AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

CCB ವಿಚಾರಣೆ ವೇಳೆ ನಿರ್ದೇಶಕ ಇಂದ್ರಜಿತ್ ಭಯಭೀತರಾಗಲು ಕಾರಣ ಏನು?

ಬೆಂಗಳೂರು: ಸ್ಯಾಂಡಲ್​ವುಡ್​ಗೆ ಡ್ರಗ್ಸ್​ ಜಾಲದ ನಂಟಿರುವ ಬಗ್ಗೆ ಆರೋಪಿಸಿದ್ದ ನಿರ್ದೇಶಕ ಇಂದ್ರಜಿತ್​ ಲಂಕೇಶ್​ ನಿನ್ನೆ CCB ವಿಚಾರಣೆಗೆ ಬಂದಿದ್ದ ವೇಳೆ ಕೊಂಚ ಭಯಭೀತರಾಗಿದ್ದರು ಎಂದು ಉನ್ನತ ಮೂಲಗಳಿಂದ ಮಾಹಿತಿ ದೊರೆತಿದೆ. ವಿಚಾರಣೆ ವೇಳೆ CCB ಅಧಿಕಾರಿಗಳು ಕಳೆದ 3 ದಿನದಿಂದ ಬೇರೆ ಬೇರೆ ಕ್ಯಾಮರಾಗಳ ಎದುರು ಹೇಳಿಕೆ ನೀಡಿದ್ರಿ. ಈಗ ಈ ಕ್ಯಾಮರಾ ಎದುರು ಹೇಳಿಕೆ ನೀಡಿ ಎಂದು ಹೇಳಿದರಂತೆ. ಈ ಮಾತು ಕೇಳಿ ಇಂದ್ರಜಿತ್ ಲಂಕೇಶ್​ ಸ್ವಲ್ಪ ಭಯಪಟ್ಟರು ಎಂಬುದರ ಬಗ್ಗೆ ಮಾಹಿತಿ ಲಭ್ಯವಾಗಿದೆ. ಇಂದ್ರಜಿತ್​ […]

CCB ವಿಚಾರಣೆ ವೇಳೆ ನಿರ್ದೇಶಕ ಇಂದ್ರಜಿತ್ ಭಯಭೀತರಾಗಲು ಕಾರಣ ಏನು?
KUSHAL V
|

Updated on:Sep 01, 2020 | 10:47 AM

Share

ಬೆಂಗಳೂರು: ಸ್ಯಾಂಡಲ್​ವುಡ್​ಗೆ ಡ್ರಗ್ಸ್​ ಜಾಲದ ನಂಟಿರುವ ಬಗ್ಗೆ ಆರೋಪಿಸಿದ್ದ ನಿರ್ದೇಶಕ ಇಂದ್ರಜಿತ್​ ಲಂಕೇಶ್​ ನಿನ್ನೆ CCB ವಿಚಾರಣೆಗೆ ಬಂದಿದ್ದ ವೇಳೆ ಕೊಂಚ ಭಯಭೀತರಾಗಿದ್ದರು ಎಂದು ಉನ್ನತ ಮೂಲಗಳಿಂದ ಮಾಹಿತಿ ದೊರೆತಿದೆ.

ವಿಚಾರಣೆ ವೇಳೆ CCB ಅಧಿಕಾರಿಗಳು ಕಳೆದ 3 ದಿನದಿಂದ ಬೇರೆ ಬೇರೆ ಕ್ಯಾಮರಾಗಳ ಎದುರು ಹೇಳಿಕೆ ನೀಡಿದ್ರಿ. ಈಗ ಈ ಕ್ಯಾಮರಾ ಎದುರು ಹೇಳಿಕೆ ನೀಡಿ ಎಂದು ಹೇಳಿದರಂತೆ. ಈ ಮಾತು ಕೇಳಿ ಇಂದ್ರಜಿತ್ ಲಂಕೇಶ್​ ಸ್ವಲ್ಪ ಭಯಪಟ್ಟರು ಎಂಬುದರ ಬಗ್ಗೆ ಮಾಹಿತಿ ಲಭ್ಯವಾಗಿದೆ.

