AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Kichcha Sudeep: ಸುದೀಪ್​ ವರ್ಸಸ್​ ಎಂ.ಎನ್​. ಕುಮಾರ್​ ವಿವಾದ ಹುಟ್ಟಿಕೊಂಡಿದ್ದು ಹೇಗೆ? ಪೂರ್ತಿ ಮಾಹಿತಿ ಇಲ್ಲಿದೆ..

Jack Manju Press Meet: ಹಣಕಾಸಿನ ವಿಚಾರವಾಗಿ ಕಿಚ್ಚ ಸುದೀಪ್​ ಮತ್ತು ನಿರ್ಮಾಪಕ ಎಂ.ಎನ್​. ಕುಮಾರ್​ ನಡುವೆ ಜಟಾಪಟಿ ನಡೆಯುತ್ತಿದೆ. ಇದಕ್ಕೆ ಕಾರಣ ಏನು ಎಂಬುದನ್ನು ಸುದೀಪ್​ ಅವರ ಆಪ್ತರಾದ ಜಾಕ್​ ಮಂಜು ವಿವರಿಸಿದ್ದಾರೆ.

Kichcha Sudeep: ಸುದೀಪ್​ ವರ್ಸಸ್​ ಎಂ.ಎನ್​. ಕುಮಾರ್​ ವಿವಾದ ಹುಟ್ಟಿಕೊಂಡಿದ್ದು ಹೇಗೆ? ಪೂರ್ತಿ ಮಾಹಿತಿ ಇಲ್ಲಿದೆ..
ಜಾಕ್​ ಮಂಜು
ಮಾಲತೇಶ ಜಗ್ಗೀನ್
| Edited By: |

Updated on:Jul 09, 2023 | 3:55 PM

Share

ಕಳೆದ ಕೆಲವು ದಿನಗಳಿಂದ ನಿರ್ಮಾಪಕ ಎಂ.ಎನ್​. ಕುಮಾರ್ (MN Kumar)​ ಅವರು ಕಿಚ್ಚ ಸುದೀಪ್​ ವಿರುದ್ಧ ಹಲವು ಆರೋಪಗಳನ್ನು ಹೊರಿಸುತ್ತಿದ್ದಾರೆ. ಈ ಕುರಿತಂತೆ ಸ್ಪಷ್ಟನೆ ನೀಡಲು ಸುದೀಪ್​ (Kichcha Sudeep) ಅವರ ಆಪ್ತರಾದ ಜಾಕ್​ ಮಂಜು ಇಂದು (ಜುಲೈ 9) ಬೆಂಗಳೂರಿನಲ್ಲಿ ಸುದ್ದಿಗೋಷ್ಠಿ ನಡೆಸಿದ್ದಾರೆ. ಈ ವೇಳೆ ಅವರು ಹಲವು ವಿಚಾರಗಳನ್ನು ಹಂಚಿಕೊಂಡಿದ್ದಾರೆ. ಒಟ್ಟಾರೆಯಾಗಿ ಈ ಎಲ್ಲ ಸಮಸ್ಯೆ ಶುರುವಾಗಿದ್ದು ಹೇಗೆ ಎಂಬುದನ್ನು ಜಾಕ್​ ಮಂಜು ವಿವರಿಸಿದ್ದಾರೆ. ‘ಎಂ.ಎನ್​. ಕುಮಾರ್ ಅವರು ಸುದೀಪ್​ ಬಳಿ ಬಂದು ‘ಮುಕುಂದ ಮುರಾರಿ’ ಚಿತ್ರಕ್ಕೆ ಡಿಮಾನಿಟೈಸೇಷನ್​ನಿಂದ ತೊಂದರೆ ಆಗಿದೆ ಅಂದರು. ‘ರನ್ನ’ ಚಿತ್ರದ ನಿರ್ಮಾಪಕರಿಗೆ ತಾವು ಹಣ ಕೊಟ್ಟಿದ್ದು, ಅದು ವಾಪಸ್​ ಬಂದಿಲ್ಲ ಅಂತ ಕೂಡ ಹೇಳಿದರು. ಹಾಗಾಗಿ ಜೊತೆಯಾಗಿ ಒಂದು ಸಿನಿಮಾ ಮಾಡುವ ಮೂಲಕ ಸಹಾಯ ಮಾಡಿ ಎಂದು ಅವರು ಕೇಳಿಕೊಂಡರು. ಅದಕ್ಕೆ ಸುದೀಪ್​ ಒಪ್ಪಿಕೊಂಡಿದ್ದರು. ನಂತರ ನಿರ್ದೇಶಕರನ್ನು ಆಯ್ಕೆ ಮಾಡುವ ಕೆಲಸ ಶುರುವಾಯಿತು. ಆದರೆ ಯಾರೂ ಆಯ್ಕೆ ಆಗಲಿಲ್ಲ’ ಎಂದು ಜಾಕ್​ ಮಂಜು (Jack Manju) ಹೇಳಿದ್ದಾರೆ.

