AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Dhananjay: ಸಾಹಿತಿ ಆಗಿ ಮಿಂಚಿದ್ದಾಯ್ತು; ಈಗ ಸಿಂಗರ್ ಆಗಲಿದ್ದಾರಾ ಡಾಲಿ ಧನಂಜಯ್?; ಕುತೂಹಲ ಹುಟ್ಟಿಸಿದೆ ಪ್ರೋಮೊ!

Badava Rascal Film: ಕನ್ನಡದ ಪ್ರತಿಭಾವಂತ ನಟ ಡಾಲಿ ಧನಂಜಯ್ ತಮ್ಮ ಚಿತ್ರಕ್ಕಾಗಿ ಹಾಡು ಹೇಳಲಿದ್ದಾರಾ? ಹೀಗೊಂದು ಕುತೂಹಲವನ್ನು ಹುಟ್ಟುಹಾಕಿದೆ ‘ಬಡವ ರಾಸ್ಕಲ್’ ಚಿತ್ರತಂಡ.

Dhananjay: ಸಾಹಿತಿ ಆಗಿ ಮಿಂಚಿದ್ದಾಯ್ತು; ಈಗ ಸಿಂಗರ್ ಆಗಲಿದ್ದಾರಾ ಡಾಲಿ ಧನಂಜಯ್?; ಕುತೂಹಲ ಹುಟ್ಟಿಸಿದೆ ಪ್ರೋಮೊ!
ಡಾಲಿ ಧನಂಜಯ್
TV9 Web
| Edited By: |

Updated on: Aug 07, 2021 | 1:33 PM

Share

ಚಂದನವನದ ಭರವಸೆಯ ನಟ ಡಾಲಿ ಧನಂಜಯ್ ಕೈಯಲ್ಲಿ ಹಲವಾರು ಚಿತ್ರಗಳಿವೆ. ‘ಪುಷ್ಪಾ’ ಚಿತ್ರದ ಮೂಲಕ ಪ್ಯಾನ್ ಇಂಡಿಯಾ ಮಾದರಿಯ ಸಿನಿಮಾಕ್ಕೂ ಅವರು ಕಾಲಿಡಲಿದ್ದಾರೆ. ತಮ್ಮದೇ ನಿರ್ಮಾಣ ಸಂಸ್ಥೆಯಾದ ‘ಡಾಲಿ ಪಿಕ್ಚರ್ಸ್’ ಸಂಸ್ಥೆಯ ಮೂಲಕ ಚಿತ್ರ ನಿರ್ಮಾಣಕ್ಕೂ ಅವರು ಧುಮುಕಿದ್ದಾರೆ. ಈಗಾಗಲೇ ನಾಯಕನಾಗಿ, ಪ್ರತಿನಾಯಕನಾಗಿ, ಸಾಹಿತಿಯಾಗಿ, ಬರಹಗಾರನಾಗಿ ಎಲ್ಲರ ಮನಸೂರೆಗೊಂಡಿರುವ ಧನಂಜಯ್ ಈಗ ಹಾಡನ್ನೂ ಹೇಳಲಿದ್ದಾರಾ? ಎಂಬ ಪ್ರಶ್ನೆಯೊಂದು ಎಲ್ಲರಲ್ಲಿ ಮೂಡಿದೆ. ಹೌದು. ಅವರು ನಟಿಸಿ, ನಿರ್ಮಾಣ  ಮಾಡುತ್ತಿರುವ ‘ಬಡವ ರಾಸ್ಕಲ್’ ಚಿತ್ರದ ಹಾಡೊಂದನ್ನು ಅವರು ಹೇಳಬಹುದೇ? ಎಂಬ ಕುತೂಹಲವನ್ನು ಹುಟ್ಟಿಸುವಂತಹ ಪ್ರೋಮೋವೊಂದನ್ನು ಚಿತ್ರತಂಡ ಬಿಡುಗಡೆ ಮಾಡಿದೆ.

