AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಸಿನಿಮಾ ನಟರು ಟ್ವೀಟ್​ ಮಾಡಿದ್ರೆ ಸಾಲದು’; ಬೆಳಗಾವಿ ಹೋರಾಟದ ಬಗ್ಗೆ ಇಂದ್ರಜಿತ್​ ಲಂಕೇಶ್​ ಹೇಳಿಕೆ

Indrajit Lankesh: ‘ಸಿನಿಮಾರಂಗಕ್ಕೆ ಉತ್ತಮ ನಾಯಕತ್ವದ ಅವಶ್ಯಕತೆ ಇದೆ. ಈ ಸಂದರ್ಭದಲ್ಲಿ ಶಿವರಾಜ್​ಕುಮಾರ್ ಅವರು ನಾಯಕತ್ವ ವಹಿಸಿಕೊಳ್ಳಬೇಕು’ ಎಂದು ಇಂದ್ರಜಿತ್​ ಲಂಕೇಶ್​ ಹೇಳಿದ್ದಾರೆ.

‘ಸಿನಿಮಾ ನಟರು ಟ್ವೀಟ್​ ಮಾಡಿದ್ರೆ ಸಾಲದು’; ಬೆಳಗಾವಿ ಹೋರಾಟದ ಬಗ್ಗೆ ಇಂದ್ರಜಿತ್​ ಲಂಕೇಶ್​ ಹೇಳಿಕೆ
ಇಂದ್ರಜಿತ್ ಲಂಕೇಶ್
TV9 Web
| Edited By: |

Updated on: Dec 19, 2021 | 1:58 PM

Share

ಎಂಇಎಸ್​ (MES) ಕಾರ್ಯಕರ್ತರ ಪುಂಡಾಟಿಕೆ ಮಿತಿ ಮೀರಿದೆ. ಅದನ್ನು ಖಂಡಿಸಿ ಅನೇಕ ಸೆಲೆಬ್ರಿಟಿಗಳು ಸೋಶಿಯಲ್​ ಮೀಡಿಯಾ ಮೂಲಕ ಧ್ವನಿ ಎತ್ತುತ್ತಿದ್ದಾರೆ. ಆದರೆ ಕೇವಲ ಟ್ವೀಟ್​ ಮಾಡಿದರೆ ಸಾಲದು ಎಂದು ನಿರ್ದೇಶಕ ಇಂದ್ರಜಿತ್​ ಲಂಕೇಶ್​ (Indrajit Lankesh) ಹೇಳಿದ್ದಾರೆ. ‘ನಾನು ಟ್ವಿಟರ್​ ಹೋರಾಟದ’ ವಿರೋಧಿ ಎಂದು ಹೇಳಿರುವ ಅವರು, ಸ್ವತಃ ಬೆಳಗಾವಿಗೆ (Belagavi) ಹೋಗಿ ಪ್ರತಿಭಟನೆ ಮಾಡುವುದಾಗಿ ತಿಳಿಸಿದ್ದಾರೆ. ಕನ್ನಡ ಚಿತ್ರರಂಗದ ಇತರೆ ಸೆಲೆಬ್ರಿಟಿಗಳು ಸಹ ಬೆಳಗಾವಿಗೆ ಬಂದು ಹೋರಾಟ ಮಾಡಬೇಕು ಎಂದು ಇಂದ್ರಜಿತ್​ ಲಂಕೇಶ್​ ಒತ್ತಾಯಿಸಿದ್ದಾರೆ.

