AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿಕ್ರಾಂತ್​ ರೋಣ ಚಿತ್ರದಲ್ಲಿ ಕಿಚ್ಚನ ಜೊತೆ ಕಿಚ್ಚು ಹೆಚ್ಚಿಸಿದ ಜಾಕ್ವೆಲಿನ್​ ಫರ್ನಾಂಡಿಸ್

Jacqueline Fernandez | Kichcha Sudeep: ಜಾಕ್ವೆಲಿನ್​ ಫರ್ನಾಂಡಿಸ್​ ಅವರ ಕಾರ್ಯವೈಖರಿಗೆ ಕಿಚ್ಚ ಸುದೀಪ್​ ಮೆಚ್ಚುಗೆ ಸೂಚಿಸಿದ್ದಾರೆ. ಬಾಲಿವುಡ್​ ನಟಿಯ ಆಗಮನದಿಂದಾಗಿ ವಿಕ್ರಾಂತ್​ ರೋಣ ಚಿತ್ರಕ್ಕೆ ಹೊಸ ಮೆರುಗು ಸಿಕ್ಕಾಂತಾಗಿದೆ.

ವಿಕ್ರಾಂತ್​ ರೋಣ ಚಿತ್ರದಲ್ಲಿ ಕಿಚ್ಚನ ಜೊತೆ ಕಿಚ್ಚು ಹೆಚ್ಚಿಸಿದ ಜಾಕ್ವೆಲಿನ್​ ಫರ್ನಾಂಡಿಸ್
ಅನೂಪ್ ಭಂಡಾರಿ, ಜಾಕ್ವೆಲಿನ್ ಫರ್ನಾಂಡಿಸ್
TV9 Web
| Edited By: |

Updated on: Jul 17, 2021 | 1:28 PM

Share

ಕಿಚ್ಚ ಸುದೀಪ್​ ನಟಿಸುತ್ತಿರುವ ಬಹುನಿರೀಕ್ಷಿತ ‘ವಿಕ್ರಾಂತ್ ರೋಣ’ ಸಿನಿಮಾಗೆ ಕೊನೇ ಹಂತದ ಕೆಲಸಗಳು ನಡೆಯುತ್ತಿವೆ. ಕೊರೊನಾ ವೈರಸ್​ನಿಂದ ಉಂಟಾದ ಅಡ್ಡಿ ಆತಂಕ ಏನೇ ಇದ್ದರೂ ಕೂಡ ಬಹಳ ಬೇಗ ಚಿತ್ರೀಕರಣ ಮುಗಿಸಲಾಗಿದೆ. ಕೊವಿಡ್​ ಎರಡನೇ ಅಲೆ ಆರಂಭ ಆಗುವುದಕ್ಕೂ ಮುನ್ನ ಮಾತಿನ ಭಾಗದ ಶೂಟಿಂಗ್​ ಮುಕ್ತಾಯ ಮಾಡಿಕೊಂಡಿದ್ದ ತಂಡ, ಕೇವಲ ಒಂದು ಹಾಡಿನ ಚಿತ್ರೀಕರಣ ಬಾಕಿ ಉಳಿಸಿಕೊಂಡಿತ್ತು. ಈಗ ಅದನ್ನೂ ಪೂರ್ಣಗೊಳಿಸಲಾಗಿದೆ. ಆ ಹಾಡಿನಲ್ಲಿ ನಟಿ ಜಾಕ್ವೆಲಿನ್​ ಫರ್ನಾಂಡಿಸ್​ ಡ್ಯಾನ್ಸ್ ಮಾಡಿರುವುದು ವಿಶೇಷ.

ಬಾಲಿವುಡ್​ನಲ್ಲಿ ಸಖತ್​ ಫೇಮಸ್​ ಆಗಿರುವ ಜಾಕ್ವೆಲಿನ್​ ಫರ್ನಾಂಡಿಸ್​ ಅವರು ಇದೇ ಮೊದಲ ಬಾರಿಗೆ ‘ವಿಕ್ರಾಂತ್​ ರೋಣ’ ಸಿನಿಮಾ ಮೂಲಕ ಕನ್ನಡ ಚಿತ್ರರಂಗಕ್ಕೆ ಕಾಲಿಟ್ಟಂತಾಗಿದೆ. ಅವರಿಗೆ ಚಿತ್ರದ ನಿರ್ದೇಶಕ ಅನೂಪ್​ ಭಂಡಾರಿ ಸ್ವಾಗತ ಕೋರಿದ್ದಾರೆ. ‘ಜಾಕ್ವೆಲಿನ್​ ಅವರೇ ನಿಮಗೆ ಚಂದನವನಕ್ಕೆ ಸ್ವಾಗತ. ನಿಮ್ಮ ಜೊತೆ ಕೆಲಸ ಮಾಡಿದ್ದು ಖುಷಿ ನೀಡಿತು. ನಿಮ್ಮ ಪಾತ್ರದ ಹೆಸರು ಮತ್ತು ಫಸ್ಟ್​ಲುಕ್​ ಅನ್ನು ಶೀಘ್ರದಲ್ಲೇ ಬಿಡುಗಡೆ ಮಾಡಲಾಗುವುದು. ಪ್ರೇಕ್ಷಕರಿಗೆ ಇದು ಖಂಡಿತ ಇಷ್ಟವಾಗಲಿದೆ ಎಂಬ ನಂಬಿಕೆ ನನಗಿದೆ. ಡಬ್ಬಿಂಗ್​ ಸ್ಟುಡಿಯೋದಲ್ಲಿ ಮತ್ತೆ ಭೇಟಿ ಆಗೋಣ. ಅಲ್ಲಿಯವರೆಗೆ ಸ್ವಲ್ಪ ಜೋಪಾನ’ ಎಂದು ಅನೂಪ್​ ಭಂಡಾರಿ ಟ್ವೀಟ್​ ಮಾಡಿದ್ದಾರೆ.

