AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

CCB ವಿಚಾರಣೆ ವೇಳೆ ನಿರ್ದೇಶಕ ಇಂದ್ರಜಿತ್ ಭಯಭೀತರಾಗಲು ಕಾರಣ ಏನು?

ಬೆಂಗಳೂರು: ಸ್ಯಾಂಡಲ್​ವುಡ್​ಗೆ ಡ್ರಗ್ಸ್​ ಜಾಲದ ನಂಟಿರುವ ಬಗ್ಗೆ ಆರೋಪಿಸಿದ್ದ ನಿರ್ದೇಶಕ ಇಂದ್ರಜಿತ್​ ಲಂಕೇಶ್​ ನಿನ್ನೆ CCB ವಿಚಾರಣೆಗೆ ಬಂದಿದ್ದ ವೇಳೆ ಕೊಂಚ ಭಯಭೀತರಾಗಿದ್ದರು ಎಂದು ಉನ್ನತ ಮೂಲಗಳಿಂದ ಮಾಹಿತಿ ದೊರೆತಿದೆ. ವಿಚಾರಣೆ ವೇಳೆ CCB ಅಧಿಕಾರಿಗಳು ಕಳೆದ 3 ದಿನದಿಂದ ಬೇರೆ ಬೇರೆ ಕ್ಯಾಮರಾಗಳ ಎದುರು ಹೇಳಿಕೆ ನೀಡಿದ್ರಿ. ಈಗ ಈ ಕ್ಯಾಮರಾ ಎದುರು ಹೇಳಿಕೆ ನೀಡಿ ಎಂದು ಹೇಳಿದರಂತೆ. ಈ ಮಾತು ಕೇಳಿ ಇಂದ್ರಜಿತ್ ಲಂಕೇಶ್​ ಸ್ವಲ್ಪ ಭಯಪಟ್ಟರು ಎಂಬುದರ ಬಗ್ಗೆ ಮಾಹಿತಿ ಲಭ್ಯವಾಗಿದೆ. ಇಂದ್ರಜಿತ್​ […]

CCB ವಿಚಾರಣೆ ವೇಳೆ ನಿರ್ದೇಶಕ ಇಂದ್ರಜಿತ್ ಭಯಭೀತರಾಗಲು ಕಾರಣ ಏನು?
KUSHAL V
|

Updated on:Sep 01, 2020 | 10:47 AM

Share

ಬೆಂಗಳೂರು: ಸ್ಯಾಂಡಲ್​ವುಡ್​ಗೆ ಡ್ರಗ್ಸ್​ ಜಾಲದ ನಂಟಿರುವ ಬಗ್ಗೆ ಆರೋಪಿಸಿದ್ದ ನಿರ್ದೇಶಕ ಇಂದ್ರಜಿತ್​ ಲಂಕೇಶ್​ ನಿನ್ನೆ CCB ವಿಚಾರಣೆಗೆ ಬಂದಿದ್ದ ವೇಳೆ ಕೊಂಚ ಭಯಭೀತರಾಗಿದ್ದರು ಎಂದು ಉನ್ನತ ಮೂಲಗಳಿಂದ ಮಾಹಿತಿ ದೊರೆತಿದೆ.

ವಿಚಾರಣೆ ವೇಳೆ CCB ಅಧಿಕಾರಿಗಳು ಕಳೆದ 3 ದಿನದಿಂದ ಬೇರೆ ಬೇರೆ ಕ್ಯಾಮರಾಗಳ ಎದುರು ಹೇಳಿಕೆ ನೀಡಿದ್ರಿ. ಈಗ ಈ ಕ್ಯಾಮರಾ ಎದುರು ಹೇಳಿಕೆ ನೀಡಿ ಎಂದು ಹೇಳಿದರಂತೆ. ಈ ಮಾತು ಕೇಳಿ ಇಂದ್ರಜಿತ್ ಲಂಕೇಶ್​ ಸ್ವಲ್ಪ ಭಯಪಟ್ಟರು ಎಂಬುದರ ಬಗ್ಗೆ ಮಾಹಿತಿ ಲಭ್ಯವಾಗಿದೆ.

