AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದರ್ಶನ್ ಅಭಿಮಾನಿಗಳ ವರ್ತನೆ ವಿರುದ್ಧ ದೂರು ಸಲ್ಲಿಸಲು ಫಿಲ್ಮ್ ಚೇಂಬರ್​ಗೆ ಆಗಮಿಸಿದ ಜಗ್ಗೇಶ್ ಅಭಿಮಾನಿಗಳು

Jaggesh: ನಿನ್ನೆ ಜಗ್ಗೇಶ್ ನಟನೆಯ ತೋತಾಪುರಿ ಸಿನಿಮಾ ಶೂಟಿಂಗ್ ಮೈಸೂರಿನಲ್ಲಿ ನಡೆಯುತ್ತಿತ್ತು. ಈ ವಿಚಾರ ತಿಳಿದ ಮಂಡ್ಯ ಹಾಗೂ ಮೈಸೂರಿನ ದರ್ಶನ್ ಅಭಿಮಾನಿಗಳು ಶೂಟಿಂಗ್ ಸೆಟ್ಗೆ ಬಂದು ಜಗ್ಗೇಶ್​ಗೆ ಮುತ್ತಿಗೆ ಹಾಕಿದ್ದರು. ಅಲ್ಲದೇ ಕ್ಷಮೆಯಾಚಿಸುವಂತೆ ಒತ್ತಾಯಿಸಿದರು.

ದರ್ಶನ್ ಅಭಿಮಾನಿಗಳ ವರ್ತನೆ ವಿರುದ್ಧ ದೂರು ಸಲ್ಲಿಸಲು ಫಿಲ್ಮ್ ಚೇಂಬರ್​ಗೆ ಆಗಮಿಸಿದ ಜಗ್ಗೇಶ್ ಅಭಿಮಾನಿಗಳು
ಫಿಲ್ಮ್ ಚೇಂಬರ್​ಗೆ ಆಗಮಿಸಿದ ಜಗ್ಗೇಶ್ ಅಭಿಮಾನಿಗಳು
sandhya thejappa
| Edited By: |

Updated on: Feb 23, 2021 | 2:19 PM

Share

ಬೆಂಗಳೂರು: ನಿನ್ನೆ (ಫೆಬ್ರವರಿ 22) ದರ್ಶನ್ ಅಭಿಮಾನಿಗಳು ನಟ ಜಗ್ಗೇಶ್​ಗೆ ಮುತ್ತಿಗೆ ಹಾಕಿದ ವಿಚಾರಕ್ಕೆ ಸಂಬಂಧಿಸಿ ಇದೀಗ ಜಗ್ಗೇಶ್ ಅಭಿಮಾನಿಗಳು ಫಿಲ್ಮ್ ಚೇಂಬರ್ ಬಳಿ ಆಗಮಿಸಿದ್ದಾರೆ. 40 ವರ್ಷ ಕನ್ನಡ ಚಿತ್ರರಂಗದಲ್ಲಿ ಸೇವೆ ಸಲ್ಲಿಸಿರುವ ಜಗ್ಗೇಶ್​ಗೆ ಈ ರೀತಿ ಮಾಡಿದ್ದು ಖಂಡನೀಯ ಎಂದು ದೂರು ನೀಡಲು ಫಿಲ್ಮ್ ಚೇಂಬರ್ ಬಳಿ ನೂರಕ್ಕೂ ಹೆಚ್ಚು ಅಭಿಮಾನಿಗಳು ಜಮಾಯಿಸಿದ್ದಾರೆ.

ದರ್ಶನ್ ಅಭಿಮಾನಿಗಳ ವಿರುದ್ಧ ಮಾತನಾಡಿದ್ದಾರೆ ಎನ್ನಲಾದ ಆಡಿಯೋ ಸಖತ್ ವೈರಲ್ ಆಗಿತ್ತು. ಇದರಿಂದ ರೊಚ್ಚಿಗೆದ್ದ ದರ್ಶನ್ ಅಭಿಮಾನಿಗಳು ಕೆಂಡಾಮಂಡಲರಾಗಿದ್ದಾರೆ. ಅಲ್ಲದೇ ನಿನ್ನೆ ಜಗ್ಗೇಶ್ ನಟನೆಯ ತೋತಾಪುರಿ ಸಿನಿಮಾ ಶೂಟಿಂಗ್ ಮೈಸೂರಿನಲ್ಲಿ ನಡೆಯುತ್ತಿತ್ತು. ಈ ವಿಚಾರ ತಿಳಿದ ಮಂಡ್ಯ ಹಾಗೂ ಮೈಸೂರಿನ ದರ್ಶನ್ ಅಭಿಮಾನಿಗಳು ಶೂಟಿಂಗ್ ಸೆಟ್ಗೆ ಬಂದು ಜಗ್ಗೇಶ್​ಗೆ ಮುತ್ತಿಗೆ ಹಾಕಿದ್ದರು. ಅಲ್ಲದೇ ಕ್ಷಮೆಯಾಚಿಸುವಂತೆ ಒತ್ತಾಯಿಸಿದರು.

