AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Indrajit Lankesh: ಪುನೀತ್​ ಜನ್ಮದಿನವನ್ನು ‘ಅಪ್ಪು ದಿನಾಚರಣೆ’ಯನ್ನಾಗಿ ಆಚರಿಸಿ; ಇಂದ್ರಜಿತ್​ ಲಂಕೇಶ್​

ಪುನೀತ್​ ಸಾಕಷ್ಟು ಸಮಾಜ ಸೇವೆ ಮಾಡಿದ್ದಾರೆ. ಹೀಗಾಗಿ, ಪುನೀತ್​ ಜನ್ಮದಿನವನ್ನು ಅಪ್ಪು ದಿನಾಚರಣೆಯಾಗಿ ಮಾಡಬೇಕು ಎಂದು ಅವರು ಕೋರಿದ್ದಾರೆ.

Indrajit Lankesh: ಪುನೀತ್​ ಜನ್ಮದಿನವನ್ನು ‘ಅಪ್ಪು ದಿನಾಚರಣೆ’ಯನ್ನಾಗಿ ಆಚರಿಸಿ; ಇಂದ್ರಜಿತ್​ ಲಂಕೇಶ್​
ಇಂದ್ರಜಿತ್​ ಲಂಕೇಶ್​
TV9 Web
| Edited By: |

Updated on:Nov 16, 2021 | 3:54 PM

Share

ಪುನೀತ್​ ರಾಜ್​ಕುಮಾರ್​ ಅವರನ್ನು ಕಳೆದುಕೊಂಡು ಕನ್ನಡ ಚಿತ್ರರಂಗ ಬಡವಾಗಿದೆ. ಅವರನ್ನು ನೆನಪಿಸಿಕೊಳ್ಳುವ ಕಾರ್ಯ ಎಲ್ಲ ಕಡೆಗಳಲ್ಲೂ ನಡೆಯುತ್ತಿದೆ. ಕನ್ನಡ ಚಿತ್ರರಂಗದ ಪರವಾಗಿ ‘ಪುನೀತ ನಮನ’ ಕಾರ್ಯಕ್ರಮ ನಡೆಯುತ್ತಿದೆ. ಇದಕ್ಕೆ ಸ್ಯಾಂಡಲ್​ವುಡ್​ ಹಾಗೂ ಪರಭಾಷೆಯ ಕಲಾವಿದರು ಆಗಮಿಸುತ್ತಿದ್ದಾರೆ. ಇದಕ್ಕೆ ನಿರ್ದೇಶಕ ಇಂದ್ರಜಿತ್​ ಲಂಕೇಶ್​ ಅವರು ಕೂಡ ಆಗಮಿಸಿದ್ದಾರೆ. ಈ ವೇಳೆ ಸರ್ಕಾರದ ಎದುರು ಒಂದು ಹೊಸ ಬೇಡಿಕೆ ಇಟ್ಟಿದ್ದಾರೆ. ಅಷ್ಟೇ ಅಲ್ಲ, ಈ ಕುರಿತು ಅವರು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಜತೆ ಮಾತನಾಡುವುದಾಗಿ ಹೇಳಿದ್ದಾರೆ.

ಪುನೀತ್​ ಸಾಕಷ್ಟು ಸಮಾಜ ಸೇವೆ ಮಾಡಿದ್ದಾರೆ. ಹೀಗಾಗಿ, ಪುನೀತ್​ ಜನ್ಮದಿನವನ್ನು ಅಪ್ಪು ದಿನಾಚರಣೆಯಾಗಿ ಮಾಡಬೇಕು ಎಂದು ಅವರು ಕೋರಿದ್ದಾರೆ. ‘ನಾನು ಪುನೀತ್​ ಒಂದೇ ವರ್ಷ ಒಂದೇ ತಿಂಗಳು ಚಿತ್ರರಂಗ ಜರ್ನಿ ಆರಂಭಿಸಿದೆವು. ಅವರ ನಟನೆಯ ಮೊದಲ ಸಿನಿಮಾ ಏಪ್ರಿಲ್​ನಲ್ಲಿ ತೆರೆಗೆ ಬಂತು. ನನ್ನ ನಿರ್ದೇಶನದ ಸಿನಿಮಾ ಮೇ ತಿಂಗಳಲ್ಲಿ ರಿಲೀಸ್​ ಆಯ್ತು. ಪುನೀತ್​ ನಾನು ಪ್ರಶಸ್ತಿ ಸ್ವೀಕರಿಸಲು ಮುಂಬೈಗೆ ತೆರಳಿದ್ದೆವು. ಆಗಿನಿಂದಲೇ ನನಗೆ ಅವರ ಪರಿಚಯ ಇತ್ತು. ರಾಜ್​​ಕುಮಾರ್​ ಅವರ ಹಾದಿಯಲ್ಲೇ ಪುನೀತ್​ ನಡೆದಿದ್ದಾರೆ’ ಎಂದರು ಇಂದ್ರಜಿತ್​.