ಜಾಕ್ವೆಲಿನ್​ ಫರ್ನಾಂಡಿಸ್​ ಅವರ ಕಾರ್ಯವೈಖರಿಗೆ ಸುದೀಪ್​ ಕೂಡ ಮೆಚ್ಚುಗೆ ಸೂಚಿಸಿದ್ದಾರೆ. ‘ಈ ಹಾಡು ಮತ್ತು ಸಿನಿಮಾಗೆ ಎನರ್ಜಿ ತುಂಬಿದ್ದಕ್ಕಾಗಿ ಜಾಕ್ವೆಲಿನ್​ ಫರ್ನಾಂಡಿಸ್​ ಅವರಿಗೆ ಧನ್ಯವಾದಗಳು’ ಎಂದು ಸುದೀಪ್​ ಹೇಳಿದ್ದಾರೆ. ಬಾಲಿವುಡ್​ ನಟಿಯ ಆಗಮನದಿಂದಾಗಿ ವಿಕ್ರಾಂತ್​ ರೋಣ ಚಿತ್ರಕ್ಕೆ ಹೊಸ ಮೆರುಗು ಸಿಕ್ಕಾಂತಾಗಿದೆ.

ಚಿತ್ರೀಕರಣ ಮುಗಿದಿರುವುದಕ್ಕೆ ಇಡೀ ತಂಡಕ್ಕೆ ಕಿಚ್ಚ ಸುದೀಪ್​ ವಂದನೆಗಳನ್ನು ತಿಳಿಸಿದ್ದಾರೆ. ‘ಸಿನಿಮಾದ ಕೆಲಸ ಶುರು ಮಾಡಿದಾಗ ಯಾವ ಭಾವನೆ ಇತ್ತೋ ಅದೇ ಭಾವನೆಯೊಂದಿಗೆ ನಾವು ಕೆಲಸ ಮುಗಿಸುವುದು ತುಂಬ ವಿರಳ. ಸುತ್ತಮುತ್ತ ಇದ್ದ ಎಲ್ಲರೂ ತುಂಬ ಪಾಸಿಟಿವ್​ ಆಗಿದ್ದರು. ಅದಕ್ಕಾಗಿ ವಿಕ್ರಾಂತ್​ ರೋಣ ತಂಡದ ಎಲ್ಲರಿಗೂ ಧನ್ಯವಾದಗಳು’ ಎಂದು ಸುದೀಪ್​ ಟ್ವೀಟ್​ ಮಾಡಿದ್ದಾರೆ.

ಶಾಲಿನಿ ಮಂಜುನಾಥ್​ ಮತ್ತು ಅಲಂಕಾರ್​ ಪಾಂಡಿಯನ್​ ಜೊತೆಯಾಗಿ ಈ ಚಿತ್ರಕ್ಕೆ ಬಂಡವಾಳ ಹೂಡಿದ್ದಾರೆ. ಕಿಚ್ಚ ಸುದೀಪ್​ ಜೊತೆ ನಿರೂಪ್​ ಭಂಡಾರಿ, ನೀತಾ ಅಶೋಕ್​ ಮುಂತಾದವರು ಕೂಡ ಪ್ರಮುಖ ಪಾತ್ರಗಳನ್ನು ನಿಭಾಯಿಸಿದ್ದಾರೆ. ಆಗಸ್ಟ್​ 19ರಂದು ಈ ಸಿನಿಮಾ ವಿಶ್ವಾದ್ಯಂತ 3ಡಿ ವರ್ಷನ್​ನೊಂದಿಗೆ ಬಿಡುಗಡೆ ಆಗಲಿದೆ. ಚಿತ್ರಕ್ಕೆ ಬಿ. ಅಜನೀಶ್​ ಲೋಕನಾಥ್​ ಸಂಗೀತ ನಿರ್ದೇಶನ ಮಾಡಿದ್ದಾರೆ.

ಇದನ್ನೂ ಓದಿ:

ಸುದೀಪ್​ ನಟನೆಯ ವಿಕ್ರಾಂತ್​ ರೋಣ ಸಿನಿಮಾದ ಪೋಸ್ಟರ್​ ಕದ್ದ ಬಾಲಿವುಡ್; ಸೋಶಿಯಲ್​ ಮೀಡಿಯಾದಲ್ಲಿ ಟ್ರೋಲ್​

‘ವಿಕ್ರಾಂತ್​ ರೋಣ’ ಬಜೆಟ್​ ಎಷ್ಟು? ನಂಬರ್​ ಹೇಳುವ ಬದಲು ನಿರ್ದೇಶಕರು ಹೇಳಿದ್ದೇ ಬೇರೆ​

Follow Us
Web contact
Web contact

TV9 Kannada

Read More
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು