AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕರಣ್ ಜೋಹರ್​ ನಿರ್ಮಾಣದ ಸಿನಿಮಾದಲ್ಲಿ ಇಂದ್ರಜಿತ್​ ಲಂಕೇಶ್​ ಪುತ್ರ ಸಮರ್ಜಿತ್

‘ಗೌರಿ’ ಸಿನಿಮಾದ ಮೂಲಕ ಇಂದ್ರಜಿತ್ ಲಂಕೇಶ್ ಅವರ ಪುತ್ರ ಸಮರ್ಜಿತ್ ಲಂಕೇಶ್ ಅವರು ಹೀರೋ ಆಗಿ ಕನ್ನಡ ಚಿತ್ರರಂಗಕ್ಕೆ ಕಾಲಿಟ್ಟರು. ಅವರ ನಟನೆಗೆ ವೀಕ್ಷಕರಿಂದ ಮೆಚ್ಚುಗೆ ಸಿಕ್ಕಿತು. ಆ ಸಿನಿಮಾಗೆ ಸ್ವತಃ ಇಂದ್ರಜಿತ್​ ಲಂಕೇಶ್​ ನಿರ್ದೇಶನ ಮಾಡಿದ್ದರು. ಈಗ ಸಮರ್ಜಿತ್​ ಲಂಕೇಶ್​ ಅವರ ಮುಂದಿನ ಹಾದಿ ಹಿರಿದಾಗಿದೆ. ಅವರಿಗೆ ಬಾಲಿವುಡ್​ನಿಂದ ಆಫರ್​ ಬಂದಿದೆ ಎಂಬುದು ವಿಶೇಷ.

ಕರಣ್ ಜೋಹರ್​ ನಿರ್ಮಾಣದ ಸಿನಿಮಾದಲ್ಲಿ ಇಂದ್ರಜಿತ್​ ಲಂಕೇಶ್​ ಪುತ್ರ ಸಮರ್ಜಿತ್
ಸಮರ್ಜಿತ್​ ಲಂಕೇಶ್​
ಮದನ್​ ಕುಮಾರ್​
|

Updated on: Sep 24, 2024 | 8:12 PM

Share

ನಟ ಸಮರ್ಜಿತ್​ ಲಂಕೇಶ್​ ಅವರು ನೋಡಲು ಬಾಲಿವುಡ್​ ಹೀರೋ ರೀತಿಯೇ ಇದ್ದಾರೆ ಎಂಬುದು ಹಲವು ಅಭಿಮಾನಿಗಳ ಅಭಿಪ್ರಾಯ. ಮೊದಲ ಸಿನಿಮಾ ‘ಗೌರಿ’ ನೋಡಿದ ಅನೇಕರು ಈ ರೀತಿ ಅನಿಸಿಕೆ ತಿಳಿಸಿದರು. ಅಭಿನಯ, ಡ್ಯಾನ್ಸ್​, ಫೈಟ್​ ನೋಡಿದರೆ ಬಾಲಿವುಡ್​ನ​ ಸ್ಟಾರ್​ ಕಿಡ್ ರೀತಿಯೇ ಕಾಣುತ್ತಾರೆ ಸಮರ್ಜಿತ್​ ಲಂಕೇಶ್​ ಎಂದು ಜನರು ಮಾತನಾಡುತ್ತಿದ್ದಂತೆಯೇ ನೇರ ಬಾಲಿವುಡ್​ನಿಂದ ಅವರಿಗೆ ಅವಕಾಶ ಹರಿದು ಬಂದಿದೆ. ಅದು ಕೂಡ ಪ್ರತಿಷ್ಠಿತ ‘ಧರ್ಮ ಪ್ರೊಡಕ್ಷನ್ಸ್​’ ಮೂಲಕ!

‘ಗೌರಿ’ ಸಿನಿಮಾದಲ್ಲಿನ ಅಭಿನಯಕ್ಕಾಗಿ ಇತ್ತೀಚೆಗೆ ಸಮರ್ಜಿತ್ ಅವರಿಗೆ ‘ಲುಮಿಯರ್ ನ್ಯಾಷನಲ್ ಅವಾರ್ಡ್’ ನೀಡಲಾಗಿದೆ. ಈ ಪ್ರಶಸ್ತಿ ಪಡೆದ ಖುಷಿಯಲ್ಲಿರುವ ಅವರು ಬಾಲಿವುಡ್‌ಗೆ ಹಾರಲು ತಯಾರಾಗಿದ್ದಾರೆ. ಹಿಂದಿ ಮಾತ್ರವಲ್ಲದೇ ತೆಲುಗು ಹಾಗೂ ತಮಿಳಿನಿಂದನೂ ಅವರಿಗೆ ಅವಕಾಶಗಳು ಸಿಗುತ್ತಿವೆ. ಆ ಮೂಲಕ ಪರಭಾಷೆಯ ಚಿತ್ರರಂಗದ ಕಡೆಗೆ ಸಮರ್ಜಿತ್ ಅವರು ಗಮನ ಹರಿಸುತ್ತಿದ್ದಾರೆ. ಆ ಬಗ್ಗೆ ಮಾಹಿತಿ ಸಿಕ್ಕಿದೆ.

