ಕರಣ್ ಜೋಹರ್​ ನಿರ್ಮಾಣದ ಸಿನಿಮಾದಲ್ಲಿ ಇಂದ್ರಜಿತ್​ ಲಂಕೇಶ್​ ಪುತ್ರ ಸಮರ್ಜಿತ್

‘ಗೌರಿ’ ಸಿನಿಮಾದ ಮೂಲಕ ಇಂದ್ರಜಿತ್ ಲಂಕೇಶ್ ಅವರ ಪುತ್ರ ಸಮರ್ಜಿತ್ ಲಂಕೇಶ್ ಅವರು ಹೀರೋ ಆಗಿ ಕನ್ನಡ ಚಿತ್ರರಂಗಕ್ಕೆ ಕಾಲಿಟ್ಟರು. ಅವರ ನಟನೆಗೆ ವೀಕ್ಷಕರಿಂದ ಮೆಚ್ಚುಗೆ ಸಿಕ್ಕಿತು. ಆ ಸಿನಿಮಾಗೆ ಸ್ವತಃ ಇಂದ್ರಜಿತ್​ ಲಂಕೇಶ್​ ನಿರ್ದೇಶನ ಮಾಡಿದ್ದರು. ಈಗ ಸಮರ್ಜಿತ್​ ಲಂಕೇಶ್​ ಅವರ ಮುಂದಿನ ಹಾದಿ ಹಿರಿದಾಗಿದೆ. ಅವರಿಗೆ ಬಾಲಿವುಡ್​ನಿಂದ ಆಫರ್​ ಬಂದಿದೆ ಎಂಬುದು ವಿಶೇಷ.

ಕರಣ್ ಜೋಹರ್​ ನಿರ್ಮಾಣದ ಸಿನಿಮಾದಲ್ಲಿ ಇಂದ್ರಜಿತ್​ ಲಂಕೇಶ್​ ಪುತ್ರ ಸಮರ್ಜಿತ್
ಸಮರ್ಜಿತ್​ ಲಂಕೇಶ್​
Follow us
|

Updated on: Sep 24, 2024 | 8:12 PM

ನಟ ಸಮರ್ಜಿತ್​ ಲಂಕೇಶ್​ ಅವರು ನೋಡಲು ಬಾಲಿವುಡ್​ ಹೀರೋ ರೀತಿಯೇ ಇದ್ದಾರೆ ಎಂಬುದು ಹಲವು ಅಭಿಮಾನಿಗಳ ಅಭಿಪ್ರಾಯ. ಮೊದಲ ಸಿನಿಮಾ ‘ಗೌರಿ’ ನೋಡಿದ ಅನೇಕರು ಈ ರೀತಿ ಅನಿಸಿಕೆ ತಿಳಿಸಿದರು. ಅಭಿನಯ, ಡ್ಯಾನ್ಸ್​, ಫೈಟ್​ ನೋಡಿದರೆ ಬಾಲಿವುಡ್​ನ​ ಸ್ಟಾರ್​ ಕಿಡ್ ರೀತಿಯೇ ಕಾಣುತ್ತಾರೆ ಸಮರ್ಜಿತ್​ ಲಂಕೇಶ್​ ಎಂದು ಜನರು ಮಾತನಾಡುತ್ತಿದ್ದಂತೆಯೇ ನೇರ ಬಾಲಿವುಡ್​ನಿಂದ ಅವರಿಗೆ ಅವಕಾಶ ಹರಿದು ಬಂದಿದೆ. ಅದು ಕೂಡ ಪ್ರತಿಷ್ಠಿತ ‘ಧರ್ಮ ಪ್ರೊಡಕ್ಷನ್ಸ್​’ ಮೂಲಕ!

‘ಗೌರಿ’ ಸಿನಿಮಾದಲ್ಲಿನ ಅಭಿನಯಕ್ಕಾಗಿ ಇತ್ತೀಚೆಗೆ ಸಮರ್ಜಿತ್ ಅವರಿಗೆ ‘ಲುಮಿಯರ್ ನ್ಯಾಷನಲ್ ಅವಾರ್ಡ್’ ನೀಡಲಾಗಿದೆ. ಈ ಪ್ರಶಸ್ತಿ ಪಡೆದ ಖುಷಿಯಲ್ಲಿರುವ ಅವರು ಬಾಲಿವುಡ್‌ಗೆ ಹಾರಲು ತಯಾರಾಗಿದ್ದಾರೆ. ಹಿಂದಿ ಮಾತ್ರವಲ್ಲದೇ ತೆಲುಗು ಹಾಗೂ ತಮಿಳಿನಿಂದನೂ ಅವರಿಗೆ ಅವಕಾಶಗಳು ಸಿಗುತ್ತಿವೆ. ಆ ಮೂಲಕ ಪರಭಾಷೆಯ ಚಿತ್ರರಂಗದ ಕಡೆಗೆ ಸಮರ್ಜಿತ್ ಅವರು ಗಮನ ಹರಿಸುತ್ತಿದ್ದಾರೆ. ಆ ಬಗ್ಗೆ ಮಾಹಿತಿ ಸಿಕ್ಕಿದೆ.

