AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿಕ್ರಾಂತ್​ ರೋಣ ಚಿತ್ರದಲ್ಲಿ ಕಿಚ್ಚನ ಜೊತೆ ಕಿಚ್ಚು ಹೆಚ್ಚಿಸಿದ ಜಾಕ್ವೆಲಿನ್​ ಫರ್ನಾಂಡಿಸ್

Jacqueline Fernandez | Kichcha Sudeep: ಜಾಕ್ವೆಲಿನ್​ ಫರ್ನಾಂಡಿಸ್​ ಅವರ ಕಾರ್ಯವೈಖರಿಗೆ ಕಿಚ್ಚ ಸುದೀಪ್​ ಮೆಚ್ಚುಗೆ ಸೂಚಿಸಿದ್ದಾರೆ. ಬಾಲಿವುಡ್​ ನಟಿಯ ಆಗಮನದಿಂದಾಗಿ ವಿಕ್ರಾಂತ್​ ರೋಣ ಚಿತ್ರಕ್ಕೆ ಹೊಸ ಮೆರುಗು ಸಿಕ್ಕಾಂತಾಗಿದೆ.

ವಿಕ್ರಾಂತ್​ ರೋಣ ಚಿತ್ರದಲ್ಲಿ ಕಿಚ್ಚನ ಜೊತೆ ಕಿಚ್ಚು ಹೆಚ್ಚಿಸಿದ ಜಾಕ್ವೆಲಿನ್​ ಫರ್ನಾಂಡಿಸ್
ಅನೂಪ್ ಭಂಡಾರಿ, ಜಾಕ್ವೆಲಿನ್ ಫರ್ನಾಂಡಿಸ್
TV9 Web
| Edited By: |

Updated on: Jul 17, 2021 | 1:28 PM

Share

ಕಿಚ್ಚ ಸುದೀಪ್​ ನಟಿಸುತ್ತಿರುವ ಬಹುನಿರೀಕ್ಷಿತ ‘ವಿಕ್ರಾಂತ್ ರೋಣ’ ಸಿನಿಮಾಗೆ ಕೊನೇ ಹಂತದ ಕೆಲಸಗಳು ನಡೆಯುತ್ತಿವೆ. ಕೊರೊನಾ ವೈರಸ್​ನಿಂದ ಉಂಟಾದ ಅಡ್ಡಿ ಆತಂಕ ಏನೇ ಇದ್ದರೂ ಕೂಡ ಬಹಳ ಬೇಗ ಚಿತ್ರೀಕರಣ ಮುಗಿಸಲಾಗಿದೆ. ಕೊವಿಡ್​ ಎರಡನೇ ಅಲೆ ಆರಂಭ ಆಗುವುದಕ್ಕೂ ಮುನ್ನ ಮಾತಿನ ಭಾಗದ ಶೂಟಿಂಗ್​ ಮುಕ್ತಾಯ ಮಾಡಿಕೊಂಡಿದ್ದ ತಂಡ, ಕೇವಲ ಒಂದು ಹಾಡಿನ ಚಿತ್ರೀಕರಣ ಬಾಕಿ ಉಳಿಸಿಕೊಂಡಿತ್ತು. ಈಗ ಅದನ್ನೂ ಪೂರ್ಣಗೊಳಿಸಲಾಗಿದೆ. ಆ ಹಾಡಿನಲ್ಲಿ ನಟಿ ಜಾಕ್ವೆಲಿನ್​ ಫರ್ನಾಂಡಿಸ್​ ಡ್ಯಾನ್ಸ್ ಮಾಡಿರುವುದು ವಿಶೇಷ.