ಹಿಂದಿ ಸಿನಿಮಾರಂಗದ ದೊಡ್ಡ ಪ್ರೊಡಕ್ಷನ್ ಹೌಸ್ ಜೊತೆ ಸಮರ್ಜಿತ್‌ ಅವರು ಸಿನಿಮಾ ಮಾಡಲು ಸಜ್ಜಾಗಿದ್ದಾರೆ. ಖ್ಯಾತ ನಿರ್ಮಾಪಕ ಕರಣ್ ಜೋಹರ್ ಒಡೆತನದ ‘ಧರ್ಮ ಪ್ರೊಡಕ್ಷನ್’ ನಿರ್ಮಾಣ ಮಾಡಲಿರುವ ಸಿನಿಮಾದಲ್ಲಿ ಸಮರ್ಜಿತ್ ಲಂಕೇಶ್​ ನಟಿಸುತ್ತಾರೆ ಎಂಬ ಸುದ್ದಿ ಕೇಳಿಬಂದಿದೆ. ಈಗಾಗಲೇ ಅವರಿಗೆ ‘ಧರ್ಮ ಪ್ರೊಡಕ್ಷನ್’ ಕಡೆಯಿಂದ ಕರೆ ಬಂದಿದೆ. ಮಾತುಕತೆ ಸಲುವಾಗಿ ಅವರು ಮುಂಬೈಗೆ ಪ್ರಯಾಣ ಬೆಳೆಸಿದ್ದಾರೆ.

ಇದನ್ನೂ ಓದಿ: Gowri Movie Review: ಸಮರ್ಜಿತ್​ ಲಂಕೇಶ್​ ಪ್ರತಿಭಾ ಪ್ರದರ್ಶನಕ್ಕೆ ವೇದಿಕೆಯಾದ ‘ಗೌರಿ’ ಸಿನಿಮಾ