ಇದಕ್ಕೆ ಬೇಸತ್ತ ನವರಸ ನಾಯಕ ನನಗೆ ಅವಮಾನ ಮಾಡಬೇಡಿ. ನನಗೆ ಮಸಿ ಬಳಿಯುವ ಕೆಲಸ ಮಾಡಬೇಡಿ ಎಂದು ಟ್ವೀಟರ್​ನಲ್ಲಿ ಮಾತನಾಡಿದ್ದಾರೆ. ನಾನು ಕನ್ನಡಿಗರ ಚಪ್ಪಾಳೆಯಿಂದ ಬೆಳೆದವನು. ನನಗೆ ಅವಮಾನ ಮಾಡಿದರೆ ಅದು ಕನ್ನಡಿಗರಿಗೆ ಅವಮಾನ ಮಾಡಿದಂತಾಗುತ್ತದೆ ಎಂದು ಹೇಳಿದರು. ಅಲ್ಲದೇ ಇನ್ನು ಮುಂದೆ ನನ್ನ ಉದ್ಯಮದ ಯಾರ ಹುಟ್ಟುಹಬ್ಬ, ಸಿನಿಮಾ, ಸ್ನೇಹ, ಕಾರ್ಯಕ್ರಮ, ಭೇಟಿ, ಹರಟೆ ನನ್ನಿಂದ ಇರುವುದಿಲ್ಲ. ಮುಂದೆ ನನ್ನ ಬದುಕು ನನ್ನ ಸಿನಿಮಾ ಹಾಗೂ ಜೀ ಟಿವಿ ಶೋಗೆ ಮೀಸಲು ಎಂದು ಟ್ವಿಟರ್​ನಲ್ಲಿ ಬರೆದುಕೊಂಡಿದ್ದಾರೆ.

ಅಲ್ಲದೇ ಇಂದು ಬೆಳಗ್ಗೆ (ಫೆಬ್ರವರಿ 23) ಟ್ವಿಟರ್​ನಲ್ಲಿ ಒಂದು ವಿಡಿಯೋವನ್ನು ಹರಿಬಿಟ್ಟ ಜಗ್ಗೇಶ್ ನಾನು ಜೀವಮಾನದಲ್ಲಿ ಎಲ್ಲೂ ಓಡಿ ಹೋಗುವವನಲ್ಲ. ನಾನು ಅಪ್ಪನಿಗೆ ಹುಟ್ಟಿದ ಮಗ. ನಾನು ರಾಜ್ ಕುಮಾರ್, ಅಂಬರೀಶ್, ವಿಷ್ಣುವರ್ಧನ್ ಕಾಲದವನು. ಘಟಾನುಘಟಿಗಳ ಜೊತೆಗೆ ಹೆಜ್ಜೆ ಹಾಕಿ ಬೆಳೆದವನು. ಅವರ ಜೊತೆ ಬದುಕಿದವನು, ನಕ್ಕವನು, ಅತ್ತವನು. ನನಗೆ ಅವಮಾನ ಮಾಡಬೇಕೆಂದು ಅಂದುಕೊಂಡಿದ್ದರೆ ಅದು ಸಾಧ್ಯವಿಲ್ಲ. ನಾನು ಚಿತ್ರರಂಗಕ್ಕೆ ಕಾಲಿಟ್ಟಾಗ ಬಕೆಟ್ ಹಿಡಿಯುವವರು ಹುಟ್ಟೇ ಇರಲಿಲ್ಲ. 80ನೇ ದಶಕದಲ್ಲಿ ಸಿನಿಮಾ ರಂಗಕ್ಕೆ ಬಂದವನು ನಾನು. ಇದುವರೆಗೂ ನನ್ನ ಎಡಗಾಲನ್ನೂ ಬೇರೆ ಭಾಷೆಗೆ ಇಟ್ಟಿಲ್ಲ ಎಂದು ವಿಷಾದ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: 

Jaggesh: TV9 ಕನ್ನಡಕ್ಕೆ ಧನ್ಯವಾದ ತಿಳಿಸಿದ ನಟ ಜಗ್ಗೇಶ್

Jaggesh Controversy: ತಪ್ಪೊ, ಸರಿಯೋ ಜಗ್ಗೇಶ್ ಇರೋದೆ ಹೀಗೆ..!