ಆನಂದ್ ಆಡಿಯೋ ಯೂಟ್ಯೂಬ್ ಚಾನೆಲ್ ಮುಖಾಂತರ ಹಂಚಿಕೊಳ್ಳಲಾಗಿರುವ ಪ್ರೋಮೋದಲ್ಲಿ ‘ಬಡವ ರಾಸ್ಕಲ್’ ಚಿತ್ರದ ಹಾಡೊಂದನ್ನು ಕಟ್ಟುವ ಸಂದರ್ಭವನ್ನು ಹಾಸ್ಯಭರಿತ ಮಾದರಿಯಲ್ಲಿ ಮರುಸೃಷ್ಟಿ ಮಾಡಲಾಗಿದೆ. ಚಿತ್ರದ ನಿರ್ದೇಶಕ ಶಂಕರ್ ಗುರು, ಸಂಗೀತ ನಿರ್ದೇಶಕ ವಾಸುಕಿ ವೈಭವ್ ಅವರೊಂದಿಗೆ ಧನಂಜಯ್ ಸೇರಿಕೊಂಡು ಹಾಡಿನ ಸಾಹಿತ್ಯವನ್ನು ಹೇಗೆ ಬರೆಸಬಹುದು, ಯಾರಿಂದ ಬರೆಸಬಹುದು, ಯಾರ ಕೈಯಲ್ಲಿ ಹಾಡಿಸಬಹುದು ಎಂಬುದನ್ನು ಚರ್ಚಿಸುತ್ತಾರೆ. ಕೊನೆಗೆ ಧನಂಜಯ್, ತನ್ನ ಹಳೆಯ ಪದ್ಯಗಳನ್ನೆಲ್ಲಾ ನೀಡಿ ತಾನೂ ಚೆನ್ನಾಗಿ ಬರೆಯುತ್ತೇನೆ ಎನ್ನುತ್ತಾರೆ.

ಕೊನೆಯಲ್ಲಿ ಧನಂಜಯ್​ ಬರೆದ ಗೀತೆಯನ್ನೇ ಹಾಡು ಮಾಡುವುದು ಎಂದು ತೀರ್ಮಾನವಾಗುತ್ತದೆ. ಆದರೆ, ಅದನ್ನು ಹಾಡುವುದು ಯಾರು ಎಂಬ ಪ್ರಶ್ನೆ ಬರುತ್ತದೆ. ಆಗ ಧನಂಜಯ್, ‘ಅದೇನೋ ಆಟೋ ಟ್ಯೂನಿಂಗ್ ಎಲ್ಲಾ ಮಾಡಿ ನಾವೇ ಹಾಡಬಹುದಂತಲ್ಲ…’ ಎನ್ನುತ್ತಾರೆ. ಅಲ್ಲಿಂದ ಪ್ರಶ್ನೆಯನ್ನು ಅಭಿಮಾನಿಗಳಿಗೇ ಬಿಟ್ಟಿರುವ ಚಿತ್ರತಂಡ, ಹಾಡನ್ನು ಹಾಡಿರುವುದು ಯಾರೆಂದು ತಿಳಿಯುವುದಕ್ಕಾಗಿ ಆಗಸ್ಟ್ 9ರ ಸಂಜೆವರೆಗೆ ಕಾಯಿರಿ ಎಂದಿದೆ. ಕಾರಣ, ಅಂದು ಸಂಜೆ 5.55ಕ್ಕೆ ಹಾಡು ಬಿಡುಗಡೆಯಾಗಲಿದೆ.

ಚಿತ್ರತಂಡ ಬಿಡುಗಡೆ ಮಾಡಿರುವ ಹಾಡಿನ ಪ್ರೊಮೋಷನಲ್ ವಿಡಿಯೊ:

