ಹುಲಿ ಉಗುರು ಪ್ರಕರಣ: ಅರಣ್ಯಾಧಿಕಾರಿಗಳ ಕ್ರಮ ಪ್ರಶ್ನಿಸಿ ಹೈಕೋರ್ಟ್​​ ಮೊರೆಹೋದ ಜಗ್ಗೇಶ್

‘ಪೂರ್ತಿ ಮನೆಯಲ್ಲಿನ ವಸ್ತುಗಳನ್ನು ಚೆಲ್ಲಾಪಿಲ್ಲಿ ಮಾಡಿದ್ದಾರೆ. ಸಂದರ್ಶನದಲ್ಲಿ ಹೇಳಿದ ಮಾತನ್ನಾಧರಿಸಿ ತೇಜೋವಧೆ ಮಾಡಲಾಗಿದೆ. ಅರಣ್ಯಾಧಿಕಾರಿಗಳ ಕ್ರಮ ಕಾನೂನುಬಾಹಿರವೆಂದು ಘೋಷಿಸಬೇಕು’ ಎಂಬುದಾಗಿ ಜಗ್ಗೇಶ್ ಪರ ವಕೀಲರು ಅರ್ಜಿಯಲ್ಲಿ ತಿಳಿಸಿದ್ದಾರೆ.

ಹುಲಿ ಉಗುರು ಪ್ರಕರಣ: ಅರಣ್ಯಾಧಿಕಾರಿಗಳ ಕ್ರಮ ಪ್ರಶ್ನಿಸಿ ಹೈಕೋರ್ಟ್​​ ಮೊರೆಹೋದ ಜಗ್ಗೇಶ್
ಜಗ್ಗೇಶ್
Follow us
| Updated By: Digi Tech Desk

Updated on:Oct 26, 2023 | 12:33 PM

ನಟ ಜಗ್ಗೇಶ್ (Jaggesh) ಅವರು ಹುಲಿ ಉಗುರು ಹೊಂದಿರುವ ಪ್ರಕರಣದಲ್ಲಿ ಸಂಕಷ್ಟ ಅನುಭವಿಸಿದ್ದಾರೆ. ಅವರ ಮನೆಗೆ ಆಗಮಿಸಿ ಅರಣ್ಯಾಧಿಕಾರಿಗಳು ಶೋಧ ನಡೆಸಿದ್ದಾರೆ. ಈ ವಿಚಾರದಲ್ಲಿ ಜಗ್ಗೇಶ್ ಅವರು ಅಸಮಾಧಾನಗೊಂಡಂತಿದೆ. ಅವರು ಈ ಪ್ರಕರಣದಲ್ಲಿ ಕೋರ್ಟ್ ಮೊರೆ ಹೋಗಿದ್ದಾರೆ. ಅರಣ್ಯಾಧಿಕಾರಿಗಳ ಕ್ರಮವನ್ನು ಅವರು ಪ್ರಶ್ನಿಸಿದ್ದಾರೆ. ಜೊತೆಗೆ, ಅರಣ್ಯಾಧಿಕಾರಿಗಳ ಕ್ರಮವನ್ನು ಕಾನೂನುಬಾಹಿರವೆಂದು ಘೋಷಿಸಲು ಮನವಿ ಮಾಡಿದ್ದಾರೆ.

ಏನಿದು ಪ್ರಕರಣ?

ಜಗ್ಗೇಶ್ ಅವರು 20ನೇ ವಯಸ್ಸಿನಲ್ಲಿದ್ದಾಗ ಅವರ ತಾಯಿ ಹುಲಿಯ ಉಗುರಿನ ಪೆಂಡೆಂಟ್​ನ ಗಿಫ್ಟ್ ಆಗಿ ನೀಡಿದ್ದರು. ಇದು ಜಗ್ಗೇಶ್ ಕೊರಳಲ್ಲೇ ಇತ್ತು. ಈ ಬಗ್ಗೆ ಅವರು ಸಂದರ್ಶನದಲ್ಲಿ ಹೇಳಿಕೊಂಡಿದ್ದರು. ಹುಲಿ ಉಗುರು ಹೊಂದಿರುವ ಪ್ರಕರಣದಲ್ಲಿ ಬಿಗ್ ಬಾಸ್ ಸ್ಪರ್ಧಿ ವರ್ತೂರು ಸಂತೋಷ್ ಅವರನ್ನು ಬಂಧಿಸಿದ ಬಳಿಕ ಜಗ್ಗೇಶ್ ಬಳಿಯೂ ಹುಲಿ ಉಗುರು ಇದೆ ಎನ್ನುವ ವಿಚಾರ ಮುನ್ನೆಲೆಗೆ ಬಂದಿತ್ತು.

