AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ವಾಯ್ಲೆನ್ಸ್ ವಾಯ್ಲೆನ್ಸ್ ವಾಯ್ಲೆನ್ಸ್​’ ಶೈಲಿಯಲ್ಲಿ ಬಿಬಿಎಂಪಿ ಕಾಲೆಳೆದ ನೆಟ್ಟಿಗರು; ವೈರಲ್ ಆಗುತ್ತಿದೆ ವಿಡಿಯೋ

‘ಕೆಜಿಎಫ್ ಚಾಪ್ಟರ್​ 2’ ಸಿನಿಮಾದ ಹಲವು ಡೈಲಾಗ್​ಗಳನ್ನು ನಾನಾ ರೀತಿಯಲ್ಲಿ ಬಳಕೆ ಮಾಡಿಕೊಳ್ಳಲಾಗುತ್ತಿದೆ. ಇದರಲ್ಲಿ ‘ವಾಯ್ಲೆನ್ಸ್ ..’ ಡೈಲಾಗ್ ಕೂಡ ಒಂದು.

‘ವಾಯ್ಲೆನ್ಸ್ ವಾಯ್ಲೆನ್ಸ್ ವಾಯ್ಲೆನ್ಸ್​’ ಶೈಲಿಯಲ್ಲಿ ಬಿಬಿಎಂಪಿ ಕಾಲೆಳೆದ ನೆಟ್ಟಿಗರು; ವೈರಲ್ ಆಗುತ್ತಿದೆ ವಿಡಿಯೋ
ಯಶ್
TV9 Web
| Edited By: |

Updated on:Apr 22, 2022 | 4:06 PM

Share

‘ವಾಯ್ಲೆನ್ಸ್  ವಾಯ್ಲೆನ್ಸ್  ವಾಯ್ಲೆನ್ಸ್ ..​’ ಇದು ಸದ್ಯ ಸಾಕಷ್ಟು ಟ್ರೆಂಡಿಂಗ್​ನಲ್ಲಿ ಇರುವ ಡೈಲಾಗ್​. ‘ಕೆಜಿಎಫ್: ಚಾಪ್ಟರ್​2’  (KGF Chapter 2)ಟ್ರೇಲರ್​ನಲ್ಲಿ ಈ ಡೈಲಾಗ್​ ಇತ್ತು. ಈ ಟ್ರೇಲರ್ ರಿಲೀಸ್ ಆದ ನಂತರದಲ್ಲಿ ಈ ಡೈಲಾಗ್​ ಸಾಕಷ್ಟು ವೈರಲ್ ಆಗುತ್ತಿದೆ. ನಾನಾ ಕಡೆಗಳಲ್ಲಿ, ನಾನಾ ರೀತಿಯಲ್ಲಿ ಈ ಡೈಲಾಗ್ ಬಳಕೆ ಆಗುತ್ತಿದೆ. ಈ ಡೈಲಾಗ್​ ಇರುವ ಮದುವೆ ಆಮಂತ್ರಣ ಪತ್ರ ಇತ್ತೀಚೆಗೆ ವೈರಲ್ ಆಗಿತ್ತು. ಈಗ ಇದಕ್ಕೆ ಹೊಸ ಸೇರ್ಪಡೆ ಆಗಿದೆ. ಈ ಡೈಲಾಗ್​ ಮೂಲಕ ಬೆಂಗಳೂರು ಮಹಾನಗರ ಪಾಲಿಕೆಯನ್ನು (BBMP) ನೆಟ್ಟಿಗರು ಕಾಲೆಳೆದಿದ್ದಾರೆ. ಈ ವಿಡಿಯೋ ಸಖತ್ ವೈರಲ್ ಆಗುತ್ತಿದೆ.

