AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತಲೆ ಬಾಗಿ ಕ್ಷಮೆ ಕೋರುವೆ; ರಾಮು ನಿಧನದ ಬಗ್ಗೆ ಮಾಲಾಶ್ರೀಗೆ ಜಗ್ಗೇಶ್​ ಹೀಗೆ ಹೇಳಿದ್ದೇಕೆ?

ಪತಿಯ ನಿಧನದಿಂದ ಕಂಗೆಟ್ಟಿರುವ ಮಾಲಾಶ್ರೀ ಅವರಿಗೆ ಚಿತ್ರರಂಗದ ಅನೇಕರು ಸಾಂತ್ವನ ಹೇಳುತ್ತಿದ್ದಾರೆ. ಜಗ್ಗೇಶ್​ ಕೂಡ ಮಾಲಾಶ್ರೀಗೆ ಸಮಾಧಾನದ ಮಾತುಗಳನ್ನು ಹೇಳಲು ಪ್ರಯತ್ನಿಸಿದ್ದಾರೆ.

ತಲೆ ಬಾಗಿ ಕ್ಷಮೆ ಕೋರುವೆ; ರಾಮು ನಿಧನದ ಬಗ್ಗೆ ಮಾಲಾಶ್ರೀಗೆ ಜಗ್ಗೇಶ್​ ಹೀಗೆ ಹೇಳಿದ್ದೇಕೆ?
ಜಗ್ಗೇಶ್​ - ರಾಮು - ಮಾಲಾಶ್ರೀ
ಮದನ್​ ಕುಮಾರ್​
| Edited By: |

Updated on: Apr 30, 2021 | 5:13 PM

Share

ಕೊರೊನಾ ವೈರಸ್​ನಿಂದ ಊರೆಲ್ಲವೂ ಸ್ಮಶಾನದಂತೆ ಕಾಣಲು ಆರಂಭಿಸಿದೆ. ಜನಸಾಮಾನ್ಯರು ಮಾತ್ರವಲ್ಲದೆ ಸೆಲೆಬ್ರಿಟಿಗಳು ಕೂಡ ಈ ಸಂದರ್ಭದಲ್ಲಿ ಅಸಹಾಯಕರಾಗಿದ್ದಾರೆ. ಸೋಂಕಿತರ ಜೊತೆಯಲ್ಲಿ ಇದ್ದು ಅವರನ್ನು ಆರೈಕೆ ಮಾಡುವ ಅವಕಾಶವನ್ನೂ ನೀಡದಷ್ಟು ಕ್ರೂರಿ ಆಗಿದೆ ಈ ಕಾಯಿಲೆ. ಅದಕ್ಕಿಂತಲೂ ಮುಖ್ಯವಾಗಿ ವ್ಯವಸ್ಥೆಯೇ ಹಳಿ ತಪ್ಪಿದೆ. ಕೆಲವೇ ದಿನಗಳ ಹಿಂದೆ ಖ್ಯಾತ ನಿರ್ಮಾಪಕ ಕೋಟಿ ರಾಮು ನಿಧನರಾದರು. ಆ ಬಗ್ಗೆ ನಟ ಜಗ್ಗೇಶ್​ ಅಭಿಪ್ರಾಯ ಹಂಚಿಕೊಂಡಿದ್ದಾರೆ.

ಕೋಟಿ ರಾಮು ಅಸುನೀಗಿದ್ದಾರೆ ಎಂದು ಯಾರಿಂದಲೂ ನಂಬಲು ಸಾಧ್ಯವಾಗುತ್ತಿಲ್ಲ. ಏಕಾಏಕಿ ಅವರು ಕೊರೊನಾಗೆ ಬಲಿಯಾದರು. ರಾಮು ನಿಧನದಿಂದ ಹೆಚ್ಚು ಆಘಾತಕ್ಕೆ ಒಳಗಾಗಿರುವುದು ಅವರ ಪತ್ನಿ, ನಟಿ ಮಾಲಾಶ್ರೀ. ಪತಿಯ ನಿಧನದಿಂದ ಕಂಗೆಟ್ಟಿರುವ ಅವರಿಗೆ ಚಿತ್ರರಂಗದ ಅನೇಕರು ಸಾಂತ್ವನ ಹೇಳುತ್ತಿದ್ದಾರೆ. ಜಗ್ಗೇಶ್​ ಕೂಡ ಮಾಲಾಶ್ರೀಗೆ ಸಮಾಧಾನದ ಮಾತುಗಳನ್ನು ಹೇಳಲು ಪ್ರಯತ್ನಿಸಿದ್ದಾರೆ. ಈ ಬಗ್ಗೆ ಅವರು ಟ್ವೀಟ್​ ಮಾಡಿದ್ದಾರೆ.

