Jaggesh: ಪುನೀತ್ ಮೇಲಿನ ಪ್ರೀತಿ​ಗಾಗಿ ಒಂದು ಮಹತ್ವದ ನಿರ್ಧಾರ ತೆಗೆದುಕೊಂಡ ಜಗ್ಗೇಶ್

ಜಗ್ಗೇಶ್​ ಹಾಗೂ ಪುನೀತ್ ನಡುವೆ ಒಳ್ಳೆಯ ಬಾಂಧವ್ಯ ಇತ್ತು. ಜಗ್ಗೇಶ್​ ರಾಯರ ಭಕ್ತರು. ಪುನೀತ್​ ಅವರು ಜಗ್ಗೇಶ್​ ಜತೆ ಅನೇಕ ಬಾರಿ ಮಂತ್ರಾಲಯಕ್ಕೆ ತೆರಳಿದ್ದರು. ವೇದಿಕೆ ಮೇಲೆ ಸಿಕ್ಕರೆ ಇಬ್ಬರೂ ಪ್ರೀತಿಯಿಂದ ಮಾತನಾಡುತ್ತಿದ್ದರು.

Jaggesh: ಪುನೀತ್ ಮೇಲಿನ ಪ್ರೀತಿ​ಗಾಗಿ ಒಂದು ಮಹತ್ವದ ನಿರ್ಧಾರ ತೆಗೆದುಕೊಂಡ ಜಗ್ಗೇಶ್
ಜಗ್ಗೇಶ್​-ಪುನೀತ್
Follow us
| Updated By: ರಾಜೇಶ್ ದುಗ್ಗುಮನೆ

Updated on: Mar 09, 2022 | 2:10 PM

ಪುನೀತ್​ ರಾಜ್​ಕುಮಾರ್ (Puneeth Rajkumar) ಅವರನ್ನು ಕಳೆದುಕೊಂಡು ನಾಲ್ಕು ತಿಂಗಳು ಕಳೆದು ಹೋಗಿದೆ. ಅವರಿಲ್ಲ ಎನ್ನುವ ನೋವು ನಿತ್ಯವೂ ಕಾಡುತ್ತಿದೆ. ಅಭಿಮಾನಿಗಳು ಹಾಗೂ ಕುಟುಂಬದವರು ಈಗಲೂ ಪುನೀತ್​ ಅವರನ್ನು ನೆನೆದು ಕಣ್ಣೀರು ಹಾಕುತ್ತಿದ್ದಾರೆ. ಈ ನೋವು ಇಂದು ನಾಳೆಗೆ ಮಾಸುವುದಲ್ಲ. ಪುನೀತ್​ ನಿಧನ ಹೊಂದಿದ ನಂತರ ಅವರ ಮೇಲಿದ್ದ ಪ್ರೀತಿ ಹಾಗೂ ಗೌರವವನ್ನು ಅಭಿಮಾನಿಗಳು ನಾನಾ ರೀತಿಯಲ್ಲಿ ತೋರಿಸುತ್ತಿದ್ದಾರೆ. ಜಗ್ಗೇಶ್​ (Jaggesh) ಕೂಡ ಪುನೀತ್​ ವಿಚಾರದಲ್ಲಿ ಒಂದು ಮಹತ್ವದ ನಿರ್ಧಾರ ತೆಗೆದುಕೊಂಡಿದ್ದಾರೆ. ಈ ಬಗ್ಗೆ ಅವರು ಸೋಶಿಯಲ್​ ಮೀಡಿಯಾದಲ್ಲಿ ಹೇಳಿಕೊಂಡಿದ್ದಾರೆ.

ಜಗ್ಗೇಶ್​ ಹಾಗೂ ಪುನೀತ್ ನಡುವೆ ಒಳ್ಳೆಯ ಬಾಂಧವ್ಯ ಇತ್ತು. ಜಗ್ಗೇಶ್​ ರಾಯರ ಭಕ್ತರು. ಪುನೀತ್​ ಅವರು ಜಗ್ಗೇಶ್​ ಜತೆ ಅನೇಕ ಬಾರಿ ಮಂತ್ರಾಲಯಕ್ಕೆ ತೆರಳಿದ್ದರು. ವೇದಿಕೆ ಮೇಲೆ ಸಿಕ್ಕರೆ ಇಬ್ಬರೂ ಪ್ರೀತಿಯಿಂದ ಮಾತನಾಡುತ್ತಿದ್ದರು. ಅಪ್ಪು ಅವರನ್ನು ಕಳೆದುಕೊಂಡಿದ್ದು, ಜಗ್ಗೇಶ್​ಗೆ ತೀವ್ರ ನೋವು ತಂದಿದೆ. ಈ ಬಗ್ಗೆ ಅವರು ಸಾಕಷ್ಟು ಬಾರಿ ನೋವು ಹೊರ ಹಾಕಿದ್ದಾರೆ. ಈ ವರ್ಷ ಜಗ್ಗೇಶ್​ ತಮ್ಮ ಬರ್ತ್​​ಡೇ ಆಚರಿಸಿಕೊಳ್ಳದೆ ಇರಲು ನಿರ್ಧರಿಸಿದ್ದಾರೆ.

