AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಂಬಾನಿ ಮನೆ ಮದುವೆಗೆ ಏಕೆ ಹೋಗಿಲ್ಲ ಎಂಬ ಬಗ್ಗೆ ಸುದೀಪ್ ಕೊಟ್ಟ ಸ್ಪಷ್ಟನೆಯ ಹಿಂದಿನ ಅಸಲಿಯತ್ತೇನು?

ಮುಕೇಶ್ ಅಂಬಾನಿ ಅವರು ಅದ್ದೂರಿಯಾಗಿ ಮಗನ ಮದುವೆ ಮಾಡಿದ್ದಾರೆ. ಅನಂತ್ ಅಂಬಾನಿ-ರಾಧಿಕಾ ಮರ್ಚಂಟ್ ವಿವಾಹದಲ್ಲಿ ಅನೇಕ ಸೆಲೆಬ್ರಿಟಿಗಳು ಭಾಗಿ ಆಗಿದ್ದರು. ಈ ಮಧ್ಯೆ ಸುದೀಪ್ ಅವರು ಅಂಬಾನಿ ಮನೆ ಮದುವೆಗೆ ಏಕೆ ಹೋಗಿಲ್ಲ ಎನ್ನುವ ಬಗ್ಗೆ ಮಾತನಾಡಿದ್ದರು. ಈ ವಿಡಿಯೋದ ಅಸಲಿಯತ್ತು ಈ ವಿಡಿಯೋದಲ್ಲಿ ಇದೆ.

ಅಂಬಾನಿ ಮನೆ ಮದುವೆಗೆ ಏಕೆ ಹೋಗಿಲ್ಲ ಎಂಬ ಬಗ್ಗೆ ಸುದೀಪ್ ಕೊಟ್ಟ ಸ್ಪಷ್ಟನೆಯ ಹಿಂದಿನ ಅಸಲಿಯತ್ತೇನು?
ಸುದೀಪ್
ರಾಜೇಶ್ ದುಗ್ಗುಮನೆ
|

Updated on: Jul 16, 2024 | 11:48 AM

Share

ಇದು ಸೋಶಿಯಲ್ ಮೀಡಿಯಾ ಯುಗ. ವಿಡಿಯೋಗಳನ್ನು ತಿರುಚಿ ಜನರನ್ನು ನಂಬಿಸೋದು ನೀರು ಕುಡಿದಷ್ಟೇ ಸುಲಭ. ಈ ಕಾರಣಕ್ಕೆ ಯಾವುದೇ ವಿಡಿಯೋ ವೈರಲ್ ಆದರೂ ಪ್ರಮಾಣಿಸಿ ನೋಡಿಯೇ ನಂಬ ಬೇಕು. ಈಗ ಸುದೀಪ್ ಅವರ ವಿಡಿಯೋ ಒಂದು ವೈರಲ್ ಆಗಿದೆ. ಈ ವಿಡಿಯೋದಲ್ಲಿ ಅವರು ಅಂಬಾನಿ ಮನೆಯ ಮದುವೆಗೆ ಏಕೆ ಹೋಗಿಲ್ಲ ಎಂಬುದನ್ನು ವಿವರಿಸಿದ್ದಾರೆ. ಆದರೆ, ಈ ವಿಡಿಯೋ ಅಸಲಿಯತ್ತು ಬೇರೆಯದೇ ಇದೆ. ಇದು ಅಂಬಾನಿ ಮನೆಯ ಮದುವೆ ವಿಚಾರದ ಬಗ್ಗೆ ಹೇಳಿದ್ದು ಅಲ್ಲವೇ ಅಲ್ಲ.

ಮುಕೇಶ್ ಅಂಬಾನಿ ಅವರ ಕೊನೆಯ ಮಗ ಅನಂತ್ ಅಂಬಾನಿ ಅವರು ರಾಧಿಕಾ ಮರ್ಚಂಟ್​ನ ಕೈ ಹಿಡಿದಿದ್ದಾರೆ. ಈ ಮದುವೆಗೆ ಅನೇಕ ಸೆಲೆಬ್ರಿಟಿಗಳು ತೆರಳಿದ್ದರು. ಕನ್ನಡದ ಯಶ್ ಕೂಡ ಈ ಮದುವೆಗೆ ತೆರಳಿದ್ದಾರೆ. ಕನ್ನಡ ಚಿತ್ರರಂಗದಿಂದ ಈ ಮದುವೆಯಲ್ಲಿ ಕಾಣಿಸಿದ್ದು ಯಶ್ ಮಾತ್ರ. ಹಾಗಾದರೆ ಸುದೀಪ್​ಗೆ ಆಮಂತ್ರಣ ಇದ್ದೂ ಹೋಗಿಲ್ಲವೇ? ಆ ವಿಡಿಯೋದಲ್ಲಿ ಅವರು ಹೇಳಿದ್ದು ಏನು? ಆ ಬಗ್ಗೆ ಇಲ್ಲಿದೆ ವಿವರ.

