Jaggesh Birthday: 60ನೇ ವಸಂತಕ್ಕೆ ಕಾಲಿಟ್ಟ ಜಗ್ಗೇಶ್​; ಈ ಪ್ರಾಯದಲ್ಲೂ ಯುವಜನತೆಗೆ ಸ್ಫೂರ್ತಿ ನೀಡುವ ‘ನವರಸ ನಾಯಕ’

Happy Birthday Jaggesh: ‘ನವರಸ ನಾಯಕ’ ಜಗ್ಗೇಶ್​ ಅವರಿಗೆ ಇಂದು (ಮಾ.17) ಜನ್ಮದಿನದ ಸಂಭ್ರಮ. ಅವರು ಸಾಗಿಬಂದ ಹಾದಿಯನ್ನು ಮೆಲುಕು ಹಾಕುತ್ತ ಅಭಿಮಾನಿಗಳು ಬರ್ತ್​ಡೇ ವಿಶ್​ ಮಾಡುತ್ತಿದ್ದಾರೆ.

Jaggesh Birthday: 60ನೇ ವಸಂತಕ್ಕೆ ಕಾಲಿಟ್ಟ ಜಗ್ಗೇಶ್​; ಈ ಪ್ರಾಯದಲ್ಲೂ ಯುವಜನತೆಗೆ ಸ್ಫೂರ್ತಿ ನೀಡುವ ‘ನವರಸ ನಾಯಕ’
ಜಗ್ಗೇಶ್
Follow us
| Updated By: ರಾಜೇಶ್ ದುಗ್ಗುಮನೆ

Updated on:Mar 17, 2023 | 6:52 AM

ಚಂದನವನದ ಖ್ಯಾತ ನಟ ಜಗ್ಗೇಶ್​ (Jaggesh) ಅವರಿಗೆ ಅಪಾರ ಅಭಿಮಾನಿಗಳಿದ್ದಾರೆ. ಬಣ್ಣದ ಲೋಕದಲ್ಲಿ ಅವರು ಮಾಡಿದ ಸಾಧನೆ ಅನೇಕರಿಗೆ ಮಾದರಿ. ಏಕಾಏಕಿ ಜಗ್ಗೇಶ್​ ಸ್ಟಾರ್​ ಆದವರಲ್ಲ. ಒಂದೊಂದೇ ಮೆಟ್ಟಿಲುಗಳನ್ನು ಏರಿ ಅವರು ಸಾಧಕನ ಪಟ್ಟ ಅಲಂಕರಿಸಿದರು. ಇಂದು (ಮಾರ್ಚ್​ 17) ಜಗ್ಗೇಶ್​ ಜನ್ಮದಿನ. 60ನೇ ವರ್ಷಕ್ಕೆ ಅವರು ಕಾಲಿರಿಸಿದ್ದಾರೆ. ‘ನವರಸ ನಾಯಕ’ನ ಹುಟ್ಟುಹಬ್ಬದ (Jaggesh Birthday) ಪ್ರಯುಕ್ತ ಅಭಿಮಾನಿಗಳು, ಆಪ್ತರು, ಸೆಲೆಬ್ರಿಟಿಗಳು ಶುಭಕೋರುತ್ತಿದ್ದಾರೆ. ರಾಜಕೀಯದಲ್ಲೂ ಸಕ್ರಿಯವಾಗಿರುವ ಜಗ್ಗೇಶ್​ ಅವರು ಅನೇಕ ವಿಚಾರಗಳಲ್ಲಿ ಮಾದರಿ ಆಗಿದ್ದಾರೆ. ಅವರು ಬೆಳೆದು ಬಂದ ಹಾದಿಯೇ ಅನೇಕರಿಗೆ ಸ್ಫೂರ್ತಿ.

ಕನ್ನಡ ಚಿತ್ರರಂಗದಲ್ಲಿ ಜಗ್ಗೇಶ್​ ಬಹುಬೇಡಿಕೆಯ ನಟ. ಇಂದಿಗೂ ಅವರು ಅದೇ ಚಾರ್ಮ್​ ಉಳಿಸಿಕೊಂಡಿದ್ದಾರೆ. 60ರ ಪ್ರಾಯದಲ್ಲೂ ಕ್ರಿಯಾಶೀಲವಾದ ಜೀವನ ಶೈಲಿಯನ್ನು ಪಾಲಿಸುತ್ತಿದ್ದಾರೆ. ಯುವ ಜನತೆಯನ್ನು ಪ್ರೇರೇಪಿಸುವ ಅನೇಕ ಕಾರ್ಯಗಳು ಅವರಿಂದ ಆಗುತ್ತಿದೆ. ಸೋಶಿಯಲ್​ ಮೀಡಿಯಾದಲ್ಲಿ ಆ್ಯಕ್ಟೀವ್​ ಆಗಿರುವ ಜಗ್ಗೇಶ್​ ಅವರು ತಮ್ಮ ಬದುಕಿನ ಅನೇಕ ಅನುಭವಗಳನ್ನು ಆಗಾಗ ಹಂಚಿಕೊಳ್ಳುತ್ತಾರೆ.

ಇದನ್ನೂ ಓದಿ: Jaggesh: ಕುಟುಂಬ ಸಮೇತರಾಗಿ ಪ್ರಧಾನಿ ಮೋದಿ ಭೇಟಿ ಮಾಡಿದ ಜಗ್ಗೇಶ್​; ಇಲ್ಲಿದೆ ಫೋಟೋ ಗ್ಯಾಲರಿ

ಇದನ್ನೂ ಓದಿ
Image
Puneetha Parva: ‘ಪುನೀತ ಪರ್ವ’ಕ್ಕೆ ಜಗ್ಗೇಶ್​ ಯಾಕೆ ಬರಲಿಲ್ಲ? ‘ನವರಸ ನಾಯಕ’ ನೀಡಿದ ಕಾರಣ ಇಲ್ಲಿದೆ..
Image
Kantara: ‘ಇದು ರಿಷಬ್​ ಮಾಡಿದ ಚಿತ್ರ ಅಲ್ಲ, ದೇವರೇ ಮಾಡ್ಸಿದ್ದು’; ವಿದೇಶದಲ್ಲಿ ‘ಕಾಂತಾರ’ ನೋಡಿ ಜಗ್ಗೇಶ್​ ಪ್ರತಿಕ್ರಿಯೆ
Image
Jaggesh: ‘ಆ ಮಠ ನನ್ನ ಜಾತಿ ನೋಡಿಲ್ಲ, ಶೂದ್ರನಾದ ನನಗೆ ದೊಡ್ಡ ಸ್ಥಾನ ನೀಡಿದೆ’: ಜಗ್ಗೇಶ್​
Image
Totapuri: ಮಂತ್ರಿ ಮಾಲ್​ ಜಾಗ ಮೊದಲು ಏನಾಗಿತ್ತು? ಹಿಂದಿನ ಘಟನೆ ಮೆಲುಕು ಹಾಕಿದ ಜಗ್ಗೇಶ್​

ಚಿಕ್ಕ-ಪುಟ್ಟ ಪಾತ್ರಗಳನ್ನು ಮಾಡುತ್ತ ಚಿತ್ರರಂಗಕ್ಕೆ ಜಗ್ಗೇಶ್​ ಕಾಲಿಟ್ಟರು. ಒಮ್ಮೆಲೇ ಅವರಿಗೆ ಸ್ಟಾರ್​ ಪಟ್ಟ ಸಿಗಲಿಲ್ಲ. ತಮಗೆ ಸಿಕ್ಕ ಅವಕಾಶಗಳನ್ನು ಸಮರ್ಥವಾಗಿ ಬಳಸಿಕೊಂಡಿದ್ದರ ಫಲವಾಗಿ ಅವರಿಗೆ ಯಶಸ್ಸು ದಕ್ಕಿತು. ‘ತರ್ಲೆ ನನ್​ ಮಗ’ ಸಿನಿಮಾದಿಂದ ಹೀರೋ ಆದ ಅವರು ಕಾಮಿಡಿ ಪ್ರೇಕ್ಷಕರ ಫೇವರಿಟ್​ ನಟನಾಗಿ ಬೆಳೆದು ನಿಂತರು. ಪುನೀತ್​ ರಾಜ್​ಕುಮಾರ್​ ಕೂಡ ಜಗ್ಗೇಶ್​ಗೆ ಅಭಿಮಾನಿ ಆಗಿದ್ದರು. ಅದನ್ನು ಅಪ್ಪು ಅವರು ಅನೇಕ ವೇದಿಕೆಗಳಲ್ಲಿ ಹೇಳಿಕೊಂಡಿದ್ದುಂಟು.