ಸಿಕ್ಕ ಸಿಕ್ಕ ಜಾನುವಾರುಗಳನ್ನು ತಿಂದು ತೇಗಿದ ಚಿರತೆ ಬೋನಿಗೆ ಬಿತ್ತು
ಸಿಕ್ಕ ಸಿಕ್ಕ ಜಾನುವಾರುಗಳನ್ನು ತಿಂದು ತೇಗಿದ ಚಿರತೆ ಬೋನಿಗೆ ಬಿತ್ತು
ಗೋಪಾಲ್‌ಗಂಜ್‌ನ ದೇವಸ್ಥಾನದಿಂದ 50 ಲಕ್ಷ ಮೌಲ್ಯದ ಚಿನ್ನದ ಕಿರೀಟ, ಆಭರಣ ಕಳವು
ಗೋಪಾಲ್‌ಗಂಜ್‌ನ ದೇವಸ್ಥಾನದಿಂದ 50 ಲಕ್ಷ ಮೌಲ್ಯದ ಚಿನ್ನದ ಕಿರೀಟ, ಆಭರಣ ಕಳವು
ಕಾಳಹಸ್ತಿ ದೇವಸ್ಥಾನದಲ್ಲಿ ನೆಲದ ಮೇಲೆ ಕುಳಿತು ಪ್ರಸಾದ ಸೇವಿಸಿದ ರಷ್ಯನ್ನರು
ಕಾಳಹಸ್ತಿ ದೇವಸ್ಥಾನದಲ್ಲಿ ನೆಲದ ಮೇಲೆ ಕುಳಿತು ಪ್ರಸಾದ ಸೇವಿಸಿದ ರಷ್ಯನ್ನರು
ಪ್ರೇಮ್ ಕಹಾನಿ: 19 ವರ್ಷದ ಯುವತಿ ಹಿಂದೆ ಬಿದ್ದು ದುರಂತ ಅಂತ್ಯಕಂಡ 40 ಅಂಕಲ್
ಪ್ರೇಮ್ ಕಹಾನಿ: 19 ವರ್ಷದ ಯುವತಿ ಹಿಂದೆ ಬಿದ್ದು ದುರಂತ ಅಂತ್ಯಕಂಡ 40 ಅಂಕಲ್
ಬೇರೆ ಮಹಿಳೆ ಜತೆ ಲವ್ವಿಡವ್ವಿ: ಹೆಂಡ್ತಿ ಹತ್ಯೆಗೆ ಸುಪಾರಿ ಕೊಟ್ಟ ಪತಿ
ಬೇರೆ ಮಹಿಳೆ ಜತೆ ಲವ್ವಿಡವ್ವಿ: ಹೆಂಡ್ತಿ ಹತ್ಯೆಗೆ ಸುಪಾರಿ ಕೊಟ್ಟ ಪತಿ
ಡಿಕೆಶಿ ಪ್ರಾರ್ಥನೆಗೆ ಅಸ್ತು ಎಂದಳಾ ಶಕ್ತಿದೇವಿ? ಅರ್ಚಕರು ಹೇಳಿದ್ದಿಷ್ಟು
ಡಿಕೆಶಿ ಪ್ರಾರ್ಥನೆಗೆ ಅಸ್ತು ಎಂದಳಾ ಶಕ್ತಿದೇವಿ? ಅರ್ಚಕರು ಹೇಳಿದ್ದಿಷ್ಟು
ಸಂಜು ಹೊಡೆತಕ್ಕೆ ಸಿಲುಕಿ ನೋವಿನಿಂದ ನರಳಾಡಿದ ಅಂಪೈರ್
ಸಂಜು ಹೊಡೆತಕ್ಕೆ ಸಿಲುಕಿ ನೋವಿನಿಂದ ನರಳಾಡಿದ ಅಂಪೈರ್
ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್
ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್
ಗೃಹಲಕ್ಷ್ಮೀ ಹಣದ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಸಿಎಂ ಆರ್ಥಿಕ ಸಲಹೆಗಾರ
ಗೃಹಲಕ್ಷ್ಮೀ ಹಣದ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಸಿಎಂ ಆರ್ಥಿಕ ಸಲಹೆಗಾರ
ಮೋದಿಯಿಂದ ನಾಳೆ ಉದ್ಘಾಟನೆಯಾಗಲಿದೆ ಅಸ್ಸಾಂನ ಅತಿದೊಡ್ಡ ವಿಮಾನ ನಿಲ್ದಾಣ
ಮೋದಿಯಿಂದ ನಾಳೆ ಉದ್ಘಾಟನೆಯಾಗಲಿದೆ ಅಸ್ಸಾಂನ ಅತಿದೊಡ್ಡ ವಿಮಾನ ನಿಲ್ದಾಣ