AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸುಪ್ರೀಂ ಕೋರ್ಟ್​ ಮೆಟ್ಟಿಲೇರಿದ್ದ ನಟ ಜಗ್ಗೇಶ್​-ಪರಿಮಳಾ ಮದುವೆಗೆ ಈಗ 37 ವರ್ಷ!

ಬೆಂಗಳೂರಿನಿಂದ ಮದ್ರಾಸ್​ಗೆ ತೆರಳಿದ ಜಗ್ಗೇಶ್​ ಅವರು ಮಡದಿಯನ್ನು ಕರೆದುಕೊಂದು ಬಂದೇ ಬಿಟ್ಟಿದ್ದರು. ಆಗ ‘ಚಿತ್ರನಟನಿಂದ ಹುಡುಗಿಯ ಕಿಡ್ನಾಪ್​’ ಎಂದು ಸುದ್ದಿ ಪ್ರಕಟ ಆಗಿತ್ತು. ಈ ಅಪಹರಣದ ಕಿರಿಕ್​ ಸುಪ್ರೀಂ ಕೋರ್ಟ್​ ಮೆಟ್ಟಿಲೇರಿತ್ತು!

ಸುಪ್ರೀಂ ಕೋರ್ಟ್​ ಮೆಟ್ಟಿಲೇರಿದ್ದ ನಟ ಜಗ್ಗೇಶ್​-ಪರಿಮಳಾ ಮದುವೆಗೆ ಈಗ 37 ವರ್ಷ!
ಜಗ್ಗೇಶ್​-ಪರಿಮಳಾ ಮದುವೆ ಫೋಟೋ
ಮದನ್​ ಕುಮಾರ್​
| Edited By: |

Updated on:Mar 22, 2021 | 1:34 PM

Share

ನಟ ಜಗ್ಗೇಶ್​ ಅವರ ರಿಯಲ್​ ಲೈಫ್​ ಘಟನೆಗಳು ಯಾವ ಸಿನಿಮಾ ಕಥೆಗೂ ಕಮ್ಮಿ ಇಲ್ಲ. ಅದರಲ್ಲೂ ಪರಿಮಳಾ ಜೊತೆಗಿನ ಅವರ ಲವ್​ಸ್ಟೋರಿ ಸಖತ್​ ಸಿನಿಮೀಯವಾಗಿದೆ. ಅದು ಸುಪ್ರೀಂ ಕೋರ್ಟ್​ ಮೆಟ್ಟಿಲು ಕೂಡ ಏರಿತ್ತು. ಅದೇನೇ ಇದ್ದರೂ ಜಗ್ಗೇಶ್​ ಮತ್ತು ಪರಿಮಳಾ ದಾಂಪತ್ಯ ಜೀವನಕ್ಕೆ ಈಗ 37ರ ವಸಂತ. ವಿವಾಹ ವಾರ್ಷಿಕೋತ್ಸವ ಆಚರಿಸಿಕೊಂಡ ಈ ದಂಪತಿಗೆ ಎಲ್ಲರೂ ಶುಭಾಶಯ ತಿಳಿಸುತ್ತಿದ್ದಾರೆ.

ಜಗ್ಗೇಶ್​ ಮತ್ತು ಪರಿಮಳಾ ಅವರದ್ದು ಲವ್​ ಮ್ಯಾರೇಜ್​. ತುಂಬ ಚಿಕ್ಕ ವಯಸ್ಸಿನಲ್ಲಿಯೇ ಜಗ್ಗೇಶ್ ಪ್ರೀತಿಯಲ್ಲಿ ಬಿದ್ದಿದ್ದರು. ಆಗ ಪರಿಮಳಾ ಅವರಿಗೆ ಕೇವಲ 14 ವರ್ಷ. ಜಗ್ಗೇಶ್​ ಅವರಿಗೆ 19ರ ಪ್ರಾಯ. ಕೆಲವೇ ಕೆಲವು ಸ್ನೇಹಿತರ ಸಮ್ಮುಖದಲ್ಲಿ 1984ರ ಮಾ.22ರಂದು ಜಗ್ಗೇಶ್​ ಮತ್ತು ಪರಿಮಳಾ ರಿಜಿಸ್ಟರ್​ ಮ್ಯಾರೇಜ್​ ಆದರು.