‘ಆ ಸಿನಿಮಾ ಬೇಗ ಸೆಟ್ಟೇರಲಿಲ್ಲ. ಕುಮಾರ್​​ ಅವರು ಒತ್ತಡದಲ್ಲಿ ಇದ್ದಿದ್ದರಿಂದ ಅವರು ಮಾತನಾಡುವ ರೀತಿ ಬದಲಾಯಿತು. ನಂತರ ಒಬ್ಬ ನಿರ್ದೇಶಕನನ್ನು ಸುದೀಪ್​ ಆಯ್ಕೆ ಮಾಡಿದರು. ಆದರೆ ಆ ನಿರ್ದೇಶಕರು ಕೇಳಿದಷ್ಟು ಸಂಭಾವನೆ ನೀಡಲು ಕುಮಾರ್​ ಒಪ್ಪಲಿಲ್ಲ. 2020ರ ಜನವರಿಯಲ್ಲಿ ಸುದೀಪ್​ ‘ವಿಕ್ರಾಂತ್​ ರೋಣ’ ಶುರುಮಾಡಿದರು. ಅದಕ್ಕೆ ಮೂರು ವರ್ಷ ಹಿಡಿಯಿತು. ಅನಾರೋಗ್ಯ, ಕೆಲಸದ ಒತ್ತಡ ಮುಂತಾದ ಕಾರಣಗಳಿಂದ ಕುಮಾರ್​ ಅವರನ್ನು ಭೇಟಿಯಾಗಲು ಸುದೀಪ್​ ಅವರಿಗೆ ಸಾಧ್ಯವಾಗಲಿಲ್ಲ. ನಂತರ ಪ್ರಿಯಾ ಮೇಡಂ ಅವರ ಜೊತೆ ಕುಮಾರ್​ ಮೀಟಿಂಗ್​ ನಡೆಸಿದರು. ಕುಮಾರ್ ಅವರ ಕಷ್ಟ ಏನು ಎಂಬುದನ್ನು ಸುದೀಪ್​ಗೆ ಹೇಳಲಾಯ್ತು. ನಂತರ ಅವರನ್ನು ಕರೆಸಿ ತಾತ್ಕಾಲಿಕವಾಗಿ 5 ಕೋಟಿ ರೂಪಾಯಿ ಸಹಾಯ ಮಾಡಲು ಸುದೀಪ್​ ಮುಂದಾದರು. ಆದರೆ ಕುಮಾರ್​ ಅವರು ಕೋಪದಲ್ಲಿ ಅದನ್ನು ಒಪ್ಪಿಕೊಳ್ಳಲಿಲ್ಲ. ಈ ರೀತಿ ಭಿಕ್ಷೆಯ ಹಣ ಬೇಡ, ಸಿನಿಮಾ ಮಾಡಿ ಅಂತ ಪಟ್ಟು ಹಿಡಿದರು’ ಎಂದು ಜಾಕ್​ ಮಂಜು ಹೇಳಿದ್ದಾರೆ.

ಇದನ್ನೂ ಓದಿ: Kichcha Sudeep: ಎಷ್ಟೇ ಮೀಟಿಂಗ್​ ಆದ್ರೂ ಸುದೀಪ್​-ಎಂ.ಎನ್​. ಕುಮಾರ್​ ನಡುವೆ ಕಿರಿಕ್​ ಯಾಕೆ ಬಗೆಹರಿಯಲಿಲ್ಲ? ವಿವರ ನೀಡಿದ ಜಾಕ್​ ಮಂಜು

