AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದುಡ್ಡಿಲ್ಲದಾಗ ರವಿಚಂದ್ರನ್​ ಬಳಿ 200 ರೂಪಾಯಿ ಕೇಳಿದ್ದ ಜಗ್ಗೇಶ್​; ಕ್ರೇಜಿಸ್ಟಾರ್​ ಉತ್ತರ ಹೇಗಿತ್ತು?

‘ಮಠ’ ಗುರುಪ್ರಸಾದ್​ ಹಾಗೂ ಜಗ್ಗೇಶ್​ ಕಾಂಬಿನೇಷನ್​ನಲ್ಲಿ ಈಗ ‘ರಂಗನಾಯಕ’ ಸಿನಿಮಾ ಮೂಡಿ ಬರುತ್ತಿದೆ. ಈ ಚಿತ್ರದ ಬಗ್ಗೆ ಮಾತನಾಡೋಕೆ ಇಂದು ಸುದ್ದಿಗೋಷ್ಠಿ ಕರೆಯಲಾಗಿತ್ತು. ಈ ವೇಳೆ ಹಳೆ ದಿನಗಳನ್ನು ಜಗ್ಗೇಶ್​ ನೆನಪಿಸಿಕೊಂಡಿದ್ದಾರೆ.

ದುಡ್ಡಿಲ್ಲದಾಗ ರವಿಚಂದ್ರನ್​ ಬಳಿ 200 ರೂಪಾಯಿ ಕೇಳಿದ್ದ ಜಗ್ಗೇಶ್​; ಕ್ರೇಜಿಸ್ಟಾರ್​ ಉತ್ತರ ಹೇಗಿತ್ತು?
ದುಡ್ಡಿಲ್ಲದಾಗ ರವಿದ್ರನ್​ ಬಳಿ 200 ರೂಪಾಯಿ ಕೇಳಿದ್ದ ಜಗ್ಗೇಶ್​; ಕ್ರೇಜಿಸ್ಟಾರ್​ ಉತ್ತರ ಹೇಗಿತ್ತು?
TV9 Web
| Updated By: ರಾಜೇಶ್ ದುಗ್ಗುಮನೆ|

Updated on: Aug 19, 2021 | 5:35 PM

Share

ನಟ ಜಗ್ಗೇಶ್​ ಅವರು ತುಂಬಾನೇ ಕಷ್ಟದಿಂದ ಚಿತ್ರರಂಗಕ್ಕೆ ಬಂದವರು. ಚಿತ್ರರಂಗದ ಆರಂಭದ ದಿನಗಳಲ್ಲೂ ಅವರು ಕಷ್ಟಗಳನ್ನು ಎದುರಿಸಿದ್ದರು. ಈಗ ಅವರ ಕೈಯಲ್ಲಿ  ಸಾಕಷ್ಟು ಸಿನಿಮಾಗಳಿವೆ. ‘ಮಠ’ ಗುರುಪ್ರಸಾದ್​ ಹಾಗೂ ಜಗ್ಗೇಶ್​ ಕಾಂಬಿನೇಷನ್​ನಲ್ಲಿ ಈಗ ‘ರಂಗನಾಯಕ’ ಸಿನಿಮಾ ಮೂಡಿ ಬರುತ್ತಿದೆ. ಈ ಚಿತ್ರದ ಬಗ್ಗೆ ಮಾತನಾಡೋಕೆ ಇಂದು ಸುದ್ದಿಗೋಷ್ಠಿ ಕರೆಯಲಾಗಿತ್ತು. ಈ ವೇಳೆ ಹಳೆ ದಿನಗಳನ್ನು ಜಗ್ಗೇಶ್​ ನೆನಪಿಸಿಕೊಂಡಿದ್ದಾರೆ.

‘ನಾನು ಮತ್ತೆ ಸೆಟ್​ಗೆ ಮರಳಿದ್ದೇನೆ. ಈ ಖುಷಿ ಎರಡು ವರ್ಷದಿಂದ ನಿಂತು ಹೋಗಿತ್ತು. ಬ್ಯೂಟಿಫುಲ್​ ಇಂಡಸ್ಟ್ರಿಯಲ್ಲಿ ನಾವಿದೀವಿ ಎನ್ನುವ ಹೆಮ್ಮೆ ನನಗೆ ಇದೆ. ಆದರೆ, ಈ ಕೊರೊನಾದಿಂದ ತಾಂತ್ರಿಕ ವರ್ಗದವರಿಗೆ ಎಷ್ಟು ತೊಂದರೆ ಆಗಿರಬಹುದು ಎಂದು ಯೋಚಿಸುತ್ತಿದ್ದೆ. ಇಂದು ನಾವು ಯಾಂತ್ರಿಕ ಬದುಕಲ್ಲಿ ಬದುಕ್ತಾ ಇದೀವಿ. ಅಂದು ತುಂಬಾ ಭಾವುಕರಾಗುತ್ತಿದ್ದೆವು. ಅಂದು ಸೆಟ್​ಗೆ ಬಂದರೆ ಅದೆಷ್ಟೇ ದೊಡ್ಡ ನಟ ಇರಲಿ ಎಲ್ಲರನ್ನೂ ಮಾತನಾಡಿಸುತ್ತಿದ್ದರು. ಸೆಟ್​ನಲ್ಲಿ ಯಾರಿಗಾದರೂ ಸಂಭಾವನೆ ಸಿಕ್ಕಿಲ್ಲ ಎಂದರೆ ಕೆಲ ನಟರು ನಿರ್ಮಾಪಕರಿಗೆ ನೇರವಾಗಿ ಕ್ಲಾಸ್​ ತೆಗೆದುಕೊಳ್ಳುತ್ತಿದ್ದರು’ ಎಂದಿದ್ದಾರೆ ಜಗ್ಗೇಶ್​.