ಸಾಮಾನ್ಯವಾಗಿ ಸೆಲೆಬ್ರಿಟಿಗಳು ಪ್ರತಿ ವರ್ಷ ಜನ್ಮದಿನವನ್ನು ಅಭಿಮಾನಿಗಳ ಜತೆ ಆಚರಣೆ ಮಾಡುತ್ತಾರೆ. ಅವರಿಗೆ ಸೋಶಿಯಲ್​ ಮೀಡಿಯಾದಲ್ಲಿ ಶುಭಾಶಯಗಳ ಸುರಿಮಳೆ ಬರುತ್ತದೆ. ಮನೆ ಎದುರು ಬರುವ ಅಭಿಮಾನಿಗಳು, ಕೇಕ್​ ಹಾಗೂ ಹಾರ ತರುತ್ತಾರೆ. ಜಗ್ಗೇಶ್​ಗೆ ಮಾರ್ಚ್​ 17 ಹುಟ್ಟುಹಬ್ಬದ ದಿನ. ಆದರೆ, ಈ ಬಾರಿ ಬರ್ತ್​ಡೇ ಆಚರಿಸಿಕೊಳ್ಳುವುದಿಲ್ಲ ಎಂದು ಜಗ್ಗೇಶ್​ ನೇರವಾಗಿಯೇ ಹೇಳಿದ್ದಾರೆ. ಪುನೀತ್​ ಅವರನ್ನು ಕಳೆದುಕೊಂಡ ದುಃಖದ ಹಿನ್ನೆಲೆಯಲ್ಲಿ ಅವರು ಈ ನಿರ್ಧಾರ ತೆಗೆದುಕೊಂಡಿದ್ದಾರೆ.

ಪುನೀತ್​ ಜತೆ ಇರುವ ಫೋಟೋ ಹಂಚಿಕೊಂಡಿರುವ ಜಗ್ಗೇಶ್, ‘ಈ ಬಾರಿ ನನ್ನ 59ನೇ ಹುಟ್ಟುಹಬ್ಬ ಆಚರಿಸಿಕೊಳ್ಳುತ್ತಿಲ್ಲ. ಆಚರಿಸುವ ಮನಸ್ಸು ಕೂಡ ಇಲ್ಲ. ಕಾರಣ, ಪ್ರತಿ ಮಾರ್ಚ್​ 17ಕ್ಕೆ ತಪ್ಪದೇ ಪುನೀತ್ ಕರೆ ಮಾಡುತ್ತಿದ್ದ. ಅಣ್ಣಾ happy birthday ಎಂದು ಹೇಳುತ್ತಿದ್ದ ಕರೆ ಮತ್ತೆ ಎಂದೂ ಬರದಂತಾಯಿತು. ಪುನೀತ್​ ಜೊತೆ ಕೊನೆಯ ಚಿತ್ರ’ ಎಂದು ಬರೆದುಕೊಂಡಿದ್ದಾರೆ ಜಗ್ಗೇಶ್.

ವಿಚಿತ್ರ ಎಂದರೆ ಪುನೀತ್​ ಬರ್ತ್​ಡೇ ಕೂಡ ಮಾರ್ಚ್​​ 17. ಅವರು ಈ ವರ್ಷ ಇದ್ದಿದ್ದರೆ 47ನೇ ವರ್ಷ ಬರ್ತ್​ಡೇಯನ್ನು ಅದ್ದೂರಿಯಾಗಿ ಆಚರಿಸಿಕೊಳ್ಳುತ್ತಿದ್ದರು. ಅವರ ಜತೆ ಕುಳಿತೇ ಅಭಿಮಾನಿಗಳು ‘ಜೇಮ್ಸ್​’ ಸಿನಿಮಾ ನೋಡಬಹುದಿತ್ತು. ಆದರೆ, ಅವರಿಲ್ಲದೆ, ‘ಜೇಮ್ಸ್​’ ಸಿನಿಮಾವನ್ನು ಕಣ್ತುಂಬಿಕೊಳ್ಳಬೇಕಿದೆ.

ಇದನ್ನೂ ಓದಿ: ರಶ್ಮಿಕಾ ಮಂದಣ್ಣ, ಪೂಜಾ ಬಳಿಕ ಅಲ್ಲು ಅರ್ಜುನ್​ ಜತೆ ತೆರೆ ಹಂಚಿಕೊಂಡ ಮತ್ತೋರ್ವ ಕನ್ನಡದ ನಟಿ

Rashmika Mandanna: ಜೂನ್​ 10 ರಶ್ಮಿಕಾ ಮಂದಣ್ಣ ಪಾಲಿಗೆ ವಿಶೇಷ ದಿನ; ಈಡೇರುತ್ತಿದೆ ಹಲವು ವರ್ಷಗಳ ಕನಸು

ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ
ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ
ಅಮೆಜಾನ್ ವಿಶೇಷ ಆಫರ್ ಸೇಲ್ ಮುಂದಿನ ವಾರವೇ ಆರಂಭ!
ಅಮೆಜಾನ್ ವಿಶೇಷ ಆಫರ್ ಸೇಲ್ ಮುಂದಿನ ವಾರವೇ ಆರಂಭ!
ಭಾವ್​ನಗರದಲ್ಲಿ ಗುಜರಾತ್​ನ ಮೊಟ್ಟಮೊದಲ ಧಾನ್ಯಗಳ ಎಟಿಎಂ ಸ್ಥಾಪನೆ
ಭಾವ್​ನಗರದಲ್ಲಿ ಗುಜರಾತ್​ನ ಮೊಟ್ಟಮೊದಲ ಧಾನ್ಯಗಳ ಎಟಿಎಂ ಸ್ಥಾಪನೆ