ಮದುವೆಯಾದ ಮೂರನೇ ದಿನವೇ ಪರಿಮಳಾ ತಂದೆ ಬಂದು ಪರಿಮಳಾರನ್ನು ಕರೆದುಕೊಂಡು ಹೋದರು. ನಂತರ ಒಂದೂವರೆ ವರ್ಷ ಇಬ್ಬರ ನಡುವೆ ಸಂಪರ್ಕ ಇರಲಿಲ್ಲ. ಬಳಿಕ ಬೆಂಗಳೂರಿನಿಂದ ಮದ್ರಾಸ್​ಗೆ ತೆರಳಿದ ಜಗ್ಗೇಶ್​ ಅವರು ಮಡದಿಯನ್ನು ಕರೆದುಕೊಂದು ಬಂದೇ ಬಿಟ್ಟರು. ಆಗ ‘ಚಿತ್ರನಟನಿಂದ ಹುಡುಗಿಯ ಕಿಡ್ನಾಪ್​’ ಎಂದು ಸುದ್ದಿ ಪ್ರಕಟ ಆಯಿತು. ಈ ಅಪಹರಣದ ಕಿರಿಕ್​ ಸುಪ್ರೀಂ ಕೋರ್ಟ್​ ಮೆಟ್ಟಿಲೇರಿತ್ತು! ಆದರೆ ಅಲ್ಲಿಯೂ ಅವರಿಬ್ಬರ ಪ್ರೀತಿಗೆ ಜಯ ಸಿಕ್ಕಿತು.

ಮದುವೆ ನಂತರವೂ ಜಗ್ಗೇಶ್​ ಮತ್ತು ಪರಿಮಳಾ ತುಂಬ ಕಷ್ಟದ ಜೀವನ ನಡೆಸಿದರು. ಚಿತ್ರರಂಗದಲ್ಲಿ ಜಗ್ಗೇಶ್​ ಯಶಸ್ಸು ಕಾಣುತ್ತಿದ್ದಂತೆಯೇ ಅವರ ಆರ್ಥಿಕ ಪರಿಸ್ಥಿತಿ ಸುಧಾರಿಸಿತು. ಅನೇಕ ಏಳು-ಬೀಳುಗಳನ್ನು ದಾಟಿಕೊಂಡು ಈ ಜೋಡಿ ಇಲ್ಲಿಯವರೆಗೂ ಬಂದಿದೆ. 37ನೇ ವಿವಾಹ ವಾರ್ಷಿಕೋತ್ಸವದ ಸಂದರ್ಭದಲ್ಲಿ ಕೆಲವು ಫೋಟೋಗಳನ್ನು ಜಗ್ಗೇಶ್​ ಹಂಚಿಕೊಂಡಿದ್ದಾರೆ.

‘ಋಣಾನುಬಂಧಂರೂಪೇಣಾಂ ಪಶುಪತ್ನಿಸುತಆಲಯ. Marrages are made in heaven. ಪ್ರೀತಿಸುವುದು ತಪ್ಪಲ್ಲಾ, ಪ್ರೀತಿಸಿದ ಮೇಲೆ ಬಾಳದಿರುವುದು ತಪ್ಪು. 22/3/1984 ನಾನು ಪರಿಮಳನಿಗೆ ತಾಳಿ ಕಟ್ಟಿ ಇಂದಿಗೆ 37 ವರ್ಷ! ನನ್ನ ಎಲ್ಲಾ ಗುಣ ಕಷ್ಟ ಸಹಿಸಿ ಹೆಜ್ಜೆ ಹಾಕಿ ಬದುಕಿದ ಮಡದಿಗೆ ಧನ್ಯವಾದ ಸಣ್ಣ ಪದ. ನನ್ನ ಎರಡನೇ ತಾಯಿ ಸ್ಥಾನ ನೀಡಿರುವೆ’ ಎಂದು ಜಗ್ಗೇಶ್​ ಟ್ವೀಟ್​ ಮಾಡಿದ್ದಾರೆ.

ಇದನ್ನೂ ಓದಿ: ಜಗ್ಗೇಶ್​ ನಟನಾಗುತ್ತಾರೆ ಎಂದು ಭವಿಷ್ಯ ನುಡಿದಿದ್ದ ಗುರುಗಳ ನಿಧನ! ಕಂಬನಿ ಮಿಡಿದ ನವರಸ ನಾಯಕ

ನವರಸ ನಾಯಕ ಜಗ್ಗೇಶ್​ಗೆ ಹ್ಯಾಪಿ ಬರ್ತ್​​ಡೇ ಹೇಳಿದ ಚಾಲೆಂಜಿಂಗ್​ ಸ್ಟಾರ್​ ದರ್ಶನ್!

