AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಭಿಮಾನಿಗಳ ಎರಡು ಮುಖ ಮತ್ತು ಅಂಕುಶ ಕಳೆದುಕೊಂಡ ಸ್ಟಾರ್​ ನಟರು

ಕನ್ನಡ ಚಿತ್ರರಂಗದಲ್ಲಿ ಈಗ ಮತ್ತೊಮ್ಮೆ ಅಭಿಮಾನಿಗಳ ಬಗ್ಗೆ ಅಭಿಮಾನಿ ಸಂಘಗಳ ಬಗ್ಗೆ ವಿಮರ್ಶೆ ಆರಂಭವಾಗಿದೆ. ಚಿತ್ರರಂಗದೊಂದಿಗೆ ದಶಕಗಳ ನಂಟು ಹೊಂದಿರುವ ಅಭಿಮಾನಿ ಸಂಘಗಳು ಸ್ಟಾರ್ ನಟರಿಗೆ ಬಗಲ ಮುಳ್ಳಾಗಿವೆಯೇ? ಈ ಅಭಿಮಾನಿ ಸಂಘಗಳ ಇತಿಹಾಸವೇನು? ಅಭಿಮಾನಿಗಳ ಅತಿರೇಕದ ವರ್ತನೆಗೆ ಕಾರಣವೇನು? ವಿಶ್ಲೇಷಣೆ ಇಲ್ಲಿದೆ.

ಅಭಿಮಾನಿಗಳ ಎರಡು ಮುಖ ಮತ್ತು ಅಂಕುಶ ಕಳೆದುಕೊಂಡ ಸ್ಟಾರ್​ ನಟರು
ನೆಚ್ಚಿನ ನಟನ ಸಿನಿಮಾ ವೀಕ್ಷಿಸುತ್ತಿರುವ ಅಭಿಮಾನಿಗಳು.
ಮಂಜುನಾಥ ಸಿ.
|

Updated on: Jul 12, 2024 | 4:44 PM

Share

ಕೋವಿಡ್ ಸಂದರ್ಭದಲ್ಲಿ ಪ್ರವಾಸಿತಾಣಗಳು ಜನರಿಲ್ಲದೆ ಬಣಗುಡುತ್ತಿದ್ದವು, ಜನರಿಲ್ಲದೆ, ಅವರು ನೀಡುವ ಟಿಕೆಟ್ ಹಣವಿಲ್ಲದೆ ಮೃಗಾಲಯಗಳಲ್ಲಿನ ಪ್ರಾಣಿಗಳ ಪಾಲನೆ ಕಷ್ಟವಾಗಿತ್ತು. ಆಗ ನಟ, ದರ್ಶನ್ ಮೃಗಾಲಯದ ಪ್ರಾಣಿಗಳ ದತ್ತು ಪಡೆಯಿರಿ ಎಂದು ಕರೆ ನೀಡಿದರು. ಅಷ್ಟೆ ಅವರ ಹಲವು ಅಭಿಮಾನಿ ಸಂಘಗಳು ರಾಜ್ಯದ ಬೇರೆ ಬೇರೆ ಮೃಗಾಲಯಗಳ ಪ್ರಾಣಿಗಳನ್ನು ದತ್ತು ಪಡೆದು ಅವುಗಳ ಪಾಲನೆಗೆ ಸಹಾಯ ಮಾಡಿದರು. ದರ್ಶನ್​ರ ಅಭಿಮಾನಿಗಳ ಕೆಲಸದಿಂದ ಮೃಗಾಲಯಗಳ ಪ್ರಾಣಿಗಳ ಹಸಿವು ನೀಗಿತ್ತು. ಡಾ ರಾಜ್​ಕುಮಾರ್ ಅಭಿಮಾನಿಗಳು, ಪುನೀತ್ ರಾಜ್​ಕುಮಾರ್ ಅಭಿಮಾನಿಗಳು ಮಾಡಿದ ನೇತ್ರದಾನ ವಿಶ್ವ ಮಟ್ಟದಲ್ಲಿ ದಾಖಲೆಯೇ ಆಗಿಬಿಟ್ಟಿತು. ಕಿಚ್ಚನ ಅಭಿಮಾನಿಗಳು ಕೋವಿಡ್ ಸಮಯದಲ್ಲಿ ಮಾಡಿದ ಸಹಾಯ, ವಿದ್ಯಾರ್ಥಿಗಳಿಗೆ ನೀಡಿದ ಸ್ಕಾಲರ್​ಶಿಪ್​ ಹಣದ ವರದಿಗಳು ಪತ್ರಿಕೆಗಳಲ್ಲಿ, ವೆಬ್ ಪತ್ರಿಕೆಗಳಲ್ಲಿ ಪ್ರತಿದಿನ ಪ್ರಕಟವಾಗುತ್ತಿತ್ತು. ಇಂಥಹಾ ಘನ ಸಮಾಜ ಮುಖಿ ಕಾರ್ಯ ಮಾಡಿದ್ದ ಅದೇ ಅಭಿಮಾನಿಗಳು ತಮ್ಮ ಇನ್ನೊಂದು ಮುಖವನ್ನು ಆಗಾಗ್ಗೆ ತೋರಿಸುತ್ತಲೇ ಬಂದಿದ್ದಾರೆ. ಜಗ್ಗೇಶ್ ಅಂಥಹಾ ಹಿರಿಯ ನಟನ ಮೇಲೆರಗಿ ಹೋಗಿ ಅವಾಚ್ಯ ಶಬ್ದಗಳಿಂದ ನಿಂದಿಸಿದ್ದರು ದರ್ಶನ್ ಅಭಿಮಾನಿಗಳು. ಇತರೆ ನಟ-ನಟಿಯರ ಬಗ್ಗೆ ಕೀಳಾಗಿ ಕಮೆಂಟ್ ಮಾಡಿದರು. ದರ್ಶನ್​ರ ಟೀಕಿಸಿದ ಒಬ್ಬ ಯುವಕನ ಕೈ ಮೇಲೆ ಕರ್ಪೂರ ಹಚ್ಚಿ ವಿಡಿಯೋ ಮಾಡಿದ್ದರು. ಸುದೀಪ್​ರನ್ನು ಟೀಕಿಸಿದ ಅಹೋರಾತ್ರರ ಮನೆಗೆ ನುಗ್ಗಿ ಸುದೀಪ್ ಅಭಿಮಾನಿಗಳು ದಾಂಧಲೆ ಎಬ್ಬಿಸಿದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಹರಿದಾಡಿ ಟೀಕೆಗೆ ಗುರಿಯಾಯ್ತು. ಹೊಸಪೇಟೆಗೆ ಸಿನಿಮಾ ಪ್ರಚಾರಕ್ಕೆ ಬಂದಿದ್ದ ನಟ ದರ್ಶನ್​ ಮೇಲೆ ಪುನೀತ್ ಅಭಿಮಾನಿಗಳು ಚಪ್ಪಲಿ ಎಸೆದರು ಎಂಬ ಆರೋಪ ಕೇಳಿ ಬಂತು. ಒಬ್ಬ ವ್ಯಕ್ತಿಯನ್ನು ಅತಿಯಾಗಿ ಪ್ರೀತಿಸುವ ಅಭಿಮಾನಿಗಳು ಇತರರ...

