Kantara: ‘ಇದು ರಿಷಬ್​ ಮಾಡಿದ ಚಿತ್ರ ಅಲ್ಲ, ದೇವರೇ ಮಾಡ್ಸಿದ್ದು’; ವಿದೇಶದಲ್ಲಿ ‘ಕಾಂತಾರ’ ನೋಡಿ ಜಗ್ಗೇಶ್​ ಪ್ರತಿಕ್ರಿಯೆ

Rishab Shetty | Jaggesh: ‘ಕಡೆಯ 25 ನಿಮಿಷ ನಾನು ಎಲ್ಲಿರುವೆ ಅಂತ ಮರೆತು ಹೋಯಿತು. ಚಿತ್ರ ನೋಡಿದ ಮೇಲೆ ದೇಹ, ಮನಸ್ಸು ಮೌನವಾಯಿತು’ ಎಂದಿದ್ದಾರೆ ಜಗ್ಗೇಶ್​.

Kantara: ‘ಇದು ರಿಷಬ್​ ಮಾಡಿದ ಚಿತ್ರ ಅಲ್ಲ, ದೇವರೇ ಮಾಡ್ಸಿದ್ದು’; ವಿದೇಶದಲ್ಲಿ ‘ಕಾಂತಾರ’ ನೋಡಿ ಜಗ್ಗೇಶ್​ ಪ್ರತಿಕ್ರಿಯೆ
ರಿಷಬ್ ಶೆಟ್ಟಿ, ಜಗ್ಗೇಶ್
Follow us
| Updated By: ಮದನ್​ ಕುಮಾರ್​

Updated on: Oct 19, 2022 | 7:30 AM

ಅನೇಕ ಸೆಲೆಬ್ರಿಟಿಗಳು ‘ಕಾಂತಾರ’ (Kantara) ಸಿನಿಮಾವನ್ನು ನೋಡಿ ಹೊಗಳುತ್ತಿದ್ದಾರೆ. ಪರಭಾಷೆಯ ನಟ-ನಟಿಯರು ಕೂಡ ಈ ಚಿತ್ರಕ್ಕೆ ಫುಲ್​ ಮಾರ್ಕ್ಸ್​ ನೀಡಿದ್ದಾರೆ. ಕನ್ನಡದ ಬಹುತೇಕ ಸ್ಟಾರ್​ ಕಲಾವಿದರು ರಿಷಬ್​ ಶೆಟ್ಟಿಗೆ (Rishab Shetty) ಮೆಚ್ಚುಗೆ ಸೂಚಿಸಿದ್ದಾರೆ. ಈಗ ‘ನವರಸ ನಾಯಕ’ ಜಗ್ಗೇಶ್​ (Jaggesh) ಅವರು ‘ಕಾಂತಾರ’ ನೋಡಿದ್ದಾರೆ. ಅದು ಕೂಡ ವಿದೇಶದಲ್ಲಿ. ಅಮೆರಿಕಕ್ಕೆ ತೆರಳಿರುವ ಅವರು ಅಲ್ಲಿಯೇ ಸಿನಿಮಾ ನೋಡಿದ್ದಾರೆ. ಬಳಿಕ ತಮ್ಮ ವಿಮರ್ಶೆ ಹಂಚಿಕೊಂಡಿದ್ದಾರೆ. ‘ಇದು ರಿಷಬ್​ ಮಾಡಿದ ಚಿತ್ರ ಅಲ್ಲ, ದೇವರ ಮಾಡಿಸಿದ್ದು’ ಎಂದು ಅವರು ಸೋಶಿಯಲ್​ ಮೀಡಿಯಾದಲ್ಲಿ ಬರೆದುಕೊಂಡಿದ್ದಾರೆ. ‘ಇದೊಂದು ಅದ್ಭುತ ಸಿನಿಮಾ’ ಎಂದು ಕೊಂಡಾಡುವುದರ ಜೊತೆಗೆ, ಈ ಚಿತ್ರದಲ್ಲಿ ತಮಗೆ ಏನೆಲ್ಲ ಇಷ್ಟ ಆಯ್ತು ಎಂಬುದನ್ನು ಅವರು ತಿಳಿಸಿದ್ದಾರೆ.