ಇದನ್ನೂ ಓದಿ: Jaggesh: ತಮ್ಮದೇ ‘ರಾಘವೇಂದ್ರ ಸ್ಟೋರ್ಸ್’ ಸಿನಿಮಾ ವೀಕ್ಷಿಸಿ ವಿಮರ್ಶೆ ನೀಡಿದ ಜಗ್ಗೇಶ್

ತಮ್ಮದೇ ಆದಂತಹ ಮ್ಯಾನರಿಸಂ ಮೂಲಕ ಜಗ್ಗೇಶ್​ ಅವರು ವಿಶೇಷ ಛಾಪು ಮೂಡಿಸಿದರು. ಅದನ್ನು ಬೇರೆ ಯಾವ ನಟರೂ ಕಾಪಿ ಮಾಡಲು ಸಾಧ್ಯವಿಲ್ಲ. ಕಾಮಿಡಿ ಅಷ್ಟೇ ಅಲ್ಲದೇ, ಸೆಂಟಿಮೆಂಟ್​ ದೃಶ್ಯಗಳಲ್ಲೂ ಅಷ್ಟೇ ಸಮರ್ಥವಾಗಿ ಅಭಿನಯಿಸಬಲ್ಲಂತಹ ಕಲಾವಿದ ಅವರು. ಆರಂಭದ ದಿನಗಳಲ್ಲಿ ಜಗ್ಗೇಶ್​ ಎದುರಿಸಿದ ಅವಮಾನಗಳು ಒಂದೆರಡಲ್ಲ. ಅವೆಲ್ಲವನ್ನೂ ಮೆಟ್ಟಿನಿಂತ ಅವರು ಬಳಿಕ ಸೂಪರ್​ ಸ್ಟಾರ್​ ಆದರು.

ಇದನ್ನೂ ಓದಿ: Jaggesh: ಹಳೆಯ ದಿನಗಳ ನೆನೆಯುತ್ತಾ ಪತ್ನಿಯೊಟ್ಟಿಗೆ ರಾಯರ ದರ್ಶನಕ್ಕೆ ತೆರಳಿದ ಜಗ್ಗೇಶ್

ಕನ್ನಡದ ಬಗ್ಗೆ ಜಗ್ಗೇಶ್​ ಅವರಿಗೆ ಅಪಾರ ಪ್ರೀತಿ. ಆ ವಿಷಯದಲ್ಲೂ ಅವರು ಎಲ್ಲರಿಗೂ ಮಾದರಿ ಎಂದರೆ ತಪ್ಪಾಗಲಾರದು. ರಾಜ್ಯಸಭೆಯಲ್ಲಿ ಕನ್ನಡದಲ್ಲೇ ಮಾತನಾಡುವ ಮೂಲಕ ಅವರು ಗಮನ ಸೆಳೆಯುತ್ತಾರೆ. ಕನ್ನಡದಲ್ಲೇ ಟ್ವೀಟ್​ ಮಾಡಿ, ಇತರರಿಗೂ ಕನ್ನಡ ಬಳಕೆ ಬಗ್ಗೆ ಉತ್ತೇಜನ ನೀಡುತ್ತಾರೆ. ಈ ಕಾರಣದಿಂದ ಅವರನ್ನು ಅಪಾರ ಸಂಖ್ಯೆಯ ಅಭಿಮಾನಿಗಳು ಗೌರವಿಸುತ್ತಾರೆ.

ಸ್ಟಾರ್​ ನಟನಾಗಿ ಬೆಳೆದ ನಂತರವೂ ಜಗ್ಗೇಶ್​ಗೆ ಸವಾಲುಗಳು ತಪ್ಪಲಿಲ್ಲ. ಎಲ್ಲವನ್ನೂ ಅವರು ನಿಭಾಯಿಸಿಕೊಂಡು ಮುಂದೆ ಸಾಗುತ್ತಿದ್ದಾರೆ. ಅವರು ನಟಿಸಿರುವ ‘ರಾಘವೇಂದ್ರ ಸ್ಟೋರ್ಸ್​’ ಸಿನಿಮಾ ಬಿಡುಗಡೆಗೆ ಅಭಿಮಾನಿಗಳು ಕಾದಿದ್ದಾರೆ. ಇಂದು ಜಗ್ಗೇಶ್​ ಜನ್ಮದಿನದ ಪ್ರಯುಕ್ತ ಹೊಸ ಸಿನಿಮಾಗಳ ಬಗ್ಗೆ ಅಪ್​ಡೇಟ್​ ಸಿಗುವ ನಿರೀಕ್ಷೆ ಇದೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Published On - 6:50 am, Fri, 17 March 23

