AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Jaggesh Birthday: 60ನೇ ವಸಂತಕ್ಕೆ ಕಾಲಿಟ್ಟ ಜಗ್ಗೇಶ್​; ಈ ಪ್ರಾಯದಲ್ಲೂ ಯುವಜನತೆಗೆ ಸ್ಫೂರ್ತಿ ನೀಡುವ ‘ನವರಸ ನಾಯಕ’

Happy Birthday Jaggesh: ‘ನವರಸ ನಾಯಕ’ ಜಗ್ಗೇಶ್​ ಅವರಿಗೆ ಇಂದು (ಮಾ.17) ಜನ್ಮದಿನದ ಸಂಭ್ರಮ. ಅವರು ಸಾಗಿಬಂದ ಹಾದಿಯನ್ನು ಮೆಲುಕು ಹಾಕುತ್ತ ಅಭಿಮಾನಿಗಳು ಬರ್ತ್​ಡೇ ವಿಶ್​ ಮಾಡುತ್ತಿದ್ದಾರೆ.

Jaggesh Birthday: 60ನೇ ವಸಂತಕ್ಕೆ ಕಾಲಿಟ್ಟ ಜಗ್ಗೇಶ್​; ಈ ಪ್ರಾಯದಲ್ಲೂ ಯುವಜನತೆಗೆ ಸ್ಫೂರ್ತಿ ನೀಡುವ ‘ನವರಸ ನಾಯಕ’
ಜಗ್ಗೇಶ್
ಮದನ್​ ಕುಮಾರ್​
| Edited By: |

Updated on:Mar 17, 2023 | 6:52 AM

Share

ಚಂದನವನದ ಖ್ಯಾತ ನಟ ಜಗ್ಗೇಶ್​ (Jaggesh) ಅವರಿಗೆ ಅಪಾರ ಅಭಿಮಾನಿಗಳಿದ್ದಾರೆ. ಬಣ್ಣದ ಲೋಕದಲ್ಲಿ ಅವರು ಮಾಡಿದ ಸಾಧನೆ ಅನೇಕರಿಗೆ ಮಾದರಿ. ಏಕಾಏಕಿ ಜಗ್ಗೇಶ್​ ಸ್ಟಾರ್​ ಆದವರಲ್ಲ. ಒಂದೊಂದೇ ಮೆಟ್ಟಿಲುಗಳನ್ನು ಏರಿ ಅವರು ಸಾಧಕನ ಪಟ್ಟ ಅಲಂಕರಿಸಿದರು. ಇಂದು (ಮಾರ್ಚ್​ 17) ಜಗ್ಗೇಶ್​ ಜನ್ಮದಿನ. 60ನೇ ವರ್ಷಕ್ಕೆ ಅವರು ಕಾಲಿರಿಸಿದ್ದಾರೆ. ‘ನವರಸ ನಾಯಕ’ನ ಹುಟ್ಟುಹಬ್ಬದ (Jaggesh Birthday) ಪ್ರಯುಕ್ತ ಅಭಿಮಾನಿಗಳು, ಆಪ್ತರು, ಸೆಲೆಬ್ರಿಟಿಗಳು ಶುಭಕೋರುತ್ತಿದ್ದಾರೆ. ರಾಜಕೀಯದಲ್ಲೂ ಸಕ್ರಿಯವಾಗಿರುವ ಜಗ್ಗೇಶ್​ ಅವರು ಅನೇಕ ವಿಚಾರಗಳಲ್ಲಿ ಮಾದರಿ ಆಗಿದ್ದಾರೆ. ಅವರು ಬೆಳೆದು ಬಂದ ಹಾದಿಯೇ ಅನೇಕರಿಗೆ ಸ್ಫೂರ್ತಿ.

ಕನ್ನಡ ಚಿತ್ರರಂಗದಲ್ಲಿ ಜಗ್ಗೇಶ್​ ಬಹುಬೇಡಿಕೆಯ ನಟ. ಇಂದಿಗೂ ಅವರು ಅದೇ ಚಾರ್ಮ್​ ಉಳಿಸಿಕೊಂಡಿದ್ದಾರೆ. 60ರ ಪ್ರಾಯದಲ್ಲೂ ಕ್ರಿಯಾಶೀಲವಾದ ಜೀವನ ಶೈಲಿಯನ್ನು ಪಾಲಿಸುತ್ತಿದ್ದಾರೆ. ಯುವ ಜನತೆಯನ್ನು ಪ್ರೇರೇಪಿಸುವ ಅನೇಕ ಕಾರ್ಯಗಳು ಅವರಿಂದ ಆಗುತ್ತಿದೆ. ಸೋಶಿಯಲ್​ ಮೀಡಿಯಾದಲ್ಲಿ ಆ್ಯಕ್ಟೀವ್​ ಆಗಿರುವ ಜಗ್ಗೇಶ್​ ಅವರು ತಮ್ಮ ಬದುಕಿನ ಅನೇಕ ಅನುಭವಗಳನ್ನು ಆಗಾಗ ಹಂಚಿಕೊಳ್ಳುತ್ತಾರೆ.

