AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Jaggesh: ಪುನೀತ್ ಮೇಲಿನ ಪ್ರೀತಿ​ಗಾಗಿ ಒಂದು ಮಹತ್ವದ ನಿರ್ಧಾರ ತೆಗೆದುಕೊಂಡ ಜಗ್ಗೇಶ್

ಜಗ್ಗೇಶ್​ ಹಾಗೂ ಪುನೀತ್ ನಡುವೆ ಒಳ್ಳೆಯ ಬಾಂಧವ್ಯ ಇತ್ತು. ಜಗ್ಗೇಶ್​ ರಾಯರ ಭಕ್ತರು. ಪುನೀತ್​ ಅವರು ಜಗ್ಗೇಶ್​ ಜತೆ ಅನೇಕ ಬಾರಿ ಮಂತ್ರಾಲಯಕ್ಕೆ ತೆರಳಿದ್ದರು. ವೇದಿಕೆ ಮೇಲೆ ಸಿಕ್ಕರೆ ಇಬ್ಬರೂ ಪ್ರೀತಿಯಿಂದ ಮಾತನಾಡುತ್ತಿದ್ದರು.

Jaggesh: ಪುನೀತ್ ಮೇಲಿನ ಪ್ರೀತಿ​ಗಾಗಿ ಒಂದು ಮಹತ್ವದ ನಿರ್ಧಾರ ತೆಗೆದುಕೊಂಡ ಜಗ್ಗೇಶ್
ಜಗ್ಗೇಶ್​-ಪುನೀತ್
TV9 Web
| Edited By: |

Updated on: Mar 09, 2022 | 2:10 PM

Share

ಪುನೀತ್​ ರಾಜ್​ಕುಮಾರ್ (Puneeth Rajkumar) ಅವರನ್ನು ಕಳೆದುಕೊಂಡು ನಾಲ್ಕು ತಿಂಗಳು ಕಳೆದು ಹೋಗಿದೆ. ಅವರಿಲ್ಲ ಎನ್ನುವ ನೋವು ನಿತ್ಯವೂ ಕಾಡುತ್ತಿದೆ. ಅಭಿಮಾನಿಗಳು ಹಾಗೂ ಕುಟುಂಬದವರು ಈಗಲೂ ಪುನೀತ್​ ಅವರನ್ನು ನೆನೆದು ಕಣ್ಣೀರು ಹಾಕುತ್ತಿದ್ದಾರೆ. ಈ ನೋವು ಇಂದು ನಾಳೆಗೆ ಮಾಸುವುದಲ್ಲ. ಪುನೀತ್​ ನಿಧನ ಹೊಂದಿದ ನಂತರ ಅವರ ಮೇಲಿದ್ದ ಪ್ರೀತಿ ಹಾಗೂ ಗೌರವವನ್ನು ಅಭಿಮಾನಿಗಳು ನಾನಾ ರೀತಿಯಲ್ಲಿ ತೋರಿಸುತ್ತಿದ್ದಾರೆ. ಜಗ್ಗೇಶ್​ (Jaggesh) ಕೂಡ ಪುನೀತ್​ ವಿಚಾರದಲ್ಲಿ ಒಂದು ಮಹತ್ವದ ನಿರ್ಧಾರ ತೆಗೆದುಕೊಂಡಿದ್ದಾರೆ. ಈ ಬಗ್ಗೆ ಅವರು ಸೋಶಿಯಲ್​ ಮೀಡಿಯಾದಲ್ಲಿ ಹೇಳಿಕೊಂಡಿದ್ದಾರೆ.

ಜಗ್ಗೇಶ್​ ಹಾಗೂ ಪುನೀತ್ ನಡುವೆ ಒಳ್ಳೆಯ ಬಾಂಧವ್ಯ ಇತ್ತು. ಜಗ್ಗೇಶ್​ ರಾಯರ ಭಕ್ತರು. ಪುನೀತ್​ ಅವರು ಜಗ್ಗೇಶ್​ ಜತೆ ಅನೇಕ ಬಾರಿ ಮಂತ್ರಾಲಯಕ್ಕೆ ತೆರಳಿದ್ದರು. ವೇದಿಕೆ ಮೇಲೆ ಸಿಕ್ಕರೆ ಇಬ್ಬರೂ ಪ್ರೀತಿಯಿಂದ ಮಾತನಾಡುತ್ತಿದ್ದರು. ಅಪ್ಪು ಅವರನ್ನು ಕಳೆದುಕೊಂಡಿದ್ದು, ಜಗ್ಗೇಶ್​ಗೆ ತೀವ್ರ ನೋವು ತಂದಿದೆ. ಈ ಬಗ್ಗೆ ಅವರು ಸಾಕಷ್ಟು ಬಾರಿ ನೋವು ಹೊರ ಹಾಕಿದ್ದಾರೆ. ಈ ವರ್ಷ ಜಗ್ಗೇಶ್​ ತಮ್ಮ ಬರ್ತ್​​ಡೇ ಆಚರಿಸಿಕೊಳ್ಳದೆ ಇರಲು ನಿರ್ಧರಿಸಿದ್ದಾರೆ.

