AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸುಪ್ರೀಂ ಕೋರ್ಟ್​ ಮೆಟ್ಟಿಲೇರಿದ್ದ ನಟ ಜಗ್ಗೇಶ್​-ಪರಿಮಳಾ ಮದುವೆಗೆ ಈಗ 37 ವರ್ಷ!

ಬೆಂಗಳೂರಿನಿಂದ ಮದ್ರಾಸ್​ಗೆ ತೆರಳಿದ ಜಗ್ಗೇಶ್​ ಅವರು ಮಡದಿಯನ್ನು ಕರೆದುಕೊಂದು ಬಂದೇ ಬಿಟ್ಟಿದ್ದರು. ಆಗ ‘ಚಿತ್ರನಟನಿಂದ ಹುಡುಗಿಯ ಕಿಡ್ನಾಪ್​’ ಎಂದು ಸುದ್ದಿ ಪ್ರಕಟ ಆಗಿತ್ತು. ಈ ಅಪಹರಣದ ಕಿರಿಕ್​ ಸುಪ್ರೀಂ ಕೋರ್ಟ್​ ಮೆಟ್ಟಿಲೇರಿತ್ತು!

ಸುಪ್ರೀಂ ಕೋರ್ಟ್​ ಮೆಟ್ಟಿಲೇರಿದ್ದ ನಟ ಜಗ್ಗೇಶ್​-ಪರಿಮಳಾ ಮದುವೆಗೆ ಈಗ 37 ವರ್ಷ!
ಜಗ್ಗೇಶ್​-ಪರಿಮಳಾ ಮದುವೆ ಫೋಟೋ
ಮದನ್​ ಕುಮಾರ್​
| Edited By: |

Updated on:Mar 22, 2021 | 1:34 PM

Share

ನಟ ಜಗ್ಗೇಶ್​ ಅವರ ರಿಯಲ್​ ಲೈಫ್​ ಘಟನೆಗಳು ಯಾವ ಸಿನಿಮಾ ಕಥೆಗೂ ಕಮ್ಮಿ ಇಲ್ಲ. ಅದರಲ್ಲೂ ಪರಿಮಳಾ ಜೊತೆಗಿನ ಅವರ ಲವ್​ಸ್ಟೋರಿ ಸಖತ್​ ಸಿನಿಮೀಯವಾಗಿದೆ. ಅದು ಸುಪ್ರೀಂ ಕೋರ್ಟ್​ ಮೆಟ್ಟಿಲು ಕೂಡ ಏರಿತ್ತು. ಅದೇನೇ ಇದ್ದರೂ ಜಗ್ಗೇಶ್​ ಮತ್ತು ಪರಿಮಳಾ ದಾಂಪತ್ಯ ಜೀವನಕ್ಕೆ ಈಗ 37ರ ವಸಂತ. ವಿವಾಹ ವಾರ್ಷಿಕೋತ್ಸವ ಆಚರಿಸಿಕೊಂಡ ಈ ದಂಪತಿಗೆ ಎಲ್ಲರೂ ಶುಭಾಶಯ ತಿಳಿಸುತ್ತಿದ್ದಾರೆ.

ಜಗ್ಗೇಶ್​ ಮತ್ತು ಪರಿಮಳಾ ಅವರದ್ದು ಲವ್​ ಮ್ಯಾರೇಜ್​. ತುಂಬ ಚಿಕ್ಕ ವಯಸ್ಸಿನಲ್ಲಿಯೇ ಜಗ್ಗೇಶ್ ಪ್ರೀತಿಯಲ್ಲಿ ಬಿದ್ದಿದ್ದರು. ಆಗ ಪರಿಮಳಾ ಅವರಿಗೆ ಕೇವಲ 14 ವರ್ಷ. ಜಗ್ಗೇಶ್​ ಅವರಿಗೆ 19ರ ಪ್ರಾಯ. ಕೆಲವೇ ಕೆಲವು ಸ್ನೇಹಿತರ ಸಮ್ಮುಖದಲ್ಲಿ 1984ರ ಮಾ.22ರಂದು ಜಗ್ಗೇಶ್​ ಮತ್ತು ಪರಿಮಳಾ ರಿಜಿಸ್ಟರ್​ ಮ್ಯಾರೇಜ್​ ಆದರು.