ಇದನ್ನೂ ಓದಿ: Jaggesh: ಕುಟುಂಬ ಸಮೇತರಾಗಿ ಪ್ರಧಾನಿ ಮೋದಿ ಭೇಟಿ ಮಾಡಿದ ಜಗ್ಗೇಶ್​; ಇಲ್ಲಿದೆ ಫೋಟೋ ಗ್ಯಾಲರಿ

ಇದನ್ನೂ ಓದಿ
Image
Puneetha Parva: ‘ಪುನೀತ ಪರ್ವ’ಕ್ಕೆ ಜಗ್ಗೇಶ್​ ಯಾಕೆ ಬರಲಿಲ್ಲ? ‘ನವರಸ ನಾಯಕ’ ನೀಡಿದ ಕಾರಣ ಇಲ್ಲಿದೆ..
Image
Kantara: ‘ಇದು ರಿಷಬ್​ ಮಾಡಿದ ಚಿತ್ರ ಅಲ್ಲ, ದೇವರೇ ಮಾಡ್ಸಿದ್ದು’; ವಿದೇಶದಲ್ಲಿ ‘ಕಾಂತಾರ’ ನೋಡಿ ಜಗ್ಗೇಶ್​ ಪ್ರತಿಕ್ರಿಯೆ
Image
Jaggesh: ‘ಆ ಮಠ ನನ್ನ ಜಾತಿ ನೋಡಿಲ್ಲ, ಶೂದ್ರನಾದ ನನಗೆ ದೊಡ್ಡ ಸ್ಥಾನ ನೀಡಿದೆ’: ಜಗ್ಗೇಶ್​
Image
Totapuri: ಮಂತ್ರಿ ಮಾಲ್​ ಜಾಗ ಮೊದಲು ಏನಾಗಿತ್ತು? ಹಿಂದಿನ ಘಟನೆ ಮೆಲುಕು ಹಾಕಿದ ಜಗ್ಗೇಶ್​

ಚಿಕ್ಕ-ಪುಟ್ಟ ಪಾತ್ರಗಳನ್ನು ಮಾಡುತ್ತ ಚಿತ್ರರಂಗಕ್ಕೆ ಜಗ್ಗೇಶ್​ ಕಾಲಿಟ್ಟರು. ಒಮ್ಮೆಲೇ ಅವರಿಗೆ ಸ್ಟಾರ್​ ಪಟ್ಟ ಸಿಗಲಿಲ್ಲ. ತಮಗೆ ಸಿಕ್ಕ ಅವಕಾಶಗಳನ್ನು ಸಮರ್ಥವಾಗಿ ಬಳಸಿಕೊಂಡಿದ್ದರ ಫಲವಾಗಿ ಅವರಿಗೆ ಯಶಸ್ಸು ದಕ್ಕಿತು. ‘ತರ್ಲೆ ನನ್​ ಮಗ’ ಸಿನಿಮಾದಿಂದ ಹೀರೋ ಆದ ಅವರು ಕಾಮಿಡಿ ಪ್ರೇಕ್ಷಕರ ಫೇವರಿಟ್​ ನಟನಾಗಿ ಬೆಳೆದು ನಿಂತರು. ಪುನೀತ್​ ರಾಜ್​ಕುಮಾರ್​ ಕೂಡ ಜಗ್ಗೇಶ್​ಗೆ ಅಭಿಮಾನಿ ಆಗಿದ್ದರು. ಅದನ್ನು ಅಪ್ಪು ಅವರು ಅನೇಕ ವೇದಿಕೆಗಳಲ್ಲಿ ಹೇಳಿಕೊಂಡಿದ್ದುಂಟು.

ಇದನ್ನೂ ಓದಿ: Jaggesh: ತಮ್ಮದೇ ‘ರಾಘವೇಂದ್ರ ಸ್ಟೋರ್ಸ್’ ಸಿನಿಮಾ ವೀಕ್ಷಿಸಿ ವಿಮರ್ಶೆ ನೀಡಿದ ಜಗ್ಗೇಶ್

ತಮ್ಮದೇ ಆದಂತಹ ಮ್ಯಾನರಿಸಂ ಮೂಲಕ ಜಗ್ಗೇಶ್​ ಅವರು ವಿಶೇಷ ಛಾಪು ಮೂಡಿಸಿದರು. ಅದನ್ನು ಬೇರೆ ಯಾವ ನಟರೂ ಕಾಪಿ ಮಾಡಲು ಸಾಧ್ಯವಿಲ್ಲ. ಕಾಮಿಡಿ ಅಷ್ಟೇ ಅಲ್ಲದೇ, ಸೆಂಟಿಮೆಂಟ್​ ದೃಶ್ಯಗಳಲ್ಲೂ ಅಷ್ಟೇ ಸಮರ್ಥವಾಗಿ ಅಭಿನಯಿಸಬಲ್ಲಂತಹ ಕಲಾವಿದ ಅವರು. ಆರಂಭದ ದಿನಗಳಲ್ಲಿ ಜಗ್ಗೇಶ್​ ಎದುರಿಸಿದ ಅವಮಾನಗಳು ಒಂದೆರಡಲ್ಲ. ಅವೆಲ್ಲವನ್ನೂ ಮೆಟ್ಟಿನಿಂತ ಅವರು ಬಳಿಕ ಸೂಪರ್​ ಸ್ಟಾರ್​ ಆದರು.

ಇದನ್ನೂ ಓದಿ: Jaggesh: ಹಳೆಯ ದಿನಗಳ ನೆನೆಯುತ್ತಾ ಪತ್ನಿಯೊಟ್ಟಿಗೆ ರಾಯರ ದರ್ಶನಕ್ಕೆ ತೆರಳಿದ ಜಗ್ಗೇಶ್

ಕನ್ನಡದ ಬಗ್ಗೆ ಜಗ್ಗೇಶ್​ ಅವರಿಗೆ ಅಪಾರ ಪ್ರೀತಿ. ಆ ವಿಷಯದಲ್ಲೂ ಅವರು ಎಲ್ಲರಿಗೂ ಮಾದರಿ ಎಂದರೆ ತಪ್ಪಾಗಲಾರದು. ರಾಜ್ಯಸಭೆಯಲ್ಲಿ ಕನ್ನಡದಲ್ಲೇ ಮಾತನಾಡುವ ಮೂಲಕ ಅವರು ಗಮನ ಸೆಳೆಯುತ್ತಾರೆ. ಕನ್ನಡದಲ್ಲೇ ಟ್ವೀಟ್​ ಮಾಡಿ, ಇತರರಿಗೂ ಕನ್ನಡ ಬಳಕೆ ಬಗ್ಗೆ ಉತ್ತೇಜನ ನೀಡುತ್ತಾರೆ. ಈ ಕಾರಣದಿಂದ ಅವರನ್ನು ಅಪಾರ ಸಂಖ್ಯೆಯ ಅಭಿಮಾನಿಗಳು ಗೌರವಿಸುತ್ತಾರೆ.

ಸ್ಟಾರ್​ ನಟನಾಗಿ ಬೆಳೆದ ನಂತರವೂ ಜಗ್ಗೇಶ್​ಗೆ ಸವಾಲುಗಳು ತಪ್ಪಲಿಲ್ಲ. ಎಲ್ಲವನ್ನೂ ಅವರು ನಿಭಾಯಿಸಿಕೊಂಡು ಮುಂದೆ ಸಾಗುತ್ತಿದ್ದಾರೆ. ಅವರು ನಟಿಸಿರುವ ‘ರಾಘವೇಂದ್ರ ಸ್ಟೋರ್ಸ್​’ ಸಿನಿಮಾ ಬಿಡುಗಡೆಗೆ ಅಭಿಮಾನಿಗಳು ಕಾದಿದ್ದಾರೆ. ಇಂದು ಜಗ್ಗೇಶ್​ ಜನ್ಮದಿನದ ಪ್ರಯುಕ್ತ ಹೊಸ ಸಿನಿಮಾಗಳ ಬಗ್ಗೆ ಅಪ್​ಡೇಟ್​ ಸಿಗುವ ನಿರೀಕ್ಷೆ ಇದೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Published On - 6:50 am, Fri, 17 March 23

Follow Us
Madan Kumar
Madan Kumar

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More
ಗಿನ್ನಿಸ್ ದಾಖಲೆ ಪುಟ ಸೇರಲಿದೆಯಾ ಕಾಂಗ್ರೆಸ್​​ ಸಾಧನಾ ಸಮಾವೇಶ?
ಗಿನ್ನಿಸ್ ದಾಖಲೆ ಪುಟ ಸೇರಲಿದೆಯಾ ಕಾಂಗ್ರೆಸ್​​ ಸಾಧನಾ ಸಮಾವೇಶ?
ಇಂಡಿಗೋ ವಿಮಾನದೊಳಗೆ ಎಸಿ, ಕರೆಂಟ್ ಇಲ್ಲದೆ ಒದ್ದಾಡಿದ ಪ್ರಯಾಣಿಕರು
ಇಂಡಿಗೋ ವಿಮಾನದೊಳಗೆ ಎಸಿ, ಕರೆಂಟ್ ಇಲ್ಲದೆ ಒದ್ದಾಡಿದ ಪ್ರಯಾಣಿಕರು
ನಾರ್ವೆಯಲ್ಲಿ ಭಾರತೀಯ ವಲಸಿಗರಿಂದ ಪ್ರಧಾನಿ ಮೋದಿಗೆ ಭವ್ಯ ಸ್ವಾಗತ
ನಾರ್ವೆಯಲ್ಲಿ ಭಾರತೀಯ ವಲಸಿಗರಿಂದ ಪ್ರಧಾನಿ ಮೋದಿಗೆ ಭವ್ಯ ಸ್ವಾಗತ
ಯೂತ್ ಕಾಂಗ್ರೆಸ್ ಕಾರ್ಯಕರ್ತರ ಮಧ್ಯೆ ಮಾರಾಮಾರಿ; ಬಿಂದುಗೌಡ ಹೇಳಿದ್ದಿಷ್ಟು
ಯೂತ್ ಕಾಂಗ್ರೆಸ್ ಕಾರ್ಯಕರ್ತರ ಮಧ್ಯೆ ಮಾರಾಮಾರಿ; ಬಿಂದುಗೌಡ ಹೇಳಿದ್ದಿಷ್ಟು
ರೈತರಿಗೆ ಗುಡ್​ ನ್ಯೂಸ್: ಜೂನ್ ಮೊದಲ ವಾರದಲ್ಲೇ ಮುಂಗಾರು ಮಳೆ
ರೈತರಿಗೆ ಗುಡ್​ ನ್ಯೂಸ್: ಜೂನ್ ಮೊದಲ ವಾರದಲ್ಲೇ ಮುಂಗಾರು ಮಳೆ
ರೈತರಿಗೂ ತಟ್ಟಿದ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ ಬಿಸಿ!
ರೈತರಿಗೂ ತಟ್ಟಿದ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ ಬಿಸಿ!
ಉದ್ಯಮಿಗೆ ಬೆದರಿಕೆ ಹಾಕಿ 10 ಲಕ್ಷ ರೂ. ಹಫ್ತಾಗೆ ಬೇಡಿಕೆ ಇಟ್ಟ ಲೇಡಿ ಡಾನ್!
ಉದ್ಯಮಿಗೆ ಬೆದರಿಕೆ ಹಾಕಿ 10 ಲಕ್ಷ ರೂ. ಹಫ್ತಾಗೆ ಬೇಡಿಕೆ ಇಟ್ಟ ಲೇಡಿ ಡಾನ್!
ಕೆಪಿಸಿಸಿ ಕಚೇರಿಯಲ್ಲಿಯೇ ಯೂತ್​​ ಕಾಂಗ್ರೆಸ್ ಕಾರ್ಯಕರ್ತರ ನಡುವೆ ಮಾರಾಮಾರಿ
ಕೆಪಿಸಿಸಿ ಕಚೇರಿಯಲ್ಲಿಯೇ ಯೂತ್​​ ಕಾಂಗ್ರೆಸ್ ಕಾರ್ಯಕರ್ತರ ನಡುವೆ ಮಾರಾಮಾರಿ
ಕಲಬುರ್ಗಿಯಲ್ಲಿ ಮೃಗಾಲಯ ಉದ್ಘಾಟಿಸಿದ ಸಚಿವ ಖಂಡ್ರೆ!
ಕಲಬುರ್ಗಿಯಲ್ಲಿ ಮೃಗಾಲಯ ಉದ್ಘಾಟಿಸಿದ ಸಚಿವ ಖಂಡ್ರೆ!
ಬರದಲ್ಲೂ ಬತ್ತಿಲ್ಲ ಈ ದೇಗುಲದ ಕೆರೆ: ಬಾದಾಮಿಯಲ್ಲೊಂದು ಅಚ್ಚರಿ!
ಬರದಲ್ಲೂ ಬತ್ತಿಲ್ಲ ಈ ದೇಗುಲದ ಕೆರೆ: ಬಾದಾಮಿಯಲ್ಲೊಂದು ಅಚ್ಚರಿ!