‘ನನಗೆ ಬರಬೇಕಾದ ಹಣ ಕೊಡಿ’ ಎಂದು ಕುಮಾರ್​ ಅವರು ಪಟ್ಟು ಹಿಡಿದಿದ್ದರು. ಅದು ಸುದೀಪ್​ಗೆ ಬೇಸರ ಮೂಡಿಸಿತ್ತು. ‘ನಾನು ಕುಮಾರ್​ ಬಳಿ ಹಣ ತೆಗೆದುಕೊಂಡಿಲ್ಲ. ಸಹಾಯ ಕೇಳಿಕೊಂಡು ಬಂದವರು ಈಗ ಈ ರೀತಿ ಮಾತಾಡಿದ್ದು ಸರಿಯಲ್ಲ’ ಅಂತ ಸುದೀಪ್​ ಕೊಂಚ ಗರಂ ಆಗಿದ್ದರು. ‘ಸುದೀಪ್​ ಅವರಿಂದ ತಮಗೆ ಹಣ ಬರಬೇಕು. ಆ ಬಳಿಕ ನಿಮ್ಮ ಸಾಲ ತೀರಿಸುತ್ತೇನೆ’ ಅಂತ ಎನ್​. ಕುಮಾರ್​ ಅವರು ಕಂಡಕಂಡಲ್ಲಿ ಹೇಳಿಕೊಂಡು ತಿರುಗಾಡಿದ್ದಾರೆ ಎಂಬುದು ಜಾಕ್​ ಮಂಜು ಆರೋಪ.

ಇದನ್ನೂ ಓದಿ: MN Kumar: ‘ಸುದೀಪ್​ ಮಾಡಿದ 45 ಸಿನಿಮಾಗಳಿಗೆ ಅಗ್ರಿಮೆಂಟ್​ ಇದೆಯಾ?’; ದಾಖಲೆ ಕೇಳಿದ್ದಕ್ಕೆ ಎಂ.ಎನ್​. ಕುಮಾರ್​ ಮರುಪ್ರಶ್ನೆ

‘ಬೇರೆ ಸಿನಿಮಾಗಳಿಂದ ಆಗಿರುವ ನಷ್ಟಕ್ಕೆಲ್ಲ ಸುದೀಪ್​ ಅವರೇ ಕಾರಣ ಎಂಬ ರೀತಿಯಲ್ಲಿ ಎಂ.ಎನ್​. ಕುಮಾರ್​ ಮಾತನಾಡಿದ್ದಾರೆ. ಅದರಿಂದ ಸುದೀಪ್​ ಅವರಿಗೆ ಬಹಳ ನೋವಾಗಿದೆ. ಕುಮಾರ್​ ಅವರಿಗೆ ಸಹಾಯ ಆಗಲಿ ಎಂಬ ಉದ್ದೇಶದಿಂದ ಒಂದು ಕಂಪನಿಯ ಜೊತೆ ಕೈ ಜೋಡಿಸಿ ಒಂದು ಸಿನಿಮಾ ಮಾಡಿಕೊಡುವ ನಿರ್ಧಾರಕ್ಕೆ ಬರಲಾಯಿತು. ಅದರ ಬಜೆಟ್​ ಜಾಸ್ತಿ ಇತ್ತು. ಮೊದಲು ಒಪ್ಪಿಕೊಂಡ ಕುಮಾರ್​ ಅವರು ಮತ್ತೆ ಮಾತು ಬದಲಾಯಿಸಿದರು. ಅದೇ ಕೊನೆಯ ಭೇಟಿ’ ಎಂದು ಜಾಕ್​ ಮಂಜು ಹೇಳಿದ್ದಾರೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Published On - 3:25 pm, Sun, 9 July 23

