AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಮೇಶ್​ ಅರವಿಂದ್​ಗೆ ಅವಮಾನ: ‘ಒಬ್ಬ ಮಾಡಿದ ತಪ್ಪಿಗೆ ತೆಲುಗು ಚಿತ್ರರಂಗ ಹೊಣೆಯಲ್ಲ’: ಅಲ್ಲು ಅರ್ಜುನ್​ ತಂದೆ ಪ್ರತಿಕ್ರಿಯೆ

ಡಿಸೆಂಬರ್​ 2ರಂದು ಗೋವಾದಲ್ಲಿ ಪ್ರಶಸ್ತಿ ಪ್ರದಾನ ಸಮಾರಂಭ ಆಯೋಜಿಸಲಾಗಿತ್ತು. ತೆಲುಗಿನ ಪತ್ರಕರ್ತ ಆಯೋಜಿಸಿದ ಆ ಕಾರ್ಯಕ್ರಮಕ್ಕೆ ಕನ್ನಡದ ಅನೇಕ ಸೆಲೆಬ್ರಿಟಿಗಳನ್ನು ಆಹ್ವಾನಿಸಿ, ಅವಮಾನ ಮಾಡಲಾಗಿದೆ ಎಂಬ ಆರೋಪ ಎದುರಾಗಿದೆ. ಅದಕ್ಕೆ ಅಲ್ಲು ಅರ್ಜುನ್​ ತಂದೆ ಅಲ್ಲು ಅರವಿಂದ್​ ಅವರು ಪ್ರತಿಕ್ರಿಯೆ ನೀಡಿದ್ದಾರೆ.

ರಮೇಶ್​ ಅರವಿಂದ್​ಗೆ ಅವಮಾನ: ‘ಒಬ್ಬ ಮಾಡಿದ ತಪ್ಪಿಗೆ ತೆಲುಗು ಚಿತ್ರರಂಗ ಹೊಣೆಯಲ್ಲ’: ಅಲ್ಲು ಅರ್ಜುನ್​ ತಂದೆ ಪ್ರತಿಕ್ರಿಯೆ
ಅಲ್ಲು ಅರವಿಂದ್​, ರಮೇಶ್​ ಅರವಿಂದ್​
ಮದನ್​ ಕುಮಾರ್​
|

Updated on: Dec 04, 2023 | 9:43 PM

Share

ತೆಲುಗು ಮಂದಿ ನಡೆಸಿದ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಕನ್ನಡದ (Kannada Film Industry) ಸೆಲೆಬ್ರಿಟಿಗಳಿಗೆ ಅವಮಾನ ಮಾಡಲಾಗಿದೆ ಎಂಬ ಸುದ್ದಿ ಹರಿದಾಡಿದೆ. ರಮೇಶ್​ ಅರವಿಂದ್​ (Ramesh Aravind) ಅವರನ್ನು ವೇದಿಕೆಗೆ ಕರೆದು ಅವಮಾನ ಮಾಡಿದ್ದಕ್ಕೆ ಅಭಿಮಾನಿಗಳು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಘಟನೆಗೆ ಸಂಬಂಧಿಸಿದಂತೆ ಟಾಲಿವುಡ್​ನ ಹಿರಿಯ ನಿರ್ಮಾಪಕ, ಅಲ್ಲು ಅರ್ಜುನ್​ ಅವರ ತಂದೆ ಅಲ್ಲು ಅರವಿಂದ್​ (Ramesh Aravind) ಸ್ಪಷ್ಟನೆ ನೀಡಿದ್ದಾರೆ. ಪ್ರಶಸ್ತಿ ಪ್ರದಾನ ಸಮಾರಂಭ ಆಯೋಜನೆ ಮಾಡಿದ ವ್ಯಕ್ತಿಗೂ ತಮ್ಮ ಕುಟುಂಬಕ್ಕೂ ಸಂಬಂಧ ಇಲ್ಲ ಎಂದು ಅವರು ಹೇಳಿದ್ದಾರೆ. ಅಲ್ಲದೇ ಈ ಘಟನೆಗೆ ಇಡೀ ತೆಲುಗು ಚಿತ್ರರಂಗವನ್ನು ದೂಷಿಸುವುದು ಸರಿಯಲ್ಲ ಎಂದು ಅವರು ಹೇಳಿದ್ದಾರೆ.