‘ಗಣೇಶ ಹಬ್ಬ ಬಂದಿತ್ತು. ಮನೆಯಲ್ಲಿ ಹಣ ಇದೆಯೇ ಎಂದು ಹೆಂಡತಿ ಕೇಳಿದೆ. ಹೆಂಡತಿ ಇಲ್ಲ ಎಂದಳು. ಈ ವೇಳೆ 200 ರೂಪಾಯಿ ಕೊಡಿ ಎಂದು ರವಿಚಂದ್ರನ್​ಗೆ ಕೇಳಿದೆ. ಆಗ ಅವರು ಐದುನೂರು ಕೊಟ್ಟರು’ ಎಂದು ಹಳೆಯ ದಿನಗಳನ್ನು ಅವರು ನೆನೆದಿದ್ದಾರೆ.

‘ಕೊವಿಡ್​ ನಿಧಾನವಾಗಿ ಕಡಿಮೆ ಆಗುತ್ತಿದೆ. ಈ ಬಗ್ಗೆ ಮಾತನಾಡಿರುವ ಅವರು, ಈಗ ಕಷ್ಟಕಾಲ ಮುಗಿದು ಸಿನಿಮಾ ಶುರುವಾಗಿದೆ. ಈ ವರ್ಷ ನಾಲ್ಕು ಸಿನಿಮಾ ಸಿಕ್ತು. ಅದು ದೊಡ್ಡ ಬಜೆಟ್​ ಚಿತ್ರ ಅನ್ನೋದು ಖುಷಿಯ ವಿಚಾರ’ ಎಂದರು ಜಗ್ಗೇಶ್​.

‘ಮಠ’, ‘ಎದ್ದೇಳು ಮಂಜುನಾಥ’ದಂಥ ಹಿಟ್​ ಸಿನಿಮಾಗಳನ್ನು ನೀಡಿದ ಖ್ಯಾತಿ ಗುರುಪ್ರಸಾದ್​ ಅವರಿಗೆ ಸಲ್ಲುತ್ತದೆ. ಜಗ್ಗೇಶ್​ ಹಾಗೂ ಅವರ ಕಾಂಬಿನೇಷನ್​ನಲ್ಲಿ ಬಂದ ಈ ಸಿನಿಮಾಗಳು ದೊಡ್ಡ ಮಟ್ಟದಲ್ಲಿ ಹಿಟ್​ ಆಗಿದ್ದವು. ಈಗ ಈ ಕಾಂಬಿನೇಷನ್​ನಲ್ಲಿ ‘ರಂಗನಾಯಕ’ ಸಿನಿಮಾ ಮೂಡಿ ಬರುತ್ತಿದೆ.

ಇದನ್ನೂ ಓದಿ: Jaggesh: ಶೂಟಿಂಗ್​ ವೇಳೆ ಜಗ್ಗೇಶ್​ ಮೈಮೇಲಿತ್ತು ನಿಜವಾದ ಹಾವು; ಭಯದಲ್ಲಿ ಬಾಯಿಗೆ ಬಂದಂತೆ ಡೈಲಾಗ್​ ಹೇಳಿದ್ದ ನವರಸ ನಾಯಕ

