AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಟೋಬಿ ಪ್ಯಾನ್ ಇಂಡಿಯಾ ಸಿನಿಮಾನಾ? ಏನಂದರು ರಾಜ್ ಬಿ ಶೆಟ್ಟಿ?

Toby: ರಾಜ್ ಬಿ ಶೆಟ್ಟಿಯ ಟೋಬಿ ಪ್ಯಾನ್ ಇಂಡಿಯಾ ಸಿನಿಮಾನಾ? ಸ್ವತಃ ರಾಜ್ ಬಿ ಶೆಟ್ಟಿ ಉತ್ತರಿಸಿದ್ದು ಹೀಗೆ...

ಟೋಬಿ ಪ್ಯಾನ್ ಇಂಡಿಯಾ ಸಿನಿಮಾನಾ? ಏನಂದರು ರಾಜ್ ಬಿ ಶೆಟ್ಟಿ?
ರಾಜ್ ಬಿ ಶೆಟ್ಟಿ
ಮಂಜುನಾಥ ಸಿ.
|

Updated on:Jun 29, 2023 | 10:34 PM

Share

ಇತ್ತೀಚೆಗೆ ಬಿಡುಗಡೆ ಆಗುತ್ತಿರುವ ಹಲವು ಸಿನಿಮಾಗಳು ಪ್ಯಾನ್ ಇಂಡಿಯಾ (Pan Idnia) ಗುರಿಯಾಗಿಸಿಕೊಂಡು ಒಮ್ಮೆಲೆ ಹಲವು ಭಾಷೆಗಳಲ್ಲಿ ಬಿಡುಗಡೆ ಆಗುತ್ತಿವೆ. ಕನ್ನಡದಲ್ಲಿ ಕೆಜಿಎಫ್ ಹುಟ್ಟುಹಾಕಿದ ಈ ಹವಾ ದೊಡ್ಡ ಮಟ್ಟದಲ್ಲಿ ಚಾಲ್ತಿಯಲ್ಲದೆ. ಹಲವು ನಿರ್ಮಾಪಕರಿಗೆ ಇದರಿಂದ ದೊಡ್ಡ ಲಾಭಗಳಾಗಿವೆ. ರಾಜ್ ಬಿ ಶೆಟ್ಟಿ (Raj B Shetty), ತಮ್ಮ ಗರುಡ ಗಮನ ವೃಷಭ ವಾಹನ ಸಿನಿಮಾದ ಮೂಲಕ ಹಲವು ಚಿತ್ರರಂಗದ ಗಮನ ಸೆಳೆದಿದ್ದಾರೆ. ಹಾಗಾಗಿ ಅವರ ಹೊಸ ಸಿನಿಮಾ ಟೋಬಿ (Toby) ಸಹ ಪ್ಯಾನ್ ಇಂಡಿಯಾ ಆಗಿರಬಹುದು ಎಂಬ ನಿರೀಕ್ಷೆ ಇತ್ತು ಆದರೆ ಈ ಬಗ್ಗೆ ಶೆಟ್ಟರು ಬೇರೆಯದ್ದೇ ಉತ್ತರ ನೀಡಿದ್ದಾರೆ.

ಇಂದು (ಜೂನ್ 29) ಬೆಂಗಳೂರಿನ ಲುಲು ಮಾಲ್​ನಲ್ಲಿ ಟೋಬಿ ಸಿನಿಮಾದ ಫಸ್ಟ್ ಲುಕ್ ಟೀಸರ್ ಬಿಡುಗಡೆ ಮಾಡಲಾಯ್ತು. ಕಾರ್ಯಕ್ರಮದ ತರುವಾಯ ಆಯೋಜಿತವಾಗಿದ್ದ ಸುದ್ದಿಗೋಷ್ಠಿಯಲ್ಲಿ ತಮ್ಮ ಸಿನಿಮಾ ಪ್ಯಾನ್ ಇಂಡಿಯಾ ಹೌದೊ ಅಲ್ಲವೋ ಎಂಬ ಪ್ರಶ್ನೆಗೆ ಕೆಜಿಎಫ್, ಕಾಂತಾರ ಸಿನಿಮಾಗಳ ಉದಾಹರಣೆ ಮೂಲಕ ಉತ್ತರಿಸಿದರು ರಾಜ್ ಬಿ ಶೆಟ್ಟಿ.