‘ಪುನೀತ್​ ಡ್ಯಾನ್ಸ್​ನಲ್ಲಿ ಮಿಂಚಿದ್ದಾರೆ. ಅವರು ನಮ್ಮ ಜತೆಗೆ ಈಗಲೂ ಇದ್ದಾರೆ. ಅವರು ಎಲ್ಲಿಯೂ ಹೋಗಿಲ್ಲ. ನಗುವನ್ನು ತೋರಿಸಿಕೊಟ್ಟರು. ಅವರ ಜೀವನ ಆಧಾರವಾಗಿಟ್ಟುಕೊಂಡು ನಾವು ಜೀವನ ಸಾಗಿಸಬೇಕು. ಅವರು ಸಾಕಷ್ಟು ಸಮಾಜ ಸೇವೆ ಮಾಡಿದ್ದಾರೆ. ಪ್ರತಿಯೊಬ್ಬ ಮಹಿಳೆಯರಿಗೆ, ಮಕ್ಕಳಿಗೆ ಅವರು ಸಹಾಯ ಮಾಡಿದ್ದಾರೆ’ ಎಂದಿದ್ದಾರೆ.

‘ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಬಳಿ ಒಂದು ಮನವಿ ಸಲ್ಲಿಕೆ ಮಾಡಬೇಕು. ಅವರ ಹುಟ್ಟಿದ ಹಬ್ಬವನ್ನು ‘ಅಪ್ಪು ದಿನಾಚರಣೆ’ಯನ್ನಾಗಿ ಮಾಡಬೇಕು. ಪುನೀತ್​ ಹೃದಯದಲ್ಲಿ ಶ್ರೀಮಂತರು. ಅವರಿಗೆ ನಾವೇನೂ ಕೊಡಬೇಕಿಲ್ಲ. ಆದರೆ, ಪುನೀತ್​ ಹೆಸರಲ್ಲಿ ಒಂದಷ್ಟು ಯುವ ಪ್ರತಿಭೆಗಳಿಗೆ ಸ್ಕಾಲರ್​ಶಿಪ್​ ಕೊಡುವ ಕೆಲಸ ಆಗಬೇಕು. ಸಿಎಂ ಫಂಡ್​ನಿಂದ ಈ ರೀತಿಯ ಕೆಲಸ ಆಗಬೇಕು. ಆ ಮೂಲಕ ಪುನೀತ್​ ದಿನಾಚರಣೆ ಆಚರಿಸಬೇಕು’ ಎಂದು ಕೋರಿದರು ಅವರು.