ಕರ್ನಾಟಕದ ಬಾವುಟ ಸುಟ್ಟು ಹಾಕಿದ ಘಟನೆಯನ್ನು ವಿರೋಧಿಸಿ ಅನೇಕ ಕಲಾವಿದರು ಟ್ವೀಟ್​ ಮಾಡಿದ್ದರು. ಈಗ ಬೆಳಗಾವಿಯಲ್ಲಿ ಕನ್ನಡಪರ ಹೋರಾಟದ ಕಿಚ್ಚು ಜೋರಾಗಿದೆ. ಈ ಸಂದರ್ಭದಲ್ಲಿ ಸೆಲೆಬ್ರಿಟಿಗಳು ಬರೀ ಟ್ವೀಟ್​ ಮಾಡುವುದರಿಂದ ಏನೂ ಆಗುವುದಿಲ್ಲ ಎಂಬುದು ಇಂದ್ರಜಿತ್​ ಲಂಕೇಶ್​ ಅವರ ಅಭಿಪ್ರಾಯ. ಈ ವಿಚಾರದಲ್ಲಿ ತಮ್ಮ ನಿಲುವು ಏನು ಎಂಬುದನ್ನು ಅವರು ತಿಳಿಸಿದ್ದಾರೆ. ಸೆಲೆಬ್ರಿಟಿಗಳು ಟ್ವೀಟ್​ ಮಾಡುತ್ತಿರುವ ಕುರಿತು ಮೈಸೂರಿನಲ್ಲಿ ಇಂದ್ರಜಿತ್​ ಲಂಕೇಶ್​ ಹೇಳಿಕೆ ನೀಡಿದ್ದಾರೆ.

‘ಸಿನಿಮಾ ನಟರು ಕೇವಲ ಟ್ವೀಟ್ ಮಾಡಿ‌ ಸುಮ್ಮನಾಗಬಾರದು. ಸಿನಿಮಾದವರು ಬೆಳಗಾವಿಗೆ ಹೋಗಿ ಹೋರಾಟಕ್ಕೆ ಬೆಂಬಲ‌ ನೀಡಬೇಕು. ಸಿನಿಮಾ ರಂಗದಲ್ಲಿ ಈಗ ನಾಯಕತ್ವದ ಕೊರತೆ ಇದೆ. ಡಾ. ರಾಜ್​ಕುಮಾರ್​ ಮತ್ತು ಅಂಬರೀಷ್​ ನಂತರ ಕನ್ನಡ ಚಿತ್ರರಂಗದಲ್ಲಿ ನಾಯಕತ್ವ ಇಲ್ಲದಂತಾಗಿದೆ. ಕನ್ನಡದ ಪರ ಹೋರಾಟಕ್ಕೆ ಬನ್ನಿ ಅಂತಾ ಕರೆಯಬೇಕಾದ ದುಸ್ಥಿತಿ ಇದೆ’ ಎಂದು ಇಂದ್ರಜಿತ್​ ಲಂಕೇಶ್​ ಹೇಳಿದ್ದಾರೆ.

‘ಸಿನಿಮಾರಂಗಕ್ಕೆ ಉತ್ತಮ ನಾಯಕತ್ವದ ಅವಶ್ಯಕತೆ ಇದೆ. ಈ ಸಂದರ್ಭದಲ್ಲಿ ಶಿವರಾಜ್​ಕುಮಾರ್ ಅವರು ನಾಯಕತ್ವ ವಹಿಸಿಕೊಳ್ಳಬೇಕು. ಅವರ ನಾಯಕತ್ವದಲ್ಲಿ ಎಲ್ಲರೂ ಹೋರಾಟಕ್ಕೆ ಬೆಂಬಲ‌ ನೀಡಬೇಕು. ನಾನು ಟ್ವಿಟರ್ ಹೋರಾಟದ ವಿರೋಧಿ. ನೇರವಾಗಿ ಬೆಳಗಾವಿಗೆ ಹೋಗುತ್ತೇನೆ. ಈ ಹಿಂದೆ ಗೋಕಾಕ್ ಚಳುವಳಿಗೆ ಡಾ. ರಾಜ್‌ಕುಮಾರ್ ಅವರನ್ನು ಕರೆ ತಂದಿದ್ದು ನಮ್ಮ ತಂದೆ ಲಂಕೇಶ್. ಡಾ. ರಾಜ್ ಅನುಮತಿ ಇಲ್ಲದೆ ಗೋಕಾಕ್ ಹೋರಾಟಕ್ಕೆ ರಾಜ್ ಅಂತ ಲೇಖನ ಬರೆದಿದ್ದರು. ನಂತರ ಡಾ. ರಾಜ್​ಕುಮಾರ್​ ಅವರು ಹೋರಾಟಕ್ಕೆ ಬಂದಿದ್ದರು’ ಎಂದು ಇಂದ್ರಜಿತ್​ ಲಂಕೇಶ್​ ಹೇಳಿದ್ದಾರೆ.

