೆ ಹಲ್ಲೆ ನಡೆದಿದೆ ಎನ್ನುವ ಆರೋಪ ಪ್ರಕರಣ ಗಂಟೆಗೆ ಒಂದೊಂದು ರೀತಿಯ ತಿರುವು ಪಡೆದುಕೊಳ್ಳುತ್ತಿದೆ. ಅಂದು ಹಲ್ಲೆಯೇ ಆಗಿಲ್ಲ ಎಂದು ಗಂಗಾಧರ್​ ಹೇಳಿದ್ದರು. ಈ ಬೆನ್ನಲ್ಲೇ ನಿರ್ದೇಶಕ ಇಂದ್ರಜಿತ್​ ಸುದ್ದಿಗೋಷ್ಠಿ ನಡೆಸಿದ್ದಾರೆ. 

‘ನಾನು ನನ್ನ ಮಾತಿಗೆ ಬದ್ಧನಾಗಿದ್ದೇನೆ. ಸಮಾಜದ ಹಿತದೃಷ್ಟಿಗಾಗಿ ನಮ್ಮ ಕುಟುಂಬ ಕೆಲಸ ಮಾಡುತ್ತ ಬಂದಿದೆ. ಬಡವರಿಗೆ, ಸಾಮಾನ್ಯರಿಗೆ ಅನ್ಯಾಯವಾಗಿದೆ. ಸೆಲೆಬ್ರಿಟಿಗಳ ದೃಷ್ಟಿಯಿಂದ ನಾನು ಮುಂದೆ ಬಂದಿಲ್ಲ. ಯಾರದ್ದೇ ತೇಜೋವಧೆ ಮಾಡುವ ಉದ್ದೇಶ ನನ್ನದಲ್ಲ. ನೋವು ತಿಂದವರಿಗೆ ನ್ಯಾಯ ಒದಗಿಸಿಕೊಡಿ. ಇದಕ್ಕೂ ಮೇಲೆ ನನಗೇನು ಬೇಡ. ಪೊಲೀಸರಿಗೆ ಸಹಕಾರ ನೀಡೋಕೆ ಸಿದ್ಧನಿದ್ದೇನೆ’ ಎಂದಿದ್ದಾರೆ ಇಂದ್ರಜಿತ್​.

‘ಎಚ್​.ಡಿ. ಕುಮಾರಸ್ವಾಮಿಗೂ ಇದಕ್ಕೂ ಯಾವುದೇ ಸಂಬಂಧವಿಲ್ಲ. ನಾನು ಸ್ವತಃ ಮುಂದೆ ಬಂದು ಹೇಳಿದ್ದೇನೆ. ಮೇರುನಟ ಹೇಗಿರಬೇಕು ಎಂದು ರಾಜ್​ಕುಮಾರ್​ ಅವರಿಂದ ಕಲಿಯಬೇಕು’ ಎಂದು ದರ್ಶನ್​ಗೆ ಇಂದ್ರಜಿತ್ ಕಿವಿಮಾತು ಹೇಳಿದ್ದಾರೆ .

ಹಲ್ಲೆಗೊಳಗಾದ ಸಿಬ್ಬಂದಿ ದಲಿತ ಎಂದು ಇಂದ್ರಜಿತ್ ಹೇಳಿದ್ದರು. ಆದರೆ ನಾನು ದಲಿತನಲ್ಲ ಎಂದು ಗಂಗಾಧರ್​ ಅವರೇ ಹೇಳಿದ್ದರು.  ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಇಂದ್ರಜಿತ್​ ‘ದಲಿತರು ಎಂದು ನಾನು ಜಾತಿ ಆಧಾರದ ಮೇಲೆ ಹೇಳಿದ್ದು ಅಲ್ಲ. ಬಡವರು ದಲಿತರು. ನಾನು ಆ ಅರ್ಥದಲ್ಲಿ ಹೇಳಿದ್ದೇನೆ ಅಷ್ಟೆ. ದಯವಿಟ್ಟು ಇದಕ್ಕೆ ಬೇರೆ ಅರ್ಥ ಕಲ್ಪಿಸಬೇಡಿ ’ ಎಂದಿದ್ದಾರೆ.

ದರ್ಶನ್​ ವಿರುದ್ಧ ಗಂಭೀರ ಆರೋಪ ಮಾಡಿದ್ದ ಇಂದ್ರಜಿತ್​ ಲಂಕೇಶ್​ ಅವರು ಇಂದು (ಜುಲೈ 16) ಸುದ್ದಿಗೋಷ್ಠಿ ನಡೆಸಿದ್ದರು. ಹೀಗಾಗಿ,  ಸುದ್ದಿಗೋಷ್ಠಿ ನಡೆದ  ಇಂದ್ರಜಿತ್​ ಲಂಕೇಶ್ ಕಚೇರಿಗೆ ಭದ್ರತೆ ನೀಡಲಾಗಿದೆ. ಹಲಸೂರಿನ ಗಂಗಾಧರ ಚೆಟ್ಟಿ ರಸ್ತೆಯಲ್ಲಿ ಈ ಕಚೇರಿ ಇದೆ. ಭದ್ರತೆಗೆ 10ಕ್ಕೂ ಹೆಚ್ಚು ಪೊಲೀಸ್ ಸಿಬ್ಬಂದಿ ನಿಯೋಜನೆ ಮಾಡಲಾಗಿದೆ.

ಇದನ್ನೂ ಓದಿ:Darshan: ಇಂದ್ರಜಿತ್​ ಈ ಪ್ರಕರಣವನ್ನು ಎಲ್ಲಿಗೋ ತಗೊಂಡು ಹೋಗ್ತಿದ್ದಾರೆ; ದರ್ಶನ್​

ನನ್ನ ಮತ್ತು ಇಂದ್ರಜಿತ್ ಭೇಟಿಯ ಚಿತ್ರ ಹಳೆಯದು: ಮಾಜಿ ಸಿಎಂ ಎಚ್​.ಡಿ.ಕುಮಾರಸ್ವಾಮಿ ಸ್ಪಷ್ಟನೆ 

Published On - 6:11 pm, Fri, 16 July 21

40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ
‘ಜೈ ಹನುಮಾನ’ ಚಿತ್ರದ ಮುಹೂರ್ತ: ಅಂಜನಾದ್ರಿ ಬೆಟ್ಟಕ್ಕೆ ಬಂದ ರಿಷಬ್ ಶೆಟ್ಟಿ
‘ಜೈ ಹನುಮಾನ’ ಚಿತ್ರದ ಮುಹೂರ್ತ: ಅಂಜನಾದ್ರಿ ಬೆಟ್ಟಕ್ಕೆ ಬಂದ ರಿಷಬ್ ಶೆಟ್ಟಿ
ಶಿಕ್ಷಕರ ನೇಮಕಾತಿ ಬಗ್ಗೆ ಬಿಗ್​​ ಅಪ್ಡೇಟ್​​ ಕೊಟ್ಟ ಸಿಎಂ ಸಿದ್ದರಾಮಯ್ಯ
ಶಿಕ್ಷಕರ ನೇಮಕಾತಿ ಬಗ್ಗೆ ಬಿಗ್​​ ಅಪ್ಡೇಟ್​​ ಕೊಟ್ಟ ಸಿಎಂ ಸಿದ್ದರಾಮಯ್ಯ