ಇದನ್ನೂ ಓದಿ: ‘ಪುನೀತ ನಮನ’ ಕಾರ್ಯಕ್ರಮ ಲೈವ್​ ವೀಕ್ಷಣೆ ಮಾಡಲು ಇಲ್ಲಿ ಕ್ಲಿಕ್​ ಮಾಡಿ

Published On - 3:53 pm, Tue, 16 November 21

ಪುರಾತನ ಕಲ್ಯಾಣಿ ಸ್ವಚ್ಚತೆ ವೇಳೆ ಶಿವಲಿಂಗ ಪತ್ತೆ
ಪುರಾತನ ಕಲ್ಯಾಣಿ ಸ್ವಚ್ಚತೆ ವೇಳೆ ಶಿವಲಿಂಗ ಪತ್ತೆ
ಸೈರನ್ ಮೊಳಗುತ್ತಿದ್ದಂತೆಯೇ ಈ ಗ್ರಾಮದ ಎಲ್ಲರ ಮನೆಯ ಟಿವಿ, ಫೋನ್ ಆಫ್
ಸೈರನ್ ಮೊಳಗುತ್ತಿದ್ದಂತೆಯೇ ಈ ಗ್ರಾಮದ ಎಲ್ಲರ ಮನೆಯ ಟಿವಿ, ಫೋನ್ ಆಫ್
ಏನು ಗ್ಯಾರಂಟಿ? ಬಿಜೆಪಿ MLC ಕಾರು ತಡೆದು ನಿಲ್ಲಿಸಿದ ಟೋಲ್ ಸಿಬ್ಬಂದಿ
ಏನು ಗ್ಯಾರಂಟಿ? ಬಿಜೆಪಿ MLC ಕಾರು ತಡೆದು ನಿಲ್ಲಿಸಿದ ಟೋಲ್ ಸಿಬ್ಬಂದಿ
ಆತನಿಗೆ 68, ಆಕೆಗೆ 58 ವರ್ಷ: ಹಾಸನದಲ್ಲಿ ವೃದ್ದರಿಬ್ಬರ ಮದುವೆ ಸಂಘರ್ಷ
ಆತನಿಗೆ 68, ಆಕೆಗೆ 58 ವರ್ಷ: ಹಾಸನದಲ್ಲಿ ವೃದ್ದರಿಬ್ಬರ ಮದುವೆ ಸಂಘರ್ಷ
ಕೋಗಿಲು ಬಳಿ 150ಕ್ಕೂ ಹೆಚ್ಚು ಅಕ್ರಮ ಮನೆಗಳು ನೆಲಸಮ: ಭುಗಿಲೆದ್ದ ಆಕ್ರೋಶ
ಕೋಗಿಲು ಬಳಿ 150ಕ್ಕೂ ಹೆಚ್ಚು ಅಕ್ರಮ ಮನೆಗಳು ನೆಲಸಮ: ಭುಗಿಲೆದ್ದ ಆಕ್ರೋಶ
ಸಿಎಂ ಕುರ್ಚಿ ಕಿತ್ತಾಟ: ಅಂತೂ ನಾಯಕರಿಗೆ ಮಹತ್ವದ ಸಂದೇಶ ಕೊಟ್ಟ ಖರ್ಗೆ
ಸಿಎಂ ಕುರ್ಚಿ ಕಿತ್ತಾಟ: ಅಂತೂ ನಾಯಕರಿಗೆ ಮಹತ್ವದ ಸಂದೇಶ ಕೊಟ್ಟ ಖರ್ಗೆ
ಮದ್ಯದ ಅಮಲಿನಲ್ಲಿ ಲಾರಿ ಚಾಲಕ 20ಕ್ಕೂ ಹೆಚ್ಚು ವಾಹನಗಳಿಗೆ ಡಿಕ್ಕಿ
ಮದ್ಯದ ಅಮಲಿನಲ್ಲಿ ಲಾರಿ ಚಾಲಕ 20ಕ್ಕೂ ಹೆಚ್ಚು ವಾಹನಗಳಿಗೆ ಡಿಕ್ಕಿ
ಗಿಲ್ಲಿಯನ್ನೇ ಹೊರಗೆ ಕಳಿಸುವ ಭ್ರಮೆಯಲ್ಲಿ ರಕ್ಷಿತಾ: ಕಾವ್ಯಾ ಖಡಕ್ ತಿರುಗೇಟು
ಗಿಲ್ಲಿಯನ್ನೇ ಹೊರಗೆ ಕಳಿಸುವ ಭ್ರಮೆಯಲ್ಲಿ ರಕ್ಷಿತಾ: ಕಾವ್ಯಾ ಖಡಕ್ ತಿರುಗೇಟು
ಟೀಮ್ ಇಂಡಿಯಾ ವಿರುದ್ಧ ಭರ್ಜರಿ ಸೆಂಚುರಿ ಸಿಡಿಸಿದ ಸಮೀರ್
ಟೀಮ್ ಇಂಡಿಯಾ ವಿರುದ್ಧ ಭರ್ಜರಿ ಸೆಂಚುರಿ ಸಿಡಿಸಿದ ಸಮೀರ್
ಮನ್ರೇಗಾ ಯೋಜನೆ ಹೆಸ್ರು ಬದಲಾವಣೆ: ಕೇಂದ್ರದ ಕ್ರಮಕ್ಕೆ AICC ಅಧ್ಯಕ್ಷ ಕಿಡಿ
ಮನ್ರೇಗಾ ಯೋಜನೆ ಹೆಸ್ರು ಬದಲಾವಣೆ: ಕೇಂದ್ರದ ಕ್ರಮಕ್ಕೆ AICC ಅಧ್ಯಕ್ಷ ಕಿಡಿ