”ಎರಡು ರೀತಿಯ ಸಿನಿಮಾಗಳಿರುತ್ತವೆ ಒಂದು ಜನರಿಕ್ ಹಾಗೂ ಮತ್ತೊಂದು ಸ್ಪೆಸಿಫಿಕ್. ಕೆಲವು ಸಿನಿಮಾಗಳಿರುತ್ತವೆ ಅವನ್ನು ಜಗತ್ತಿನ ಯಾವುದೇ ಭಾಗದಲ್ಲಿ ಬೇಕಾದರೂ ತೋರಿಸಬಹುದು, ಉದಾಹರಣೆಗೆ ಕೆಜಿಎಫ್, ಅದು ಎಲ್ಲ ಪ್ರದೇಶಗಳಿಗೂ ಸಲ್ಲಬಹುದಾದ ಸಿನಿಮಾ. ಹಾಗೆಯೇ ಕಾಂತಾರ ಒಂದು ಪ್ರದೇಶದ ಕತೆಯುಳ್ಳ ಸಿನಿಮಾ. ಎರಡೂ ಸಿನಿಮಾಗಳು ಪ್ಯಾನ್ ಇಂಡಿಯಾ ಆಗಿವೆ. ಆದರೆ ಕಾಂತಾರ ಉದ್ದೇಶಪೂರ್ವಕವಾಗಿ ಪ್ಯಾನ್ ಇಂಡಿಯಾ ಆಗಿ ಮಾಡಿರಲಿಲ್ಲ. ಸಿನಿಮಾ ಪ್ಯಾನ್ ಇಂಡಿಯಾ ಆಗಿದ್ದು ಅದರ ಕಂಟೆಂಟ್ ಕಾರಣಕ್ಕೆ” ಎಂದು ವಿವರಿಸಿದ್ದಾರೆ ರಾಜ್ ಬಿ ಶೆಟ್ಟಿ.

ಇದನ್ನೂ ಓದಿ: ಟೋಬಿ ಸಿನಿಮಾ ಆ ವ್ಯಕ್ತಿಯ ಜೀವನ ಆಧರಿಸಿದ್ದು: ಗುಟ್ಟು ಬಿಟ್ಟುಕೊಟ್ಟ ಕತೆಗಾರ

”ಕಾಂತಾರ ರೀತಿಯಲ್ಲಿ ಕಂಟೆಂಟ್ ಕಾರಣಕ್ಕೆ ನಮ್ಮ ಸಿನಿಮಾ ಪ್ಯಾನ್ ಇಂಡಿಯಾ ಆದರೆ ನಮ್ಮ ನಿರ್ಮಾಪಕರು ಬದುಕಿಕೊಳ್ಳುತ್ತಾರೆ. ಒಳ್ಳೆ ಹಣ ಗಳಿಸುತ್ತಾರೆ. ನಾವೂ ಸಹ ಬದುಕಿಕೊಳ್ತೀವಿ. ನಮ್ಮ ಉದ್ದೇಶ ಇದ್ದಿದ್ದು ಮೊದಲಿಗೆ ಒಂದೊಳ್ಳೆ ಸಿನಿಮಾ ಮಾಡಬೇಕು ಎಂಬುದಷ್ಟೆ. ಒಂದೊಮ್ಮೆ ನಾವು ಅಂದುಕೊಂಡಂತೆ ಸಿನಿಮಾ ರೀಚ್ ಆದರೆ ಮುಂದಕ್ಕೆ ಪ್ಯಾನ್ ಇಂಡಿಯಾ ಮಾಡಬಹುದೇನೋ ಆದರೆ ಸದ್ಯಕ್ಕೆ ಇಲ್ಲ” ಎಂದಿದ್ದಾರೆ ಶೆಟ್ಟರು.

