AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Kichcha Sudeep: ಸುದೀಪ್​ ವರ್ಸಸ್​ ಎಂ.ಎನ್​. ಕುಮಾರ್​ ವಿವಾದ ಹುಟ್ಟಿಕೊಂಡಿದ್ದು ಹೇಗೆ? ಪೂರ್ತಿ ಮಾಹಿತಿ ಇಲ್ಲಿದೆ..

Jack Manju Press Meet: ಹಣಕಾಸಿನ ವಿಚಾರವಾಗಿ ಕಿಚ್ಚ ಸುದೀಪ್​ ಮತ್ತು ನಿರ್ಮಾಪಕ ಎಂ.ಎನ್​. ಕುಮಾರ್​ ನಡುವೆ ಜಟಾಪಟಿ ನಡೆಯುತ್ತಿದೆ. ಇದಕ್ಕೆ ಕಾರಣ ಏನು ಎಂಬುದನ್ನು ಸುದೀಪ್​ ಅವರ ಆಪ್ತರಾದ ಜಾಕ್​ ಮಂಜು ವಿವರಿಸಿದ್ದಾರೆ.

Kichcha Sudeep: ಸುದೀಪ್​ ವರ್ಸಸ್​ ಎಂ.ಎನ್​. ಕುಮಾರ್​ ವಿವಾದ ಹುಟ್ಟಿಕೊಂಡಿದ್ದು ಹೇಗೆ? ಪೂರ್ತಿ ಮಾಹಿತಿ ಇಲ್ಲಿದೆ..
ಜಾಕ್​ ಮಂಜು
Follow us
Malatesh Jaggin
| Updated By: ಮದನ್​ ಕುಮಾರ್​

Updated on:Jul 09, 2023 | 3:55 PM

ಕಳೆದ ಕೆಲವು ದಿನಗಳಿಂದ ನಿರ್ಮಾಪಕ ಎಂ.ಎನ್​. ಕುಮಾರ್ (MN Kumar)​ ಅವರು ಕಿಚ್ಚ ಸುದೀಪ್​ ವಿರುದ್ಧ ಹಲವು ಆರೋಪಗಳನ್ನು ಹೊರಿಸುತ್ತಿದ್ದಾರೆ. ಈ ಕುರಿತಂತೆ ಸ್ಪಷ್ಟನೆ ನೀಡಲು ಸುದೀಪ್​ (Kichcha Sudeep) ಅವರ ಆಪ್ತರಾದ ಜಾಕ್​ ಮಂಜು ಇಂದು (ಜುಲೈ 9) ಬೆಂಗಳೂರಿನಲ್ಲಿ ಸುದ್ದಿಗೋಷ್ಠಿ ನಡೆಸಿದ್ದಾರೆ. ಈ ವೇಳೆ ಅವರು ಹಲವು ವಿಚಾರಗಳನ್ನು ಹಂಚಿಕೊಂಡಿದ್ದಾರೆ. ಒಟ್ಟಾರೆಯಾಗಿ ಈ ಎಲ್ಲ ಸಮಸ್ಯೆ ಶುರುವಾಗಿದ್ದು ಹೇಗೆ ಎಂಬುದನ್ನು ಜಾಕ್​ ಮಂಜು ವಿವರಿಸಿದ್ದಾರೆ. ‘ಎಂ.ಎನ್​. ಕುಮಾರ್ ಅವರು ಸುದೀಪ್​ ಬಳಿ ಬಂದು ‘ಮುಕುಂದ ಮುರಾರಿ’ ಚಿತ್ರಕ್ಕೆ ಡಿಮಾನಿಟೈಸೇಷನ್​ನಿಂದ ತೊಂದರೆ ಆಗಿದೆ ಅಂದರು. ‘ರನ್ನ’ ಚಿತ್ರದ ನಿರ್ಮಾಪಕರಿಗೆ ತಾವು ಹಣ ಕೊಟ್ಟಿದ್ದು, ಅದು ವಾಪಸ್​ ಬಂದಿಲ್ಲ ಅಂತ ಕೂಡ ಹೇಳಿದರು. ಹಾಗಾಗಿ ಜೊತೆಯಾಗಿ ಒಂದು ಸಿನಿಮಾ ಮಾಡುವ ಮೂಲಕ ಸಹಾಯ ಮಾಡಿ ಎಂದು ಅವರು ಕೇಳಿಕೊಂಡರು. ಅದಕ್ಕೆ ಸುದೀಪ್​ ಒಪ್ಪಿಕೊಂಡಿದ್ದರು. ನಂತರ ನಿರ್ದೇಶಕರನ್ನು ಆಯ್ಕೆ ಮಾಡುವ ಕೆಲಸ ಶುರುವಾಯಿತು. ಆದರೆ ಯಾರೂ ಆಯ್ಕೆ ಆಗಲಿಲ್ಲ’ ಎಂದು ಜಾಕ್​ ಮಂಜು (Jack Manju) ಹೇಳಿದ್ದಾರೆ.