ಹಮಾಸ್ ಮುಖ್ಯಸ್ಥ ಯಾಹ್ಯಾ ಸಿನ್ವಾರ್ ಸಾವಿನ ಕ್ಷಣದ ವಿಡಿಯೋ ವೈರಲ್
ಹಮಾಸ್ ಮುಖ್ಯಸ್ಥ ಯಾಹ್ಯಾ ಸಿನ್ವಾರ್ ಸಾವಿನ ಕ್ಷಣದ ವಿಡಿಯೋ ವೈರಲ್
'ಡಿ. 9ರೊಳಗೆ ನಿರ್ಧಾರ ಪ್ರಕಟಿಸದಿದ್ದರೆ ಸುವರ್ಣ ಸೌಧಕ್ಕೆ ಮುತ್ತಿಗೆ'
'ಡಿ. 9ರೊಳಗೆ ನಿರ್ಧಾರ ಪ್ರಕಟಿಸದಿದ್ದರೆ ಸುವರ್ಣ ಸೌಧಕ್ಕೆ ಮುತ್ತಿಗೆ'
ತೆಲಂಗಾಣದಲ್ಲಿ ಮಿತಿ ಮೀರಿದ ಕೋಳಿಗಳ ಕಳ್ಳತನ
ತೆಲಂಗಾಣದಲ್ಲಿ ಮಿತಿ ಮೀರಿದ ಕೋಳಿಗಳ ಕಳ್ಳತನ
ದೀಪಕ್ ಅರಸ್​ಗೆ ನಿಜಕ್ಕೂ ಏನಾಗಿತ್ತು? ಮಾಹಿತಿ ನೀಡಿದ ಅಮೂಲ್ಯ ಪತಿ ಜಗದೀಶ್
ದೀಪಕ್ ಅರಸ್​ಗೆ ನಿಜಕ್ಕೂ ಏನಾಗಿತ್ತು? ಮಾಹಿತಿ ನೀಡಿದ ಅಮೂಲ್ಯ ಪತಿ ಜಗದೀಶ್
ಚನ್ನಪಟ್ಟಣಕ್ಕೆ ನಾನೇ ಅಭ್ಯರ್ಥಿ ಅಂತ 53ನೇ ಸಲ ಹೇಳಿದ ಡಿಕೆ ಶಿವಕುಮಾರ್!
ಚನ್ನಪಟ್ಟಣಕ್ಕೆ ನಾನೇ ಅಭ್ಯರ್ಥಿ ಅಂತ 53ನೇ ಸಲ ಹೇಳಿದ ಡಿಕೆ ಶಿವಕುಮಾರ್!
ಶಿಗ್ಗಾವಿ ಮತ್ತು ಸಂಡೂರು ಜೆಡಿಎಸ್ ಮುಖಂಡರ ಜೊತೆ ನಾಳೆ ಮಾತುಕತೆ: ನಿಖಿಲ್
ಶಿಗ್ಗಾವಿ ಮತ್ತು ಸಂಡೂರು ಜೆಡಿಎಸ್ ಮುಖಂಡರ ಜೊತೆ ನಾಳೆ ಮಾತುಕತೆ: ನಿಖಿಲ್
ದೀಪಕ್ ಅರಸ್ ನಿಧನ: ಅಂತಿಮ ದರ್ಶನ ಪಡೆದು ಒಡನಾಟ ನೆನಪಿಸಿಕೊಂಡ ತರುಣ್ ಸುಧೀರ್
ದೀಪಕ್ ಅರಸ್ ನಿಧನ: ಅಂತಿಮ ದರ್ಶನ ಪಡೆದು ಒಡನಾಟ ನೆನಪಿಸಿಕೊಂಡ ತರುಣ್ ಸುಧೀರ್
ಜೈಲಿಗೆ ಬಂದ ಸಹೋದರ, ಪತ್ನಿಯ ಭೇಟಿಗೆ ಬೇಸರದಲ್ಲೇ ಬಂದ ದರ್ಶನ್: ವಿಡಿಯೋ
ಜೈಲಿಗೆ ಬಂದ ಸಹೋದರ, ಪತ್ನಿಯ ಭೇಟಿಗೆ ಬೇಸರದಲ್ಲೇ ಬಂದ ದರ್ಶನ್: ವಿಡಿಯೋ
ಅತ್ಯಂತ ದುರದೃಷ್ಟಕರ ರೀತಿಯಲ್ಲಿ ಔಟಾದ ರೋಹಿತ್ ಶರ್ಮಾ
ಅತ್ಯಂತ ದುರದೃಷ್ಟಕರ ರೀತಿಯಲ್ಲಿ ಔಟಾದ ರೋಹಿತ್ ಶರ್ಮಾ
ಈಡಿಗೆ ಬೇಕಿರುವ ಕಾಗದಪತ್ರಗಳನ್ನು ಮುಡಾ ಅಧಿಕಾರಿಗಳು ನೀಡುತ್ತಾರೆ: ಸಚಿವ
ಈಡಿಗೆ ಬೇಕಿರುವ ಕಾಗದಪತ್ರಗಳನ್ನು ಮುಡಾ ಅಧಿಕಾರಿಗಳು ನೀಡುತ್ತಾರೆ: ಸಚಿವ