ರಾಜ್ ಬಿ ಶೆಟ್ಟಿಯವರೇ ನಿರ್ದೇಶಿಸಿದ್ದ ಗರುಡ ಗಮನ ವೃಷಭ ವಾಹನ ಸಿನಿಮಾ ಒಟಿಟಿ ಮೂಲಕ ಉತ್ತರ ಭಾರತ, ಕೇರಳ, ತಮಿಳುನಾಡುಗಳಲ್ಲಿಯೂ ಜನಪ್ರಿಯತೆ ಪಡೆದುಕೊಂಡಿದೆ. ಬಾಲಿವುಡ್​ನ ಅನುರಾಗ್ ಕಶ್ಯಪ್ ಸೇರಿದಂತೆ ಇನ್ನು ಕೆಲವು ಸಿನಿಮಾ ಕರ್ಮಿಗಳು ಗರುಡ ಗಮನ ಸಿನಿಮಾವನ್ನು ಬಹುವಾಗಿ ಮೆಚ್ಚಿ ಕೊಂಡಾಡಿದ್ದಾರೆ. ಆ ಜನಪ್ರಿಯತೆ ಬಳಸಿಕೊಂಡು ಟೋಬಿಯನ್ನು ಪ್ಯಾನ್ ಇಂಡಿಯಾ ಮಾಡುತ್ತಾರೆಂಬ ನಿರೀಕ್ಷೆ ಇತ್ತು. ಆದರೆ ಚಿತ್ರತಂಡಕ್ಕೆ ಪ್ರಸ್ತುತ ಪ್ಯಾನ್ ಇಂಡಿಯಾ ಯೋಚನೆಯಿಲ್ಲ. ಮುಂದೆ ಈ ಸಿನಿಮಾ ಪ್ಯಾನ್ ಇಂಡಿಯಾ ಆಗಬಹುದಾ ಕಾದು ನೋಡಬೇಕಿದೆ. ಟೋಬಿ ಸಿನಿಮಾ ಆಗಸ್ಟ್ 25ಕ್ಕೆ ಬಿಡುಗಡೆ ಆಗಲಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 10:24 pm, Thu, 29 June 23