ಪಿಕ್​ಅಪ್ ವ್ಯಾನ್ ಮೇಲೆ ಬಿದ್ದ ನಿರ್ಮಾಣ ಹಂತದ ಮೇಲ್ಸೇತುವೆಯ ಗ್ರಿಡರ್
ಪಿಕ್​ಅಪ್ ವ್ಯಾನ್ ಮೇಲೆ ಬಿದ್ದ ನಿರ್ಮಾಣ ಹಂತದ ಮೇಲ್ಸೇತುವೆಯ ಗ್ರಿಡರ್
ದಾರಿಯಲ್ಲಿ ಸಿಕ್ಕ ಹಣ ರೈತನಿಗೆ ಹಿಂದಿರುಗಿಸಿ ಪ್ರಾಮಾಣಿಕತೆ ಮೆರೆದ ಪೊಲೀಸ್
ದಾರಿಯಲ್ಲಿ ಸಿಕ್ಕ ಹಣ ರೈತನಿಗೆ ಹಿಂದಿರುಗಿಸಿ ಪ್ರಾಮಾಣಿಕತೆ ಮೆರೆದ ಪೊಲೀಸ್
ಜಾಲಹಳ್ಳಿಯಲ್ಲಿ ಫ್ಲೈಓವರ್ ಪಿಲ್ಲರ್ ಎಡೆಯಲ್ಲಿ ಆರಾಮವಾಗಿ ಮಲಗಿದ ವ್ಯಕ್ತಿ!
ಜಾಲಹಳ್ಳಿಯಲ್ಲಿ ಫ್ಲೈಓವರ್ ಪಿಲ್ಲರ್ ಎಡೆಯಲ್ಲಿ ಆರಾಮವಾಗಿ ಮಲಗಿದ ವ್ಯಕ್ತಿ!
ಬೆತ್ ಮೂನಿಯ ಭರ್ಜರಿ ಸೆಂಚುರಿಯೊಂದಿಗೆ ಗೆದ್ದು ಬೀಗಿದ ಸ್ಕಾಚರ್ಸ್
ಬೆತ್ ಮೂನಿಯ ಭರ್ಜರಿ ಸೆಂಚುರಿಯೊಂದಿಗೆ ಗೆದ್ದು ಬೀಗಿದ ಸ್ಕಾಚರ್ಸ್
ಗಿಲ್ಲಿ-ಕಾವ್ಯಾ ನಡುವೆ ಇನ್ನೂ ಮುಗಿದಿಲ್ಲ ಹುಸಿಮುನಿಸು
ಗಿಲ್ಲಿ-ಕಾವ್ಯಾ ನಡುವೆ ಇನ್ನೂ ಮುಗಿದಿಲ್ಲ ಹುಸಿಮುನಿಸು
ದಾಂಪತ್ಯದಲ್ಲಿ ಈ ಐದು ವಿಷಯಗಳನ್ನು ಗಂಡನಿಗೆ ಹೆಂಡತಿ ಹೇಳಲೇಬಾರದು!
ದಾಂಪತ್ಯದಲ್ಲಿ ಈ ಐದು ವಿಷಯಗಳನ್ನು ಗಂಡನಿಗೆ ಹೆಂಡತಿ ಹೇಳಲೇಬಾರದು!
ಗುರುಗಳ ಲಹರಿ ಇರುವ ಈ ದಿನ ಹೇಗಿರಲಿದೆ ನಿಮ್ಮ ಭವಿಷ್ಯ? ಇಲ್ಲಿದೆ ವಿವರಣೆ
ಗುರುಗಳ ಲಹರಿ ಇರುವ ಈ ದಿನ ಹೇಗಿರಲಿದೆ ನಿಮ್ಮ ಭವಿಷ್ಯ? ಇಲ್ಲಿದೆ ವಿವರಣೆ
ದೇವಸ್ಥಾನದೊಳಗೆ ದೇವರೆದುರು ಕುಳಿತಿದ್ದಾಗಲೇ ಪ್ರಾಣ ಬಿಟ್ಟ ಭಕ್ತ!
ದೇವಸ್ಥಾನದೊಳಗೆ ದೇವರೆದುರು ಕುಳಿತಿದ್ದಾಗಲೇ ಪ್ರಾಣ ಬಿಟ್ಟ ಭಕ್ತ!
ದೆಹಲಿ ಸ್ಫೋಟದ ಶೀಘ್ರ ತನಿಖೆಗೆ ನಿರ್ಧಾರ; ಸಚಿವ ಅಶ್ವಿನಿ ವೈಷ್ಣವ್
ದೆಹಲಿ ಸ್ಫೋಟದ ಶೀಘ್ರ ತನಿಖೆಗೆ ನಿರ್ಧಾರ; ಸಚಿವ ಅಶ್ವಿನಿ ವೈಷ್ಣವ್
ಕಾರು ಡಿಕ್ಕಿ ಹೊಡೆದ ರಭಸಕ್ಕೆ ಗಿರಕಿ ಹೊಡೆದ ಆಟೋ: ಎದೆ ಝಲ್​ ಎನ್ನುವ ದೃಶ್ಯ
ಕಾರು ಡಿಕ್ಕಿ ಹೊಡೆದ ರಭಸಕ್ಕೆ ಗಿರಕಿ ಹೊಡೆದ ಆಟೋ: ಎದೆ ಝಲ್​ ಎನ್ನುವ ದೃಶ್ಯ