ಬಾಲಿವುಡ್​ನಲ್ಲಿ ಸಖತ್​ ಫೇಮಸ್​ ಆಗಿರುವ ಜಾಕ್ವೆಲಿನ್​ ಫರ್ನಾಂಡಿಸ್​ ಅವರು ಇದೇ ಮೊದಲ ಬಾರಿಗೆ ‘ವಿಕ್ರಾಂತ್​ ರೋಣ’ ಸಿನಿಮಾ ಮೂಲಕ ಕನ್ನಡ ಚಿತ್ರರಂಗಕ್ಕೆ ಕಾಲಿಟ್ಟಂತಾಗಿದೆ. ಅವರಿಗೆ ಚಿತ್ರದ ನಿರ್ದೇಶಕ ಅನೂಪ್​ ಭಂಡಾರಿ ಸ್ವಾಗತ ಕೋರಿದ್ದಾರೆ. ‘ಜಾಕ್ವೆಲಿನ್​ ಅವರೇ ನಿಮಗೆ ಚಂದನವನಕ್ಕೆ ಸ್ವಾಗತ. ನಿಮ್ಮ ಜೊತೆ ಕೆಲಸ ಮಾಡಿದ್ದು ಖುಷಿ ನೀಡಿತು. ನಿಮ್ಮ ಪಾತ್ರದ ಹೆಸರು ಮತ್ತು ಫಸ್ಟ್​ಲುಕ್​ ಅನ್ನು ಶೀಘ್ರದಲ್ಲೇ ಬಿಡುಗಡೆ ಮಾಡಲಾಗುವುದು. ಪ್ರೇಕ್ಷಕರಿಗೆ ಇದು ಖಂಡಿತ ಇಷ್ಟವಾಗಲಿದೆ ಎಂಬ ನಂಬಿಕೆ ನನಗಿದೆ. ಡಬ್ಬಿಂಗ್​ ಸ್ಟುಡಿಯೋದಲ್ಲಿ ಮತ್ತೆ ಭೇಟಿ ಆಗೋಣ. ಅಲ್ಲಿಯವರೆಗೆ ಸ್ವಲ್ಪ ಜೋಪಾನ’ ಎಂದು ಅನೂಪ್​ ಭಂಡಾರಿ ಟ್ವೀಟ್​ ಮಾಡಿದ್ದಾರೆ.

ಜಾಕ್ವೆಲಿನ್​ ಫರ್ನಾಂಡಿಸ್​ ಅವರ ಕಾರ್ಯವೈಖರಿಗೆ ಸುದೀಪ್​ ಕೂಡ ಮೆಚ್ಚುಗೆ ಸೂಚಿಸಿದ್ದಾರೆ. ‘ಈ ಹಾಡು ಮತ್ತು ಸಿನಿಮಾಗೆ ಎನರ್ಜಿ ತುಂಬಿದ್ದಕ್ಕಾಗಿ ಜಾಕ್ವೆಲಿನ್​ ಫರ್ನಾಂಡಿಸ್​ ಅವರಿಗೆ ಧನ್ಯವಾದಗಳು’ ಎಂದು ಸುದೀಪ್​ ಹೇಳಿದ್ದಾರೆ. ಬಾಲಿವುಡ್​ ನಟಿಯ ಆಗಮನದಿಂದಾಗಿ ವಿಕ್ರಾಂತ್​ ರೋಣ ಚಿತ್ರಕ್ಕೆ ಹೊಸ ಮೆರುಗು ಸಿಕ್ಕಾಂತಾಗಿದೆ.

ಚಿತ್ರೀಕರಣ ಮುಗಿದಿರುವುದಕ್ಕೆ ಇಡೀ ತಂಡಕ್ಕೆ ಕಿಚ್ಚ ಸುದೀಪ್​ ವಂದನೆಗಳನ್ನು ತಿಳಿಸಿದ್ದಾರೆ. ‘ಸಿನಿಮಾದ ಕೆಲಸ ಶುರು ಮಾಡಿದಾಗ ಯಾವ ಭಾವನೆ ಇತ್ತೋ ಅದೇ ಭಾವನೆಯೊಂದಿಗೆ ನಾವು ಕೆಲಸ ಮುಗಿಸುವುದು ತುಂಬ ವಿರಳ. ಸುತ್ತಮುತ್ತ ಇದ್ದ ಎಲ್ಲರೂ ತುಂಬ ಪಾಸಿಟಿವ್​ ಆಗಿದ್ದರು. ಅದಕ್ಕಾಗಿ ವಿಕ್ರಾಂತ್​ ರೋಣ ತಂಡದ ಎಲ್ಲರಿಗೂ ಧನ್ಯವಾದಗಳು’ ಎಂದು ಸುದೀಪ್​ ಟ್ವೀಟ್​ ಮಾಡಿದ್ದಾರೆ.

ಶಾಲಿನಿ ಮಂಜುನಾಥ್​ ಮತ್ತು ಅಲಂಕಾರ್​ ಪಾಂಡಿಯನ್​ ಜೊತೆಯಾಗಿ ಈ ಚಿತ್ರಕ್ಕೆ ಬಂಡವಾಳ ಹೂಡಿದ್ದಾರೆ. ಕಿಚ್ಚ ಸುದೀಪ್​ ಜೊತೆ ನಿರೂಪ್​ ಭಂಡಾರಿ, ನೀತಾ ಅಶೋಕ್​ ಮುಂತಾದವರು ಕೂಡ ಪ್ರಮುಖ ಪಾತ್ರಗಳನ್ನು ನಿಭಾಯಿಸಿದ್ದಾರೆ. ಆಗಸ್ಟ್​ 19ರಂದು ಈ ಸಿನಿಮಾ ವಿಶ್ವಾದ್ಯಂತ 3ಡಿ ವರ್ಷನ್​ನೊಂದಿಗೆ ಬಿಡುಗಡೆ ಆಗಲಿದೆ. ಚಿತ್ರಕ್ಕೆ ಬಿ. ಅಜನೀಶ್​ ಲೋಕನಾಥ್​ ಸಂಗೀತ ನಿರ್ದೇಶನ ಮಾಡಿದ್ದಾರೆ.

ಇದನ್ನೂ ಓದಿ:

ಸುದೀಪ್​ ನಟನೆಯ ವಿಕ್ರಾಂತ್​ ರೋಣ ಸಿನಿಮಾದ ಪೋಸ್ಟರ್​ ಕದ್ದ ಬಾಲಿವುಡ್; ಸೋಶಿಯಲ್​ ಮೀಡಿಯಾದಲ್ಲಿ ಟ್ರೋಲ್​