Follow Us
ಗ್ಯಾರಂಟಿ ಪ್ರಾಧಿಕಾರದ ಸಭೆಯಲ್ಲಿ ಮಹತ್ವದ ತೀರ್ಮಾನ: ಚುನಾವಣೆಗೆ ತಯಾರಿ?
ಗ್ಯಾರಂಟಿ ಪ್ರಾಧಿಕಾರದ ಸಭೆಯಲ್ಲಿ ಮಹತ್ವದ ತೀರ್ಮಾನ: ಚುನಾವಣೆಗೆ ತಯಾರಿ?
ಗೃಹಜ್ಯೋತಿ ಫಲಾನುಭವಿಗಳಿಗೆ ಬಿಗ್​ ಅಪ್ಡೇಟ್​:ಪರಿಷ್ಕರಣೆಗೆ ಗಡುವು ವಿಸ್ತರಣೆ
ಗೃಹಜ್ಯೋತಿ ಫಲಾನುಭವಿಗಳಿಗೆ ಬಿಗ್​ ಅಪ್ಡೇಟ್​:ಪರಿಷ್ಕರಣೆಗೆ ಗಡುವು ವಿಸ್ತರಣೆ
ಉಜ್ಬೆಕಿಸ್ತಾನ್‌ ಮಕ್ಕಳ ಬಾಯಲ್ಲಿ ತಾವೇ ಬರೆದ ಕವಿತೆ ಕೇಳಿ ಭಾವುಕರಾದ ಮೋದಿ
ಉಜ್ಬೆಕಿಸ್ತಾನ್‌ ಮಕ್ಕಳ ಬಾಯಲ್ಲಿ ತಾವೇ ಬರೆದ ಕವಿತೆ ಕೇಳಿ ಭಾವುಕರಾದ ಮೋದಿ
BMTC,KSRTC ನಿಲ್ದಾಣಗಳಿಗೆ ದಿಢೀರ್ ಭೇಟಿ, ಪ್ರಯಾಣಿಕರ ಸಮಸ್ಯೆ ಆಲಿಸಿದ ಸಚಿವ
BMTC,KSRTC ನಿಲ್ದಾಣಗಳಿಗೆ ದಿಢೀರ್ ಭೇಟಿ, ಪ್ರಯಾಣಿಕರ ಸಮಸ್ಯೆ ಆಲಿಸಿದ ಸಚಿವ
ಬೆಂಗಳೂರಿನಲ್ಲಿ ಕಳಪೆ ಸಿಹಿ ತಿನಿಸುಗಳ ಮಾರಾಟಕ್ಕೆ ಲಗಾಮು
ಬೆಂಗಳೂರಿನಲ್ಲಿ ಕಳಪೆ ಸಿಹಿ ತಿನಿಸುಗಳ ಮಾರಾಟಕ್ಕೆ ಲಗಾಮು
ಕೆಪಿಎಸ್‌ಸಿ ಅಕ್ರಮದ ಮತ್ತಷ್ಟು ಸ್ಫೋಟಕ ವಿಚಾರಗಳನ್ನ ಬಹಿರಂಗಪಡಿಸಿದ HDK
ಕೆಪಿಎಸ್‌ಸಿ ಅಕ್ರಮದ ಮತ್ತಷ್ಟು ಸ್ಫೋಟಕ ವಿಚಾರಗಳನ್ನ ಬಹಿರಂಗಪಡಿಸಿದ HDK
ಕಿರ್ಗಿಸ್ತಾನದಲ್ಲಿ ಅರ್ಮೇನಿಯಾ ಪ್ರಧಾನಿ ಜೊತೆ ಪಿಎಂ ಮೋದಿ ದ್ವಿಪಕ್ಷೀಯ ಸಭೆ
ಕಿರ್ಗಿಸ್ತಾನದಲ್ಲಿ ಅರ್ಮೇನಿಯಾ ಪ್ರಧಾನಿ ಜೊತೆ ಪಿಎಂ ಮೋದಿ ದ್ವಿಪಕ್ಷೀಯ ಸಭೆ
ನೇಪಾಳ ಪ್ರವಾಹ: ತುಮಕೂರಿನ ರಂಗು ಸುಧೀರ್, ಕೀರ್ತಿ ಆಚಾರ್ಯ ನಾಪತ್ತೆ
ನೇಪಾಳ ಪ್ರವಾಹ: ತುಮಕೂರಿನ ರಂಗು ಸುಧೀರ್, ಕೀರ್ತಿ ಆಚಾರ್ಯ ನಾಪತ್ತೆ
ನೇಪಾಳ ಪ್ರವಾಹ: ಸಂಪರ್ಕಕ್ಕೆ ಸಿಗದ 13 ಕನ್ನಡಿಗರು, ಸಿಎಂ ಹೇಳಿದ್ದೇನು ನೋಡಿ
ನೇಪಾಳ ಪ್ರವಾಹ: ಸಂಪರ್ಕಕ್ಕೆ ಸಿಗದ 13 ಕನ್ನಡಿಗರು, ಸಿಎಂ ಹೇಳಿದ್ದೇನು ನೋಡಿ
ಉಜ್ಬೇಕಿಸ್ತಾನದಲ್ಲಿ ಭಾರತೀಯ ಸಂಸ್ಕೃತಿಯ ಕಂಪು ಪಸರಿಸಿದ ಪಿಎಂ ಮೋದಿ
ಉಜ್ಬೇಕಿಸ್ತಾನದಲ್ಲಿ ಭಾರತೀಯ ಸಂಸ್ಕೃತಿಯ ಕಂಪು ಪಸರಿಸಿದ ಪಿಎಂ ಮೋದಿ