ಇಂದ್ರಜಿತ್​ ಹೇಳಿಕೆಯನ್ನ ಲಿಖಿತವಾಗಿ ದಾಖಲಿಸಿದ ಪೊಲೀಸರು ನಂತರ ಪ್ರತಿ ಹೇಳಿಕೆಯ ವಿಡಿಯೋ ರೆಕಾರ್ಡ್​ ಸಹ ಮಾಡಿಸಿದರಂತೆ. ಮಾಹಿತಿ ನೀಡೋ ಮುನ್ನ ತನ್ನ ಸ್ವವಿವರ ಸಲ್ಲಿಸಿದ ಇಂದ್ರಜಿತ್ ತಮ್ಮ ಹೆಸರು, ಉದ್ಯೋಗ, ಹಿನ್ನೆಲೆ ಹಾಗೂ ಸಿನಿಮಾ ರಂಗದ ನಂಟಿನ ಬಗ್ಗೆ ಮಾಹಿತಿ ನೀಡಿದರಂತೆ. ಜೊತೆಗೆ, ಪತ್ರಕರ್ತ ಮತ್ತು ಚಿತ್ರ ನಿರ್ದೇಶಕರಾಗಿ ಕೆಲಸ ಮಾಡುತ್ತಿರುವ ಬಗ್ಗೆ ಮಾಹಿತಿ ಸಹ ಕೊಟ್ಟರಂತೆ.

ಇದಲ್ಲದೆ, ಇಂದ್ರಜಿತ್ ನಿನ್ನೆ ಕೆಲವು ಫೋಟೋಗಳು ಮತ್ತು ಕ್ಲಿಪ್ಪಿಂಗ್ಸ್​ ​​ ಸಲ್ಲಿಸಿದ್ದಾರೆ. ಜೊತೆಗೆ, ಅವರ ಸುಮಾರು 6 ಪುಟಗಳ ಹೇಳಿಕೆಯನ್ನು CCB ಪೊಲೀಸರು ದಾಖಲಿಸಿಕೊಂಡರು. ‘ನಾನು ಕೇವಲ ಮಾಹಿತಿ ಹಂಚಿಕೆದಾರ ಅಷ್ಟೆ, ಸಾಕ್ಷಿದಾರನಲ್ಲ’ CCB ಪೊಲೀಸರಿಗೆ ದಾಖಲೆ ಸಲ್ಲಿಕೆ ವೇಳೆ ಇಂದ್ರಜಿತ್ ಒಂದು ಮನವಿ ಸಹ ಮಾಡಿದ್ದಾರೆ ಎಂದು ತಿಳಿದುಬಂದಿದೆ. ತಮ್ಮನ್ನು ಯಾವುದೇ ರೀತಿ ಸಾಕ್ಷಿದಾರನನ್ನಾಗಿಸದಂತೆ ಮನವಿ ಮಾಡಿಕೊಂಡಿರುವ ಲಂಕೇಶ್​ ನಾನು ಕೇವಲ ಮಾಹಿತಿ ಹಂಚಿಕೆದಾರ ಅಷ್ಟೆ. ನಾನು ಸಾಕ್ಷಿದಾರನಲ್ಲ ಎಂದು ಹೇಳಿದ್ದಾರಂತೆ.

ನನ್ನ ಬಳಿ ಇರುವ ಮಾಹಿತಿ ನಿಮ್ಮೊಂದಿಗೆ ಹಂಚಿಕೊಂಡಿದ್ದೇನೆ. ಈ ಮಾಹಿತಿಯನ್ನಾಧರಿಸಿ ಕಾರ್ಯಾಚರಣೆ ನಡೆಸಬಹುದು. ಆದರೆ, ನನ್ನನ್ನು ಸಾಕ್ಷಿದಾರನನ್ನಾಗಿಸಿ ಕೋರ್ಟ್‌ಗೆ ಕರೆಯಬೇಡಿ ಎಂದು ನಿನ್ನೆ CCB ಪೊಲೀಸರ ಎದುರು ಇಂದ್ರಜಿತ್ ಮನವಿ ಮಾಡಿಕೊಂಡಿರುವ ಬಗ್ಗೆ ಮಾಹಿತಿ ಸಿಕ್ಕಿದೆ.

Published On - 10:37 am, Tue, 1 September 20

Follow Us
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