Sign In

By signing in or creating an account, you agree with Associated Broadcasting Company's Terms & Conditions and Privacy Policy.

ಇಂದ್ರಜಿತ್ ಲಂಕೇಶ್ ಸುದ್ದಿಗೋಷ್ಠಿ: ದರ್ಶನ್ ಹಿಂಬಾಲಕರು, ರೌಡಿಗಳು ಬೆದರಿಕೆ ಹಾಕ್ತಿದಾರೆ, ಇವರಿಗೆ ಪಾಠ ಕಲಿಸುತ್ತೇನೆ; ಇಂದ್ರಜಿತ್ ಎಚ್ಚರಿಕೆ

ಇಂದ್ರಜಿತ್​ ಮಾಡುವ ಆರೋಪಕ್ಕೆ ದರ್ಶನ್​ ಉತ್ತರ ನೀಡಿದರೆ, ದರ್ಶನ್​ ಮಾಡುವ ಪ್ರತ್ಯಾರೋಪಕ್ಕೆ ಇಂದ್ರಜಿತ್​ ಉತ್ತರಿಸುತ್ತಿದ್ದಾರೆ. ಹೀಗಾಗಿ, ಇಬ್ಬರ ನಡುವಿನ ಕಿತ್ತಾಟ ಮುಂದುವರಿಯುತ್ತಲೇ ಇದೆ.

ಇಂದ್ರಜಿತ್ ಲಂಕೇಶ್ ಸುದ್ದಿಗೋಷ್ಠಿ: ದರ್ಶನ್ ಹಿಂಬಾಲಕರು, ರೌಡಿಗಳು ಬೆದರಿಕೆ ಹಾಕ್ತಿದಾರೆ, ಇವರಿಗೆ ಪಾಠ ಕಲಿಸುತ್ತೇನೆ; ಇಂದ್ರಜಿತ್ ಎಚ್ಚರಿಕೆ
ಇಂದ್ರಜಿತ್​ ಲಂಕೇಶ್​
Follow us
TV9 Web
| Updated By: ರಾಜೇಶ್ ದುಗ್ಗುಮನೆ

Updated on:Jul 19, 2021 | 3:16 PM

ನಿರ್ದೇಶಕ ಇಂದ್ರಜಿತ್ ಲಂಕೇಶ್​ ಹಾಗೂ ನಟ ದರ್ಶನ್​ ನಡುವಿನ ತಿಕ್ಕಾಟ ಸದ್ಯಕ್ಕೆ ಮುಗಿಯುವ ಲಕ್ಷಣ ಗೋಚರವಾಗುತ್ತಿಲ್ಲ. ಇಂದ್ರಜಿತ್​ ಮಾಡುವ ಆರೋಪಕ್ಕೆ ದರ್ಶನ್​ ಉತ್ತರ ನೀಡಿದರೆ, ದರ್ಶನ್​ ಮಾಡುವ ಪ್ರತ್ಯಾರೋಪಕ್ಕೆ ಇಂದ್ರಜಿತ್​ ಉತ್ತರಿಸುತ್ತಿದ್ದಾರೆ. ಹೀಗಾಗಿ, ಇಬ್ಬರ ನಡುವಿನ ಕಿತ್ತಾಟ ಮುಂದುವರಿಯುತ್ತಲೇ ಇದೆ. ಇಂದು (ಜುಲೈ 19) ಇಂದ್ರಜಿತ್​ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ್ದಾರೆ. ಇದಕ್ಕೆ ಕಾರಣ ಅವರಿಗೆ ಬರುತ್ತಿರುವ ಬೆದರಿಕೆಗಳು. 

ದರ್ಶನ್​ ವಿರುದ್ಧ ಮಾಡಿರುವ ಗಂಭೀರ ಆರೋಪದಿಂದ ಇಂದ್ರಜಿತ್​ ಬೆದರಿಕೆ ಎದುರಿಸುತ್ತಿದ್ದಾರೆ. ‘ಪ್ರಕರಣದ ಬಗ್ಗೆ ನಾನು ಏನನ್ನೂ ಮಾತನಾಡುವುದಿಲ್ಲ. ಅದನ್ನು ಕಾನೂನಾತ್ಮಕವಾಗಿ ಹೋರಾಡುತ್ತೇನೆ. ದರ್ಶನ್​ ಪ್ರಚೋದನೆ ಮೂಲಕ ದರ್ಶನ್​ ಹಿಂಬಾಲಕರು, ಅವರ​ ರೌಡಿಗಳು ಫೋನ್​ ಮೂಲಕ, ವಾಟ್ಸ್​ ಆ್ಯಪ್​ ಮೂಲಕ ಬೆದರಿಕೆ ಹಾಕುತ್ತಿದ್ದಾರೆ. ಕಳೆದ 24 ಗಂಟೆಯಲ್ಲಿ  ಪ್ರತಿ 30 ಸೆಕೆಂಡ್​ಗೆ ಒಂದು ಕರೆ ಬರ್ತಿದೆ. ಅಶ್ಲೀಲ ಚಿತ್ರಗಳಲ್ಲದೆ, ಅಶ್ಲೀಲ ಮೆಸೇಜ್​ಕೂಡ ಬರ್ತಿದೆ. ಹೀಗಾಗಿ ಸೈಬರ್​ ಕ್ರೈಮ್​ಗೆ ದೂರು ನೀಡುತ್ತಿದ್ದೇನೆ. ಅವರಿಗೆ ಪಾಠ ಕಲಿಸುತ್ತೇನೆ’ ಎಂದು ಎಚ್ಚರಿಸಿದ್ದಾರೆ ಇಂದ್ರಜಿತ್​.

‘30 ಜನರ ಗ್ಯಾಂಗ್​​ ನಿರಂತರವಾಗಿ ಕರೆ ಮಾಡುತ್ತಿದೆ. ಮೊಬೈಲ್ ಕರೆ ಸ್ವೀಕರಿಸಿದ ತಕ್ಷಣ ಕಾಲ್​ ಕಟ್ ಮಾಡುತ್ತಿದ್ದಾರೆ. ಕರೆ ಮಾಡಿ ನನ್ನನ್ನು ಹೆದರಿಸಲು ಯತ್ನಿಸಿದರೆ ನಾನು ಹೆದರಲ್ಲ. ಈ ರೀತಿ ನಿರಂತರ ಕರೆ, ವಾಟ್ಸಾಪ್ ಸಂದೇಶದಿಂದ ಕಿರಿಕಿರಿ ಉಂಟಾಗುತ್ತಿದೆ. ಹಾಗಾಗಿ ಸೈಬರ್​ ಕ್ರೈಂ ಪೊಲೀಸರಿಗೆ ದೂರು ನೀಡುತ್ತಿದ್ದೇನೆ. ನನಗೆ ತೊಂದರೆ ನೀಡುತ್ತಿರುವವರ ನಂಬರ್​ ಉಲ್ಲೇಖಿಸಿದ್ದೇನೆ. ಅಶ್ಲೀಲ ಟ್ರೋಲ್ ಬಗ್ಗೆಯೂ ದೂರು ನೀಡ್ತೀನಿ’ ಎಂದರು ಇಂದ್ರಜಿತ್.

ಇನ್ನು, ಸುದ್ದಿಗೋಷ್ಠಿ ವೇಳೆಯೆ ಇಂದ್ರಜಿತ್​ ಕರೆ ಸ್ವೀಕರಿಸಿ ತೋರಿಸಿದ್ದಾರೆ. ಕರೆ ಎತ್ತಿದ ನಂತರದಲ್ಲಿ ಯಾರೊಬ್ಬರೂ ಮಾತನಾಡುವುದಿಲ್ಲ. ಬದಲಿಗೆ ಕಾಲ್​ ಕಟ್​ ಮಾಡಿದ್ದಾರೆ. .

ಇದನ್ನೂ ಓದಿ: ದರ್ಶನ್-ಇಂದ್ರಜಿತ್ ಎಪಿಸೋಡ್ ಸಮ್ಮುಖದಲ್ಲಿ ಹಿರಿಯ ನಟ ಜಗ್ಗೇಶ್ ನೀಡಿರುವ ಸಚಿತ್ರ ಪ್ರತಿಕ್ರಿಯೆ ಏನು? ಕೊಟ್ಟ ಸಂದೇಶ ಏನು? ಹಂಚಿಕೊಂಡ ಚಿತ್ರಗಳು ಎಂಥವು?