‘ಆ ಸಿನಿಮಾ ಬೇಗ ಸೆಟ್ಟೇರಲಿಲ್ಲ. ಕುಮಾರ್​​ ಅವರು ಒತ್ತಡದಲ್ಲಿ ಇದ್ದಿದ್ದರಿಂದ ಅವರು ಮಾತನಾಡುವ ರೀತಿ ಬದಲಾಯಿತು. ನಂತರ ಒಬ್ಬ ನಿರ್ದೇಶಕನನ್ನು ಸುದೀಪ್​ ಆಯ್ಕೆ ಮಾಡಿದರು. ಆದರೆ ಆ ನಿರ್ದೇಶಕರು ಕೇಳಿದಷ್ಟು ಸಂಭಾವನೆ ನೀಡಲು ಕುಮಾರ್​ ಒಪ್ಪಲಿಲ್ಲ. 2020ರ ಜನವರಿಯಲ್ಲಿ ಸುದೀಪ್​ ‘ವಿಕ್ರಾಂತ್​ ರೋಣ’ ಶುರುಮಾಡಿದರು. ಅದಕ್ಕೆ ಮೂರು ವರ್ಷ ಹಿಡಿಯಿತು. ಅನಾರೋಗ್ಯ, ಕೆಲಸದ ಒತ್ತಡ ಮುಂತಾದ ಕಾರಣಗಳಿಂದ ಕುಮಾರ್​ ಅವರನ್ನು ಭೇಟಿಯಾಗಲು ಸುದೀಪ್​ ಅವರಿಗೆ ಸಾಧ್ಯವಾಗಲಿಲ್ಲ. ನಂತರ ಪ್ರಿಯಾ ಮೇಡಂ ಅವರ ಜೊತೆ ಕುಮಾರ್​ ಮೀಟಿಂಗ್​ ನಡೆಸಿದರು. ಕುಮಾರ್ ಅವರ ಕಷ್ಟ ಏನು ಎಂಬುದನ್ನು ಸುದೀಪ್​ಗೆ ಹೇಳಲಾಯ್ತು. ನಂತರ ಅವರನ್ನು ಕರೆಸಿ ತಾತ್ಕಾಲಿಕವಾಗಿ 5 ಕೋಟಿ ರೂಪಾಯಿ ಸಹಾಯ ಮಾಡಲು ಸುದೀಪ್​ ಮುಂದಾದರು. ಆದರೆ ಕುಮಾರ್​ ಅವರು ಕೋಪದಲ್ಲಿ ಅದನ್ನು ಒಪ್ಪಿಕೊಳ್ಳಲಿಲ್ಲ. ಈ ರೀತಿ ಭಿಕ್ಷೆಯ ಹಣ ಬೇಡ, ಸಿನಿಮಾ ಮಾಡಿ ಅಂತ ಪಟ್ಟು ಹಿಡಿದರು’ ಎಂದು ಜಾಕ್​ ಮಂಜು ಹೇಳಿದ್ದಾರೆ.

ಇದನ್ನೂ ಓದಿ: Kichcha Sudeep: ಎಷ್ಟೇ ಮೀಟಿಂಗ್​ ಆದ್ರೂ ಸುದೀಪ್​-ಎಂ.ಎನ್​. ಕುಮಾರ್​ ನಡುವೆ ಕಿರಿಕ್​ ಯಾಕೆ ಬಗೆಹರಿಯಲಿಲ್ಲ? ವಿವರ ನೀಡಿದ ಜಾಕ್​ ಮಂಜು