ಮದುವೆಯಾದ ಮೂರನೇ ದಿನವೇ ಪರಿಮಳಾ ತಂದೆ ಬಂದು ಪರಿಮಳಾರನ್ನು ಕರೆದುಕೊಂಡು ಹೋದರು. ನಂತರ ಒಂದೂವರೆ ವರ್ಷ ಇಬ್ಬರ ನಡುವೆ ಸಂಪರ್ಕ ಇರಲಿಲ್ಲ. ಬಳಿಕ ಬೆಂಗಳೂರಿನಿಂದ ಮದ್ರಾಸ್​ಗೆ ತೆರಳಿದ ಜಗ್ಗೇಶ್​ ಅವರು ಮಡದಿಯನ್ನು ಕರೆದುಕೊಂದು ಬಂದೇ ಬಿಟ್ಟರು. ಆಗ ‘ಚಿತ್ರನಟನಿಂದ ಹುಡುಗಿಯ ಕಿಡ್ನಾಪ್​’ ಎಂದು ಸುದ್ದಿ ಪ್ರಕಟ ಆಯಿತು. ಈ ಅಪಹರಣದ ಕಿರಿಕ್​ ಸುಪ್ರೀಂ ಕೋರ್ಟ್​ ಮೆಟ್ಟಿಲೇರಿತ್ತು! ಆದರೆ ಅಲ್ಲಿಯೂ ಅವರಿಬ್ಬರ ಪ್ರೀತಿಗೆ ಜಯ ಸಿಕ್ಕಿತು.

ಮದುವೆ ನಂತರವೂ ಜಗ್ಗೇಶ್​ ಮತ್ತು ಪರಿಮಳಾ ತುಂಬ ಕಷ್ಟದ ಜೀವನ ನಡೆಸಿದರು. ಚಿತ್ರರಂಗದಲ್ಲಿ ಜಗ್ಗೇಶ್​ ಯಶಸ್ಸು ಕಾಣುತ್ತಿದ್ದಂತೆಯೇ ಅವರ ಆರ್ಥಿಕ ಪರಿಸ್ಥಿತಿ ಸುಧಾರಿಸಿತು. ಅನೇಕ ಏಳು-ಬೀಳುಗಳನ್ನು ದಾಟಿಕೊಂಡು ಈ ಜೋಡಿ ಇಲ್ಲಿಯವರೆಗೂ ಬಂದಿದೆ. 37ನೇ ವಿವಾಹ ವಾರ್ಷಿಕೋತ್ಸವದ ಸಂದರ್ಭದಲ್ಲಿ ಕೆಲವು ಫೋಟೋಗಳನ್ನು ಜಗ್ಗೇಶ್​ ಹಂಚಿಕೊಂಡಿದ್ದಾರೆ.

‘ಋಣಾನುಬಂಧಂರೂಪೇಣಾಂ ಪಶುಪತ್ನಿಸುತಆಲಯ. Marrages are made in heaven. ಪ್ರೀತಿಸುವುದು ತಪ್ಪಲ್ಲಾ, ಪ್ರೀತಿಸಿದ ಮೇಲೆ ಬಾಳದಿರುವುದು ತಪ್ಪು. 22/3/1984 ನಾನು ಪರಿಮಳನಿಗೆ ತಾಳಿ ಕಟ್ಟಿ ಇಂದಿಗೆ 37 ವರ್ಷ! ನನ್ನ ಎಲ್ಲಾ ಗುಣ ಕಷ್ಟ ಸಹಿಸಿ ಹೆಜ್ಜೆ ಹಾಕಿ ಬದುಕಿದ ಮಡದಿಗೆ ಧನ್ಯವಾದ ಸಣ್ಣ ಪದ. ನನ್ನ ಎರಡನೇ ತಾಯಿ ಸ್ಥಾನ ನೀಡಿರುವೆ’ ಎಂದು ಜಗ್ಗೇಶ್​ ಟ್ವೀಟ್​ ಮಾಡಿದ್ದಾರೆ.

ಇದನ್ನೂ ಓದಿ: ಜಗ್ಗೇಶ್​ ನಟನಾಗುತ್ತಾರೆ ಎಂದು ಭವಿಷ್ಯ ನುಡಿದಿದ್ದ ಗುರುಗಳ ನಿಧನ! ಕಂಬನಿ ಮಿಡಿದ ನವರಸ ನಾಯಕ

ನವರಸ ನಾಯಕ ಜಗ್ಗೇಶ್​ಗೆ ಹ್ಯಾಪಿ ಬರ್ತ್​​ಡೇ ಹೇಳಿದ ಚಾಲೆಂಜಿಂಗ್​ ಸ್ಟಾರ್​ ದರ್ಶನ್!

Published On - 1:06 pm, Mon, 22 March 21

Follow Us
Madan Kumar
Madan Kumar

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು