AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Indrajit Lankesh: ಪುನೀತ್​ ಜನ್ಮದಿನವನ್ನು ‘ಅಪ್ಪು ದಿನಾಚರಣೆ’ಯನ್ನಾಗಿ ಆಚರಿಸಿ; ಇಂದ್ರಜಿತ್​ ಲಂಕೇಶ್​

ಪುನೀತ್​ ಸಾಕಷ್ಟು ಸಮಾಜ ಸೇವೆ ಮಾಡಿದ್ದಾರೆ. ಹೀಗಾಗಿ, ಪುನೀತ್​ ಜನ್ಮದಿನವನ್ನು ಅಪ್ಪು ದಿನಾಚರಣೆಯಾಗಿ ಮಾಡಬೇಕು ಎಂದು ಅವರು ಕೋರಿದ್ದಾರೆ.

Indrajit Lankesh: ಪುನೀತ್​ ಜನ್ಮದಿನವನ್ನು ‘ಅಪ್ಪು ದಿನಾಚರಣೆ’ಯನ್ನಾಗಿ ಆಚರಿಸಿ; ಇಂದ್ರಜಿತ್​ ಲಂಕೇಶ್​
ಇಂದ್ರಜಿತ್​ ಲಂಕೇಶ್​
TV9 Web
| Edited By: |

Updated on:Nov 16, 2021 | 3:54 PM

Share

ಪುನೀತ್​ ರಾಜ್​ಕುಮಾರ್​ ಅವರನ್ನು ಕಳೆದುಕೊಂಡು ಕನ್ನಡ ಚಿತ್ರರಂಗ ಬಡವಾಗಿದೆ. ಅವರನ್ನು ನೆನಪಿಸಿಕೊಳ್ಳುವ ಕಾರ್ಯ ಎಲ್ಲ ಕಡೆಗಳಲ್ಲೂ ನಡೆಯುತ್ತಿದೆ. ಕನ್ನಡ ಚಿತ್ರರಂಗದ ಪರವಾಗಿ ‘ಪುನೀತ ನಮನ’ ಕಾರ್ಯಕ್ರಮ ನಡೆಯುತ್ತಿದೆ. ಇದಕ್ಕೆ ಸ್ಯಾಂಡಲ್​ವುಡ್​ ಹಾಗೂ ಪರಭಾಷೆಯ ಕಲಾವಿದರು ಆಗಮಿಸುತ್ತಿದ್ದಾರೆ. ಇದಕ್ಕೆ ನಿರ್ದೇಶಕ ಇಂದ್ರಜಿತ್​ ಲಂಕೇಶ್​ ಅವರು ಕೂಡ ಆಗಮಿಸಿದ್ದಾರೆ. ಈ ವೇಳೆ ಸರ್ಕಾರದ ಎದುರು ಒಂದು ಹೊಸ ಬೇಡಿಕೆ ಇಟ್ಟಿದ್ದಾರೆ. ಅಷ್ಟೇ ಅಲ್ಲ, ಈ ಕುರಿತು ಅವರು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಜತೆ ಮಾತನಾಡುವುದಾಗಿ ಹೇಳಿದ್ದಾರೆ.

ಪುನೀತ್​ ಸಾಕಷ್ಟು ಸಮಾಜ ಸೇವೆ ಮಾಡಿದ್ದಾರೆ. ಹೀಗಾಗಿ, ಪುನೀತ್​ ಜನ್ಮದಿನವನ್ನು ಅಪ್ಪು ದಿನಾಚರಣೆಯಾಗಿ ಮಾಡಬೇಕು ಎಂದು ಅವರು ಕೋರಿದ್ದಾರೆ. ‘ನಾನು ಪುನೀತ್​ ಒಂದೇ ವರ್ಷ ಒಂದೇ ತಿಂಗಳು ಚಿತ್ರರಂಗ ಜರ್ನಿ ಆರಂಭಿಸಿದೆವು. ಅವರ ನಟನೆಯ ಮೊದಲ ಸಿನಿಮಾ ಏಪ್ರಿಲ್​ನಲ್ಲಿ ತೆರೆಗೆ ಬಂತು. ನನ್ನ ನಿರ್ದೇಶನದ ಸಿನಿಮಾ ಮೇ ತಿಂಗಳಲ್ಲಿ ರಿಲೀಸ್​ ಆಯ್ತು. ಪುನೀತ್​ ನಾನು ಪ್ರಶಸ್ತಿ ಸ್ವೀಕರಿಸಲು ಮುಂಬೈಗೆ ತೆರಳಿದ್ದೆವು. ಆಗಿನಿಂದಲೇ ನನಗೆ ಅವರ ಪರಿಚಯ ಇತ್ತು. ರಾಜ್​​ಕುಮಾರ್​ ಅವರ ಹಾದಿಯಲ್ಲೇ ಪುನೀತ್​ ನಡೆದಿದ್ದಾರೆ’ ಎಂದರು ಇಂದ್ರಜಿತ್​.

‘ಪುನೀತ್​ ಡ್ಯಾನ್ಸ್​ನಲ್ಲಿ ಮಿಂಚಿದ್ದಾರೆ. ಅವರು ನಮ್ಮ ಜತೆಗೆ ಈಗಲೂ ಇದ್ದಾರೆ. ಅವರು ಎಲ್ಲಿಯೂ ಹೋಗಿಲ್ಲ. ನಗುವನ್ನು ತೋರಿಸಿಕೊಟ್ಟರು. ಅವರ ಜೀವನ ಆಧಾರವಾಗಿಟ್ಟುಕೊಂಡು ನಾವು ಜೀವನ ಸಾಗಿಸಬೇಕು. ಅವರು ಸಾಕಷ್ಟು ಸಮಾಜ ಸೇವೆ ಮಾಡಿದ್ದಾರೆ. ಪ್ರತಿಯೊಬ್ಬ ಮಹಿಳೆಯರಿಗೆ, ಮಕ್ಕಳಿಗೆ ಅವರು ಸಹಾಯ ಮಾಡಿದ್ದಾರೆ’ ಎಂದಿದ್ದಾರೆ.

‘ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಬಳಿ ಒಂದು ಮನವಿ ಸಲ್ಲಿಕೆ ಮಾಡಬೇಕು. ಅವರ ಹುಟ್ಟಿದ ಹಬ್ಬವನ್ನು ‘ಅಪ್ಪು ದಿನಾಚರಣೆ’ಯನ್ನಾಗಿ ಮಾಡಬೇಕು. ಪುನೀತ್​ ಹೃದಯದಲ್ಲಿ ಶ್ರೀಮಂತರು. ಅವರಿಗೆ ನಾವೇನೂ ಕೊಡಬೇಕಿಲ್ಲ. ಆದರೆ, ಪುನೀತ್​ ಹೆಸರಲ್ಲಿ ಒಂದಷ್ಟು ಯುವ ಪ್ರತಿಭೆಗಳಿಗೆ ಸ್ಕಾಲರ್​ಶಿಪ್​ ಕೊಡುವ ಕೆಲಸ ಆಗಬೇಕು. ಸಿಎಂ ಫಂಡ್​ನಿಂದ ಈ ರೀತಿಯ ಕೆಲಸ ಆಗಬೇಕು. ಆ ಮೂಲಕ ಪುನೀತ್​ ದಿನಾಚರಣೆ ಆಚರಿಸಬೇಕು’ ಎಂದು ಕೋರಿದರು ಅವರು.

ಇದನ್ನೂ ಓದಿ: ‘ಪುನೀತ ನಮನ’ ಕಾರ್ಯಕ್ರಮ ಲೈವ್​ ವೀಕ್ಷಣೆ ಮಾಡಲು ಇಲ್ಲಿ ಕ್ಲಿಕ್​ ಮಾಡಿ

Published On - 3:53 pm, Tue, 16 November 21

Follow Us
ರೈಲ್ವೆ ನಿಲ್ದಾಣಗಳಲ್ಲಿ ಆಹಾರ ಸೇವಿಸುವವರೇ ಹುಷಾರ್: ವಿಡಿಯೋ ನೋಡಿ
ರೈಲ್ವೆ ನಿಲ್ದಾಣಗಳಲ್ಲಿ ಆಹಾರ ಸೇವಿಸುವವರೇ ಹುಷಾರ್: ವಿಡಿಯೋ ನೋಡಿ
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ
ತೀವ್ರ ವಿರೋಧದ ನಡುವೆಯೂ ಮೈಸೂರಿನಲ್ಲಿ ಕಂಬಳಕ್ಕೆ ಟ್ರ್ಯಾಕ್ ನಿರ್ಮಾಣ ಶುರು
ತೀವ್ರ ವಿರೋಧದ ನಡುವೆಯೂ ಮೈಸೂರಿನಲ್ಲಿ ಕಂಬಳಕ್ಕೆ ಟ್ರ್ಯಾಕ್ ನಿರ್ಮಾಣ ಶುರು