Published On - 3:07 pm, Mon, 19 July 21

ಬೆಂಗಳೂರಿನ ರೈಲಿನೊಳಗೆ ಯುವಕನಿಂದ ಮೂತ್ರ ವಿಸರ್ಜನೆ; ವಿಡಿಯೋ ವೈರಲ್
ಬೆಂಗಳೂರಿನ ರೈಲಿನೊಳಗೆ ಯುವಕನಿಂದ ಮೂತ್ರ ವಿಸರ್ಜನೆ; ವಿಡಿಯೋ ವೈರಲ್
ಪ್ರತಿದಿನ ಮಾಧ್ಯಮಗಳೊಂದಿಗೆ ಮಾತಾಡುವ ರೇಣುಕಾಚಾರ್ಯಗೆ ವಿಷಯಗಳು ಸಿಗುತ್ತಿಲ್ಲ
ಪ್ರತಿದಿನ ಮಾಧ್ಯಮಗಳೊಂದಿಗೆ ಮಾತಾಡುವ ರೇಣುಕಾಚಾರ್ಯಗೆ ವಿಷಯಗಳು ಸಿಗುತ್ತಿಲ್ಲ
ಮಟ ಮಟ ಮಧ್ಯಾಹ್ನ ಫುಲ್ ಟೈಟ್​ ಆಗಿ ಬಂದು ಬಸ್ ಕೆಳಗೆ ಮಲಗಿದ ಕುಡುಕ!
ಮಟ ಮಟ ಮಧ್ಯಾಹ್ನ ಫುಲ್ ಟೈಟ್​ ಆಗಿ ಬಂದು ಬಸ್ ಕೆಳಗೆ ಮಲಗಿದ ಕುಡುಕ!
ಪೊಲೀಸರಿಂದ ಸೂಕ್ತ ತನಿಖೆ ಆಗುತ್ತಿಲ್ಲವೆಂದು ಅರೋಪಿಸಿದ ಸಂಬಂಧಿಕರು
ಪೊಲೀಸರಿಂದ ಸೂಕ್ತ ತನಿಖೆ ಆಗುತ್ತಿಲ್ಲವೆಂದು ಅರೋಪಿಸಿದ ಸಂಬಂಧಿಕರು
ಪ್ರದೀಪ್ ಮಾತುಗಳಿಗೆ ಸಭಿಕರು ತೀವ್ರ ಆಕ್ರೋಶ ವ್ಯಕ್ತಪಡಿಸಿದದರು: ಮೋಹನ್
ಪ್ರದೀಪ್ ಮಾತುಗಳಿಗೆ ಸಭಿಕರು ತೀವ್ರ ಆಕ್ರೋಶ ವ್ಯಕ್ತಪಡಿಸಿದದರು: ಮೋಹನ್
ಬದುಕುಳಿದು ಬಂದು ಅಪಘಾತದ ಭೀಕರತೆ ಬಿಚ್ಚಿಟ್ಟ ಪರಸಪ್ಪ
ಬದುಕುಳಿದು ಬಂದು ಅಪಘಾತದ ಭೀಕರತೆ ಬಿಚ್ಚಿಟ್ಟ ಪರಸಪ್ಪ
VIDEO: ರಾಕಿ ಭಾಯ್ ಸ್ಟೈಲ್​ನಲ್ಲಿ ಡೆಲ್ಲಿ ಕ್ಯಾಪಿಟಲ್ಸ್​ಗೆ ಕನ್ನಡಿಗನ ಎಂಟ್
VIDEO: ರಾಕಿ ಭಾಯ್ ಸ್ಟೈಲ್​ನಲ್ಲಿ ಡೆಲ್ಲಿ ಕ್ಯಾಪಿಟಲ್ಸ್​ಗೆ ಕನ್ನಡಿಗನ ಎಂಟ್
ಹತ್ತಿರದ ಸಂಬಂಧಿಯೊಬ್ಬರ ಸಾವಿನ ಕಾರಣ ಪರಮೇಶ್ವರ್ ಭಾಗಿಯಾಗಿರಲಿಲ್ಲ: ಪಾಟೀಲ್
ಹತ್ತಿರದ ಸಂಬಂಧಿಯೊಬ್ಬರ ಸಾವಿನ ಕಾರಣ ಪರಮೇಶ್ವರ್ ಭಾಗಿಯಾಗಿರಲಿಲ್ಲ: ಪಾಟೀಲ್
ಕಾರಿನ ಮೇಲೆ ಬಿದ್ದ ಲಾರಿ: ಭಯಾನಕ ಅಪಘಾತ ಡ್ರೋನ್ ಕ್ಯಾಮರಾದಲ್ಲಿ ಕಂಡಿದ್ದು
ಕಾರಿನ ಮೇಲೆ ಬಿದ್ದ ಲಾರಿ: ಭಯಾನಕ ಅಪಘಾತ ಡ್ರೋನ್ ಕ್ಯಾಮರಾದಲ್ಲಿ ಕಂಡಿದ್ದು
ಕಳ್ಳತನ ಮಾಡಿದ ಬಳಿಕ ತಮ್ಮ ಕಾರನ್ನೇ ಬೆಂಕಿಹಚ್ಚಿ ಸುಟ್ಟುಬಿಡುವ ಖದೀಮರು
ಕಳ್ಳತನ ಮಾಡಿದ ಬಳಿಕ ತಮ್ಮ ಕಾರನ್ನೇ ಬೆಂಕಿಹಚ್ಚಿ ಸುಟ್ಟುಬಿಡುವ ಖದೀಮರು