ಇತ್ತೀಚೆಗೆ ಕನ್ನಡ ಚಿತ್ರಗಳಲ್ಲಿ ಸೃಜನಾತ್ಮಕವಾದ ಪ್ರೊಮೋಷನ್​ ಮಾದರಿಗಳನ್ನು ಅನುಸರಿಸಲಾಗುತ್ತಿದೆ. ವ್ಯಂಗ್ಯ ಮತ್ತು ವಿಡಂಬನೆಯ ಮೂಲಕ ತಮ್ಮ ಕಾಲನ್ನು ತಾವೇ ಎಳೆದುಕೊಳ್ಳುತ್ತಿರುವ ಮಾದರಿಯಲ್ಲಿ ಈ ವಿಡಿಯೊಗಳನ್ನು ರೂಪಿಸಲಾಗುತ್ತಿದೆ. ನೋಡುಗರಿಗೆ ಮನರಂಜನೆಯನ್ನೂ, ಚಿತ್ರದ ಕುರಿತಾದ ನಿರೀಕ್ಷೆಯನ್ನೂ ಹುಟ್ಟಿಸುವ ಈ ಮಾದರಿಯ ವಿಡಿಯೊಗಳು ಜಾಲತಾಣಗಳಲ್ಲಿ ಸಖತ್ ಸದ್ದು ಮಾಡುತ್ತವೆ. ಹೊಸ ಹುಡುಗರು ಸೇರಿಕೊಂಡು ನಿರ್ಮಿಸುತ್ತಿರುವ ‘ಹಾಸ್ಟಲ್ ಹುಡುಗರು ಬೇಕಾಗಿದ್ದಾರೆ’ ಚಿತ್ರತಂಡವೂ ಕೂಡಾ ಈ ಮಾದರಿಯ ಪ್ರಚಾರ ಮಾದರಿಯನ್ನು ಅನುಸರಿಸಿ ಯಶಸ್ವಿಯಾಗಿತ್ತು. ಈಗ ಧನಂಜಯ್ ಮತ್ತು ಚಿತ್ರತಂಡ ಮಾಡಿರುವ ವಿಡಿಯೊ ಕೂಡಾ, ಚಿತ್ರ ಪ್ರಿಯರನ್ನು ಸೆಳೆದಿದ್ದು, ಚಿತ್ರದ ಕುರಿತು ಮತ್ತಷ್ಟು ನಿರೀಕ್ಷೆ ಹುಟ್ಟುಹಾಕಿದೆ. ಅಂದ ಹಾಗೆ ಆಗಸ್ಟ್ 9ರಂದು ಬಿಡುಗಡೆಯಾಗುತ್ತಿರುವ ಹಾಡು ‘ಉಡುಪಿ ಹೋಟೆಲ್’ ಕುರಿತಾಗಿರುತ್ತದೆ ಎಂಬ ಮಾಹಿತಿ ನೀಡಿದೆ ಚಿತ್ರತಂಡ.

ಇದನ್ನೂ ಓದಿ:

ಬಿಗ್​ ಬಾಸ್​ ಬಳಿಕ ರಂಜಿಸಲು ಬರ್ತಿವೆ ಹೊಸ ಸೀರಿಯಲ್​ಗಳು; ಲಕ್ಷಣ, ಕನ್ಯಾಕುಮಾರಿ ಕಥೆ ಏನು?

ಯಶ್​ ಜೊತೆ ಪುತ್ರ ಯಥರ್ವ್​ ಫೈಟ್​; ಮೂಗು ಕಚ್ಚಿದ ಮುದ್ದು ಕಂದನ ವಿಡಿಯೋ ವೈರಲ್​

(Is Daali Dhananjay Sings for Badava Rascal Movie interesting promo creates curiosity in Audiences)

