AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದುಡ್ಡಿಲ್ಲದಾಗ ರವಿಚಂದ್ರನ್​ ಬಳಿ 200 ರೂಪಾಯಿ ಕೇಳಿದ್ದ ಜಗ್ಗೇಶ್​; ಕ್ರೇಜಿಸ್ಟಾರ್​ ಉತ್ತರ ಹೇಗಿತ್ತು?

‘ಮಠ’ ಗುರುಪ್ರಸಾದ್​ ಹಾಗೂ ಜಗ್ಗೇಶ್​ ಕಾಂಬಿನೇಷನ್​ನಲ್ಲಿ ಈಗ ‘ರಂಗನಾಯಕ’ ಸಿನಿಮಾ ಮೂಡಿ ಬರುತ್ತಿದೆ. ಈ ಚಿತ್ರದ ಬಗ್ಗೆ ಮಾತನಾಡೋಕೆ ಇಂದು ಸುದ್ದಿಗೋಷ್ಠಿ ಕರೆಯಲಾಗಿತ್ತು. ಈ ವೇಳೆ ಹಳೆ ದಿನಗಳನ್ನು ಜಗ್ಗೇಶ್​ ನೆನಪಿಸಿಕೊಂಡಿದ್ದಾರೆ.

ದುಡ್ಡಿಲ್ಲದಾಗ ರವಿಚಂದ್ರನ್​ ಬಳಿ 200 ರೂಪಾಯಿ ಕೇಳಿದ್ದ ಜಗ್ಗೇಶ್​; ಕ್ರೇಜಿಸ್ಟಾರ್​ ಉತ್ತರ ಹೇಗಿತ್ತು?
ದುಡ್ಡಿಲ್ಲದಾಗ ರವಿದ್ರನ್​ ಬಳಿ 200 ರೂಪಾಯಿ ಕೇಳಿದ್ದ ಜಗ್ಗೇಶ್​; ಕ್ರೇಜಿಸ್ಟಾರ್​ ಉತ್ತರ ಹೇಗಿತ್ತು?
TV9 Web
| Edited By: |

Updated on: Aug 19, 2021 | 5:35 PM

Share

ನಟ ಜಗ್ಗೇಶ್​ ಅವರು ತುಂಬಾನೇ ಕಷ್ಟದಿಂದ ಚಿತ್ರರಂಗಕ್ಕೆ ಬಂದವರು. ಚಿತ್ರರಂಗದ ಆರಂಭದ ದಿನಗಳಲ್ಲೂ ಅವರು ಕಷ್ಟಗಳನ್ನು ಎದುರಿಸಿದ್ದರು. ಈಗ ಅವರ ಕೈಯಲ್ಲಿ  ಸಾಕಷ್ಟು ಸಿನಿಮಾಗಳಿವೆ. ‘ಮಠ’ ಗುರುಪ್ರಸಾದ್​ ಹಾಗೂ ಜಗ್ಗೇಶ್​ ಕಾಂಬಿನೇಷನ್​ನಲ್ಲಿ ಈಗ ‘ರಂಗನಾಯಕ’ ಸಿನಿಮಾ ಮೂಡಿ ಬರುತ್ತಿದೆ. ಈ ಚಿತ್ರದ ಬಗ್ಗೆ ಮಾತನಾಡೋಕೆ ಇಂದು ಸುದ್ದಿಗೋಷ್ಠಿ ಕರೆಯಲಾಗಿತ್ತು. ಈ ವೇಳೆ ಹಳೆ ದಿನಗಳನ್ನು ಜಗ್ಗೇಶ್​ ನೆನಪಿಸಿಕೊಂಡಿದ್ದಾರೆ.