‘ಕೆಜಿಎಫ್ 2’ ಸಿನಿಮಾ ಮಾಡಿದ ಮೋಡಿ ಅಷ್ಟಿಷ್ಟಲ್ಲ. ಏಪ್ರಿಲ್ 14ರಂದು ರಿಲೀಸ್ ಆದ ಈ ಸಿನಿಮಾ ತೆರೆಗೆ ಬಂದು ಬಾಕ್ಸ್ ಆಫೀಸ್​ನಲ್ಲಿ ದೊಡ್ಡ ಮಟ್ಟದ ಕಲೆಕ್ಷನ್ ಮಾಡುತ್ತಿದೆ. ಬಾಲಿವುಡ್​ನಿಂದ ಈ ಸಿನಿಮಾ 268 ಕೋಟಿ ರೂಪಾಯಿ ಗಳಿಸಿದೆ. ಈ ಸಿನಿಮಾದ ಹಲವು ಡೈಲಾಗ್​ಗಳನ್ನು ನಾನಾ ರೀತಿಯಲ್ಲಿ ಬಳಕೆ ಮಾಡಿಕೊಳ್ಳಲಾಗುತ್ತಿದೆ. ಇದರಲ್ಲಿ ‘ವಾಯ್ಲೆನ್ಸ್ ..’ ಡೈಲಾಗ್ ಕೂಡ ಒಂದು.

ಬೆಂಗಳೂರಿನ ರಸ್ತೆಗಳಲ್ಲಿ ಒಮ್ಮೆ ಓಡಾಡಿದರೆ ಯತೇಚ್ಛವಾಗಿ ಗುಂಡಿಗಳು ಸಿಗುತ್ತವೆ. ಕೆಲವು ಕಡೆಗಳಲ್ಲಿ ಬಿಬಿಎಂಪಿ ಇದನ್ನು ಮುಚ್ಚುವ ಕೆಲಸ ಮಾಡಿದೆಯಾದರೂ ಬಹುತೇಕ ಕಡೆಗಳಲ್ಲಿ ಈ ಗುಂಡಿ ಹಾಗೆಯೇ ಇದೆ. ಇನ್ನು, ಈ ಗುಂಡಿಗಳಲ್ಲಿ ಬಿದ್ದು ಸಾಕಷ್ಟು ಮಂದಿ ಪ್ರಾಣ ಕಳೆದುಕೊಂಡಿದ್ದಾರೆ. ಈ ವಿಚಾರದಲ್ಲಿ ಬೆಂಗಳೂರು ಮಹಾನಗರ ಪಾಲಿಕೆಯನ್ನು ನಾನಾ ರೀತಿಯಲ್ಲಿ ಟ್ರೋಲ್ ಮಾಡಲಾಗಿದೆ. ಆದರೂ, ತಪ್ಪನ್ನು ತಿದ್ದಿಕೊಳ್ಳುತ್ತಿಲ್ಲ. ಈಗ ‘ಕೆಜಿಎಫ್ 2’ ಡೈಲಾಗ್ ಬಳಸಿ ಬಿಬಿಎಂಪಿಯನ್ನು ಟ್ರೋಲ್ ಮಾಡಲಾಗಿದೆ.

ವೈರಲ್ ಆಗುತ್ತಿರುವ ವಿಡಿಯೋದಲ್ಲಿ ‘ವಾಯ್ಲೆನ್ಸ್​..’ ದೃಶ್ಯವನ್ನು ಬಳಕೆ ಮಾಡಿಕೊಳ್ಳಲಾಗಿದೆ. ಇದಕ್ಕೆ, ‘ಗುಂಡಿ, ಗುಂಡಿ, ಗುಂಡಿ.. ಐ ಡೋಂಟ್​ ಲೈಕ್ ಇಟ್​. ಐ ಅವಾಯ್ಡ್​​. ಬಟ್ ಬಿಬಿಎಂಪಿ ಲೈಕ್ಸ್ ಗುಂಡಿ. ವಿ ಕಾಂಟ್ ಅವಾಯ್ಡ್​’ ಎನ್ನುವ ಡೈಲಾಗ್ ಸೇರಿಸಲಾಗಿದೆ. ಬೆಂಗಳೂರಿನ ರಸ್ತೆಗುಂಡಿಗಳ ಫೋಟೋಗಳು ಇದರಲ್ಲಿವೆ. ಇದಕ್ಕೆ ನಾನಾ ರೀತಿಯ ಕಮೆಂಟ್​ಗಳು ಬರುತ್ತಿವೆ. ಕೆಲವರು ಈ ವಿಡಿಯೋ ಮಾಡಿದವರ ಕ್ರಿಯೇಟಿವಿಟಿಗೆ ಮೆಚ್ಚುಗೆ ಸೂಚಿಸಿದ್ದಾರೆ. ಇನ್ನೂ ಕೆಲವರು ಬೆಂಗಳೂರಿನ ರಸ್ತೆ ಮೇಲಿರುವ ಗುಂಡಿಗಳ ಫೋಟೋವನ್ನು ಹಾಕುತ್ತಿದ್ದಾರೆ.

ವಿವಾಹದ ಆಮಂತ್ರಣ ಪತ್ರಿಕೆಯಲ್ಲಿ ಕೆಜಿಎಫ್ 2 ಡೈಲಾಗ್:

ಚಂದ್ರಶೇಖರ್​ ಮತ್ತು ಶ್ವೇತಾ ಎಂಬುವವರು ಮೇ 13ರಂದು ದಾಂಪತ್ಯ ಜೀವನಕ್ಕೆ ಕಾಲಿಡುತ್ತಿದ್ದಾರೆ. ಬೆಳಗಾವಿಯಲ್ಲಿ ಇವರ ಮದುವೆ ನಡೆಯಲಿದೆ. ವಿವಾಹದ ಆಮಂತ್ರಣ ಪತ್ರಿಕೆಯನ್ನು ಇಂಗ್ಲಿಷ್​ನಲ್ಲಿ ಮುದ್ರಿಸಲಾಗಿದೆ. ಇದರಲ್ಲಿ ಈ ರೀತಿ ಒಂದು ಸಾಲು ಬರೆಯಲಾಗಿದೆ. ‘ಮ್ಯಾರೇಜ್​ ಮ್ಯಾರೇಜ್​ ಮ್ಯಾರೇಜ್​.. ಐ ಡೋಂಟ್​ ಲೈಕ್​ ಇಟ್​. ಐ ಅವಾಯ್ಡ್​.. ಬಟ್​ ಮೈ ರಿಲೇಟಿವ್ಸ್​ ಲೈಕ್​ ಮ್ಯಾರೇಜ್​. ಐ ಕಾಂಟ್​ ಅವಾಯ್ಡ್​’ ಎಂದು ಬರೆದಿರುವುದು ಸೋಶಿಯಲ್​ ಮೀಡಿಯಾದಲ್ಲಿ ಸಖತ್​ ವೈರಲ್​ ಆಗುತ್ತಿದೆ.

ಇದನ್ನೂ ಓದಿ: ‘ಕೆಜಿಎಫ್ 2’ ಸಿನಿಮಾ ನೋಡಿ ಭೇಷ್ ಎಂದ ಅಲ್ಲು ಅರ್ಜುನ್; ಯಶ್ ಪರ್ಫಾರ್ಮೆನ್ಸ್​​ಗೆ ಸ್ಟೈಲಿಶ್ ಸ್ಟಾರ್ ಫಿದಾ

ಮತ್ತಷ್ಟು ಹೊಸ ದಾಖಲೆ ಬರೆದ ‘ಕೆಜಿಎಫ್ 2’; ಹೊರದೇಶದಲ್ಲಿ ಚಿತ್ರದ ಕಲೆಕ್ಷನ್ ಎಷ್ಟು?

Published On - 4:04 pm, Fri, 22 April 22

Follow Us
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ
ಜಿಬಿಎ ಚುನಾವಣೆಗೆ ಕೊನೆಗೂ ಮುಹೂರ್ತ: ಎಲೆಕ್ಷನ್​​ ಯಾವಾಗ ಗೊತ್ತಾ?
ಜಿಬಿಎ ಚುನಾವಣೆಗೆ ಕೊನೆಗೂ ಮುಹೂರ್ತ: ಎಲೆಕ್ಷನ್​​ ಯಾವಾಗ ಗೊತ್ತಾ?
ವಿಜಯ್​​ರನ್ನು ದೇವರೇ ಕಾಪಾಡಬೇಕು ಎಂದ ಹೆಚ್​​ಡಿಕೆ: ಕಾರಣ ಇಲ್ಲಿದೆ
ವಿಜಯ್​​ರನ್ನು ದೇವರೇ ಕಾಪಾಡಬೇಕು ಎಂದ ಹೆಚ್​​ಡಿಕೆ: ಕಾರಣ ಇಲ್ಲಿದೆ
ಅಂಜನಾದ್ರಿ ಹನುಮನಿಗೆ 2.5 ಕೋಟಿ ರೂ. ಮೌಲ್ಯದ ಚಿನ್ನದ ಕಿರೀಟ!
ಅಂಜನಾದ್ರಿ ಹನುಮನಿಗೆ 2.5 ಕೋಟಿ ರೂ. ಮೌಲ್ಯದ ಚಿನ್ನದ ಕಿರೀಟ!