Follow Us
ಪ್ರಧಾನಿ ಮೋದಿ ನಾಯಕತ್ವದಿಂದ ಇಡೀ ಜಗತ್ತು ಭಾರತವನ್ನ ಗೌರವದಿಂದ ಕಾಣುತ್ತಿದೆ
ಪ್ರಧಾನಿ ಮೋದಿ ನಾಯಕತ್ವದಿಂದ ಇಡೀ ಜಗತ್ತು ಭಾರತವನ್ನ ಗೌರವದಿಂದ ಕಾಣುತ್ತಿದೆ
ಒಂದು ಕ್ಷಿಪಣಿ ಜಾಗತಿಕ ಮಾರುಕಟ್ಟೆಗಳನ್ನೇ ಅಸ್ತವ್ಯಸ್ತಗೊಳಿಸುತ್ತಿದೆ
ಒಂದು ಕ್ಷಿಪಣಿ ಜಾಗತಿಕ ಮಾರುಕಟ್ಟೆಗಳನ್ನೇ ಅಸ್ತವ್ಯಸ್ತಗೊಳಿಸುತ್ತಿದೆ
ಸಾರ್ವಜನಿಕವಾಗಿ ಪತ್ನಿಯನ್ನ ಗಂಡ ಹತ್ಯೆ ಮಾಡಿದ್ಯಾಕೆ? ಅಂತಹ ದ್ವೇಷ ಏನಿತ್ತು
ಸಾರ್ವಜನಿಕವಾಗಿ ಪತ್ನಿಯನ್ನ ಗಂಡ ಹತ್ಯೆ ಮಾಡಿದ್ಯಾಕೆ? ಅಂತಹ ದ್ವೇಷ ಏನಿತ್ತು
ಕುವೈತ್​​ನಲ್ಲಿ ಇರಾನ್​ನಿಂದ ಮತ್ತೊಂದು ಯುದ್ಧವಿಮಾನ ಪತನ; ವಿಡಿಯೋ ವೈರಲ್
ಕುವೈತ್​​ನಲ್ಲಿ ಇರಾನ್​ನಿಂದ ಮತ್ತೊಂದು ಯುದ್ಧವಿಮಾನ ಪತನ; ವಿಡಿಯೋ ವೈರಲ್
PM Modi Speech in WITT Live: ಟಿವಿ9​​ ಶೃಂಗಸಭೆ; ಪ್ರಧಾನಿ ಮೋದಿ ಭಾಷಣ
PM Modi Speech in WITT Live: ಟಿವಿ9​​ ಶೃಂಗಸಭೆ; ಪ್ರಧಾನಿ ಮೋದಿ ಭಾಷಣ
ಬಾಗಲಕೋಟೆ ಬೈ ಎಲೆಕ್ಷನ್ ಕಾಂಗ್ರೆಸ್ ಟಿಕೆಟ್ ಸೀಕ್ರೆಟ್ ಬಿಚ್ಚಿಟ್ಟ ಸಿಎಂ
ಬಾಗಲಕೋಟೆ ಬೈ ಎಲೆಕ್ಷನ್ ಕಾಂಗ್ರೆಸ್ ಟಿಕೆಟ್ ಸೀಕ್ರೆಟ್ ಬಿಚ್ಚಿಟ್ಟ ಸಿಎಂ
ಮುತ್ತಪ್ಪ ರೈ ಪುತ್ರ ರಿಕ್ಕಿ ರೈನಿಂದಲೇ ಕಾರ್ ಡ್ರೈವಿಂಗ್:
ಮುತ್ತಪ್ಪ ರೈ ಪುತ್ರ ರಿಕ್ಕಿ ರೈನಿಂದಲೇ ಕಾರ್ ಡ್ರೈವಿಂಗ್:
ಚಿನ್ನ-ಬೆಳ್ಳಿ ದರ ಏರಿಳಿತ, ಹೂಡಿಕೆ ಬಗ್ಗೆ ಆರ್ಥಿಕ ತಜ್ಞ ಮಹತ್ವದ ಮಾಹಿತಿ
ಚಿನ್ನ-ಬೆಳ್ಳಿ ದರ ಏರಿಳಿತ, ಹೂಡಿಕೆ ಬಗ್ಗೆ ಆರ್ಥಿಕ ತಜ್ಞ ಮಹತ್ವದ ಮಾಹಿತಿ
ಸಾಲ ಮಾಡಿ ಚಿನ್ನದ ಮೇಲೆ ಹೂಡಿಕೆ ಮಾಡುವವರಿಗೆ ಮಹತ್ವದ ಸಲಹೆ
ಸಾಲ ಮಾಡಿ ಚಿನ್ನದ ಮೇಲೆ ಹೂಡಿಕೆ ಮಾಡುವವರಿಗೆ ಮಹತ್ವದ ಸಲಹೆ
ಕಾಂಗ್ರೆಸ್‌ಗೆ ತಟ್ಟಿದ ಬಂಡಾಯದ ಬಿಸಿ: ದಾವಣಗೆರೆ ಅಖಾಡಕ್ಕಿಳಿದ ಪೈಲ್ವಾನ್!
ಕಾಂಗ್ರೆಸ್‌ಗೆ ತಟ್ಟಿದ ಬಂಡಾಯದ ಬಿಸಿ: ದಾವಣಗೆರೆ ಅಖಾಡಕ್ಕಿಳಿದ ಪೈಲ್ವಾನ್!