Indrajit Lankesh: ಪುನೀತ್​ ಜನ್ಮದಿನವನ್ನು ‘ಅಪ್ಪು ದಿನಾಚರಣೆ’ಯನ್ನಾಗಿ ಆಚರಿಸಿ; ಇಂದ್ರಜಿತ್​ ಲಂಕೇಶ್​

ಪುನೀತ್​ ಸಾಕಷ್ಟು ಸಮಾಜ ಸೇವೆ ಮಾಡಿದ್ದಾರೆ. ಹೀಗಾಗಿ, ಪುನೀತ್​ ಜನ್ಮದಿನವನ್ನು ಅಪ್ಪು ದಿನಾಚರಣೆಯಾಗಿ ಮಾಡಬೇಕು ಎಂದು ಅವರು ಕೋರಿದ್ದಾರೆ.

Indrajit Lankesh: ಪುನೀತ್​ ಜನ್ಮದಿನವನ್ನು ‘ಅಪ್ಪು ದಿನಾಚರಣೆ’ಯನ್ನಾಗಿ ಆಚರಿಸಿ; ಇಂದ್ರಜಿತ್​ ಲಂಕೇಶ್​
ಇಂದ್ರಜಿತ್​ ಲಂಕೇಶ್​
Follow us
| Updated By: ರಾಜೇಶ್ ದುಗ್ಗುಮನೆ

Updated on:Nov 16, 2021 | 3:54 PM

ಪುನೀತ್​ ರಾಜ್​ಕುಮಾರ್​ ಅವರನ್ನು ಕಳೆದುಕೊಂಡು ಕನ್ನಡ ಚಿತ್ರರಂಗ ಬಡವಾಗಿದೆ. ಅವರನ್ನು ನೆನಪಿಸಿಕೊಳ್ಳುವ ಕಾರ್ಯ ಎಲ್ಲ ಕಡೆಗಳಲ್ಲೂ ನಡೆಯುತ್ತಿದೆ. ಕನ್ನಡ ಚಿತ್ರರಂಗದ ಪರವಾಗಿ ‘ಪುನೀತ ನಮನ’ ಕಾರ್ಯಕ್ರಮ ನಡೆಯುತ್ತಿದೆ. ಇದಕ್ಕೆ ಸ್ಯಾಂಡಲ್​ವುಡ್​ ಹಾಗೂ ಪರಭಾಷೆಯ ಕಲಾವಿದರು ಆಗಮಿಸುತ್ತಿದ್ದಾರೆ. ಇದಕ್ಕೆ ನಿರ್ದೇಶಕ ಇಂದ್ರಜಿತ್​ ಲಂಕೇಶ್​ ಅವರು ಕೂಡ ಆಗಮಿಸಿದ್ದಾರೆ. ಈ ವೇಳೆ ಸರ್ಕಾರದ ಎದುರು ಒಂದು ಹೊಸ ಬೇಡಿಕೆ ಇಟ್ಟಿದ್ದಾರೆ. ಅಷ್ಟೇ ಅಲ್ಲ, ಈ ಕುರಿತು ಅವರು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಜತೆ ಮಾತನಾಡುವುದಾಗಿ ಹೇಳಿದ್ದಾರೆ.

ಪುನೀತ್​ ಸಾಕಷ್ಟು ಸಮಾಜ ಸೇವೆ ಮಾಡಿದ್ದಾರೆ. ಹೀಗಾಗಿ, ಪುನೀತ್​ ಜನ್ಮದಿನವನ್ನು ಅಪ್ಪು ದಿನಾಚರಣೆಯಾಗಿ ಮಾಡಬೇಕು ಎಂದು ಅವರು ಕೋರಿದ್ದಾರೆ. ‘ನಾನು ಪುನೀತ್​ ಒಂದೇ ವರ್ಷ ಒಂದೇ ತಿಂಗಳು ಚಿತ್ರರಂಗ ಜರ್ನಿ ಆರಂಭಿಸಿದೆವು. ಅವರ ನಟನೆಯ ಮೊದಲ ಸಿನಿಮಾ ಏಪ್ರಿಲ್​ನಲ್ಲಿ ತೆರೆಗೆ ಬಂತು. ನನ್ನ ನಿರ್ದೇಶನದ ಸಿನಿಮಾ ಮೇ ತಿಂಗಳಲ್ಲಿ ರಿಲೀಸ್​ ಆಯ್ತು. ಪುನೀತ್​ ನಾನು ಪ್ರಶಸ್ತಿ ಸ್ವೀಕರಿಸಲು ಮುಂಬೈಗೆ ತೆರಳಿದ್ದೆವು. ಆಗಿನಿಂದಲೇ ನನಗೆ ಅವರ ಪರಿಚಯ ಇತ್ತು. ರಾಜ್​​ಕುಮಾರ್​ ಅವರ ಹಾದಿಯಲ್ಲೇ ಪುನೀತ್​ ನಡೆದಿದ್ದಾರೆ’ ಎಂದರು ಇಂದ್ರಜಿತ್​.