Follow Us
ವಿನಯ್​ನೇ ನಾಮಿನೇಟ್ ಮಾಡಿದ ಸ್ಪರ್ಧಿ; ಸ್ಟಾರ್ಟಪ್ ಕಾರಣ ನೀಡಿದ ಕಂಟೆಸ್ಟಂಟ್
ವಿನಯ್​ನೇ ನಾಮಿನೇಟ್ ಮಾಡಿದ ಸ್ಪರ್ಧಿ; ಸ್ಟಾರ್ಟಪ್ ಕಾರಣ ನೀಡಿದ ಕಂಟೆಸ್ಟಂಟ್
ಖಾಲಿ ಹುದ್ದೆಗಳ ಭರ್ತಿಗೆ ಆಗ್ರಹಿಸಿ ಧಾರವಾಡದಲ್ಲಿ ಪ್ರತಿಭಟನೆ: ಬಿಗಿ ಭದ್ರತೆ
ಖಾಲಿ ಹುದ್ದೆಗಳ ಭರ್ತಿಗೆ ಆಗ್ರಹಿಸಿ ಧಾರವಾಡದಲ್ಲಿ ಪ್ರತಿಭಟನೆ: ಬಿಗಿ ಭದ್ರತೆ
ಶಿವಶಂಕರಪ್ಪ ಸಾಹುಕಾರ್ ಮನೆ ಸೇರಿ 21 ಕಡೆ ಇಡಿ ಮೆಗಾ ರೇಡ್!
ಶಿವಶಂಕರಪ್ಪ ಸಾಹುಕಾರ್ ಮನೆ ಸೇರಿ 21 ಕಡೆ ಇಡಿ ಮೆಗಾ ರೇಡ್!
ವಿಟಿಯು ಸಿಂಡಿಕೇಟ್ ಸದಸ್ಯನಿಂದಲೇ ಪರೀಕ್ಷಾ ಗೋಲ್ಮಾಲ್!
ವಿಟಿಯು ಸಿಂಡಿಕೇಟ್ ಸದಸ್ಯನಿಂದಲೇ ಪರೀಕ್ಷಾ ಗೋಲ್ಮಾಲ್!
ಕಳಪೆ ಆಹಾರ ಪೂರೈಸುವ ಹೋಟೆಲ್​ಗಳಿಗೆ 5 ಲಕ್ಷ ರೂ. ವರೆಗೆ ದಂಡ!
ಕಳಪೆ ಆಹಾರ ಪೂರೈಸುವ ಹೋಟೆಲ್​ಗಳಿಗೆ 5 ಲಕ್ಷ ರೂ. ವರೆಗೆ ದಂಡ!
ಇಂದು ಫ್ರೀಡಂಪಾರ್ಕ್​ನಲ್ಲಿ ಜೆಡಿಎಸ್​ ಪ್ರತಿಭಟನೆ; ಸಂಚಾರ ಮಾರ್ಗ ಬದಲಾವಣೆ
ಇಂದು ಫ್ರೀಡಂಪಾರ್ಕ್​ನಲ್ಲಿ ಜೆಡಿಎಸ್​ ಪ್ರತಿಭಟನೆ; ಸಂಚಾರ ಮಾರ್ಗ ಬದಲಾವಣೆ
ಮಂಗಳಗೌರಿ ವ್ರತ ಇಂದು: ಮೇಷಾದಿ ದ್ವಾದಶ ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಮಂಗಳಗೌರಿ ವ್ರತ ಇಂದು: ಮೇಷಾದಿ ದ್ವಾದಶ ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಪ್ರದೋಷ್ ಮಾಫಿ ಸಾಕ್ಷಿ ಅರ್ಜಿ ವಿಚಾರಣೆ ಮುಂದೂಡಿಕೆ; ದರ್ಶನ್ ಮನವಿ ವಜಾ
ಪ್ರದೋಷ್ ಮಾಫಿ ಸಾಕ್ಷಿ ಅರ್ಜಿ ವಿಚಾರಣೆ ಮುಂದೂಡಿಕೆ; ದರ್ಶನ್ ಮನವಿ ವಜಾ
ಬೆಂಗಳೂರಿನಲ್ಲಿ 800 KG ಜಿಲೆಟಿನ್‌ ಜಪ್ತಿ, ದೊಡ್ಡ ಅಪಾಯ ಜಸ್ಟ್ ಮಿಸ್!
ಬೆಂಗಳೂರಿನಲ್ಲಿ 800 KG ಜಿಲೆಟಿನ್‌ ಜಪ್ತಿ, ದೊಡ್ಡ ಅಪಾಯ ಜಸ್ಟ್ ಮಿಸ್!
ಮದ್ಯದ ಬಾಟಲ್ ಇಟ್ಟುಕೊಂಡು ಯಾರಿವಳು ಯಾರಿವಳು ಹಾಡು ಹಾಡಿದ ಸ್ವಾಮೀಜಿ
ಮದ್ಯದ ಬಾಟಲ್ ಇಟ್ಟುಕೊಂಡು ಯಾರಿವಳು ಯಾರಿವಳು ಹಾಡು ಹಾಡಿದ ಸ್ವಾಮೀಜಿ