‘ಕನ್ನಡ ರಾಜ್ಯೋತ್ಸವ ಸಮಾರಂಭಕ್ಕೆ ಆಗಮಿಸಿದ ನನಗೆ ಮಸಿ ಬಳಿಯುವುದಾಗಿ ಕೆಲವರು ಹೇಳಿದ್ದರು. ಆ ಬಗ್ಗೆ ನಾನು ಹೆಚ್ಚು ಮಾತನಾಡುವುದಿಲ್ಲ. ನನ್ನ ಸಹೋದರಿ ಗೌರಿ ಲಂಕೇಶ್ ಹೋರಾಟ ಮಾಡುತ್ತಲೇ ಕೊಲೆಯಾಗಿ ಹೋದಳು. ನಾನು ಸಹ ಹೋರಾಟ ಮಾಡಿಕೊಂಡು ಬಂದವನು. ನನಗೆ ಮಸಿ ಬಳಿಯುವುದಿರಲಿ, ಕೊಲೆ ಮಾಡುತ್ತೇನೆಂದು ಬೆದರಿಸಿದರೂ ನಾನು ಹೆದರುವುದಿಲ್ಲ’ ಎಂದಿದ್ದಾರೆ ಇಂದ್ರಜಿತ್ ಲಂಕೇಶ್.

ಇದನ್ನೂ ಓದಿ:

‘ಕನ್ನಡದ ಬಾವುಟಕ್ಕೆ ಮರ್ಯಾದೆ ಕೊಡಲೇ ಬೇಕು’; ಧ್ರುವ ಸರ್ಜಾ ಖಡಕ್​ ಮಾತು

ಬೆಳಗಾವಿಯಲ್ಲಿ ಎಂಇಎಸ್ ಪುಂಡರ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಕರವೇ ಕಾರ್ಯಕರ್ತರಿಂದ ಪ್ರತಿಭಟನೆ! ಲಾಠಿ ಹಿಡಿದು ಧರಣಿ ನಿರತರನ್ನು ಚದುರಿಸಿದ ಪೊಲೀಸರು