ಹಿಂದಿ ಸಿನಿಮಾರಂಗದ ದೊಡ್ಡ ಪ್ರೊಡಕ್ಷನ್ ಹೌಸ್ ಜೊತೆ ಸಮರ್ಜಿತ್‌ ಅವರು ಸಿನಿಮಾ ಮಾಡಲು ಸಜ್ಜಾಗಿದ್ದಾರೆ. ಖ್ಯಾತ ನಿರ್ಮಾಪಕ ಕರಣ್ ಜೋಹರ್ ಒಡೆತನದ ‘ಧರ್ಮ ಪ್ರೊಡಕ್ಷನ್’ ನಿರ್ಮಾಣ ಮಾಡಲಿರುವ ಸಿನಿಮಾದಲ್ಲಿ ಸಮರ್ಜಿತ್ ಲಂಕೇಶ್​ ನಟಿಸುತ್ತಾರೆ ಎಂಬ ಸುದ್ದಿ ಕೇಳಿಬಂದಿದೆ. ಈಗಾಗಲೇ ಅವರಿಗೆ ‘ಧರ್ಮ ಪ್ರೊಡಕ್ಷನ್’ ಕಡೆಯಿಂದ ಕರೆ ಬಂದಿದೆ. ಮಾತುಕತೆ ಸಲುವಾಗಿ ಅವರು ಮುಂಬೈಗೆ ಪ್ರಯಾಣ ಬೆಳೆಸಿದ್ದಾರೆ.

ಇದನ್ನೂ ಓದಿ: Gowri Movie Review: ಸಮರ್ಜಿತ್​ ಲಂಕೇಶ್​ ಪ್ರತಿಭಾ ಪ್ರದರ್ಶನಕ್ಕೆ ವೇದಿಕೆಯಾದ ‘ಗೌರಿ’ ಸಿನಿಮಾ

