AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮತ್ತೆ ಸಿನಿಮಾ ಕೆಲಸಗಳಲ್ಲಿ ಬ್ಯುಸಿಯಾದ ಸಂತೋಷ್​ ಆನಂದ್​ರಾಮ್​, ಜಗ್ಗೇಶ್​; ಮೈಸೂರಿನಲ್ಲಿ ಶೂಟಿಂಗ್​

‘ಕೆಜಿಎಫ್​ ಚಾಫ್ಟರ್​ 2’ನಂತಹ ಬಿಗ್​ ಬಜೆಟ್​ ಸಿನಿಮಾಗಳನ್ನು ನಿರ್ಮಾಣ ಮಾಡುತ್ತಿರುವ ವಿಜಯ್​ ಕಿರಗಂದೂರು ಅವರು ಇತ್ತೀಚೆಗೆ ‘ರಾಘವೇಂದ್ರ ಸ್ಟೋರ್ಸ್’ ಸಿನಿಮಾ ಘೋಷಣೆ ಮಾಡಿದ್ದರು.

ಮತ್ತೆ ಸಿನಿಮಾ ಕೆಲಸಗಳಲ್ಲಿ ಬ್ಯುಸಿಯಾದ ಸಂತೋಷ್​ ಆನಂದ್​ರಾಮ್​, ಜಗ್ಗೇಶ್​; ಮೈಸೂರಿನಲ್ಲಿ ಶೂಟಿಂಗ್​
ಸಂತೋಷ್​ ಆನಂದ್​ರಾಮ್​-ಜಗ್ಗೇಶ್
TV9 Web
| Edited By: |

Updated on: Dec 19, 2021 | 4:41 PM

Share

ಪುನೀತ್​ ರಾಜ್​ಕುಮಾರ್​ (Puneeth Rajkumar) ಅವರನ್ನು ಕಳೆದುಕೊಂಡು ಚಿತ್ರರಂಗ ಸಾಕಷ್ಟು ನಷ್ಟ ಅನುಭವಿಸಿದೆ. ಅವರನ್ನು ಕಳೆದುಕೊಂಡ ನೋವನ್ನು ಸಾಕಷ್ಟು ಜನರಿಗೆ ಈಗಲೂ ಅರಗಿಸಿಕೊಳ್ಳೋಕೆ ಆಗುತ್ತಿಲ್ಲ. ಅವರು ನಿಧನ ಹೊಂದಿ ಎರಡು ತಿಂಗಳಾಗುತ್ತಾ ಬಂದಿದೆ. ಅವರಿಲ್ಲ ಎಂಬುದನ್ನು ಒಪ್ಪಿಕೊಂಡು ಮುಂದೆ ಸಾಗಲೇಬೇಕಾದ ಅನಿವಾರ್ಯತೆ ಇದೆ. ಈ ಕಾರಣಕ್ಕೆ ನಿಧಾನವಾಗಿ ಸಿನಿಮಾ ಕೆಲಸಗಳಿಗೆ ಮರಳುತ್ತಿದ್ದಾರೆ. ಪುನೀತ್​ಗೆ ಆಪ್ತರಾಗಿದ್ದ ಸಂತೋಷ್​ ಆನಂದ್​ರಾಮ್​ (h Santhosh Ananddram ) ಹಾಗೂ ಜಗ್ಗೇಶ್ (Jaggesh)​ ಸಿನಿಮಾ ಕೆಲಸಗಳಿಗೆ ಮರಳಿದ್ದಾರೆ.

‘ಕೆಜಿಎಫ್​ ಚಾಫ್ಟರ್​ 2’ನಂತಹ ಬಿಗ್​ ಬಜೆಟ್​ ಸಿನಿಮಾಗಳನ್ನು ನಿರ್ಮಾಣ ಮಾಡುತ್ತಿರುವ ವಿಜಯ್​ ಕಿರಗಂದೂರು ಅವರು ಇತ್ತೀಚೆಗೆ ‘ರಾಘವೇಂದ್ರ ಸ್ಟೋರ್ಸ್’ ಸಿನಿಮಾ ಘೋಷಣೆ ಮಾಡಿದ್ದರು. ಜಗ್ಗೇಶ್​ ಮುಖ್ಯಭೂಮಿಕೆಯಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ಸಂತೋಷ್​ ಆನಂದ್​ರಾಮ್​ ನಿರ್ದೇಶನ ಸಿನಿಮಾಗಿದೆ. ಸೆಪ್ಟೆಂಬರ್​ ತಿಂಗಳಲ್ಲಿ ಸಿನಿಮಾ ಘೋಷಣೆ ಆಗಿತ್ತು. ಈಗ ಚಿತ್ರೀಕರಣ ಮೈಸೂರು ಭಾಗದಲ್ಲಿ ನಡೆಯುತ್ತಿದೆ.