‘ಇಂದು ಅಮೆರಿಕದಲ್ಲಿ ಕಾಂತಾರ ನೋಡುವ ಅವಕಾಶ ಸಿಕ್ಕಿತು, ನೋಡಿ ಬಂದೆ. ನಾನು ದಕ್ಷಿಣ ಕನ್ನಡದ ದೇವಾಲಯದ ಭಕ್ತ. ವರ್ಷಕ್ಕೆ ಒಂದು ಬಾರಿ ಪೊಳಲಿ, ಕಟೀಲು, ಉಡುಪಿ ಕೃಷ್ಣ, ಮೂಕಾಂಬಿಕೆ, ಕೊರಗಜ್ಜ, ಅಂಬಲಪಾಡಿ, ಉಡುಪಿ ರಾಯರ ಮಠ ದರ್ಶನ ಪಡೆವುದು ನನ್ನ 30 ವರ್ಷದ ಅಭ್ಯಾಸ. ನನ್ನ ಪ್ರಕಾರ, ಇದು ಶ್ರೇಷ್ಠ ದೇವಭೂಮಿ. ಆಧ್ಯಾತ್ಮಿಕ ಅನುಭವಕ್ಕೆ ಸಂತೃಪ್ತ ಭಾವ ಸಿಗುತ್ತದೆ. ಇಂಥ ನಾಡಿನಿಂದ ಎಂಥ ಅದ್ಭುತ ನಟ/ನಿರ್ದೇಶಕ ರಿಷಬ್​ ಶೆಟ್ಟಿ ಹುಟ್ಟಿಬಂದ. ಎಂಥ ಅದ್ಭುತ ಕೊಡುಗೆ ಈತ ಕನ್ನಡ ಚಿತ್ರರಂಗಕ್ಕೆ. ಕಡೆಯ 25 ನಿಮಿಷ ನಾನು ಎಲ್ಲಿರುವೆ ಅಂತ ಮರೆತು ಹೋಯಿತು’ ಎಂದಿದ್ದಾರೆ ಜಗ್ಗೇಶ್​.

ಇದನ್ನೂ ಓದಿ
Image
Kantara: ‘ಕಾಂತಾರ’ ಚಿತ್ರದಿಂದ ಅಲ್ಲು ಅರ್ಜುನ್​ ತಂದೆಗೆ ಭಾರಿ ಲಾಭ; ಎಷ್ಟಕ್ಕೆ ನಡೆಯಿತು ತೆಲುಗು ವ್ಯವಹಾರ?
Image
Rishab Shetty: ಒಂದೇ ದಿನಕ್ಕೆ 15 ಕೋಟಿ ರೂಪಾಯಿ ಬಾಚಿದ ‘ಕಾಂತಾರ’; ಪರಭಾಷೆಯಲ್ಲಿ ಭರ್ಜರಿ ಕಮಾಯಿ
Image
Anushka Shetty: ‘ಕಾಂತಾರ’ ನೋಡಿ ಅನುಷ್ಕಾ ಶೆಟ್ಟಿ ಫಿದಾ; ರಿಷಬ್​ ಬಗ್ಗೆ ಸ್ಪೆಷಲ್​ ಮಾತುಗಳನ್ನು ಹೇಳಿದ ಸ್ಟಾರ್​ ನಟಿ
Image
Rishab Shetty: ರಿಷಬ್​ ಶೆಟ್ಟಿ ಕಾಲಿಗೆ ಬಿದ್ದ ಖ್ಯಾತ ಯೂಟ್ಯೂಬರ್​; ಹಿಂದಿ ಪ್ರೇಕ್ಷಕರಲ್ಲಿ ಹೆಚ್ಚಿತು ‘ಕಾಂತಾರ’ ಸೆನ್ಸೇಷನ್​