‘ಮಾಲಾಶ್ರೀ ಮೇಡಂ, ನಿಮ್ಮ ಸಂಕಷ್ಟದಲ್ಲಿ ಭಾಗಿ ಆಗುವ ಯೋಗ್ಯತೆ ಇಲ್ಲದಂತೆ ಮಾಡಿದ ಈ ಸಮಯಕ್ಕೆ ತಲೆ ಬಾಗಿ ಕ್ಷಮೆ ಕೋರುವೆ. ತಮ್ಮ ನೋವಿಗೆ ಸಾಂತ್ವನ ಹೇಳುವ ಶಕ್ತಿಮಾತ್ರ ಉಳಿದಿದೆ. ಕನ್ನಡ ಚಿತ್ರರಂಗಕ್ಕೆ ಅನನ್ಯ ಸೇವೆ ಮಾಡಿ ಚಿತ್ರರಂಗದ ಅನೇಕ ಕಾರ್ಮಿಕರಿಗೆ ಅನ್ನ ನೀಡಿದ ಮಹನೀಯ ನನ್ನ ತಮ್ಮ ರಾಮು. ಅವನ ಆತ್ಮಕ್ಕೆ ಶಾಂತಿಕೋರಿ ನಿಮ್ಮ ಮನೆಯಲ್ಲೇ ರಾಮು ಹುಟ್ಟಿಬರಲಿ ಎಂದು ರಾಯರಲ್ಲಿ ಪ್ರಾರ್ಥನೆ’ ಅಂತ ಜಗ್ಗೇಶ್​ ಬರೆದುಕೊಂಡಿದ್ದಾರೆ.

‘ದಯಮಾಡಿ ನೀವು ಧೈರ್ಯದಿಂದ ಈ ಸಂಕಷ್ಟ ಎದುರಿಸಿ. ಮಕ್ಕಳನ್ನು ರಾಮು ಎತ್ತರಕ್ಕೆ ಬೆಳಸಿ. ನಿಮ್ಮ ಜೊತೆ ನಾವು ಉದ್ಯಮದ ಎಲ್ಲಾ ಸ್ನೇಹಿತರು ಸದಾ ಇರುತ್ತೇವೆ. ಮುಂದಿನ ಸಾಂಸಾರಿಕ ಜೀವನ ನಿಭಾಯಿಸುವ ಶಕ್ತಿ ರಾಯರು ನಿಮಗೆ ನೀಡಲಿ’ ಎಂದು ಜಗ್ಗೇಶ್​ ಅವರು ಮಾಲಾಶ್ರೀಗೆ ಧೈರ್ಯ ತುಂಬಿದ್ದಾರೆ. ಕೆಲವು ದಿನಗಳಿಂದ ಸ್ವತಃ ಜಗ್ಗೇಶ್​ ಅವರ ಕುಟುಂಬದಲ್ಲಿ ಕೊರೊನಾ ಕಣ್ಣಾಮುಚ್ಚಾಲೆ ಆಡಿದೆ. ಅವರ ಸಹೋದರ ಕೋಮಲ್​ ಕುಮಾರ್​ ಅವರಿಗೂ ಕೊವಿಡ್​ ಸೋಂಕು ತಗುಲಿತ್ತು.

ನಟ ಕೋಮಲ್​ ಕುಮಾರ್​ಗೆ ಕೊರೊನಾ ವೈರಸ್​ ತಗುಲಿರುವ ವಿಚಾರವನ್ನು ಜಗ್ಗೇಶ್​ ಮುಚ್ಚಿಟ್ಟಿದ್ದರು. ರಹಸ್ಯವಾಗಿ ಆಸ್ಪತ್ರೆಗೆ ಸೇರಿಸಿ ಚಿಕಿತ್ಸೆ ಕೊಡಿಸಿದ್ದರು. ಅಂತೂ ಕೋಮಲ್​ ಗುಣಮುಖರಾಗಿದ್ದಾರೆ. ಅವರು ಗುಣಮುಖರಾದ ಬಳಿಕವೇ ಈ ವಿಚಾರವನ್ನು ಸೋಶಿಯಲ್​ ಮೀಡಿಯಾ ಮೂಲಕ ಅಭಿಮಾನಿಗಳ ಜೊತೆ ಜಗ್ಗೇಶ್​ ಹಂಚಿಕೊಂಡರು.