‘ನನಗೆ ಬರಬೇಕಾದ ಹಣ ಕೊಡಿ’ ಎಂದು ಕುಮಾರ್​ ಅವರು ಪಟ್ಟು ಹಿಡಿದಿದ್ದರು. ಅದು ಸುದೀಪ್​ಗೆ ಬೇಸರ ಮೂಡಿಸಿತ್ತು. ‘ನಾನು ಕುಮಾರ್​ ಬಳಿ ಹಣ ತೆಗೆದುಕೊಂಡಿಲ್ಲ. ಸಹಾಯ ಕೇಳಿಕೊಂಡು ಬಂದವರು ಈಗ ಈ ರೀತಿ ಮಾತಾಡಿದ್ದು ಸರಿಯಲ್ಲ’ ಅಂತ ಸುದೀಪ್​ ಕೊಂಚ ಗರಂ ಆಗಿದ್ದರು. ‘ಸುದೀಪ್​ ಅವರಿಂದ ತಮಗೆ ಹಣ ಬರಬೇಕು. ಆ ಬಳಿಕ ನಿಮ್ಮ ಸಾಲ ತೀರಿಸುತ್ತೇನೆ’ ಅಂತ ಎನ್​. ಕುಮಾರ್​ ಅವರು ಕಂಡಕಂಡಲ್ಲಿ ಹೇಳಿಕೊಂಡು ತಿರುಗಾಡಿದ್ದಾರೆ ಎಂಬುದು ಜಾಕ್​ ಮಂಜು ಆರೋಪ.

ಇದನ್ನೂ ಓದಿ: MN Kumar: ‘ಸುದೀಪ್​ ಮಾಡಿದ 45 ಸಿನಿಮಾಗಳಿಗೆ ಅಗ್ರಿಮೆಂಟ್​ ಇದೆಯಾ?’; ದಾಖಲೆ ಕೇಳಿದ್ದಕ್ಕೆ ಎಂ.ಎನ್​. ಕುಮಾರ್​ ಮರುಪ್ರಶ್ನೆ

‘ಬೇರೆ ಸಿನಿಮಾಗಳಿಂದ ಆಗಿರುವ ನಷ್ಟಕ್ಕೆಲ್ಲ ಸುದೀಪ್​ ಅವರೇ ಕಾರಣ ಎಂಬ ರೀತಿಯಲ್ಲಿ ಎಂ.ಎನ್​. ಕುಮಾರ್​ ಮಾತನಾಡಿದ್ದಾರೆ. ಅದರಿಂದ ಸುದೀಪ್​ ಅವರಿಗೆ ಬಹಳ ನೋವಾಗಿದೆ. ಕುಮಾರ್​ ಅವರಿಗೆ ಸಹಾಯ ಆಗಲಿ ಎಂಬ ಉದ್ದೇಶದಿಂದ ಒಂದು ಕಂಪನಿಯ ಜೊತೆ ಕೈ ಜೋಡಿಸಿ ಒಂದು ಸಿನಿಮಾ ಮಾಡಿಕೊಡುವ ನಿರ್ಧಾರಕ್ಕೆ ಬರಲಾಯಿತು. ಅದರ ಬಜೆಟ್​ ಜಾಸ್ತಿ ಇತ್ತು. ಮೊದಲು ಒಪ್ಪಿಕೊಂಡ ಕುಮಾರ್​ ಅವರು ಮತ್ತೆ ಮಾತು ಬದಲಾಯಿಸಿದರು. ಅದೇ ಕೊನೆಯ ಭೇಟಿ’ ಎಂದು ಜಾಕ್​ ಮಂಜು ಹೇಳಿದ್ದಾರೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Published On - 3:25 pm, Sun, 9 July 23