‘ಚಿತ್ರ ನೋಡಿದ ಮೇಲೆ ಮೌನವಾಯಿತು ದೇಹ, ಮನಸ್ಸು. ಹೊರಬಂದಾಗ ಮಂತ್ರಾಲಯ ನರಸಿಂಹಚಾರ್ ವಾಟ್ಸಾಪ್ ಕರೆಮಾಡಿ ರಾಯರ ದರ್ಶನ ಮಾಡಿಸಿದರು. ನಂತರ ನನಗೆ ಅನ್ನಿಸಿದ್ದು, ಇದು ರಿಷಬ್​ ಮಾಡಿದ ಚಿತ್ರವಲ್ಲ. ಬದಲಿಗೆ ಆತನ ವಂಶೀಕರ ತಂದೆ ತಾಯಿಯ ಆಶೀರ್ವಾದ, ನಶಿಸುತ್ತಿರುವ ಆಧ್ಯಾತ್ಮಿಕ ಭಾವ ಮತ್ತೆ ಮನುಷ್ಯರಿಗೆ ನೆನಪಿಸಲು ದೇವರೇ ಬಂದು ಆತನ ಕೈಯಲ್ಲಿ ಇಂಥ ಅದ್ಭುತ ಸಿನಿಮಾ ಮಾಡಿಸಿದ್ದಾರೆ. ದೇವರು ನೂರ್ಕಾಲ ಆಯುಷ್ಯ, ಆರೋಗ್ಯ ರಿಷಬ್​ಗೆ ಕೊಟ್ಟು, ಕನ್ನಡ ಕಲಾರಂಗಕ್ಕೆ ಆತನ ಸೇವೆ ಇದೇ ರೀತಿ ಮುಂದುವರಿಯಲಿ ಎಂದು ನನ್ನ ಶುಭಹಾರೈಕೆ. ಕಾಂತಾರ ಸಿನಿಮಾ ಅಲ್ಲ, ರೋಮಾಂಚನ ಅನುಭವ. ಇಡೀ ತಂಡಕ್ಕೆ ದೇವರ ಒಳ್ಳೆಯದು ಮಾಡಲಿ’ ಎಂದು ಜಗ್ಗೇಶ್​ ಅವರು ಇನ್​ಸ್ಟಾಗ್ರಾಮ್​ನಲ್ಲಿ ಬರೆದುಕೊಂಡಿದ್ದಾರೆ.

‘ಕಾಂತಾರ’ ಸಿನಿಮಾ ಈಗ ಕರ್ನಾಟಕಕ್ಕೆ ಮಾತ್ರ ಸೀಮಿತ ಆಗಿಲ್ಲ. ಬೇರೆ ಭಾಷೆಗಳಿಗೆ ಡಬ್​ ಆಗಿ ದೇಶಾದ್ಯಂತ ಸದ್ದು ಮಾಡುತ್ತಿದೆ. ಹಿಂದಿಯಲ್ಲಿ ರಿಲೀಸ್​ ಆದ ಬಳಿಕ ಉತ್ತರ ಭಾರತದಲ್ಲಿನ ಸಿನಿಪ್ರಿಯರು ಈ ಚಿತ್ರವನ್ನು ಮುಗಿಬಿದ್ದು ನೋಡಿದ್ದಾರೆ. ತೆಲುಗು ಪ್ರೇಕ್ಷಕರು ಕೂಡ ಚಿತ್ರವನ್ನು ಎಂಜಾಯ್​ ಮಾಡುತ್ತಿದ್ದಾರೆ. ಎಲ್ಲ ಭಾಷೆಗಳಿಂದ ಭರ್ಜರಿ ಕಲೆಕ್ಷನ್​ ಆಗುತ್ತಿದೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ
ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ
ಅಮೆಜಾನ್ ವಿಶೇಷ ಆಫರ್ ಸೇಲ್ ಮುಂದಿನ ವಾರವೇ ಆರಂಭ!
ಅಮೆಜಾನ್ ವಿಶೇಷ ಆಫರ್ ಸೇಲ್ ಮುಂದಿನ ವಾರವೇ ಆರಂಭ!
ಭಾವ್​ನಗರದಲ್ಲಿ ಗುಜರಾತ್​ನ ಮೊಟ್ಟಮೊದಲ ಧಾನ್ಯಗಳ ಎಟಿಎಂ ಸ್ಥಾಪನೆ
ಭಾವ್​ನಗರದಲ್ಲಿ ಗುಜರಾತ್​ನ ಮೊಟ್ಟಮೊದಲ ಧಾನ್ಯಗಳ ಎಟಿಎಂ ಸ್ಥಾಪನೆ