ಇಂದ್ರಜಿತ್​ ಹೇಳಿಕೆಯನ್ನ ಲಿಖಿತವಾಗಿ ದಾಖಲಿಸಿದ ಪೊಲೀಸರು ನಂತರ ಪ್ರತಿ ಹೇಳಿಕೆಯ ವಿಡಿಯೋ ರೆಕಾರ್ಡ್​ ಸಹ ಮಾಡಿಸಿದರಂತೆ. ಮಾಹಿತಿ ನೀಡೋ ಮುನ್ನ ತನ್ನ ಸ್ವವಿವರ ಸಲ್ಲಿಸಿದ ಇಂದ್ರಜಿತ್ ತಮ್ಮ ಹೆಸರು, ಉದ್ಯೋಗ, ಹಿನ್ನೆಲೆ ಹಾಗೂ ಸಿನಿಮಾ ರಂಗದ ನಂಟಿನ ಬಗ್ಗೆ ಮಾಹಿತಿ ನೀಡಿದರಂತೆ. ಜೊತೆಗೆ, ಪತ್ರಕರ್ತ ಮತ್ತು ಚಿತ್ರ ನಿರ್ದೇಶಕರಾಗಿ ಕೆಲಸ ಮಾಡುತ್ತಿರುವ ಬಗ್ಗೆ ಮಾಹಿತಿ ಸಹ ಕೊಟ್ಟರಂತೆ.

ಇದಲ್ಲದೆ, ಇಂದ್ರಜಿತ್ ನಿನ್ನೆ ಕೆಲವು ಫೋಟೋಗಳು ಮತ್ತು ಕ್ಲಿಪ್ಪಿಂಗ್ಸ್​ ​​ ಸಲ್ಲಿಸಿದ್ದಾರೆ. ಜೊತೆಗೆ, ಅವರ ಸುಮಾರು 6 ಪುಟಗಳ ಹೇಳಿಕೆಯನ್ನು CCB ಪೊಲೀಸರು ದಾಖಲಿಸಿಕೊಂಡರು. ‘ನಾನು ಕೇವಲ ಮಾಹಿತಿ ಹಂಚಿಕೆದಾರ ಅಷ್ಟೆ, ಸಾಕ್ಷಿದಾರನಲ್ಲ’ CCB ಪೊಲೀಸರಿಗೆ ದಾಖಲೆ ಸಲ್ಲಿಕೆ ವೇಳೆ ಇಂದ್ರಜಿತ್ ಒಂದು ಮನವಿ ಸಹ ಮಾಡಿದ್ದಾರೆ ಎಂದು ತಿಳಿದುಬಂದಿದೆ. ತಮ್ಮನ್ನು ಯಾವುದೇ ರೀತಿ ಸಾಕ್ಷಿದಾರನನ್ನಾಗಿಸದಂತೆ ಮನವಿ ಮಾಡಿಕೊಂಡಿರುವ ಲಂಕೇಶ್​ ನಾನು ಕೇವಲ ಮಾಹಿತಿ ಹಂಚಿಕೆದಾರ ಅಷ್ಟೆ. ನಾನು ಸಾಕ್ಷಿದಾರನಲ್ಲ ಎಂದು ಹೇಳಿದ್ದಾರಂತೆ.

ನನ್ನ ಬಳಿ ಇರುವ ಮಾಹಿತಿ ನಿಮ್ಮೊಂದಿಗೆ ಹಂಚಿಕೊಂಡಿದ್ದೇನೆ. ಈ ಮಾಹಿತಿಯನ್ನಾಧರಿಸಿ ಕಾರ್ಯಾಚರಣೆ ನಡೆಸಬಹುದು. ಆದರೆ, ನನ್ನನ್ನು ಸಾಕ್ಷಿದಾರನನ್ನಾಗಿಸಿ ಕೋರ್ಟ್‌ಗೆ ಕರೆಯಬೇಡಿ ಎಂದು ನಿನ್ನೆ CCB ಪೊಲೀಸರ ಎದುರು ಇಂದ್ರಜಿತ್ ಮನವಿ ಮಾಡಿಕೊಂಡಿರುವ ಬಗ್ಗೆ ಮಾಹಿತಿ ಸಿಕ್ಕಿದೆ.