ನನ್ನ ಆಯುಷ್ಯವನ್ನೂ ದೇವರು ನಮ್ಮ ಸೈನಿಕರಿಗೆ ನೀಡಲಿ: ಪಲ್ಲವಿ ರಾವ್
ನನ್ನ ಆಯುಷ್ಯವನ್ನೂ ದೇವರು ನಮ್ಮ ಸೈನಿಕರಿಗೆ ನೀಡಲಿ: ಪಲ್ಲವಿ ರಾವ್
ಬಾಗಲಕೋಟೆ: NWKRTC ಬಸ್​ ಚಾಲಕ, ಕಂಡಕ್ಟರ್​ ಮೇಲೆ ಕಟ್ಟಿಗೆಯಿಂದ ಹಲ್ಲೆ​
ಬಾಗಲಕೋಟೆ: NWKRTC ಬಸ್​ ಚಾಲಕ, ಕಂಡಕ್ಟರ್​ ಮೇಲೆ ಕಟ್ಟಿಗೆಯಿಂದ ಹಲ್ಲೆ​
ಕೆನಡ ಚುನಾವಣೆಯಲ್ಲಿ ಸೋತಿದ್ದಕ್ಕೆ ಭಾವುಕರಾದ ಖಲಿಸ್ತಾನ್ ಪರ ಜಗ್ಮೀತ್ ಸಿಂಗ್
ಕೆನಡ ಚುನಾವಣೆಯಲ್ಲಿ ಸೋತಿದ್ದಕ್ಕೆ ಭಾವುಕರಾದ ಖಲಿಸ್ತಾನ್ ಪರ ಜಗ್ಮೀತ್ ಸಿಂಗ್
ನಿನ್ನೆ ಶಿವಕುಮಾರ್ ಹೇಳಿದ್ದನ್ನೇ ಇಂದು ಪ್ರದೀಪ್ ಈಶ್ವರ್ ಪುನರುಚ್ಛರಿಸಿದರು
ನಿನ್ನೆ ಶಿವಕುಮಾರ್ ಹೇಳಿದ್ದನ್ನೇ ಇಂದು ಪ್ರದೀಪ್ ಈಶ್ವರ್ ಪುನರುಚ್ಛರಿಸಿದರು
ಮೋದಿ ನಿವಾಸದಲ್ಲಿ ಮಹತ್ವದ ಸಭೆ; ಸೇನಾ ಮುಖ್ಯಸ್ಥರು, ರಾಜನಾಥ್ ಸಿಂಗ್ ಭಾಗಿ
ಮೋದಿ ನಿವಾಸದಲ್ಲಿ ಮಹತ್ವದ ಸಭೆ; ಸೇನಾ ಮುಖ್ಯಸ್ಥರು, ರಾಜನಾಥ್ ಸಿಂಗ್ ಭಾಗಿ
ದೇವೇಗೌಡರಂತೆ ಮಂಜುನಾಥ್ ಸಹ ಪಹಲ್ಗಾಮ್ ಬಗ್ಗೆ ಅನಾವಶ್ಯಕ ಮಾತಾಡಲಿಲ್ಲ
ದೇವೇಗೌಡರಂತೆ ಮಂಜುನಾಥ್ ಸಹ ಪಹಲ್ಗಾಮ್ ಬಗ್ಗೆ ಅನಾವಶ್ಯಕ ಮಾತಾಡಲಿಲ್ಲ
ಅಧಿಕಾರದಿಂದ ಕೆಳಗಿಳಿಯುವ ಫ್ರಸ್ಟ್ರೇಶನ್ ಸಿಎಂರನ್ನು ಕಾಡುತ್ತಿದೆ: ಅಶೋಕ
ಅಧಿಕಾರದಿಂದ ಕೆಳಗಿಳಿಯುವ ಫ್ರಸ್ಟ್ರೇಶನ್ ಸಿಎಂರನ್ನು ಕಾಡುತ್ತಿದೆ: ಅಶೋಕ
ಧಗಧಗನೆ ಹೊತ್ತಿ ಉರಿದ ಚೀನಾದ ರೆಸ್ಟೋರೆಂಟ್; 22 ಜನ ಸಾವು
ಧಗಧಗನೆ ಹೊತ್ತಿ ಉರಿದ ಚೀನಾದ ರೆಸ್ಟೋರೆಂಟ್; 22 ಜನ ಸಾವು
ಉಗ್ರರ ದಾಳಿ: ಮಂಜುನಾಥ್​ ಕುಟುಂಬಕ್ಕೆ ಸಾಂತ್ವಾನ ಹೇಳಿದ 103 ವರ್ಷದ ಅಜ್ಜಿ
ಉಗ್ರರ ದಾಳಿ: ಮಂಜುನಾಥ್​ ಕುಟುಂಬಕ್ಕೆ ಸಾಂತ್ವಾನ ಹೇಳಿದ 103 ವರ್ಷದ ಅಜ್ಜಿ
ದರಿದ್ರ ದೇಶವಾದ ಪಾಕಿಸ್ತಾನದ ವಿರುದ್ಧ ಯುದ್ಧವಾಗಲೇಬೇಕು; ಎಂ.ಬಿ ಪಾಟೀಲ್
ದರಿದ್ರ ದೇಶವಾದ ಪಾಕಿಸ್ತಾನದ ವಿರುದ್ಧ ಯುದ್ಧವಾಗಲೇಬೇಕು; ಎಂ.ಬಿ ಪಾಟೀಲ್