ವಿಡಿಯೋದಲ್ಲೇನಿದೆ?

‘ನನಗೆ ಸ್ವಲ್ಪ ಹುಷಾರಿರಲಿಲ್ಲ. ಅಲ್ಲಿ ತುಂಬ ಕಟ್ಟುನಿಟ್ಟಾದ ಪ್ರೋಟೋಕಾಲ್​ ಇತ್ತು. ಶೀತ, ಜ್ವರ ಇತ್ಯಾದಿ ಇದ್ದರೆ ಆರ್​ಟಿಪಿಸಿಆರ್​ ಮಾಡಬೇಕಿತ್ತು. ಅದರಿಂದ ನನಗೆ ಕಂಫರ್ಟ್​ ಇರಲಿಲ್ಲ. ನನಗೆ ಸ್ವಲ್ಪ ಟೆಂಪ್ರೇಚರ್​ ಇತ್ತು. ಬೇರೆ ಬೇರೆ ಕೆಲಸಗಳಲ್ಲಿ ನಾನು ತೊಡಗಿಕೊಂಡಿದ್ದೆ. ಅಲ್ಲಿ ಹೋಗಿ ಪರೀಕ್ಷೆ ಮಾಡಿದ ಬಳಿಕ ಜ್ವರ ಇದೆ ಅಂತ ಒಳಗೆ ಬಿಡದಿದ್ದರೆ? ಅಲ್ಲಿತನಕ ಹೋಗಿ ವಾಪಸ್​ ಬಂದರೆ ತಪ್ಪಾಗುತ್ತದೆ. ಸಂಬಂಧಿಸಿದವರಿಗೆ ಫೋನ್​ ಮಾಡಿ ವಿಷಯ ತಿಳಿಸಿದೆ’ ಎಂದು ಸುದೀಪ್​ ವಿಡಿಯೋದಲ್ಲಿ ಹೇಳಿದ್ದರು.

ಇದನ್ನೂ ಓದಿ: ನರೇಂದ್ರ ಮೋದಿ ಭೇಟಿಗೆ ಸುದೀಪ್​ ಯಾಕೆ ಬರಲಿಲ್ಲ? ಅಸಲಿ ಕಾರಣ ವಿವರಿಸಿದ ಕಿಚ್ಚ

ಹಳೆಯ ವಿಡಿಯೋ

2023 ಫೆಬ್ರವರಿಯಲ್ಲಿ ಅಶ್ವಿನಿ ಪುನೀತ್​ ರಾಜ್​ಕುಮಾರ್​, ರಿಷಬ್​ ಶೆಟ್ಟಿ, ವಿಜಯ್​ ಕಿರಗಂದೂರು, ಯಶ್​ ಹಾಗೂ ಅಯ್ಯೋ ಶ್ರದ್ಧಾ ಅವರು ಪ್ರಧಾನಿ ನರೇಂದ್ರ ಮೋದಿಯವರನ್ನು ಭೇಟಿ ಮಾಡಿದ್ದರು. ಈ ವೇಳೆ ಸುದೀಪ್​ಗೆ ಆಹ್ವಾನ ನೀಡಲಾಗಿತ್ತು. ಆದರೆ, ಅವರಿಗೆ ಅನಾರೋಗ್ಯ ಕಾರಣದಿಂದ ಹೋಗೋಕೆ ಸಾಧ್ಯ ಆಗಿರಲಿಲ್ಲ. ಆ ಸಂದರ್ಭದಲ್ಲಿ ಅವರು ಟಿವಿ9 ಕನ್ನಡಕ್ಕೆ ನೀಡಿದ ಸಂದರ್ಶನ ಇದಾಗಿದೆ. ಇದನ್ನು ಫ್ಯಾನ್​ ಪೇಜ್​ಗಳು ಬೇರೆ ರೀತಿಯಲ್ಲಿ ಹಾಕಿವೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ
ನಿರ್ಮಲಾನಂದನಾಥಶ್ರೀ ಭೇಟಿಯಾದ ಸಿಎಂ ಡಿಕೆ ಶಿವಕುಮಾರ್
ನಿರ್ಮಲಾನಂದನಾಥಶ್ರೀ ಭೇಟಿಯಾದ ಸಿಎಂ ಡಿಕೆ ಶಿವಕುಮಾರ್
ಇಂದು ಈ ರಾಶಿಯವರಿಗೆ ಹಳೆಯ ಖಾಯಿಲೆಗಳು ಮರುಕಳಿಸುವ ಸಾಧ್ಯತೆ
ಇಂದು ಈ ರಾಶಿಯವರಿಗೆ ಹಳೆಯ ಖಾಯಿಲೆಗಳು ಮರುಕಳಿಸುವ ಸಾಧ್ಯತೆ