ಪೂರ್ಣ ಸುದ್ದಿಯನ್ನು ಓದಲು Tv9 ಆ್ಯಪ್ ಡೌನ್​ಲೋಡ್ ಮಾಡಿ

ಎಕ್ಸ್​ಕ್ಲೂಸಿವ್ ಸುದ್ದಿಗಳ ಅನ್​ಲಿಮಿಟೆಡ್ ಆಕ್ಸೆಸ್ Tv9 ಆ್ಯಪ್​ನಲ್ಲಿ ಮುಂದುವರೆಯಿರಿ
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
ಬೌಲಿಂಗ್‌ನಲ್ಲಿ ಪಾಕ್ ನಾಯಕನ ವಿಕೆಟ್ ಎಗರಿಸಿದ ವೈಭವ್
ಬೌಲಿಂಗ್‌ನಲ್ಲಿ ಪಾಕ್ ನಾಯಕನ ವಿಕೆಟ್ ಎಗರಿಸಿದ ವೈಭವ್
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!
ಸಿಡ್ನಿಯ ಬೊಂಡಿ ಬೀಚ್​ನಲ್ಲಿ ಸಾಮೂಹಿಕ ಗುಂಡಿನ ದಾಳಿ, 10 ಮಂದಿ ಸಾವು
ಸಿಡ್ನಿಯ ಬೊಂಡಿ ಬೀಚ್​ನಲ್ಲಿ ಸಾಮೂಹಿಕ ಗುಂಡಿನ ದಾಳಿ, 10 ಮಂದಿ ಸಾವು
ಪರಪ್ಪನ ಅಗ್ರಹಾರ ಮಹಿಳಾ ಪೊಲೀಸ್ ಸಿಬ್ಬಂದಿಗೆ ಠಾಣೆಯಲ್ಲಿ ಸೀಮಂತ
ಪರಪ್ಪನ ಅಗ್ರಹಾರ ಮಹಿಳಾ ಪೊಲೀಸ್ ಸಿಬ್ಬಂದಿಗೆ ಠಾಣೆಯಲ್ಲಿ ಸೀಮಂತ
ಪ್ರೋಮೊನಲ್ಲೇ ಶಾಕ್ ಕೊಟ್ಟ ಬಿಗ್​​ಬಾಸ್: ಮನೆಯಿಂದ ಇಬ್ಬರು ಹೊರಕ್ಕೆ
ಪ್ರೋಮೊನಲ್ಲೇ ಶಾಕ್ ಕೊಟ್ಟ ಬಿಗ್​​ಬಾಸ್: ಮನೆಯಿಂದ ಇಬ್ಬರು ಹೊರಕ್ಕೆ