ಮೈಸೂರಿನಲ್ಲಿ ಸಿನಿಮಾದ ಸೆಟ್‌ನಲ್ಲಿರುವ ವಿಡಿಯೋವನ್ನು ಜಗ್ಗೇಶ್ ತಮ್ಮ ಸೋಶಿಯಲ್​ ಮೀಡಿಯಾದಲ್ಲಿ ಹಂಚಿಕೊಂಡಿದ್ದರು. ಮೈಸೂರಿನ ಹಳೆಯ ಚೌಲ್ಟ್ರಿಯಲ್ಲಿ ಚಿತ್ರೀಕರಣ ಪ್ರಗತಿಯಲ್ಲಿದೆ. ‘ರತ್ನನ್ ಪ್ರಪಂಚದ’ ಪ್ರಮುಖ ಭಾಗಗಳನ್ನು ಇಲ್ಲಿಯೇ ಶೂಟ್​ ಮಾಡಲಾಗಿತ್ತು. ಜಗ್ಗೇಶ್​ ಬಾಣಸಿಗನಾಗಿ ಕಾಣಿಸಿಕೊಳ್ಳುತ್ತಿದ್ದಾರೆ. ಈ ಸಿನಿಮಾದಲ್ಲಿ ಜಗ್ಗೇಶ್​ ಭಿನ್ನ ಗೆಟಪ್​ ಪ್ರೇಕ್ಷಕರಿಗೆ ಇಷ್ಟವಾಗಿದೆ.

ಜಗ್ಗೇಶ್ ಅವರು ‘ರಂಗನಾಯಕ’ ಚಿತ್ರದ ಶೂಟಿಂಗ್ ಕೂಡ ಆರಂಭಿಸಿದ್ದಾರೆ. ‘ಎದ್ದೇಳು ಮಂಜುನಾಥ’ ಮತ್ತು ‘ಮಠ’ ನಂತರ ಮೂರನೇ ಬಾರಿಗೆ ನಿರ್ದೇಶಕ ಗುರುಪ್ರಸಾದ್ ಹಾಗೂ ಜಗ್ಗೇಶ್​ ಒಂದಾಗಿದ್ದಾರೆ. ಎರಡು ಪಾರ್ಟ್​​ಗಳಲ್ಲಿ ಬಿಡುಗಡೆಯಾಗಲಿರುವ ‘ತೋತಾಪುರಿ’ ಚಿತ್ರದಲ್ಲೂ ನವರಸ ನಾಯಕ ಬ್ಯುಸಿ ಇದ್ದಾರೆ. ಈ ಚಿತ್ರಕ್ಕೆ ಅದಿತಿ ಪ್ರಭುದೇವ ನಾಯಕಿ. ಸಂತೋಷ್​ ಆನಂದ್​ರಾಮ್​ ಅವರು ಪುನೀತ್​ ಜತೆ ಇನ್ನೊಂದು  ಸಿನಿಮಾ ಮಾಡಬೇಕಿತ್ತು. ಆದರೆ, ಅದಕ್ಕೂ ಮೊದಲೇ ಅವರು ನಿಧನ ಹೊಂದಿದ್ದಾರೆ.

ಈಗ ಹೊಂಬಾಳೆ ಫಿಲ್ಮ್ಸ್​ ಬೇರೆಬೇರೆ ನಟರ ಜತೆ ಸಿನಿಮಾ ಮಾಡುತ್ತಿದೆ. ತೆಲುಗಿನ ‘ಸಲಾರ್​’ ಸಿನಿಮಾ ನಿರ್ಮಾಣ ಜವಾಬ್ದಾರಿ ಹೊಂಬಾಳೆ ಹೊತ್ತುಕೊಂಡಿದೆ. ಈ ಸಿನಿಮಾದಲ್ಲಿ ಪ್ರಭಾಸ್​ ಹೀರೋ. ಶ್ರೀಮುರಳಿ ನಟನೆಯ ‘ಭಗೀರ’, ಪುನೀತ್​ ನಟನೆಯ ‘ದ್ವಿತ್ವ’, ರಕ್ಷಿತ್​ ಶೆಟ್ಟಿ ನಿರ್ದೇಶನದ ‘ರಿಚರ್ಡ್​ ಆ್ಯಂಟೋನಿ’ ರಿಷಬ್​ ಶೆಟ್ಟಿ ಆ್ಯಕ್ಷನ್​ ಕಟ್​ ಹೇಳುತ್ತಿರುವ ‘ಕಾಂತಾರ’ ಸಿನಿಮಾಗೆ ಹೊಂಬಾಳೆ ಫಿಲ್ಮ್ಸ್ ಹಣ ಹೂಡುತ್ತಿದೆ.

ಇದನ್ನೂ ಓದಿ: ಪುನೀತ್​ ಕುರಿತು ಸಿದ್ಧವಾಗಲಿದೆ ಬಯೋಪಿಕ್​? ನಿರ್ದೇಶಕ ಸಂತೋಷ್​ ಆನಂದ್​ರಾಮ್​ ನೀಡಿದ್ರು ಸೂಚನೆ

Raghavendra Rajkumar: ಡಾ.ರಾಜ್ ಪುತ್ಥಳಿ ಪಕ್ಕದಲ್ಲೇ ಪುನೀತ್ ಪುತ್ಥಳಿ: ರಾಘವೇಂದ್ರ ರಾಜ್​ಕುಮಾರ್ ಮಾಹಿತಿ

‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ
ಅರಣ್ಯ ಇಲಾಖೆ ಸಿಬ್ಬಂದಿಯನ್ನೇ ಅಟ್ಟಾಡಿಸಿದ ಆನೆ, ಭಯಾನಕ ವಿಡಿಯೋ ನೋಡಿ
ಅರಣ್ಯ ಇಲಾಖೆ ಸಿಬ್ಬಂದಿಯನ್ನೇ ಅಟ್ಟಾಡಿಸಿದ ಆನೆ, ಭಯಾನಕ ವಿಡಿಯೋ ನೋಡಿ