ಇದನ್ನೂ ಓದಿ: ನಟ ಕೋಮಲ್​ಗೆ ಕೊರೊನಾ; ರಹಸ್ಯವಾಗಿ ಆಸ್ಪತ್ರೆಗೆ ಸೇರಿಸಿ ಚಿಕಿತ್ಸೆ ಕೊಡಿಸಿದ ಜಗ್ಗೇಶ್​​

Ramu Death: ನಿಧನಕ್ಕೂ ಮುನ್ನ ಫೋನ್​ನಲ್ಲಿ ಕೊವಿಡ್​ ಕಷ್ಟ ವಿವರಿಸಿದ್ದ ಕೋಟಿ ರಾಮು

Follow Us
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ
ನಿರ್ಮಲಾನಂದನಾಥಶ್ರೀ ಭೇಟಿಯಾದ ಸಿಎಂ ಡಿಕೆ ಶಿವಕುಮಾರ್
ನಿರ್ಮಲಾನಂದನಾಥಶ್ರೀ ಭೇಟಿಯಾದ ಸಿಎಂ ಡಿಕೆ ಶಿವಕುಮಾರ್
ಇಂದು ಈ ರಾಶಿಯವರಿಗೆ ಹಳೆಯ ಖಾಯಿಲೆಗಳು ಮರುಕಳಿಸುವ ಸಾಧ್ಯತೆ
ಇಂದು ಈ ರಾಶಿಯವರಿಗೆ ಹಳೆಯ ಖಾಯಿಲೆಗಳು ಮರುಕಳಿಸುವ ಸಾಧ್ಯತೆ
ಹೆಚ್​​​ಡಿಕೆ ಪಂಥಾಹ್ವಾನ, ವಿಧಾನಸೌಧಕ್ಕೆ ಆಹ್ವಾನ ಕೊಟ್ಟ ಡಿಕೆ ಶಿವಕುಮಾರ್​​
ಹೆಚ್​​​ಡಿಕೆ ಪಂಥಾಹ್ವಾನ, ವಿಧಾನಸೌಧಕ್ಕೆ ಆಹ್ವಾನ ಕೊಟ್ಟ ಡಿಕೆ ಶಿವಕುಮಾರ್​​
ಚೆನ್ನೈನಲ್ಲಿ ಗೀತಾ ಶಿವರಾಜ್​ಕುಮಾರ್ ಜನ್ಮದಿನ ಆಚರಿಸಿದ ಶಿವಣ್ಣ ಫ್ಯಾನ್ಸ್
ಚೆನ್ನೈನಲ್ಲಿ ಗೀತಾ ಶಿವರಾಜ್​ಕುಮಾರ್ ಜನ್ಮದಿನ ಆಚರಿಸಿದ ಶಿವಣ್ಣ ಫ್ಯಾನ್ಸ್
ಕೊನೆಗೂ ಅಧಿಕಾರ ಹಂಚಿಕೆ ಗುಟ್ಟುಬಿಚ್ಚಿಟ್ಟ ಸಿಎಂ ಡಿ.ಕೆ.ಶಿವಕುಮಾರ್
ಕೊನೆಗೂ ಅಧಿಕಾರ ಹಂಚಿಕೆ ಗುಟ್ಟುಬಿಚ್ಚಿಟ್ಟ ಸಿಎಂ ಡಿ.ಕೆ.ಶಿವಕುಮಾರ್
ಪಾಕ್ ಕ್ರಿಕೆಟಿಗನ ಜೊತೆ ಕಾಣಿಸಿಕೊಂಡ ಆರ್ ಅಶ್ವಿನ್; ವಿಡಿಯೋ ವೈರಲ್
ಪಾಕ್ ಕ್ರಿಕೆಟಿಗನ ಜೊತೆ ಕಾಣಿಸಿಕೊಂಡ ಆರ್ ಅಶ್ವಿನ್; ವಿಡಿಯೋ ವೈರಲ್