ಸಾಮಾನ್ಯವಾಗಿ ಸೆಲೆಬ್ರಿಟಿಗಳು ಪ್ರತಿ ವರ್ಷ ಜನ್ಮದಿನವನ್ನು ಅಭಿಮಾನಿಗಳ ಜತೆ ಆಚರಣೆ ಮಾಡುತ್ತಾರೆ. ಅವರಿಗೆ ಸೋಶಿಯಲ್​ ಮೀಡಿಯಾದಲ್ಲಿ ಶುಭಾಶಯಗಳ ಸುರಿಮಳೆ ಬರುತ್ತದೆ. ಮನೆ ಎದುರು ಬರುವ ಅಭಿಮಾನಿಗಳು, ಕೇಕ್​ ಹಾಗೂ ಹಾರ ತರುತ್ತಾರೆ. ಜಗ್ಗೇಶ್​ಗೆ ಮಾರ್ಚ್​ 17 ಹುಟ್ಟುಹಬ್ಬದ ದಿನ. ಆದರೆ, ಈ ಬಾರಿ ಬರ್ತ್​ಡೇ ಆಚರಿಸಿಕೊಳ್ಳುವುದಿಲ್ಲ ಎಂದು ಜಗ್ಗೇಶ್​ ನೇರವಾಗಿಯೇ ಹೇಳಿದ್ದಾರೆ. ಪುನೀತ್​ ಅವರನ್ನು ಕಳೆದುಕೊಂಡ ದುಃಖದ ಹಿನ್ನೆಲೆಯಲ್ಲಿ ಅವರು ಈ ನಿರ್ಧಾರ ತೆಗೆದುಕೊಂಡಿದ್ದಾರೆ.

ಪುನೀತ್​ ಜತೆ ಇರುವ ಫೋಟೋ ಹಂಚಿಕೊಂಡಿರುವ ಜಗ್ಗೇಶ್, ‘ಈ ಬಾರಿ ನನ್ನ 59ನೇ ಹುಟ್ಟುಹಬ್ಬ ಆಚರಿಸಿಕೊಳ್ಳುತ್ತಿಲ್ಲ. ಆಚರಿಸುವ ಮನಸ್ಸು ಕೂಡ ಇಲ್ಲ. ಕಾರಣ, ಪ್ರತಿ ಮಾರ್ಚ್​ 17ಕ್ಕೆ ತಪ್ಪದೇ ಪುನೀತ್ ಕರೆ ಮಾಡುತ್ತಿದ್ದ. ಅಣ್ಣಾ happy birthday ಎಂದು ಹೇಳುತ್ತಿದ್ದ ಕರೆ ಮತ್ತೆ ಎಂದೂ ಬರದಂತಾಯಿತು. ಪುನೀತ್​ ಜೊತೆ ಕೊನೆಯ ಚಿತ್ರ’ ಎಂದು ಬರೆದುಕೊಂಡಿದ್ದಾರೆ ಜಗ್ಗೇಶ್.

ವಿಚಿತ್ರ ಎಂದರೆ ಪುನೀತ್​ ಬರ್ತ್​ಡೇ ಕೂಡ ಮಾರ್ಚ್​​ 17. ಅವರು ಈ ವರ್ಷ ಇದ್ದಿದ್ದರೆ 47ನೇ ವರ್ಷ ಬರ್ತ್​ಡೇಯನ್ನು ಅದ್ದೂರಿಯಾಗಿ ಆಚರಿಸಿಕೊಳ್ಳುತ್ತಿದ್ದರು. ಅವರ ಜತೆ ಕುಳಿತೇ ಅಭಿಮಾನಿಗಳು ‘ಜೇಮ್ಸ್​’ ಸಿನಿಮಾ ನೋಡಬಹುದಿತ್ತು. ಆದರೆ, ಅವರಿಲ್ಲದೆ, ‘ಜೇಮ್ಸ್​’ ಸಿನಿಮಾವನ್ನು ಕಣ್ತುಂಬಿಕೊಳ್ಳಬೇಕಿದೆ.

ಇದನ್ನೂ ಓದಿ: ರಶ್ಮಿಕಾ ಮಂದಣ್ಣ, ಪೂಜಾ ಬಳಿಕ ಅಲ್ಲು ಅರ್ಜುನ್​ ಜತೆ ತೆರೆ ಹಂಚಿಕೊಂಡ ಮತ್ತೋರ್ವ ಕನ್ನಡದ ನಟಿ

Rashmika Mandanna: ಜೂನ್​ 10 ರಶ್ಮಿಕಾ ಮಂದಣ್ಣ ಪಾಲಿಗೆ ವಿಶೇಷ ದಿನ; ಈಡೇರುತ್ತಿದೆ ಹಲವು ವರ್ಷಗಳ ಕನಸು

ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