Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮತ್ತೆ ಸಿನಿಮಾ ಕೆಲಸಗಳಲ್ಲಿ ಬ್ಯುಸಿಯಾದ ಸಂತೋಷ್​ ಆನಂದ್​ರಾಮ್​, ಜಗ್ಗೇಶ್​; ಮೈಸೂರಿನಲ್ಲಿ ಶೂಟಿಂಗ್​

‘ಕೆಜಿಎಫ್​ ಚಾಫ್ಟರ್​ 2’ನಂತಹ ಬಿಗ್​ ಬಜೆಟ್​ ಸಿನಿಮಾಗಳನ್ನು ನಿರ್ಮಾಣ ಮಾಡುತ್ತಿರುವ ವಿಜಯ್​ ಕಿರಗಂದೂರು ಅವರು ಇತ್ತೀಚೆಗೆ ‘ರಾಘವೇಂದ್ರ ಸ್ಟೋರ್ಸ್’ ಸಿನಿಮಾ ಘೋಷಣೆ ಮಾಡಿದ್ದರು.

ಮತ್ತೆ ಸಿನಿಮಾ ಕೆಲಸಗಳಲ್ಲಿ ಬ್ಯುಸಿಯಾದ ಸಂತೋಷ್​ ಆನಂದ್​ರಾಮ್​, ಜಗ್ಗೇಶ್​; ಮೈಸೂರಿನಲ್ಲಿ ಶೂಟಿಂಗ್​
ಸಂತೋಷ್​ ಆನಂದ್​ರಾಮ್​-ಜಗ್ಗೇಶ್
Follow us
TV9 Web
| Updated By: ರಾಜೇಶ್ ದುಗ್ಗುಮನೆ

Updated on: Dec 19, 2021 | 4:41 PM

ಪುನೀತ್​ ರಾಜ್​ಕುಮಾರ್​ (Puneeth Rajkumar) ಅವರನ್ನು ಕಳೆದುಕೊಂಡು ಚಿತ್ರರಂಗ ಸಾಕಷ್ಟು ನಷ್ಟ ಅನುಭವಿಸಿದೆ. ಅವರನ್ನು ಕಳೆದುಕೊಂಡ ನೋವನ್ನು ಸಾಕಷ್ಟು ಜನರಿಗೆ ಈಗಲೂ ಅರಗಿಸಿಕೊಳ್ಳೋಕೆ ಆಗುತ್ತಿಲ್ಲ. ಅವರು ನಿಧನ ಹೊಂದಿ ಎರಡು ತಿಂಗಳಾಗುತ್ತಾ ಬಂದಿದೆ. ಅವರಿಲ್ಲ ಎಂಬುದನ್ನು ಒಪ್ಪಿಕೊಂಡು ಮುಂದೆ ಸಾಗಲೇಬೇಕಾದ ಅನಿವಾರ್ಯತೆ ಇದೆ. ಈ ಕಾರಣಕ್ಕೆ ನಿಧಾನವಾಗಿ ಸಿನಿಮಾ ಕೆಲಸಗಳಿಗೆ ಮರಳುತ್ತಿದ್ದಾರೆ. ಪುನೀತ್​ಗೆ ಆಪ್ತರಾಗಿದ್ದ ಸಂತೋಷ್​ ಆನಂದ್​ರಾಮ್​ (h Santhosh Ananddram ) ಹಾಗೂ ಜಗ್ಗೇಶ್ (Jaggesh)​ ಸಿನಿಮಾ ಕೆಲಸಗಳಿಗೆ ಮರಳಿದ್ದಾರೆ.