Published On - 1:06 pm, Mon, 22 March 21

ಸಿಕ್ಕ ಸಿಕ್ಕ ಜಾನುವಾರುಗಳನ್ನು ತಿಂದು ತೇಗಿದ ಚಿರತೆ ಬೋನಿಗೆ ಬಿತ್ತು
ಸಿಕ್ಕ ಸಿಕ್ಕ ಜಾನುವಾರುಗಳನ್ನು ತಿಂದು ತೇಗಿದ ಚಿರತೆ ಬೋನಿಗೆ ಬಿತ್ತು
ಗೋಪಾಲ್‌ಗಂಜ್‌ನ ದೇವಸ್ಥಾನದಿಂದ 50 ಲಕ್ಷ ಮೌಲ್ಯದ ಚಿನ್ನದ ಕಿರೀಟ, ಆಭರಣ ಕಳವು
ಗೋಪಾಲ್‌ಗಂಜ್‌ನ ದೇವಸ್ಥಾನದಿಂದ 50 ಲಕ್ಷ ಮೌಲ್ಯದ ಚಿನ್ನದ ಕಿರೀಟ, ಆಭರಣ ಕಳವು
ಕಾಳಹಸ್ತಿ ದೇವಸ್ಥಾನದಲ್ಲಿ ನೆಲದ ಮೇಲೆ ಕುಳಿತು ಪ್ರಸಾದ ಸೇವಿಸಿದ ರಷ್ಯನ್ನರು
ಕಾಳಹಸ್ತಿ ದೇವಸ್ಥಾನದಲ್ಲಿ ನೆಲದ ಮೇಲೆ ಕುಳಿತು ಪ್ರಸಾದ ಸೇವಿಸಿದ ರಷ್ಯನ್ನರು
ಪ್ರೇಮ್ ಕಹಾನಿ: 19 ವರ್ಷದ ಯುವತಿ ಹಿಂದೆ ಬಿದ್ದು ದುರಂತ ಅಂತ್ಯಕಂಡ 40 ಅಂಕಲ್
ಪ್ರೇಮ್ ಕಹಾನಿ: 19 ವರ್ಷದ ಯುವತಿ ಹಿಂದೆ ಬಿದ್ದು ದುರಂತ ಅಂತ್ಯಕಂಡ 40 ಅಂಕಲ್
ಬೇರೆ ಮಹಿಳೆ ಜತೆ ಲವ್ವಿಡವ್ವಿ: ಹೆಂಡ್ತಿ ಹತ್ಯೆಗೆ ಸುಪಾರಿ ಕೊಟ್ಟ ಪತಿ
ಬೇರೆ ಮಹಿಳೆ ಜತೆ ಲವ್ವಿಡವ್ವಿ: ಹೆಂಡ್ತಿ ಹತ್ಯೆಗೆ ಸುಪಾರಿ ಕೊಟ್ಟ ಪತಿ
ಡಿಕೆಶಿ ಪ್ರಾರ್ಥನೆಗೆ ಅಸ್ತು ಎಂದಳಾ ಶಕ್ತಿದೇವಿ? ಅರ್ಚಕರು ಹೇಳಿದ್ದಿಷ್ಟು
ಡಿಕೆಶಿ ಪ್ರಾರ್ಥನೆಗೆ ಅಸ್ತು ಎಂದಳಾ ಶಕ್ತಿದೇವಿ? ಅರ್ಚಕರು ಹೇಳಿದ್ದಿಷ್ಟು
ಸಂಜು ಹೊಡೆತಕ್ಕೆ ಸಿಲುಕಿ ನೋವಿನಿಂದ ನರಳಾಡಿದ ಅಂಪೈರ್
ಸಂಜು ಹೊಡೆತಕ್ಕೆ ಸಿಲುಕಿ ನೋವಿನಿಂದ ನರಳಾಡಿದ ಅಂಪೈರ್
ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್
ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್
ಗೃಹಲಕ್ಷ್ಮೀ ಹಣದ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಸಿಎಂ ಆರ್ಥಿಕ ಸಲಹೆಗಾರ
ಗೃಹಲಕ್ಷ್ಮೀ ಹಣದ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಸಿಎಂ ಆರ್ಥಿಕ ಸಲಹೆಗಾರ
ಮೋದಿಯಿಂದ ನಾಳೆ ಉದ್ಘಾಟನೆಯಾಗಲಿದೆ ಅಸ್ಸಾಂನ ಅತಿದೊಡ್ಡ ವಿಮಾನ ನಿಲ್ದಾಣ
ಮೋದಿಯಿಂದ ನಾಳೆ ಉದ್ಘಾಟನೆಯಾಗಲಿದೆ ಅಸ್ಸಾಂನ ಅತಿದೊಡ್ಡ ವಿಮಾನ ನಿಲ್ದಾಣ