ಕರಣ್ ಜೊಹರ್ ಸಂಸ್ಥೆಯ ಜೊತೆ ಸಮರ್ಜಿತ್ ಮಾತುಕತೆ ಮಾಡಿದ್ದು, ಹಿಂದಿಯಲ್ಲಿ ಸಿನಿಮಾ ಮಾಡುವುದು ಬಹುತೇಕ ಖಚಿತವಾಗಿದೆ ಎನ್ನಲಾಗುತ್ತಿದೆ. ಇತ್ತೀಚಿನ ದಿನಗಳಲ್ಲಿ ಕರಣ್ ಜೋಹರ್ ಅವರು ಬಾಲಿವುಡ್​ ಮಾತ್ರವಲ್ಲದೇ ದಕ್ಷಿಣ ಭಾರತದ ಸಿನಿಮಾಗಳ ಬಗ್ಗೆ ಆಸಕ್ತಿ ತೋರಿಸುತ್ತಿದ್ದಾರೆ. ಒಂದುವೇಳೆ, ಸಮರ್ಜಿತ್ ನಟನೆಯ ಸಿನಿಮಾಗೆ ಅವರು ಬಂಡವಾಳ ಹೂಡಿದರೆ ಇದೇ ಮೊದಲ ಬಾರಿಗೆ ಅವರು ಕನ್ನಡದ ನಟನ ಸಿನಿಮಾವನ್ನು ನಿರ್ಮಾಣ ಮಾಡಿದಂತಾಗಲಿದೆ. ‘ಧರ್ಮ ಪ್ರೊಡಕ್ಷನ್’ ಮಾತ್ರವಲ್ಲದೇ ಕಾಲಿವುಡ್​ ಖ್ಯಾತ ನಿರ್ಮಾಣ ಸಂಸ್ಥೆಯಾದ ‘ಲೈಕಾ ಪ್ರೊಡಕ್ಷನ್ಸ್​’ ಜೊತೆಗೂ ಸಮರ್ಜಿತ್ ಅವರು ಮಾತುಕಥೆ ಮಾಡುತ್ತಿದ್ದಾರೆ ಎಂಬ ಸುದ್ದಿ ಕೇಳಿಬಂದಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ಮೊದಲ ಪಂದ್ಯದಲ್ಲೇ 5 ವಿಕೆಟ್ ಉರುಳಿಸಿದ ಹೆನಿಲ್ ಪಟೇಲ್
ಮೊದಲ ಪಂದ್ಯದಲ್ಲೇ 5 ವಿಕೆಟ್ ಉರುಳಿಸಿದ ಹೆನಿಲ್ ಪಟೇಲ್
ಶ್ರೀರಾಮನಿಗೆ ಮುಸ್ಲಿಂ ಶಾಸಕ ಪೂಜೆ , ಹಿಂದೂ ಧರ್ಮದ ಬಗ್ಗೆ ಹೇಳಿದ್ದಿಷ್ಟು
ಶ್ರೀರಾಮನಿಗೆ ಮುಸ್ಲಿಂ ಶಾಸಕ ಪೂಜೆ , ಹಿಂದೂ ಧರ್ಮದ ಬಗ್ಗೆ ಹೇಳಿದ್ದಿಷ್ಟು
ಬೆಂಗಳೂರಿನ ಗವಿ ಗಂಗಾಧರೇಶ್ವರನಿಗೆ ಸೂರ್ಯದೇವನ ನಮನ, ಇಲ್ಲಿದೆ ನೇರಪ್ರಸಾರ
ಬೆಂಗಳೂರಿನ ಗವಿ ಗಂಗಾಧರೇಶ್ವರನಿಗೆ ಸೂರ್ಯದೇವನ ನಮನ, ಇಲ್ಲಿದೆ ನೇರಪ್ರಸಾರ
ಪ್ರಯಾಗರಾಜ್​ನ ಮಾಘ ಮೇಳದಲ್ಲಿ ಭಕ್ತಸಾಗರ; ಡ್ರೋನ್ ವಿಡಿಯೋ ಇಲ್ಲಿದೆ
ಪ್ರಯಾಗರಾಜ್​ನ ಮಾಘ ಮೇಳದಲ್ಲಿ ಭಕ್ತಸಾಗರ; ಡ್ರೋನ್ ವಿಡಿಯೋ ಇಲ್ಲಿದೆ
ಸೀನಿಯರ್​​ನನ್ನೇ ಕೊಂದ ಜೂನಿಯರ್: SSLC ವಿದ್ಯಾರ್ಥಿ ಹತ್ಯೆಗೆ ಕಾರಣವೇನು?
ಸೀನಿಯರ್​​ನನ್ನೇ ಕೊಂದ ಜೂನಿಯರ್: SSLC ವಿದ್ಯಾರ್ಥಿ ಹತ್ಯೆಗೆ ಕಾರಣವೇನು?
ನನಗೂ ಮುಖ್ಯಮಂತ್ರಿಯಾಗಬೇಕು ಎಂಬ ಆಸೆ ಇದೆ
ನನಗೂ ಮುಖ್ಯಮಂತ್ರಿಯಾಗಬೇಕು ಎಂಬ ಆಸೆ ಇದೆ
ಅಪಘಾತವಾಗುವುದ ತಡೆದು ಒಂದು ಕುಟುಂಬವನ್ನು ರಕ್ಷಿಸಿದ ಯುವತಿ
ಅಪಘಾತವಾಗುವುದ ತಡೆದು ಒಂದು ಕುಟುಂಬವನ್ನು ರಕ್ಷಿಸಿದ ಯುವತಿ
ನಮ್ಮ ಮೆಟ್ರೋ ಯೆಲ್ಲೋ ಲೈನ್‌ನಲ್ಲಿ 7ನೇ ರೈಲಿನ ಸಂಚಾರ ಶುರು
ನಮ್ಮ ಮೆಟ್ರೋ ಯೆಲ್ಲೋ ಲೈನ್‌ನಲ್ಲಿ 7ನೇ ರೈಲಿನ ಸಂಚಾರ ಶುರು
ಲೈಟ್​ನಲ್ಲಿ ಕಾಣಿಸಿಕೊಂಡ ಹೊಗೆ, ಪತ್ರಿಕಾಗೋಷ್ಠಿ ಮೊಟಕುಗೊಳಿಸಿದ ಮಾಯಾವತಿ
ಲೈಟ್​ನಲ್ಲಿ ಕಾಣಿಸಿಕೊಂಡ ಹೊಗೆ, ಪತ್ರಿಕಾಗೋಷ್ಠಿ ಮೊಟಕುಗೊಳಿಸಿದ ಮಾಯಾವತಿ
ನಗರಸಭೆ ಪೌರಾಯುಕ್ತೆಗೆ ನಿಂದನೆ​​: ರಾಜೀವ್​ ಗೌಡ ಪರ ಮುನಿಯಪ್ಪ ಬ್ಯಾಟಿಂಗ್​​
ನಗರಸಭೆ ಪೌರಾಯುಕ್ತೆಗೆ ನಿಂದನೆ​​: ರಾಜೀವ್​ ಗೌಡ ಪರ ಮುನಿಯಪ್ಪ ಬ್ಯಾಟಿಂಗ್​​