‘ವಿಕ್ರಾಂತ್​ ರೋಣ’ ಬಜೆಟ್​ ಎಷ್ಟು? ನಂಬರ್​ ಹೇಳುವ ಬದಲು ನಿರ್ದೇಶಕರು ಹೇಳಿದ್ದೇ ಬೇರೆ​

Follow Us
ಹೊಳೆ ದಾಟೋಕೆ ದೊಣ್ಣೆ‌ನಾಯಕನ ಅಪ್ಪಣೆ ಬೇಕೆ: ಖರ್ಗೆಗೆ ಜೋಶಿ ತಿರುಗೇಟು
ಹೊಳೆ ದಾಟೋಕೆ ದೊಣ್ಣೆ‌ನಾಯಕನ ಅಪ್ಪಣೆ ಬೇಕೆ: ಖರ್ಗೆಗೆ ಜೋಶಿ ತಿರುಗೇಟು
ಎಸ್ ಜಾನಕಿ ಅವರಿಗಿದ್ದ ನೋವೇನು? ಭಾರತಿ ವಿಷ್ಣುವರ್ಧನ್ ಮಾತು
ಎಸ್ ಜಾನಕಿ ಅವರಿಗಿದ್ದ ನೋವೇನು? ಭಾರತಿ ವಿಷ್ಣುವರ್ಧನ್ ಮಾತು
ಜಾನಕಮ್ಮ ಸ್ಮಾರಕಕ್ಕೆ ಬೇಡಿಕೆ: ಶೀಘ್ರದಲ್ಲೇ ತೀರ್ಮಾನ ಮಾಡ್ತೀವಿ ಎಂದ ಯತೀಂದ್
ಜಾನಕಮ್ಮ ಸ್ಮಾರಕಕ್ಕೆ ಬೇಡಿಕೆ: ಶೀಘ್ರದಲ್ಲೇ ತೀರ್ಮಾನ ಮಾಡ್ತೀವಿ ಎಂದ ಯತೀಂದ್
‘ಜಾನಕಿ ಹಾಡು ಕೇಳುತ್ತಲೇ ನಮ್ಮ ತಾಯಿ ಪ್ರಾಣ ಬಿಟ್ಟಿದ್ದರು’: ಸಾಧು ಕೋಕಿಲ
‘ಜಾನಕಿ ಹಾಡು ಕೇಳುತ್ತಲೇ ನಮ್ಮ ತಾಯಿ ಪ್ರಾಣ ಬಿಟ್ಟಿದ್ದರು’: ಸಾಧು ಕೋಕಿಲ
ಪ್ರವೀಣ್ ನೆಟ್ಟಾರು ಪ್ರಕರಣ: NIA ಬಲೆಗೆ ಬಿದ್ದ ಮೋಸ್ಟ್ ವಾಂಟೆಡ್ ಆರೋಪಿಗಳು
ಪ್ರವೀಣ್ ನೆಟ್ಟಾರು ಪ್ರಕರಣ: NIA ಬಲೆಗೆ ಬಿದ್ದ ಮೋಸ್ಟ್ ವಾಂಟೆಡ್ ಆರೋಪಿಗಳು
ಎಸ್. ಜಾನಕಿ ಪಾರ್ಥಿವ ಶರೀರ ನೋಡಿ ಬಿಕ್ಕಿ ಬಿಕ್ಕಿ ಅತ್ತ ವಾಣಿ ಹರಿಕೃಷ್ಣ
ಎಸ್. ಜಾನಕಿ ಪಾರ್ಥಿವ ಶರೀರ ನೋಡಿ ಬಿಕ್ಕಿ ಬಿಕ್ಕಿ ಅತ್ತ ವಾಣಿ ಹರಿಕೃಷ್ಣ
ಎಸ್.ಜಾನಕಿಯವರ ಅಂತಿಮ ದರ್ಶನ ಪಡೆದು ಭಾವುಕರಾದ ಗಾಯಕ ವಿಜಯ್ ಪ್ರಕಾಶ್
ಎಸ್.ಜಾನಕಿಯವರ ಅಂತಿಮ ದರ್ಶನ ಪಡೆದು ಭಾವುಕರಾದ ಗಾಯಕ ವಿಜಯ್ ಪ್ರಕಾಶ್
ಎಸ್​​. ಜಾನಕಿ ನಿಧನಕ್ಕೆ ಲಂಡನ್​​ನಿಂದಲೇ ಇಳಯರಾಜ್ ಸಂತಾಪ
ಎಸ್​​. ಜಾನಕಿ ನಿಧನಕ್ಕೆ ಲಂಡನ್​​ನಿಂದಲೇ ಇಳಯರಾಜ್ ಸಂತಾಪ
ಜಾನಕಮ್ಮಗೆ ಮೈಸೂರಿನ ನಂಟು ಹೇಗೆ? ನವೀನ್ ಕೇರ್​ಟೇಕರ್ ಆಗಿದ್ಯಾಕೆ?
ಜಾನಕಮ್ಮಗೆ ಮೈಸೂರಿನ ನಂಟು ಹೇಗೆ? ನವೀನ್ ಕೇರ್​ಟೇಕರ್ ಆಗಿದ್ಯಾಕೆ?
ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಖಂಡಿಸಿ ಯುವ ಕಾಂಗ್ರೆಸ್​​ನಿಂದ ಸೈಕಲ್ ಜಾಥಾ
ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಖಂಡಿಸಿ ಯುವ ಕಾಂಗ್ರೆಸ್​​ನಿಂದ ಸೈಕಲ್ ಜಾಥಾ