‘ನಾನು ಮತ್ತೆ ಸೆಟ್​ಗೆ ಮರಳಿದ್ದೇನೆ. ಈ ಖುಷಿ ಎರಡು ವರ್ಷದಿಂದ ನಿಂತು ಹೋಗಿತ್ತು. ಬ್ಯೂಟಿಫುಲ್​ ಇಂಡಸ್ಟ್ರಿಯಲ್ಲಿ ನಾವಿದೀವಿ ಎನ್ನುವ ಹೆಮ್ಮೆ ನನಗೆ ಇದೆ. ಆದರೆ, ಈ ಕೊರೊನಾದಿಂದ ತಾಂತ್ರಿಕ ವರ್ಗದವರಿಗೆ ಎಷ್ಟು ತೊಂದರೆ ಆಗಿರಬಹುದು ಎಂದು ಯೋಚಿಸುತ್ತಿದ್ದೆ. ಇಂದು ನಾವು ಯಾಂತ್ರಿಕ ಬದುಕಲ್ಲಿ ಬದುಕ್ತಾ ಇದೀವಿ. ಅಂದು ತುಂಬಾ ಭಾವುಕರಾಗುತ್ತಿದ್ದೆವು. ಅಂದು ಸೆಟ್​ಗೆ ಬಂದರೆ ಅದೆಷ್ಟೇ ದೊಡ್ಡ ನಟ ಇರಲಿ ಎಲ್ಲರನ್ನೂ ಮಾತನಾಡಿಸುತ್ತಿದ್ದರು. ಸೆಟ್​ನಲ್ಲಿ ಯಾರಿಗಾದರೂ ಸಂಭಾವನೆ ಸಿಕ್ಕಿಲ್ಲ ಎಂದರೆ ಕೆಲ ನಟರು ನಿರ್ಮಾಪಕರಿಗೆ ನೇರವಾಗಿ ಕ್ಲಾಸ್​ ತೆಗೆದುಕೊಳ್ಳುತ್ತಿದ್ದರು’ ಎಂದಿದ್ದಾರೆ ಜಗ್ಗೇಶ್​.

‘ಗಣೇಶ ಹಬ್ಬ ಬಂದಿತ್ತು. ಮನೆಯಲ್ಲಿ ಹಣ ಇದೆಯೇ ಎಂದು ಹೆಂಡತಿ ಕೇಳಿದೆ. ಹೆಂಡತಿ ಇಲ್ಲ ಎಂದಳು. ಈ ವೇಳೆ 200 ರೂಪಾಯಿ ಕೊಡಿ ಎಂದು ರವಿಚಂದ್ರನ್​ಗೆ ಕೇಳಿದೆ. ಆಗ ಅವರು ಐದುನೂರು ಕೊಟ್ಟರು’ ಎಂದು ಹಳೆಯ ದಿನಗಳನ್ನು ಅವರು ನೆನೆದಿದ್ದಾರೆ.

‘ಕೊವಿಡ್​ ನಿಧಾನವಾಗಿ ಕಡಿಮೆ ಆಗುತ್ತಿದೆ. ಈ ಬಗ್ಗೆ ಮಾತನಾಡಿರುವ ಅವರು, ಈಗ ಕಷ್ಟಕಾಲ ಮುಗಿದು ಸಿನಿಮಾ ಶುರುವಾಗಿದೆ. ಈ ವರ್ಷ ನಾಲ್ಕು ಸಿನಿಮಾ ಸಿಕ್ತು. ಅದು ದೊಡ್ಡ ಬಜೆಟ್​ ಚಿತ್ರ ಅನ್ನೋದು ಖುಷಿಯ ವಿಚಾರ’ ಎಂದರು ಜಗ್ಗೇಶ್​.

‘ಮಠ’, ‘ಎದ್ದೇಳು ಮಂಜುನಾಥ’ದಂಥ ಹಿಟ್​ ಸಿನಿಮಾಗಳನ್ನು ನೀಡಿದ ಖ್ಯಾತಿ ಗುರುಪ್ರಸಾದ್​ ಅವರಿಗೆ ಸಲ್ಲುತ್ತದೆ. ಜಗ್ಗೇಶ್​ ಹಾಗೂ ಅವರ ಕಾಂಬಿನೇಷನ್​ನಲ್ಲಿ ಬಂದ ಈ ಸಿನಿಮಾಗಳು ದೊಡ್ಡ ಮಟ್ಟದಲ್ಲಿ ಹಿಟ್​ ಆಗಿದ್ದವು. ಈಗ ಈ ಕಾಂಬಿನೇಷನ್​ನಲ್ಲಿ ‘ರಂಗನಾಯಕ’ ಸಿನಿಮಾ ಮೂಡಿ ಬರುತ್ತಿದೆ.

ಇದನ್ನೂ ಓದಿ: Jaggesh: ಶೂಟಿಂಗ್​ ವೇಳೆ ಜಗ್ಗೇಶ್​ ಮೈಮೇಲಿತ್ತು ನಿಜವಾದ ಹಾವು; ಭಯದಲ್ಲಿ ಬಾಯಿಗೆ ಬಂದಂತೆ ಡೈಲಾಗ್​ ಹೇಳಿದ್ದ ನವರಸ ನಾಯಕ

Follow Us
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