Published On - 10:37 am, Tue, 1 September 20

‘ಸೀತಾ ಪಯಣ’ ಸಿನಿಮಾ ನೋಡಿ ಎಳೆಎಳೆಯಾಗಿ ವಿಮರ್ಶೆ ತಿಳಿಸಿದ ಶಿವಣ್ಣ
‘ಸೀತಾ ಪಯಣ’ ಸಿನಿಮಾ ನೋಡಿ ಎಳೆಎಳೆಯಾಗಿ ವಿಮರ್ಶೆ ತಿಳಿಸಿದ ಶಿವಣ್ಣ
ಮುಡಾ ಬೆನ್ನತ್ತಿದ್ದ ಸ್ನೇಹಮಯಿ ಕೃಷ್ಣ ಅರೆಸ್ಟ್: ಮನೆಯಲ್ಲಿ ಏನೇನು ಸಿಕ್ತು?
ಮುಡಾ ಬೆನ್ನತ್ತಿದ್ದ ಸ್ನೇಹಮಯಿ ಕೃಷ್ಣ ಅರೆಸ್ಟ್: ಮನೆಯಲ್ಲಿ ಏನೇನು ಸಿಕ್ತು?
ಸಿಗರೇಟ್ ಸೇದಬೇಡಿ ಎಂದಿದ್ದಕ್ಕೆ ತನ್ನ ಬೈಕ್​​ಗೇ ಬೆಂಕಿ ಹಚ್ಚಿದ ಯುವಕ!
ಸಿಗರೇಟ್ ಸೇದಬೇಡಿ ಎಂದಿದ್ದಕ್ಕೆ ತನ್ನ ಬೈಕ್​​ಗೇ ಬೆಂಕಿ ಹಚ್ಚಿದ ಯುವಕ!
ವಿಧವೆ ಮಹಿಳೆ ನೇಣಿಗೆ ಶರಣು, ಡೆತ್​​ನೋಟ್​​​ನಲ್ಲಿ ಪೊಲೀಸಪ್ಪನ ಕೃತ್ಯ ಬಯಲು
ವಿಧವೆ ಮಹಿಳೆ ನೇಣಿಗೆ ಶರಣು, ಡೆತ್​​ನೋಟ್​​​ನಲ್ಲಿ ಪೊಲೀಸಪ್ಪನ ಕೃತ್ಯ ಬಯಲು
ಟ್ರಂಪ್ 'ಸ್ಟಾಂಡ್​ಅಪ್' ಕಾಮಿಡಿ; ಮುಜುಗರಕ್ಕೀಡಾದ ಪಾಕಿಸ್ತಾನದ ಪ್ರಧಾನಿ
ಟ್ರಂಪ್ 'ಸ್ಟಾಂಡ್​ಅಪ್' ಕಾಮಿಡಿ; ಮುಜುಗರಕ್ಕೀಡಾದ ಪಾಕಿಸ್ತಾನದ ಪ್ರಧಾನಿ
ಪುತ್ರಿಯ ಸಿನಿಮಾ ನೋಡಿ ಖುಷಿ ಪಟ್ಟ ಅರ್ಜುನ್ ಸರ್ಜಾ ದಂಪತಿ: ವಿಡಿಯೋ
ಪುತ್ರಿಯ ಸಿನಿಮಾ ನೋಡಿ ಖುಷಿ ಪಟ್ಟ ಅರ್ಜುನ್ ಸರ್ಜಾ ದಂಪತಿ: ವಿಡಿಯೋ
ಶಿವಾಜಿ ಜಯಂತಿಯಲ್ಲಿ ಕಲ್ಲು ತೂರಾಟ: ಶಾಂತಿ ಸಭೆಗೆ ಬಾರದ ಮುಸ್ಲಿಂ ಮುಖಂಡರು
ಶಿವಾಜಿ ಜಯಂತಿಯಲ್ಲಿ ಕಲ್ಲು ತೂರಾಟ: ಶಾಂತಿ ಸಭೆಗೆ ಬಾರದ ಮುಸ್ಲಿಂ ಮುಖಂಡರು
ಬೆಂಗಳೂರಿಗೆ ಬಂದ ಮಹೇಶ್ ಬಾಬು ನೋಡಲು ಅಭಿಮಾನಿಗಳ ನೂಕು ನುಗ್ಗಲು
ಬೆಂಗಳೂರಿಗೆ ಬಂದ ಮಹೇಶ್ ಬಾಬು ನೋಡಲು ಅಭಿಮಾನಿಗಳ ನೂಕು ನುಗ್ಗಲು
ಕಾರು-ಲಾರಿ ಮುಖಾಮುಖಿ ಡಿಕ್ಕಿ: ಸ್ಥಳದಲ್ಲೇ 7 ಜನ ಸಾವು
ಕಾರು-ಲಾರಿ ಮುಖಾಮುಖಿ ಡಿಕ್ಕಿ: ಸ್ಥಳದಲ್ಲೇ 7 ಜನ ಸಾವು
ಧೈರ್ಯ ಇದ್ರೆ ಆ ಗುಂಪಿನ ನಾಲ್ವರಿಗೆ ಹೊಡೆಯಿರಿ, SPಗೆ ಮಾಜಿ ಶಾಸಕ ಸವಾಲ್
ಧೈರ್ಯ ಇದ್ರೆ ಆ ಗುಂಪಿನ ನಾಲ್ವರಿಗೆ ಹೊಡೆಯಿರಿ, SPಗೆ ಮಾಜಿ ಶಾಸಕ ಸವಾಲ್