AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಇಂದ್ರಜಿತ್ ಲಂಕೇಶ್ ಸುದ್ದಿಗೋಷ್ಠಿ: ದರ್ಶನ್ ಹಿಂಬಾಲಕರು, ರೌಡಿಗಳು ಬೆದರಿಕೆ ಹಾಕ್ತಿದಾರೆ, ಇವರಿಗೆ ಪಾಠ ಕಲಿಸುತ್ತೇನೆ; ಇಂದ್ರಜಿತ್ ಎಚ್ಚರಿಕೆ

ಇಂದ್ರಜಿತ್​ ಮಾಡುವ ಆರೋಪಕ್ಕೆ ದರ್ಶನ್​ ಉತ್ತರ ನೀಡಿದರೆ, ದರ್ಶನ್​ ಮಾಡುವ ಪ್ರತ್ಯಾರೋಪಕ್ಕೆ ಇಂದ್ರಜಿತ್​ ಉತ್ತರಿಸುತ್ತಿದ್ದಾರೆ. ಹೀಗಾಗಿ, ಇಬ್ಬರ ನಡುವಿನ ಕಿತ್ತಾಟ ಮುಂದುವರಿಯುತ್ತಲೇ ಇದೆ.

ಇಂದ್ರಜಿತ್ ಲಂಕೇಶ್ ಸುದ್ದಿಗೋಷ್ಠಿ: ದರ್ಶನ್ ಹಿಂಬಾಲಕರು, ರೌಡಿಗಳು ಬೆದರಿಕೆ ಹಾಕ್ತಿದಾರೆ, ಇವರಿಗೆ ಪಾಠ ಕಲಿಸುತ್ತೇನೆ; ಇಂದ್ರಜಿತ್ ಎಚ್ಚರಿಕೆ
ಇಂದ್ರಜಿತ್​ ಲಂಕೇಶ್​
TV9 Web
| Edited By: |

Updated on:Jul 19, 2021 | 3:16 PM

Share

ನಿರ್ದೇಶಕ ಇಂದ್ರಜಿತ್ ಲಂಕೇಶ್​ ಹಾಗೂ ನಟ ದರ್ಶನ್​ ನಡುವಿನ ತಿಕ್ಕಾಟ ಸದ್ಯಕ್ಕೆ ಮುಗಿಯುವ ಲಕ್ಷಣ ಗೋಚರವಾಗುತ್ತಿಲ್ಲ. ಇಂದ್ರಜಿತ್​ ಮಾಡುವ ಆರೋಪಕ್ಕೆ ದರ್ಶನ್​ ಉತ್ತರ ನೀಡಿದರೆ, ದರ್ಶನ್​ ಮಾಡುವ ಪ್ರತ್ಯಾರೋಪಕ್ಕೆ ಇಂದ್ರಜಿತ್​ ಉತ್ತರಿಸುತ್ತಿದ್ದಾರೆ. ಹೀಗಾಗಿ, ಇಬ್ಬರ ನಡುವಿನ ಕಿತ್ತಾಟ ಮುಂದುವರಿಯುತ್ತಲೇ ಇದೆ. ಇಂದು (ಜುಲೈ 19) ಇಂದ್ರಜಿತ್​ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ್ದಾರೆ. ಇದಕ್ಕೆ ಕಾರಣ ಅವರಿಗೆ ಬರುತ್ತಿರುವ ಬೆದರಿಕೆಗಳು. 