ಹೈದರಾಬಾದ್​ನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಅಲ್ಲು ಅರವಿಂದ್​ ಅವರು ಪ್ರತಿಕ್ರಿಯೆ ನೀಡಿದ್ದಾರೆ. ‘ಇದು ಪತ್ರಕರ್ತರೊಬ್ಬರು ನಡೆಸಿಕೊಂಡು ಬರುತ್ತಿರುವ ಪ್ರಶಸ್ತಿ ಪ್ರದಾನ ಸಮಾರಂಭ. ಗೋವಾದಲ್ಲಿ ನಡೆದ ಸಮಾರಂಭ ಯಶಸ್ವಿಯಾಗಿಲ್ಲ. ನಮ್ಮ ಕುಟುಂಬದ ಕಲಾವಿದರಿಗೆ ಆ ಪತ್ರಕರ್ತನೇ ಪಿಆರ್​ಓ ಎಂದು ಕೆಲವರು ಹೇಳುತ್ತಿದ್ದಾರೆ. ನಮ್ಮ ಜೊತೆ ಫೋಟೋ ಕ್ಲಿಕ್ಕಿಸಿಕೊಂಡಿದ್ದಾನೆ ಎಂದಮಾತ್ರಕ್ಕೆ ಆತ ನಮ್ಮ ಕುಟುಂಬದ ಪ್ರತಿನಿಧಿ ಅಲ್ಲ’ ಎಂದು ಅಲ್ಲು ಅರವಿಂದ್​ ಅವರು ಹೇಳಿದ್ದಾರೆ.

‘ಈ ವಿಷಯದಲ್ಲಿ ನಮ್ಮನ್ನು ಎಳೆದು ತರುವುದು ಸರಿಯಲ್ಲ. ಬೇರೆ ಚಿತ್ರರಂಗದವರು ಸಮಸ್ಯೆ ಅನುಭವಿಸಿದ್ದಕ್ಕೆ ಇಡೀ ತೆಲುಗು ಚಿತ್ರರಂಗದ ಮೇಲೆ ಆರೋಪ ಹೊರಿಸಲಾಗುತ್ತಿದೆ. ಒಬ್ಬ ಮಾಡಿದ ತಪ್ಪಿಗೆ ತಮ್ಮನ್ನೆಲ್ಲ ಆರೋಪಿಸಿದ್ದಕ್ಕೆ ನನಗೆ ತೀವ್ರ ಬೇಸರ ಆಗಿದೆ. ಆ ವ್ಯಕ್ತಿಗೂ ನಮಗೂ ಸಂಬಂಧ ಇಲ್ಲ. ಇಡೀ ಟಾಲಿವುಡ್​ ಮೇಲೆ ಆರೋಪ ಮಾಡಿರುವುದು ಸರಿಯಲ್ಲ’ ಎಂದು ಅಲ್ಲು ಅರವಿಂದ್​ ಹೇಳಿದ್ದಾರೆ.

ಇದನ್ನೂ ಓದಿ: ಗೋವಾದಲ್ಲಿ ಕನ್ನಡ ಸಿನಿಮಾ ನಟ-ನಟಿಯರಿಗೆ ಅವಮಾನ

ಪ್ರಶಸ್ತಿ ಪ್ರದಾನ ಸಮಾರಂಭ ನಡೆಸಿದ ಸುರೇಶ್​ ಎಂಬ ವ್ಯಕ್ತಿ ಕೂಡ ಕ್ಷಮೆ ಕೇಳಿದ್ದಾರೆ. ‘ಇದು ಸಂಪೂರ್ಣ ನನ್ನ ಹೊಣೆಯೇ ಹೊರತು ತೆಲುಗು ಚಿತ್ರರಂಗದ್ದಲ್ಲ. ಸಂವಹನದ ಸಮಸ್ಯೆಯಿಂದ ಈ ತಪ್ಪು ನಡೆದಿದೆ. ಕನ್ನಡ ಮತ್ತು ತಮಿಳಿನ ಜನರಿಗೆ ಅವಮಾನ ಮಾಡುವ ಉದ್ದೇಶ ನಮ್ಮದಲ್ಲ. ನಮ್ಮ ಕಾರ್ಯಕ್ರಮದಲ್ಲಿ ಆದ ವ್ಯತ್ಯಯಕ್ಕೆ ನಾನು ಕ್ಷಮೆ ಕೇಳುತ್ತೇನೆ’ ಎಂದು ಸುರೇಶ್​ ಕ್ಷಮೆ ಕೇಳಿದ್ದಾರೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