Follow Us
ದೆಹಲಿಯಲ್ಲಿ ಭಾರಿ ಮಳೆಯಿಂದ ಕಟ್ಟಡ ಕುಸಿತ; ಓರ್ವ ಸಾವು
ದೆಹಲಿಯಲ್ಲಿ ಭಾರಿ ಮಳೆಯಿಂದ ಕಟ್ಟಡ ಕುಸಿತ; ಓರ್ವ ಸಾವು
ಇಂಡೋನೇಷ್ಯಾ ಪ್ರವಾಸ ಮುಗಿಸಿ ಮೆಲ್ಬೋರ್ನ್‌ಗೆ ಬಂದಿಳಿದ ಪ್ರಧಾನಿ ಮೋದಿ
ಇಂಡೋನೇಷ್ಯಾ ಪ್ರವಾಸ ಮುಗಿಸಿ ಮೆಲ್ಬೋರ್ನ್‌ಗೆ ಬಂದಿಳಿದ ಪ್ರಧಾನಿ ಮೋದಿ
ಅನ್ನಭಾಗ್ಯ ಫಲಾನುಭವಿಗಳಿಗೆ ಗುಡ್​ನ್ಯೂಸ್​​: ಶೀಘ್ರದಲ್ಲೇ ಇಂದಿರಾ ಕಿಟ್
ಅನ್ನಭಾಗ್ಯ ಫಲಾನುಭವಿಗಳಿಗೆ ಗುಡ್​ನ್ಯೂಸ್​​: ಶೀಘ್ರದಲ್ಲೇ ಇಂದಿರಾ ಕಿಟ್
ಏಷ್ಯಾಕಪ್ ಟ್ರೋಫಿ ಟೀಂ ಇಂಡಿಯಾ ಕೈ ಸೇರುವುದು ಯಾವಾಗ?
ಏಷ್ಯಾಕಪ್ ಟ್ರೋಫಿ ಟೀಂ ಇಂಡಿಯಾ ಕೈ ಸೇರುವುದು ಯಾವಾಗ?
ಕೆತ್ತಿಕಲ್‌ ಗುಡ್ಡ ಕುಸಿತಕ್ಕೆ ಸ್ಫೋಟಕ ಕಾರಣ ಬಿಚ್ಚಿಟ್ಟ ಪರಿಸರ ತಜ್ಞ
ಕೆತ್ತಿಕಲ್‌ ಗುಡ್ಡ ಕುಸಿತಕ್ಕೆ ಸ್ಫೋಟಕ ಕಾರಣ ಬಿಚ್ಚಿಟ್ಟ ಪರಿಸರ ತಜ್ಞ
ಕನ್ನಡಿಗರ ಬಗ್ಗೆ ಪ್ರೀತಿಯಿಂದ ಮಾತನಾಡಿ ‘ಟಾಕ್ಸಿಕ್’ ನಟಿ ಹುಮಾ ಖುರೇಷಿ
ಕನ್ನಡಿಗರ ಬಗ್ಗೆ ಪ್ರೀತಿಯಿಂದ ಮಾತನಾಡಿ ‘ಟಾಕ್ಸಿಕ್’ ನಟಿ ಹುಮಾ ಖುರೇಷಿ
2 ದಿನ ಕೆರೆಯಲ್ಲಿ ನರಳಾಡಿ ತನ್ನಷ್ಟಕ್ಕೇ ತಾನೆ ಆಚೆ ಬಂದ ಆನೆ
2 ದಿನ ಕೆರೆಯಲ್ಲಿ ನರಳಾಡಿ ತನ್ನಷ್ಟಕ್ಕೇ ತಾನೆ ಆಚೆ ಬಂದ ಆನೆ
ಮತ್ತೊಂದು ಕಲ್ಲು ಗಣಿಗಾರಿಕೆ ದುರಂತ: ಜೆಸಿಬಿ ಮೇಲೆ ಬಿದ್ದ ಬಂಡೆ
ಮತ್ತೊಂದು ಕಲ್ಲು ಗಣಿಗಾರಿಕೆ ದುರಂತ: ಜೆಸಿಬಿ ಮೇಲೆ ಬಿದ್ದ ಬಂಡೆ
ಸಿದ್ದರಾಮಯ್ಯನವರಿಂದ ದೂರ: ವಿಡಿಯೋ ವೈರಲ್ ಬಗ್ಗೆ ಜಾರಕಿಹೊಳಿ ಸ್ಪಷ್ಟನೆ
ಸಿದ್ದರಾಮಯ್ಯನವರಿಂದ ದೂರ: ವಿಡಿಯೋ ವೈರಲ್ ಬಗ್ಗೆ ಜಾರಕಿಹೊಳಿ ಸ್ಪಷ್ಟನೆ
ಜಿಬಿಎ ನಿರ್ಲಕ್ಷ್ಯ: ಹೊಂಡದಲ್ಲಿ ಕಾರಿನ ಚಕ್ರ ಸಿಲುಕಿ ಚಾಲಕನ ಪರದಾಟ
ಜಿಬಿಎ ನಿರ್ಲಕ್ಷ್ಯ: ಹೊಂಡದಲ್ಲಿ ಕಾರಿನ ಚಕ್ರ ಸಿಲುಕಿ ಚಾಲಕನ ಪರದಾಟ