AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಂಜೆ 5 ಘಂಟೆಗೆ ಇಂದ್ರಜಿತ್ ಲಂಕೇಶ್​ ಮತ್ತೊಂದು ಸುದ್ದಿಗೋಷ್ಠಿ; ಈ ಮಧ್ಯೆ ದರ್ಶನ್ ಪ್ರತಿಕ್ರಿಯೆ ಸಾಧ್ಯತೆ

Indrajit Lankesh: ಇಂದು ಸಂಜೆ ನಿರ್ದೇಶಕ ಇಂದ್ರಜಿತ್ ಲಂಕೇಶ್ ಸುದ್ದಿಗೋಷ್ಠಿಯನ್ನು ನಡೆಸುವುದಾಗಿ ತಿಳಿಸಿದ್ದಾರೆ. ಇದರ ನಡುವೆ ನಟ ದರ್ಶನ್ ಮೈಸೂರಿನ ಘಟನೆಯ ಕುರಿತು ಸ್ಪಷ್ಟನೆ ನೀಡುವ ಸಾಧ್ಯತೆ ಇದೆ.

ಸಂಜೆ 5 ಘಂಟೆಗೆ ಇಂದ್ರಜಿತ್ ಲಂಕೇಶ್​ ಮತ್ತೊಂದು ಸುದ್ದಿಗೋಷ್ಠಿ; ಈ ಮಧ್ಯೆ ದರ್ಶನ್ ಪ್ರತಿಕ್ರಿಯೆ ಸಾಧ್ಯತೆ
ಇಂದ್ರಜಿತ್ ಲಂಕೇಶ್
TV9 Web
| Edited By: |

Updated on:Jul 16, 2021 | 11:54 AM

Share

ಬೆಂಗಳೂರು: ಸಂದೇಶ್ ಪ್ರಿನ್ಸ್ ಹೋಟೆಲ್​ನ ಮಾಲೀಕನ ಪುತ್ರ ಮಾಧ್ಯಮಕ್ಕೆ ಸ್ಪಷ್ಟನೆ ಕೊಟ್ಟ ಬೆನ್ನಲ್ಲೇ ಇಂದ್ರಜಿತ್ ಲಂಕೇಶ್ ಇಂದು ಸಂಜೆ ಸುದ್ದಿಗೋಷ್ಠಿ ನಡೆಸುವುದಾಗಿ ತಿಳಿಸಿದ್ದಾರೆ. ಇದರಿಂದಾಗಿ ಮೈಸೂರಿನ ಹೋಟೆಲ್ ಒಂದರಲ್ಲಿ ನಡೆದಿದ್ದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಅನೇಕ ಮಾಹಿತಿ ಸ್ಫೋಟವಾಗುವ ಸಾಧ್ಯತೆ ಇದೆ. ಈ ಮೊದಲು ಹೇಳಿಕೆ ನೀಡಿದ್ದ ಸಂದೇಶ್ ದಿ ಪ್ರಿನ್ಸ್ ಹೋಟೆಲ್ ಮಾಲೀಕರ ಪುತ್ರ , ದರ್ಶನ್ ಅವರು ಬೈದಿರುವುದು ನಿಜ. ಆದರೆ ಅದೇನು ದೊಡ್ಡ ವಿಷಯವಲ್ಲ ಎಂದಿದ್ದರು. ಹಾಗೆಯೇ ಹೋಟೆಲ್​ನ ಸಿಸಿಟಿವಿಯ ದೃಶ್ಯಾವಳಿಗಳು ಹತ್ತು ದಿನಗಳ ನಂತರ ಸಿಗುವುದಿಲ್ಲ ಎಂದಿದ್ದರು. 

ಈ ಮೊದಲು ಮಾತನಾಡಿದ್ದ ಇಂದ್ರಜಿತ್ ಲಂಕೇಶ್, ಪೊಲಿಸ್ ತನಿಖೆ ನಡೆಯಲಿ. ಅವರಿಗೆ ಸಾಕ್ಷ್ಯ ಲಭ್ಯವವಾಗದಿದ್ದಲ್ಲಿ ನಮ್ಮ ಬಳಿ ಇರುವ ಸಾಕ್ಷ್ಯ ನೀಡುತ್ತೇವೆ ಎಂದಿದ್ದರು. ಈಗ ಇಂದ್ರಜಿತ್ ಅವರು ಇಂದು ಸಂಜೆಯೇ ಪತ್ರಿಕಾಗೋಷ್ಠಿ ಕರೆದಿರುವುದರಿಂದ ದಾಖಲೆ ಬಿಡುಗಡೆ ಮಾಡುತ್ತಾರಾ ಎಂಬ ಕುತೂಹಲ ಮೂಡಿದೆ.

ಈ ನಡುವೆ ದರ್ಶನ್ ನಿರ್ದೇಶಕ ಇಂದ್ರಜಿತ್ ಲಂಕೇಶ್ ಅವರ ಹೇಳಿಕೆಗೆ ನಟ ದರ್ಶನ್ ಪ್ರತಿಕ್ರಿಯೆ ನೀಡುವ ಸಾಧ್ಯತೆ ಇದೆ. ಇಂದ್ರಜಿತ್ ಲಂಕೇಶ್ ಹಾಗೂ ಸಂದೇಶ್ ಹೋಟೆಲ್ ಮಾಲೀಕರ ಹೇಳಿಕೆಗೂ ಅಜಗಜಾಂತರ ವ್ಯತ್ಯಾಸ ಇರುವುದರಿಂದ ದರ್ಶನ್ ಹೇಳಿಕೆ ಕುತೂಹಲ ಕೆರಳಿಸಿದೆ. ಒಂದು ವೇಳೆ ಸಿಸಿಟಿವಿಯ ದೃಶ್ಯಾವಳಿ ಬಹಿರಂಗಗೊಂಡರೆ ಅಧಿಕೃತ ಮಾಹಿತಿ ದೊರೆಯುವ ಸಾಧ್ಯತೆ ಇದೆ.

ಸಂದೇಶ್ ದಿ ಪ್ರಿನ್ಸ್​ ಹೋಟೆಲ್ ಮಾಲಿಕರ ಪುತ್ರ ಹೇಳಿದ್ದೇನು?

ಹೋಟೆಲ್ ಸಿಬ್ಬಂದಿಗೆ ಬೈದಿರುವುದು ನಿಜ. ಆದರೆ ಹಲ್ಲೆ ನಡೆಸಿಲ್ಲ ಎಂದು ಸಂದೇಶ್ ತಿಳಿಸಿದ್ದಾರೆ. ಸದ್ಯ ಹೋಟೆಲ್​ಗಳೆಲ್ಲ ಮುಚ್ಚಿ ನಾವೇ ಸಂಕಷ್ಟದಲ್ಲಿದ್ದೇವೆ. ಹೋಟೆಲ್ ನಮ್ಮ ಹೊಟ್ಟೆಪಾಡು. ಇಲ್ಲಿ ಗ್ರಾಹಕರು ಏನೇ ಹೇಳಿದ್ರೂ ನಾವು ಕೊಡಬೇಕಾಗುತ್ತೆ. ಅವರು ಏನೇ ಬೈದರೂ ನಾವು ಬೈಸಿಕೊಳ್ಳಬೇಕಾಗುತ್ತದೆ. ದರ್ಶನ್ ನಮ್ಮ ಸಿಬ್ಬಂದಿ ಮೇಲೆ ಸ್ವಲ್ಪ ಬೈದಿದ್ದಾರೆ, ಆದರೆ ಹೊಡೆದಿಲ್ಲ ಎಂದು ಮಾಹಿತಿ ನೀಡಿದ್ದಾರೆ.

ನಮ್ಮ ಹೋಟೆಲ್ನಲ್ಲಿ ಇರುವುದೇ ತರಬೇತುದಾರರು. ಚೆನ್ನೈ, ಬಿಹಾರ, ಪಶ್ಚಿಮ ಬಂಗಾಳದಿಂದ ಬಂದವರಿದ್ದಾರೆ. ನಮ್ಮ ಹೋಟೆಲ್ನಲ್ಲಿ 10 ದಿನಗಳ ಫೂಟೇಜ್ ಇರುತ್ತದೆ. ಆಮೇಲೆ ಸಿಸಿ ಕ್ಯಾಮರಾದ ದೃಶ್ಯಗಳು ಡಿಲೀಟ್ ಆಗುತ್ತದೆ. ನಮಗೆ ಹೋಟೆಲ್ ಗ್ರಾಹಕರು, ಸಿಬ್ಬಂದಿ ಇಬ್ಬರೂ ಬೇಕು. ಅಂದಿನ ಘಟನೆಯಿಂದ ನಮಗೂ ಸ್ವಲ್ಪ ಸಮಸ್ಯೆಯಾಗಿದೆ ಎಂದು ಸಂದೇಶ್ ಹೇಳಿದ್ದಾರೆ.

ಇದನ್ನೂ ಓದಿ: ಇಂದ್ರಜಿತ್ ಲಂಕೇಶ್ ಮನವಿಗೆ ಸ್ಪಂದಿಸಿದ ಗೃಹ ಸಚಿವ ಬೊಮ್ಮಾಯಿ; ತನಿಖೆಗೆ ಸೂಚನೆ

ಇದನ್ನೂ ಓದಿ: ದರ್ಶನ್ ಹೋಟೆಲ್ ಸಿಬ್ಬಂದಿಗೆ ಬೈದಿರುವುದು ನಿಜ, ಹಲ್ಲೆ ನಡೆಸಿಲ್ಲ; ಸಂದೇಶ್ ಮಾಹಿತಿ

(Indrajit Lankesh will conduct press meet today evening meanwhile actor Darshan may give his statement)

Published On - 12:22 pm, Thu, 15 July 21

Follow Us
ಪರಿಷತ್ 5 ಸ್ಥಾನ ಗೆಲ್ಲಲು ಬಿಗ್ ಪ್ಲಾನ್, ಡಿಕೆಶಿ ತಂತ್ರಗಾರಿಕೆ ಹೇಗಿದೆ?
ಪರಿಷತ್ 5 ಸ್ಥಾನ ಗೆಲ್ಲಲು ಬಿಗ್ ಪ್ಲಾನ್, ಡಿಕೆಶಿ ತಂತ್ರಗಾರಿಕೆ ಹೇಗಿದೆ?
ಮೋದಿ ಬಹಳ ಸುಂದರ ವ್ಯಕ್ತಿ; ಗೆಳೆಯನನ್ನು ಹೊಗಳಿದ ಟ್ರಂಪ್
ಮೋದಿ ಬಹಳ ಸುಂದರ ವ್ಯಕ್ತಿ; ಗೆಳೆಯನನ್ನು ಹೊಗಳಿದ ಟ್ರಂಪ್
ವಿಧಾನಪರಿಷತ್ ಎಲೆಕ್ಷನ್: ಎಚ್​​​ಡಿಕೆ, ಡಿಕೆ ನಂಬರ್ ಗೇಮ್ ಹೇಗಿದೆ?
ವಿಧಾನಪರಿಷತ್ ಎಲೆಕ್ಷನ್: ಎಚ್​​​ಡಿಕೆ, ಡಿಕೆ ನಂಬರ್ ಗೇಮ್ ಹೇಗಿದೆ?
ಕಾಶ್ಮೀರದಲ್ಲಿ ಭೀಕರ ಮೇಘಸ್ಫೋಟ; ಹತ್ತಾರು ಮನೆಗಳಿಗೆ ಹಾನಿ
ಕಾಶ್ಮೀರದಲ್ಲಿ ಭೀಕರ ಮೇಘಸ್ಫೋಟ; ಹತ್ತಾರು ಮನೆಗಳಿಗೆ ಹಾನಿ
ಅಡ್ಡ ಮತದಾನದ ಭೀತಿ: ಕಾಂಗ್ರೆಸ್ ಶಾಸಕರಿಗೆ ಮತದಾನದ ತರಬೇತಿ
ಅಡ್ಡ ಮತದಾನದ ಭೀತಿ: ಕಾಂಗ್ರೆಸ್ ಶಾಸಕರಿಗೆ ಮತದಾನದ ತರಬೇತಿ
ಬಿಗ್​​ಬಾಸ್​ನಿಂದ ಜೀವನದಲ್ಲಾದ ಬದಲಾವಣೆ ಏನು: ಕರಿಬಸಪ್ಪ ಮಾತು
ಬಿಗ್​​ಬಾಸ್​ನಿಂದ ಜೀವನದಲ್ಲಾದ ಬದಲಾವಣೆ ಏನು: ಕರಿಬಸಪ್ಪ ಮಾತು
ಮೇಲ್ಮನೆ ಮೇಲಾಟ:ಕಾಂಗ್ರೆಸ್​​ ಕ್ಯಾಂಪ್​ ಸೇರಿಕೊಂಡ ಬಿಜೆಪಿ ಉಚ್ಛಾಟಿತ ಶಾಸಕ
ಮೇಲ್ಮನೆ ಮೇಲಾಟ:ಕಾಂಗ್ರೆಸ್​​ ಕ್ಯಾಂಪ್​ ಸೇರಿಕೊಂಡ ಬಿಜೆಪಿ ಉಚ್ಛಾಟಿತ ಶಾಸಕ
ಸಚಿವ ಸ್ಥಾನ ಸಂಬಂಧ ಜಮೀರ್​​ ಅಹ್ಮದ್​​ ಸ್ಫೋಟಕ ಹೇಳಿಕೆ
ಸಚಿವ ಸ್ಥಾನ ಸಂಬಂಧ ಜಮೀರ್​​ ಅಹ್ಮದ್​​ ಸ್ಫೋಟಕ ಹೇಳಿಕೆ
ಐಸೊಬ್ಯುಟನಾಲ್; ಶೀಘ್ರದಲ್ಲೇ ಬರಲಿದೆ ಪರಿಸರ ಸ್ನೇಹಿ ಬಯೋ ಡೀಸೆಲ್!
ಐಸೊಬ್ಯುಟನಾಲ್; ಶೀಘ್ರದಲ್ಲೇ ಬರಲಿದೆ ಪರಿಸರ ಸ್ನೇಹಿ ಬಯೋ ಡೀಸೆಲ್!
ಅವರು ಹೋಮಕ್ಕೆ ಕೋಟಿ ಸುರಿದರೆ, ನಾನು ರಂಗಭೂಮಿಗೆ ವ್ಯಯಿಸುತ್ತೇನೆ; ಪ್ರಕಾಶ್
ಅವರು ಹೋಮಕ್ಕೆ ಕೋಟಿ ಸುರಿದರೆ, ನಾನು ರಂಗಭೂಮಿಗೆ ವ್ಯಯಿಸುತ್ತೇನೆ; ಪ್ರಕಾಶ್