ಎಲ್ಲವೂ ಓದಿದ್ರೂ ಪರೀಕ್ಷೆ ಹಾಲ್‌ನಲ್ಲಿ ಕೂತಾಗ ಮರೆತು ಹೋಗುವುದು ಯಾಕೆ?
ಎಲ್ಲವೂ ಓದಿದ್ರೂ ಪರೀಕ್ಷೆ ಹಾಲ್‌ನಲ್ಲಿ ಕೂತಾಗ ಮರೆತು ಹೋಗುವುದು ಯಾಕೆ?
ಮಂಡ್ಯ: ಪ್ರೀತಿಸಿ ಮದುವೆಯಾದ ಅಳಿಯನ ಮನೆಗೆ ಬೆಂಕಿ ಹಚ್ಚಿದ ಮಾವ!
ಮಂಡ್ಯ: ಪ್ರೀತಿಸಿ ಮದುವೆಯಾದ ಅಳಿಯನ ಮನೆಗೆ ಬೆಂಕಿ ಹಚ್ಚಿದ ಮಾವ!
ಸಿಎಂ ಸಿದ್ದರಾಮಯ್ಯರ ಟ್ವೀಟ್ ಬಗ್ಗೆ ಕೇಂದ್ರ ಸಚಿವ ಹೆಚ್​ಡಿಕೆ ಲೇವಡಿ
ಸಿಎಂ ಸಿದ್ದರಾಮಯ್ಯರ ಟ್ವೀಟ್ ಬಗ್ಗೆ ಕೇಂದ್ರ ಸಚಿವ ಹೆಚ್​ಡಿಕೆ ಲೇವಡಿ
ಕಮಿಷನ್​​ ಪಡೆಯುವಾಗಲೇ ಶಾಸಕ ಲಾಕ್​, ಇಲ್ಲಿದೆ ಎಕ್ಸ್​​ಕ್ಲೂಸಿವ್ ವಿಡಿಯೋ
ಕಮಿಷನ್​​ ಪಡೆಯುವಾಗಲೇ ಶಾಸಕ ಲಾಕ್​, ಇಲ್ಲಿದೆ ಎಕ್ಸ್​​ಕ್ಲೂಸಿವ್ ವಿಡಿಯೋ
ಹೆಲಿಕಾಪ್ಟರ್ ಘಟಕಕ್ಕೆ ವಿದ್ಯುತ್ ಕಟ್ ಮಾಡಿ ಎಂದ ಕೊತ್ತೂರು ಶಾಸಕ!
ಹೆಲಿಕಾಪ್ಟರ್ ಘಟಕಕ್ಕೆ ವಿದ್ಯುತ್ ಕಟ್ ಮಾಡಿ ಎಂದ ಕೊತ್ತೂರು ಶಾಸಕ!
ಕಾಂಗ್ರೆಸ್ ಕುರ್ಚಿ ಕದನ: ಖರ್ಗೆ ಭೇಟಿ ಬಳಿಕ ಜಾರಕಿಹೊಳಿ ಸ್ಫೋಟಕ ಮಾಹಿತಿ
ಕಾಂಗ್ರೆಸ್ ಕುರ್ಚಿ ಕದನ: ಖರ್ಗೆ ಭೇಟಿ ಬಳಿಕ ಜಾರಕಿಹೊಳಿ ಸ್ಫೋಟಕ ಮಾಹಿತಿ
ಬಂಧನದ ಬಗ್ಗೆ ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಫಸ್ಟ್ ರಿಯಾಕ್ಷನ್
ಬಂಧನದ ಬಗ್ಗೆ ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಫಸ್ಟ್ ರಿಯಾಕ್ಷನ್
ವೈರಿಯ ಮನೆಗೆ ಬೆಂಕಿ ಹಚ್ಚಲು ಹೋದವನ ಕಾರೇ ಬೆಂಕಿಗಾಹುತಿ
ವೈರಿಯ ಮನೆಗೆ ಬೆಂಕಿ ಹಚ್ಚಲು ಹೋದವನ ಕಾರೇ ಬೆಂಕಿಗಾಹುತಿ
‘ಸೀತಾಪಯಣ’ಕ್ಕೆ ಸಿಕ್ಕ ಪ್ರತಿಕ್ರಿಯೆಗೆ ಧನ್ಯವಾದ ಹೇಳಿದ ಉಪೇಂದ್ರ ಅಣ್ಣನ ಮಗ
‘ಸೀತಾಪಯಣ’ಕ್ಕೆ ಸಿಕ್ಕ ಪ್ರತಿಕ್ರಿಯೆಗೆ ಧನ್ಯವಾದ ಹೇಳಿದ ಉಪೇಂದ್ರ ಅಣ್ಣನ ಮಗ
ನಮಾಜ್​ಗೆ ಅನುಮತಿ, ಹಿಂದೂಗಳ ಪ್ರಾರ್ಥನೆಗೆ ನಿರ್ಬಂಧ: ಜೋಶಿ ವಾಗ್ದಾಳಿ
ನಮಾಜ್​ಗೆ ಅನುಮತಿ, ಹಿಂದೂಗಳ ಪ್ರಾರ್ಥನೆಗೆ ನಿರ್ಬಂಧ: ಜೋಶಿ ವಾಗ್ದಾಳಿ