ಕರಣ್ ಜೊಹರ್ ಸಂಸ್ಥೆಯ ಜೊತೆ ಸಮರ್ಜಿತ್ ಮಾತುಕತೆ ಮಾಡಿದ್ದು, ಹಿಂದಿಯಲ್ಲಿ ಸಿನಿಮಾ ಮಾಡುವುದು ಬಹುತೇಕ ಖಚಿತವಾಗಿದೆ ಎನ್ನಲಾಗುತ್ತಿದೆ. ಇತ್ತೀಚಿನ ದಿನಗಳಲ್ಲಿ ಕರಣ್ ಜೋಹರ್ ಅವರು ಬಾಲಿವುಡ್​ ಮಾತ್ರವಲ್ಲದೇ ದಕ್ಷಿಣ ಭಾರತದ ಸಿನಿಮಾಗಳ ಬಗ್ಗೆ ಆಸಕ್ತಿ ತೋರಿಸುತ್ತಿದ್ದಾರೆ. ಒಂದುವೇಳೆ, ಸಮರ್ಜಿತ್ ನಟನೆಯ ಸಿನಿಮಾಗೆ ಅವರು ಬಂಡವಾಳ ಹೂಡಿದರೆ ಇದೇ ಮೊದಲ ಬಾರಿಗೆ ಅವರು ಕನ್ನಡದ ನಟನ ಸಿನಿಮಾವನ್ನು ನಿರ್ಮಾಣ ಮಾಡಿದಂತಾಗಲಿದೆ. ‘ಧರ್ಮ ಪ್ರೊಡಕ್ಷನ್’ ಮಾತ್ರವಲ್ಲದೇ ಕಾಲಿವುಡ್​ ಖ್ಯಾತ ನಿರ್ಮಾಣ ಸಂಸ್ಥೆಯಾದ ‘ಲೈಕಾ ಪ್ರೊಡಕ್ಷನ್ಸ್​’ ಜೊತೆಗೂ ಸಮರ್ಜಿತ್ ಅವರು ಮಾತುಕಥೆ ಮಾಡುತ್ತಿದ್ದಾರೆ ಎಂಬ ಸುದ್ದಿ ಕೇಳಿಬಂದಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ನಾನಿನ್ನೂ ಮಾತು ನಿಲ್ಲಿಸಿಲ್ಲ..ಸಡನ್ ಸಿಟ್ಟಾದ ಸಿದ್ರಾಮಯ್ಯ ನೋಡಿ DCM ಶಾಕ್​
ನಾನಿನ್ನೂ ಮಾತು ನಿಲ್ಲಿಸಿಲ್ಲ..ಸಡನ್ ಸಿಟ್ಟಾದ ಸಿದ್ರಾಮಯ್ಯ ನೋಡಿ DCM ಶಾಕ್​
ಮುಂಬೈನಲ್ಲಿ ಆರ್ಭಟಿಸಿದ ಮಿಂಚು ಸಹಿತ ಭಾರೀ ಮಳೆ; ಭಯಾನಕ ದೃಶ್ಯ ಸೆರೆ
ಮುಂಬೈನಲ್ಲಿ ಆರ್ಭಟಿಸಿದ ಮಿಂಚು ಸಹಿತ ಭಾರೀ ಮಳೆ; ಭಯಾನಕ ದೃಶ್ಯ ಸೆರೆ
‘ದರ್ಶನ್ ಮಾತ್ರವಲ್ಲ, ಬೇರೆ ಖೈದಿಗಳಿಗೂ ಮೂಲಸೌಕರ್ಯ ನೀಡಬೇಕು’: ಲಾಯರ್​ ಗರಂ
‘ದರ್ಶನ್ ಮಾತ್ರವಲ್ಲ, ಬೇರೆ ಖೈದಿಗಳಿಗೂ ಮೂಲಸೌಕರ್ಯ ನೀಡಬೇಕು’: ಲಾಯರ್​ ಗರಂ
ಸಿಎಂ ಪ್ರಾಸಿಕ್ಯೂಷನ್​ಗೆ ಹೈಕೋರ್ಟ್ ಅನುಮತಿ: ಹೆಚ್​ಡಿಕೆ ಅಚ್ಚರಿಯ ಹೇಳಿಕೆ
ಸಿಎಂ ಪ್ರಾಸಿಕ್ಯೂಷನ್​ಗೆ ಹೈಕೋರ್ಟ್ ಅನುಮತಿ: ಹೆಚ್​ಡಿಕೆ ಅಚ್ಚರಿಯ ಹೇಳಿಕೆ
ಅಮೆರಿಕ ಪ್ರವಾಸ ಫಲಪ್ರದವಾಗಿದೆ; ಯುಎಸ್​ ಭೇಟಿಯ ನೆನಪುಗಳ ಹಂಚಿಕೊಂಡ ಮೋದಿ
ಅಮೆರಿಕ ಪ್ರವಾಸ ಫಲಪ್ರದವಾಗಿದೆ; ಯುಎಸ್​ ಭೇಟಿಯ ನೆನಪುಗಳ ಹಂಚಿಕೊಂಡ ಮೋದಿ
ಮಹಿಳಾ ಟಿ20 ವಿಶ್ವಕಪ್ 2024ರ ಆ್ಯಂಥಮ್ ಸಾಂಗ್ ಬಿಡುಗಡೆ
ಮಹಿಳಾ ಟಿ20 ವಿಶ್ವಕಪ್ 2024ರ ಆ್ಯಂಥಮ್ ಸಾಂಗ್ ಬಿಡುಗಡೆ
ಮುಡಾ ಪ್ರಾಸಿಕ್ಯೂಷನ್ ಕೇಸ್​: ಸಿದ್ದರಾಮಯ್ಯಗೆ ರಿಲೀಫ್​ ಸಿಗಲ್ಲ ಎಂದ ವಕೀಲರು
ಮುಡಾ ಪ್ರಾಸಿಕ್ಯೂಷನ್ ಕೇಸ್​: ಸಿದ್ದರಾಮಯ್ಯಗೆ ರಿಲೀಫ್​ ಸಿಗಲ್ಲ ಎಂದ ವಕೀಲರು
CM ಅರ್ಜಿ ಹೈಕೋರ್ಟ್‌ ವಜಾ; ಸತ್ಯಕ್ಕೆ ಜಯ ಸಿಕ್ಕಿದೆ ಎಂದ ದೂರುದಾರ
CM ಅರ್ಜಿ ಹೈಕೋರ್ಟ್‌ ವಜಾ; ಸತ್ಯಕ್ಕೆ ಜಯ ಸಿಕ್ಕಿದೆ ಎಂದ ದೂರುದಾರ
ಮುಡಾ ತೀರ್ಪು: ಸಿಎಂ ಮನೆ ಸೇರಿದಂತೆ ರಾಜ್ಯಾದ್ಯಂತ ಬಿಗಿ ಭದ್ರತೆ ಲೈವ್​
ಮುಡಾ ತೀರ್ಪು: ಸಿಎಂ ಮನೆ ಸೇರಿದಂತೆ ರಾಜ್ಯಾದ್ಯಂತ ಬಿಗಿ ಭದ್ರತೆ ಲೈವ್​
ಫ್ಲಿಪ್​ಕಾರ್ಟ್​ ಬಿಗ್ ಬಿಲಿಯನ್ ಡೇ ಸೇಲ್​ ₹49,999ಕ್ಕೆ ಆ್ಯಪಲ್ ಐಫೋನ್ 15
ಫ್ಲಿಪ್​ಕಾರ್ಟ್​ ಬಿಗ್ ಬಿಲಿಯನ್ ಡೇ ಸೇಲ್​ ₹49,999ಕ್ಕೆ ಆ್ಯಪಲ್ ಐಫೋನ್ 15