‘ಕೆಜಿಎಫ್​ ಚಾಫ್ಟರ್​ 2’ನಂತಹ ಬಿಗ್​ ಬಜೆಟ್​ ಸಿನಿಮಾಗಳನ್ನು ನಿರ್ಮಾಣ ಮಾಡುತ್ತಿರುವ ವಿಜಯ್​ ಕಿರಗಂದೂರು ಅವರು ಇತ್ತೀಚೆಗೆ ‘ರಾಘವೇಂದ್ರ ಸ್ಟೋರ್ಸ್’ ಸಿನಿಮಾ ಘೋಷಣೆ ಮಾಡಿದ್ದರು. ಜಗ್ಗೇಶ್​ ಮುಖ್ಯಭೂಮಿಕೆಯಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ಸಂತೋಷ್​ ಆನಂದ್​ರಾಮ್​ ನಿರ್ದೇಶನ ಸಿನಿಮಾಗಿದೆ. ಸೆಪ್ಟೆಂಬರ್​ ತಿಂಗಳಲ್ಲಿ ಸಿನಿಮಾ ಘೋಷಣೆ ಆಗಿತ್ತು. ಈಗ ಚಿತ್ರೀಕರಣ ಮೈಸೂರು ಭಾಗದಲ್ಲಿ ನಡೆಯುತ್ತಿದೆ.

ಮೈಸೂರಿನಲ್ಲಿ ಸಿನಿಮಾದ ಸೆಟ್‌ನಲ್ಲಿರುವ ವಿಡಿಯೋವನ್ನು ಜಗ್ಗೇಶ್ ತಮ್ಮ ಸೋಶಿಯಲ್​ ಮೀಡಿಯಾದಲ್ಲಿ ಹಂಚಿಕೊಂಡಿದ್ದರು. ಮೈಸೂರಿನ ಹಳೆಯ ಚೌಲ್ಟ್ರಿಯಲ್ಲಿ ಚಿತ್ರೀಕರಣ ಪ್ರಗತಿಯಲ್ಲಿದೆ. ‘ರತ್ನನ್ ಪ್ರಪಂಚದ’ ಪ್ರಮುಖ ಭಾಗಗಳನ್ನು ಇಲ್ಲಿಯೇ ಶೂಟ್​ ಮಾಡಲಾಗಿತ್ತು. ಜಗ್ಗೇಶ್​ ಬಾಣಸಿಗನಾಗಿ ಕಾಣಿಸಿಕೊಳ್ಳುತ್ತಿದ್ದಾರೆ. ಈ ಸಿನಿಮಾದಲ್ಲಿ ಜಗ್ಗೇಶ್​ ಭಿನ್ನ ಗೆಟಪ್​ ಪ್ರೇಕ್ಷಕರಿಗೆ ಇಷ್ಟವಾಗಿದೆ.

ಜಗ್ಗೇಶ್ ಅವರು ‘ರಂಗನಾಯಕ’ ಚಿತ್ರದ ಶೂಟಿಂಗ್ ಕೂಡ ಆರಂಭಿಸಿದ್ದಾರೆ. ‘ಎದ್ದೇಳು ಮಂಜುನಾಥ’ ಮತ್ತು ‘ಮಠ’ ನಂತರ ಮೂರನೇ ಬಾರಿಗೆ ನಿರ್ದೇಶಕ ಗುರುಪ್ರಸಾದ್ ಹಾಗೂ ಜಗ್ಗೇಶ್​ ಒಂದಾಗಿದ್ದಾರೆ. ಎರಡು ಪಾರ್ಟ್​​ಗಳಲ್ಲಿ ಬಿಡುಗಡೆಯಾಗಲಿರುವ ‘ತೋತಾಪುರಿ’ ಚಿತ್ರದಲ್ಲೂ ನವರಸ ನಾಯಕ ಬ್ಯುಸಿ ಇದ್ದಾರೆ. ಈ ಚಿತ್ರಕ್ಕೆ ಅದಿತಿ ಪ್ರಭುದೇವ ನಾಯಕಿ. ಸಂತೋಷ್​ ಆನಂದ್​ರಾಮ್​ ಅವರು ಪುನೀತ್​ ಜತೆ ಇನ್ನೊಂದು  ಸಿನಿಮಾ ಮಾಡಬೇಕಿತ್ತು. ಆದರೆ, ಅದಕ್ಕೂ ಮೊದಲೇ ಅವರು ನಿಧನ ಹೊಂದಿದ್ದಾರೆ.

ಈಗ ಹೊಂಬಾಳೆ ಫಿಲ್ಮ್ಸ್​ ಬೇರೆಬೇರೆ ನಟರ ಜತೆ ಸಿನಿಮಾ ಮಾಡುತ್ತಿದೆ. ತೆಲುಗಿನ ‘ಸಲಾರ್​’ ಸಿನಿಮಾ ನಿರ್ಮಾಣ ಜವಾಬ್ದಾರಿ ಹೊಂಬಾಳೆ ಹೊತ್ತುಕೊಂಡಿದೆ. ಈ ಸಿನಿಮಾದಲ್ಲಿ ಪ್ರಭಾಸ್​ ಹೀರೋ. ಶ್ರೀಮುರಳಿ ನಟನೆಯ ‘ಭಗೀರ’, ಪುನೀತ್​ ನಟನೆಯ ‘ದ್ವಿತ್ವ’, ರಕ್ಷಿತ್​ ಶೆಟ್ಟಿ ನಿರ್ದೇಶನದ ‘ರಿಚರ್ಡ್​ ಆ್ಯಂಟೋನಿ’ ರಿಷಬ್​ ಶೆಟ್ಟಿ ಆ್ಯಕ್ಷನ್​ ಕಟ್​ ಹೇಳುತ್ತಿರುವ ‘ಕಾಂತಾರ’ ಸಿನಿಮಾಗೆ ಹೊಂಬಾಳೆ ಫಿಲ್ಮ್ಸ್ ಹಣ ಹೂಡುತ್ತಿದೆ.

ಇದನ್ನೂ ಓದಿ: ಪುನೀತ್​ ಕುರಿತು ಸಿದ್ಧವಾಗಲಿದೆ ಬಯೋಪಿಕ್​? ನಿರ್ದೇಶಕ ಸಂತೋಷ್​ ಆನಂದ್​ರಾಮ್​ ನೀಡಿದ್ರು ಸೂಚನೆ

Raghavendra Rajkumar: ಡಾ.ರಾಜ್ ಪುತ್ಥಳಿ ಪಕ್ಕದಲ್ಲೇ ಪುನೀತ್ ಪುತ್ಥಳಿ: ರಾಘವೇಂದ್ರ ರಾಜ್​ಕುಮಾರ್ ಮಾಹಿತಿ

ಸುಲಭ ಕ್ಯಾಚ್ ಕೈಚೆಲ್ಲಿದರೂ ಔಟಾದ ಆರ್​ಸಿಬಿ ಬ್ಯಾಟರ್
ಸುಲಭ ಕ್ಯಾಚ್ ಕೈಚೆಲ್ಲಿದರೂ ಔಟಾದ ಆರ್​ಸಿಬಿ ಬ್ಯಾಟರ್
ಮತ್ತೆ ಮಾರ್ದನಿಸಿದ ಲಿಂಗಾಯತ ಪ್ರತ್ಯೇಕ ಧರ್ಮದ ಕೂಗು
ಮತ್ತೆ ಮಾರ್ದನಿಸಿದ ಲಿಂಗಾಯತ ಪ್ರತ್ಯೇಕ ಧರ್ಮದ ಕೂಗು
ಮಹಾಕುಂಭಮೇಳ ಹೇಗೆ ಅಯೋಜಿಸಲಾಯಿತು ಅಂತ ವಿಚಾರಿಸಿದ್ದೀನಿ: ಶಿವಕುಮಾರ್
ಮಹಾಕುಂಭಮೇಳ ಹೇಗೆ ಅಯೋಜಿಸಲಾಯಿತು ಅಂತ ವಿಚಾರಿಸಿದ್ದೀನಿ: ಶಿವಕುಮಾರ್
ಬಜೆಟ್‌ನಲ್ಲಿ ಮಾವು, ರೇಷ್ಮೆ ಬೆಳೆಗೆ ಆದ್ಯತೆ ನೀಡಿ; ಸಂಸದ ಮಂಜುನಾಥ್ ಸಲಹೆ
ಬಜೆಟ್‌ನಲ್ಲಿ ಮಾವು, ರೇಷ್ಮೆ ಬೆಳೆಗೆ ಆದ್ಯತೆ ನೀಡಿ; ಸಂಸದ ಮಂಜುನಾಥ್ ಸಲಹೆ
ಡಿಕೆ ಶಿವಕುಮಾರ್​ ಕೂಡ ಏಕನಾಥ ಶಿಂಧೆ ರೀತಿ ಆಗಬಹುದು: ಆರ್​ ಅಶೋಕ್
ಡಿಕೆ ಶಿವಕುಮಾರ್​ ಕೂಡ ಏಕನಾಥ ಶಿಂಧೆ ರೀತಿ ಆಗಬಹುದು: ಆರ್​ ಅಶೋಕ್
ಸದ್ಗುರು ವಾಸುದೇವ್ ಖುದ್ದಾಗಿ ಮನೆಗೆ ಬಂದು ಆಹ್ವಾನಿಸಿದ್ದರು: ಶಿವಕುಮಾರ್
ಸದ್ಗುರು ವಾಸುದೇವ್ ಖುದ್ದಾಗಿ ಮನೆಗೆ ಬಂದು ಆಹ್ವಾನಿಸಿದ್ದರು: ಶಿವಕುಮಾರ್
ಮಹಿಳಾ ಪಿಡಿಒಗೆ ಚಪ್ಪಲಿಯಿಂದ ಹೊಡೆದ ಗ್ರಾಮ ಪಂಚಾಯಿತಿ ಸದಸ್ಯೆ
ಮಹಿಳಾ ಪಿಡಿಒಗೆ ಚಪ್ಪಲಿಯಿಂದ ಹೊಡೆದ ಗ್ರಾಮ ಪಂಚಾಯಿತಿ ಸದಸ್ಯೆ
ಲೇಡಿ ಕಾನ್​ಸ್ಟೇಬಲ್​ರನ್ನು ಸಾರ್ವಜನಿಕವಾಗಿ ನಿಂದಿಸಿದ ಹೆಡ್ ಕಾನ್​ಸ್ಟೇಬಲ್
ಲೇಡಿ ಕಾನ್​ಸ್ಟೇಬಲ್​ರನ್ನು ಸಾರ್ವಜನಿಕವಾಗಿ ನಿಂದಿಸಿದ ಹೆಡ್ ಕಾನ್​ಸ್ಟೇಬಲ್
ವಿಧಾನಸೌಧ ಆವರಣದಲ್ಲಿ ಮೊದಲ ಬಾರಿಗೆ ಪುಸ್ತಕ ಮೇಳ ಆಯೋಜನೆ
ವಿಧಾನಸೌಧ ಆವರಣದಲ್ಲಿ ಮೊದಲ ಬಾರಿಗೆ ಪುಸ್ತಕ ಮೇಳ ಆಯೋಜನೆ
ಲಕ್ಷ್ಮಿ ಹೆಬ್ಬಾಳ್ಕರ್​ಗೆ ಭವತಿ ಭಿಕ್ಷಾಂ ದೇಹಿ ಎಂದ ವಿದ್ಯಾರ್ಥಿಗಳು !
ಲಕ್ಷ್ಮಿ ಹೆಬ್ಬಾಳ್ಕರ್​ಗೆ ಭವತಿ ಭಿಕ್ಷಾಂ ದೇಹಿ ಎಂದ ವಿದ್ಯಾರ್ಥಿಗಳು !