‘ಪುನೀತ್​ ಡ್ಯಾನ್ಸ್​ನಲ್ಲಿ ಮಿಂಚಿದ್ದಾರೆ. ಅವರು ನಮ್ಮ ಜತೆಗೆ ಈಗಲೂ ಇದ್ದಾರೆ. ಅವರು ಎಲ್ಲಿಯೂ ಹೋಗಿಲ್ಲ. ನಗುವನ್ನು ತೋರಿಸಿಕೊಟ್ಟರು. ಅವರ ಜೀವನ ಆಧಾರವಾಗಿಟ್ಟುಕೊಂಡು ನಾವು ಜೀವನ ಸಾಗಿಸಬೇಕು. ಅವರು ಸಾಕಷ್ಟು ಸಮಾಜ ಸೇವೆ ಮಾಡಿದ್ದಾರೆ. ಪ್ರತಿಯೊಬ್ಬ ಮಹಿಳೆಯರಿಗೆ, ಮಕ್ಕಳಿಗೆ ಅವರು ಸಹಾಯ ಮಾಡಿದ್ದಾರೆ’ ಎಂದಿದ್ದಾರೆ.

‘ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಬಳಿ ಒಂದು ಮನವಿ ಸಲ್ಲಿಕೆ ಮಾಡಬೇಕು. ಅವರ ಹುಟ್ಟಿದ ಹಬ್ಬವನ್ನು ‘ಅಪ್ಪು ದಿನಾಚರಣೆ’ಯನ್ನಾಗಿ ಮಾಡಬೇಕು. ಪುನೀತ್​ ಹೃದಯದಲ್ಲಿ ಶ್ರೀಮಂತರು. ಅವರಿಗೆ ನಾವೇನೂ ಕೊಡಬೇಕಿಲ್ಲ. ಆದರೆ, ಪುನೀತ್​ ಹೆಸರಲ್ಲಿ ಒಂದಷ್ಟು ಯುವ ಪ್ರತಿಭೆಗಳಿಗೆ ಸ್ಕಾಲರ್​ಶಿಪ್​ ಕೊಡುವ ಕೆಲಸ ಆಗಬೇಕು. ಸಿಎಂ ಫಂಡ್​ನಿಂದ ಈ ರೀತಿಯ ಕೆಲಸ ಆಗಬೇಕು. ಆ ಮೂಲಕ ಪುನೀತ್​ ದಿನಾಚರಣೆ ಆಚರಿಸಬೇಕು’ ಎಂದು ಕೋರಿದರು ಅವರು.

ಇದನ್ನೂ ಓದಿ: ‘ಪುನೀತ ನಮನ’ ಕಾರ್ಯಕ್ರಮ ಲೈವ್​ ವೀಕ್ಷಣೆ ಮಾಡಲು ಇಲ್ಲಿ ಕ್ಲಿಕ್​ ಮಾಡಿ

Published On - 3:53 pm, Tue, 16 November 21

ತಾಜಾ ಸುದ್ದಿ
Nithya Bhavishya: ಶನಿವಾರದ ನಿಮ್ಮ ರಾಶಿ ಭವಿಷ್ಯ ತಿಳಿಯಿರಿ
Nithya Bhavishya: ಶನಿವಾರದ ನಿಮ್ಮ ರಾಶಿ ಭವಿಷ್ಯ ತಿಳಿಯಿರಿ
ಟ್ರಾಫಿಕ್ ರೂಲ್ಸ್​ ಉಲ್ಲಂಘಿಸುವವರೇ ಹುಷಾರ್​! ಬಂದಿದೆ ಉನ್ನತ ತಂತ್ರಜ್ಞಾನ
ಟ್ರಾಫಿಕ್ ರೂಲ್ಸ್​ ಉಲ್ಲಂಘಿಸುವವರೇ ಹುಷಾರ್​! ಬಂದಿದೆ ಉನ್ನತ ತಂತ್ರಜ್ಞಾನ
ಮಂಗಳೂರು: ಸುಂಟರಗಾಳಿಗೆ ಧರೆಗೆ ಉರುಳಿದ ವಿದ್ಯುತ್ ಕಂಬ, ಮರ; ವಿಡಿಯೋ ನೋಡಿ
ಮಂಗಳೂರು: ಸುಂಟರಗಾಳಿಗೆ ಧರೆಗೆ ಉರುಳಿದ ವಿದ್ಯುತ್ ಕಂಬ, ಮರ; ವಿಡಿಯೋ ನೋಡಿ
ಚಾಮುಂಡಿ ದರ್ಶನಕ್ಕೆ ಬಂದ ದಿನಕರ್, ಚಿಕ್ಕಣ್ಣ; ಜನಜಂಗುಳಿಯಲ್ಲಿ ಹೈರಾಣು
ಚಾಮುಂಡಿ ದರ್ಶನಕ್ಕೆ ಬಂದ ದಿನಕರ್, ಚಿಕ್ಕಣ್ಣ; ಜನಜಂಗುಳಿಯಲ್ಲಿ ಹೈರಾಣು
‘ಮಾರ್ಟಿನ್’ ಮನಸ್ತಾಪ; ಕಮಿಷನ್ ಆರೋಪಕ್ಕೆ ಎ.ಪಿ. ಅರ್ಜುನ್ ಸುದ್ದಿಗೋಷ್ಠಿ
‘ಮಾರ್ಟಿನ್’ ಮನಸ್ತಾಪ; ಕಮಿಷನ್ ಆರೋಪಕ್ಕೆ ಎ.ಪಿ. ಅರ್ಜುನ್ ಸುದ್ದಿಗೋಷ್ಠಿ
ಕುಮಾರಸ್ವಾಮಿಯವರಿಗೆ ರಾಮನಗರ ಜನರ ನಾಡಿಮಿಡಿತ ಗೊತ್ತಿಲ್ಲ:ಇಕ್ಬಾಲ್ ಹುಸ್ಸೇನ್
ಕುಮಾರಸ್ವಾಮಿಯವರಿಗೆ ರಾಮನಗರ ಜನರ ನಾಡಿಮಿಡಿತ ಗೊತ್ತಿಲ್ಲ:ಇಕ್ಬಾಲ್ ಹುಸ್ಸೇನ್
ನನಗೆ ಸೈಟು ಸಿಕ್ಕಿದ್ದು ನಿಜ ಆದರೆ ಅದು 1984ರಲ್ಲಿ: ಹೆಚ್ ಡಿ ಕುಮಾರಸ್ವಾಮಿ
ನನಗೆ ಸೈಟು ಸಿಕ್ಕಿದ್ದು ನಿಜ ಆದರೆ ಅದು 1984ರಲ್ಲಿ: ಹೆಚ್ ಡಿ ಕುಮಾರಸ್ವಾಮಿ
ರಾಮನಗರ ಇನ್ನು ಮುಂದೆ ರಾಮನಗರವಲ್ಲ ಬೆಂಗಳೂರು ದಕ್ಷಿಣ ಜಿಲ್ಲೆ!
ರಾಮನಗರ ಇನ್ನು ಮುಂದೆ ರಾಮನಗರವಲ್ಲ ಬೆಂಗಳೂರು ದಕ್ಷಿಣ ಜಿಲ್ಲೆ!
ಆಫೀಸಲ್ಲಿ ಗಬಕ್ಕಂತ ಹಾವು ಹಿಡಿದ ಮಹಿಳೆ, ನೋಡಿದರೆ ಎದೆ ಝಲ್ಲೆನ್ನುತ್ತೆ!
ಆಫೀಸಲ್ಲಿ ಗಬಕ್ಕಂತ ಹಾವು ಹಿಡಿದ ಮಹಿಳೆ, ನೋಡಿದರೆ ಎದೆ ಝಲ್ಲೆನ್ನುತ್ತೆ!
ನದಿಲಿ ಕೊಚ್ಚಿಕೊಂಡು ಹೋಗ್ತಿದ್ದ ಹಸು ಉಳಿಸಲು ಜೀವ ಪಣಕ್ಕಿಟ್ಟ ಹೋಂ ಗಾರ್ಡ್ಸ್
ನದಿಲಿ ಕೊಚ್ಚಿಕೊಂಡು ಹೋಗ್ತಿದ್ದ ಹಸು ಉಳಿಸಲು ಜೀವ ಪಣಕ್ಕಿಟ್ಟ ಹೋಂ ಗಾರ್ಡ್ಸ್