AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಕಾಂತಾರ’ ಹಾದಿಯಲ್ಲಿ ‘ಸಪ್ತ ಸಾಗರದಾಚೆ ಎಲ್ಲೋ’: ರಕ್ಷಿತ್ ಶೆಟ್ಟಿ ಭರವಸೆ

Rakshit Shetty: 'ಸಪ್ತ ಸಾಗರದಾಚೆ ಎಲ್ಲೋ' ಪ್ಯಾನ್ ಇಂಡಿಯಾ ಸಿನಿಮಾನಾ? 'ಕಾಂತಾರ' ಸಿನಿಮಾದ ಉದಾಹರಣೆಯೊಂದಿಗೆ ಉತ್ತರಿಸಿದ ರಕ್ಷಿತ್ ಶೆಟ್ಟಿ.

'ಕಾಂತಾರ' ಹಾದಿಯಲ್ಲಿ 'ಸಪ್ತ ಸಾಗರದಾಚೆ ಎಲ್ಲೋ': ರಕ್ಷಿತ್ ಶೆಟ್ಟಿ ಭರವಸೆ
ಕಾಂತಾರ-ಸಪ್ತ ಸಾಗರದಾಚೆ ಎಲ್ಲೋ
Follow us
ಮಂಜುನಾಥ ಸಿ.
|

Updated on: Aug 18, 2023 | 8:38 PM

ರಕ್ಷಿತ್ ಶೆಟ್ಟಿ (Rakshit Shetty) ನಟನೆಯ ‘ಸಪ್ತ ಸಾಗರದಾಚೆ ಎಲ್ಲೋ‘ (Sapta sagaradaache ello) ಸಿನಿಮಾದ ಟ್ರೈಲರ್ ನಿನ್ನೆ (ಆಗಸ್ಟ್ 17) ಬಿಡುಗಡೆ ಆಗಿದ್ದು, ಭಾರಿ ಮೆಚ್ಚುಗೆಗೆ ಪಾತ್ರವಾಗಿದೆ. ಸಿನಿಮಾದಲ್ಲಿ ಸುಂದರವಾದ ಪ್ರೇಮಕತೆ ಇರುವ ಸುಳಿವನ್ನು ನೀಡಿರುವ ಟ್ರೈಲರ್, ಗುಣಮಟ್ಟದ ಸಿನಿಮಾ ಒಂದನ್ನು ಪ್ರೇಕ್ಷಕ ನಿರೀಕ್ಷಿಸಬಹುದೆಂಬ ಭರವಸೆಯನ್ನು ನೀಡಿದೆ. ‘777 ಚಾರ್ಲಿ’ ಸಿನಿಮಾದ ಮೂಲಕ ಪ್ಯಾನ್ ಇಂಡಿಯಾ ನಟ ಎನಿಸಿಕೊಂಡಿರುವ ರಕ್ಷಿತ್ ಶೆಟ್ಟಿ, ತಮ್ಮ ‘ಸಪ್ತ ಸಾಗರದರಾಚೆ ಎಲ್ಲೋ’ ಸಿನಿಮಾವನ್ನೂ ಪ್ಯಾನ್ ಇಂಡಿಯಾ ಮಾಡುತ್ತಿದ್ದಾರಾ? ಎಂಬ ಪ್ರಶ್ನೆ ಎದುರಾಗಿದ್ದು, ಅದಕ್ಕೆ ರಕ್ಷಿತ್ ಶೆಟ್ಟಿ ಉತ್ತರ ನೀಡಿದ್ದಾರೆ.

ಟ್ರೈಲರ್ ಬಿಡುಗಡೆ ಕಾರ್ಯಕ್ರಮದಲ್ಲಿ ಮಾತನಾಡಿದ ನಟ ರಕ್ಷಿತ್ ಶೆಟ್ಟಿ, ”ನಾವು ಈಗಾಗಲೇ ‘ಸಪ್ತ ಸಾಗರದಾಚೆ ಎಲ್ಲೋ’ ಸಿನಿಮಾವನ್ನು ಎಲ್ಲ ಭಾಷೆಗಳಿಗೂ ಡಬ್ ಮಾಡಿಟ್ಟಿದ್ದೇವೆ. ಈ ಸಿನಿಮಾವನ್ನು ಉದ್ದೇಶಪೂರ್ವಕವಾಗಿ ಪ್ಯಾನ್ ಇಂಡಿಯಾ ಸಿನಿಮಾ ಮಾಡಿಲ್ಲ, ಬದಲಿಗೆ ಈ ಸಿನಿಮಾವೇ ಪ್ರಪಂಚದಾದ್ಯಂತ ಸಂಚಾರ ಮಾಡುವ ವಿಶ್ವಾಸವಿದೆ” ಎಂದಿದ್ದಾರೆ.

ಈ ಸಮಯದಲ್ಲಿ ಗೆಳೆಯ ರಿಷಬ್ ಶೆಟ್ಟಿ ಸಿನಿಮಾದ ಉದಾಹರಣೆ ತೆಗೆದುಕೊಂಡ ರಕ್ಷಿತ್ ಶೆಟ್ಟಿ, ”ಕಾಂತಾರ’ ಸಿನಿಮಾ ಹೇಗೆ ತನಗೆ ತಾನೇ ಪ್ಯಾನ್ ಇಂಡಿಯಾ ಸಿನಿಮಾ ಆಗಿ ಭಾರತ, ವಿಶ್ವದಾದ್ಯಂತ ಸಂಚರಿಸಿತೋ ಹಾಗೆಯೇ ‘ಸಪ್ತ ಸಾಗರದಾಚೆ ಎಲ್ಲೋ’ ಸಿನಿಮಾ ಸಹ ತನ್ನ ಕತೆಯಿಂದ, ಭಿನ್ನತೆಯಿಂದ ಜನರನ್ನು ಸೆಳೆದು ಎಲ್ಲ ಬೇರೆ ಭಾಷೆಗಳಿಗೂ ಸಂಚರಿಸಲಿದೆ, ಅದರ ಜೊತೆಗೆ ನಾವು ಸಂಚರಿಸುತ್ತೇವೆ” ಎಂದಿದ್ದಾರೆ.

ಇದನ್ನೂ ಓದಿ:ಸಖತ್ ಕ್ಯೂಟ್​ ಆಗಿ ಕಾಣಿಸಿಕೊಂಡ ‘ಸಪ್ತ ಸಾಗರದಾಚೆ ಎಲ್ಲೋ’ ನಾಯಕಿ ಚೈತ್ರಾ ಆಚಾರ್

ತಮ್ಮ ‘777 ಚಾರ್ಲಿ’ ಸಿನಿಮಾದ ಬಗ್ಗೆ ಇದೇ ಸಮಯದಲ್ಲಿ ಮಾತನಾಡಿದ ರಕ್ಷಿತ್ ಶೆಟ್ಟಿ, ”777 ಚಾರ್ಲಿ’ ಸಿನಿಮಾವನ್ನು ಪ್ಯಾನ್ ಇಂಡಿಯಾ ಸಿನಿಮಾ ಮಾಡಿದ ಉದ್ದೇಶ ಬೇರೆಯೇ ಇತ್ತು. ಎಲ್ಲೆಡೆ ಡಾಗ್ ಲವರ್ಸ್ ಇದ್ದಾರೆ, ಯಾರು ನೋಡದಿದ್ದರೂ ಅವರಾದರೂ ನಮ್ಮ ಸಿನಿಮಾ ನೋಡಲು ಬಂದೇ ಬರುತ್ತಾರೆ ಎಂಬ ವಿಶ್ವಾಸದಿಂದ ಆ ಸಿನಿಮಾವನ್ನು ಪ್ಯಾನ್ ಇಂಡಿಯಾ ಸಿನಿಮಾ ಅನ್ನಾಗಿ ಮಾಡಿದೆವು” ಎಂದಿದ್ದಾರೆ.

‘ಸಪ್ತ ಸಾಗರದಾಚೆ ಎಲ್ಲೋ’ ಸಿನಿಮಾವು ಸಮುದ್ರ ತೀರದ ಊರಿನಲ್ಲಿ ನಡೆವ ಪ್ರೇಮಕತೆಯನ್ನು ಒಳಗೊಂಡಿದೆ. ಸಿನಿಮಾದಲ್ಲಿ ಪ್ರೀತಿ, ಅಧಿಕಾರ, ಹಣ, ದ್ವೇಷ ಎಲ್ಲವೂ ಇರುವುದು ಟ್ರೈಲರ್​ನಿಂದ ತಿಳಿದು ಬರುತ್ತಿದೆ. ಸಿನಿಮಾದಲ್ಲಿ ರಕ್ಷಿತ್ ಎದುರು ರುಕ್ಮಿಣಿ ವಸಂತ್ ನಾಯಕಿಯಾಗಿ ನಟಿಸಿದ್ದಾರೆ. ಅಚ್ಯುತ್ ಕುಮಾರ್, ಅವಿನಾಶ್ ಇನ್ನಿತರರು ಇದ್ದಾರೆ. ಸಿನಿಮಾದ ಮೊದಲ ಭಾಗ ಸೆಪ್ಟೆಂಬರ್ 1 ರಂದು ಬಿಡುಗಡೆ ಆಗುತ್ತಿದೆ. ಸಿನಿಮಾದ ಎರಡನೇ ಭಾಗ ಕೇವಲ ಒಂದು ತಿಂಗಳ ಅಂತರದಲ್ಲಿ ಬಿಡುಗಡೆ ಆಗಲಿದೆ. ಸಿನಿಮಾವನ್ನು ಹೇಮಂತ್ ರಾವ್ ನಿರ್ದೇಶನ ಮಾಡಿದ್ದು, ರಕ್ಷಿತ್ ಶೆಟ್ಟಿ ನಿರ್ಮಾಣ ಮಾಡಿದ್ದಾರೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಬೆಂಗಳೂರಿನಲ್ಲಿ ಬೆತ್ತಲೆ ಕಳ್ಳನ ಕೈಚಳಕ: ವಿಡಿಯೋ ನೋಡಿ
ಬೆಂಗಳೂರಿನಲ್ಲಿ ಬೆತ್ತಲೆ ಕಳ್ಳನ ಕೈಚಳಕ: ವಿಡಿಯೋ ನೋಡಿ
ಬಾಳೆಗಿಡ ನೆಲಕಚ್ಚಿದ್ದು ಕಂಡು ಆಘಾತಕ್ಕೊಳಗಾಗಿ ಪ್ರಜ್ಞೆತಪ್ಪಿ ಬಿದ್ದ ರೈತ
ಬಾಳೆಗಿಡ ನೆಲಕಚ್ಚಿದ್ದು ಕಂಡು ಆಘಾತಕ್ಕೊಳಗಾಗಿ ಪ್ರಜ್ಞೆತಪ್ಪಿ ಬಿದ್ದ ರೈತ
ರಾಮನಗರ ಜಿಲ್ಲೆಯ ಹಲವೆಡೆ ಭಾರಿ ಮಳೆ: ಮಾಗಡಿಯಲ್ಲಿ ಮನೆಗಳಿಗೆ ನುಗ್ಗಿದ ನೀರು
ರಾಮನಗರ ಜಿಲ್ಲೆಯ ಹಲವೆಡೆ ಭಾರಿ ಮಳೆ: ಮಾಗಡಿಯಲ್ಲಿ ಮನೆಗಳಿಗೆ ನುಗ್ಗಿದ ನೀರು
ಚಲಿಸುತ್ತಿದ್ದ ಬಸ್​ನಲ್ಲಿ ಬೆಂಕಿ, ಐವರು ಸಾವು
ಚಲಿಸುತ್ತಿದ್ದ ಬಸ್​ನಲ್ಲಿ ಬೆಂಕಿ, ಐವರು ಸಾವು
Daily Devotional: ಕಾಲುಂಗುರ ಕಳೆದು ಹೋದರೆ ಅದರ ಮುನ್ಸೂಚನೆ ಏನು?
Daily Devotional: ಕಾಲುಂಗುರ ಕಳೆದು ಹೋದರೆ ಅದರ ಮುನ್ಸೂಚನೆ ಏನು?
ಈ ದಿನ ಜ್ಯೇಷ್ಠ ನಕ್ಷತ್ರ, ಸಿದ್ಧಯೋಗ: ಯಾವ ರಾಶಿಗಳಿಗೆ ಶುಭ ದಿನ ತಿಳಿಯಿರಿ
ಈ ದಿನ ಜ್ಯೇಷ್ಠ ನಕ್ಷತ್ರ, ಸಿದ್ಧಯೋಗ: ಯಾವ ರಾಶಿಗಳಿಗೆ ಶುಭ ದಿನ ತಿಳಿಯಿರಿ
ತುಂಬ ಆ್ಯಕ್ಟೀವ್ ಆಗಿದ್ದ ರಾಕೇಶ್​ಗೆ ಹೃದಯಾಘಾತ, ನಂಬೋಕೆ ಆಗಲಿಲ್ಲ: ರಘು
ತುಂಬ ಆ್ಯಕ್ಟೀವ್ ಆಗಿದ್ದ ರಾಕೇಶ್​ಗೆ ಹೃದಯಾಘಾತ, ನಂಬೋಕೆ ಆಗಲಿಲ್ಲ: ರಘು
ನೆಲಮಂಗಲದಲ್ಲಿ ಭಾರೀ ಮಳೆ: ರಾಷ್ಟ್ರೀಯ ಹೆದ್ದಾರಿ ಜಲಾವೃತ, ಟ್ರಾಫಿಕ್ ಜಾಮ್
ನೆಲಮಂಗಲದಲ್ಲಿ ಭಾರೀ ಮಳೆ: ರಾಷ್ಟ್ರೀಯ ಹೆದ್ದಾರಿ ಜಲಾವೃತ, ಟ್ರಾಫಿಕ್ ಜಾಮ್
ನಾಗೇಶ್ ಮೇಲೆ ಹಲ್ಲೆ ನಡೆಸಿ ಕೊಲೆ ಮಾಡಿದ ದೃಶ್ಯ ಸಿಸಿಟಿವಿಯಲ್ಲಿ ಸೆರೆ
ನಾಗೇಶ್ ಮೇಲೆ ಹಲ್ಲೆ ನಡೆಸಿ ಕೊಲೆ ಮಾಡಿದ ದೃಶ್ಯ ಸಿಸಿಟಿವಿಯಲ್ಲಿ ಸೆರೆ
ಸ್ನೇಹಿತರೊಂದಿಗೆ ಸೇರಿ ತಂದೆಯನ್ನೇ ಕೊಂದ ಮಗ: ಪ್ರಕರಣದ ಅಸಲಿಯತ್ತು ಇಲ್ಲಿದೆ
ಸ್ನೇಹಿತರೊಂದಿಗೆ ಸೇರಿ ತಂದೆಯನ್ನೇ ಕೊಂದ ಮಗ: ಪ್ರಕರಣದ ಅಸಲಿಯತ್ತು ಇಲ್ಲಿದೆ