ದರ್ಶನ್​ ವಿರುದ್ಧ ಮಾಡಿರುವ ಗಂಭೀರ ಆರೋಪದಿಂದ ಇಂದ್ರಜಿತ್​ ಬೆದರಿಕೆ ಎದುರಿಸುತ್ತಿದ್ದಾರೆ. ‘ಪ್ರಕರಣದ ಬಗ್ಗೆ ನಾನು ಏನನ್ನೂ ಮಾತನಾಡುವುದಿಲ್ಲ. ಅದನ್ನು ಕಾನೂನಾತ್ಮಕವಾಗಿ ಹೋರಾಡುತ್ತೇನೆ. ದರ್ಶನ್​ ಪ್ರಚೋದನೆ ಮೂಲಕ ದರ್ಶನ್​ ಹಿಂಬಾಲಕರು, ಅವರ​ ರೌಡಿಗಳು ಫೋನ್​ ಮೂಲಕ, ವಾಟ್ಸ್​ ಆ್ಯಪ್​ ಮೂಲಕ ಬೆದರಿಕೆ ಹಾಕುತ್ತಿದ್ದಾರೆ. ಕಳೆದ 24 ಗಂಟೆಯಲ್ಲಿ  ಪ್ರತಿ 30 ಸೆಕೆಂಡ್​ಗೆ ಒಂದು ಕರೆ ಬರ್ತಿದೆ. ಅಶ್ಲೀಲ ಚಿತ್ರಗಳಲ್ಲದೆ, ಅಶ್ಲೀಲ ಮೆಸೇಜ್​ಕೂಡ ಬರ್ತಿದೆ. ಹೀಗಾಗಿ ಸೈಬರ್​ ಕ್ರೈಮ್​ಗೆ ದೂರು ನೀಡುತ್ತಿದ್ದೇನೆ. ಅವರಿಗೆ ಪಾಠ ಕಲಿಸುತ್ತೇನೆ’ ಎಂದು ಎಚ್ಚರಿಸಿದ್ದಾರೆ ಇಂದ್ರಜಿತ್​.

‘30 ಜನರ ಗ್ಯಾಂಗ್​​ ನಿರಂತರವಾಗಿ ಕರೆ ಮಾಡುತ್ತಿದೆ. ಮೊಬೈಲ್ ಕರೆ ಸ್ವೀಕರಿಸಿದ ತಕ್ಷಣ ಕಾಲ್​ ಕಟ್ ಮಾಡುತ್ತಿದ್ದಾರೆ. ಕರೆ ಮಾಡಿ ನನ್ನನ್ನು ಹೆದರಿಸಲು ಯತ್ನಿಸಿದರೆ ನಾನು ಹೆದರಲ್ಲ. ಈ ರೀತಿ ನಿರಂತರ ಕರೆ, ವಾಟ್ಸಾಪ್ ಸಂದೇಶದಿಂದ ಕಿರಿಕಿರಿ ಉಂಟಾಗುತ್ತಿದೆ. ಹಾಗಾಗಿ ಸೈಬರ್​ ಕ್ರೈಂ ಪೊಲೀಸರಿಗೆ ದೂರು ನೀಡುತ್ತಿದ್ದೇನೆ. ನನಗೆ ತೊಂದರೆ ನೀಡುತ್ತಿರುವವರ ನಂಬರ್​ ಉಲ್ಲೇಖಿಸಿದ್ದೇನೆ. ಅಶ್ಲೀಲ ಟ್ರೋಲ್ ಬಗ್ಗೆಯೂ ದೂರು ನೀಡ್ತೀನಿ’ ಎಂದರು ಇಂದ್ರಜಿತ್.

ಇನ್ನು, ಸುದ್ದಿಗೋಷ್ಠಿ ವೇಳೆಯೆ ಇಂದ್ರಜಿತ್​ ಕರೆ ಸ್ವೀಕರಿಸಿ ತೋರಿಸಿದ್ದಾರೆ. ಕರೆ ಎತ್ತಿದ ನಂತರದಲ್ಲಿ ಯಾರೊಬ್ಬರೂ ಮಾತನಾಡುವುದಿಲ್ಲ. ಬದಲಿಗೆ ಕಾಲ್​ ಕಟ್​ ಮಾಡಿದ್ದಾರೆ. .

ಇದನ್ನೂ ಓದಿ: ದರ್ಶನ್-ಇಂದ್ರಜಿತ್ ಎಪಿಸೋಡ್ ಸಮ್ಮುಖದಲ್ಲಿ ಹಿರಿಯ ನಟ ಜಗ್ಗೇಶ್ ನೀಡಿರುವ ಸಚಿತ್ರ ಪ್ರತಿಕ್ರಿಯೆ ಏನು? ಕೊಟ್ಟ ಸಂದೇಶ ಏನು? ಹಂಚಿಕೊಂಡ ಚಿತ್ರಗಳು ಎಂಥವು?

Published On - 3:07 pm, Mon, 19 July 21

Follow Us
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