ಕೋರ್ಟ್​ಗೆ ಜಗ್ಗೇಶ್ ಮನವಿ

ನಟ ಜಗ್ಗೇಶ್ ಕೋರ್ಟ್​ಗೆ ಮನವಿ ಮಾಡಿದ್ದಾರೆ. ‘ಅರಣ್ಯಾಧಿಕಾರಿಗಳು ನೀಡಿದ ನೋಟಿಸ್ ರದ್ದು ಪಡಿಸಬೇಕು. ನೋಟಿಸ್​​ಗೆ ಉತ್ತರಿಸುವ ಮೊದಲೇ 14 ಅಧಿಕಾರಿಗಳಿಂದ ದಾಳಿ ನಡೆದಿದೆ. ಪೂರ್ತಿ ಮನೆಯಲ್ಲಿನ ವಸ್ತುಗಳನ್ನು ಚೆಲ್ಲಾಪಿಲ್ಲಿ ಮಾಡಿದ್ದಾರೆ. ಸಂದರ್ಶನದಲ್ಲಿ ಹೇಳಿದ ಮಾತನ್ನಾಧರಿಸಿ ತೇಜೋವಧೆ ಮಾಡಲಾಗಿದೆ. ಅರಣ್ಯಾಧಿಕಾರಿಗಳ ಕ್ರಮ ಕಾನೂನುಬಾಹಿರವೆಂದು ಘೋಷಿಸಬೇಕು’ ಎಂಬುದಾಗಿ ಜಗ್ಗೇಶ್ ಪರ ವಕೀಲರು ಅರ್ಜಿಯಲ್ಲಿ ತಿಳಿಸಿದ್ದಾರೆ.

ಇದನ್ನೂ ಓದಿ: ‘ಕಾನೂನು ದೊಡ್ಡದು, ಅಧಿಕಾರಿಗಳು ಕೇಳಿದ ವಸ್ತು ಒಪ್ಪಿಸಲಾಗಿದೆ’; ಜಗ್ಗೇಶ್ ಭಾವುಕ ಪೋಸ್ಟ್

ಜಗ್ಗೇಶ್ ಟ್ವೀಟ್​ನಲ್ಲೇನಿದೆ?

‘ಕಾನೂನು ದೊಡ್ಡದು. ಅಧಿಕಾರಿಗಳು ಕೇಳಿದವಸ್ತು ಒಪ್ಪಿಸಲಾಗಿದೆ. ಅಮ್ಮ ನೀಡಿದ ಬಹಳ ಹಳೆಯ ಲಾಕೆಟ್ ಇದು ಎಂದು ತಿಳಿಸಿದ್ದೇನೆ. ಎಷ್ಟೋ ದೋಚುವ ಮನುಷ್ಯರು, ದೇಶದ್ರೋಹಿಗಳು, ಕೊಲೆ ಪಾತಕರು, ಸಮಾಜ ಘಾತುಕರಿಗಿಂತ ನನ್ನತಾಯಿ ಕಾಣಿಕೆ ಬಗ್ಗೆ ತಲೆಕೆಡಿಸಿಕೊಂಡ ದೇವರುಗಳಿಗೆ ಧನ್ಯವಾದ. ತಲೆತಗ್ಗಿಸುವ ಯಾವ ಕೆಲಸ ಮಾಡಿಲ್ಲ, ಮಾಡೋದೂ ಇಲ್ಲ’ ಎಂದು ಜಗ್ಗೇಶ್ ಟ್ವೀಟ್ ಮಾಡಿದ್ದಾರೆ.

‘ಒಂದು ವಿಷಯ ಅದ್ಭುತವಾಗಿ ಅರಿತೆ. ಪ್ರೀತಿಸುವವರು 1000 ಜನ ಇದ್ದರೂ ವಿಷಯವಿಲ್ಲದೆ ದ್ವೇಷ ಮಾಡುವ 100 ಜನರು ಇದ್ದೇ ಇರುತ್ತಾರೆ. ಒಂದು ವಿಷಯ ನೆನಪಿಟ್ಟುಕೊಳ್ಳಿ. ಒಳ್ಳೆಯ ಗುಣ, ನಡತೆ ಇದ್ದಾಗ ಕೊಲ್ಲೋಕೆ ಸಾವಿರಮಂದಿ ಬಂದರೂ ಕಾಯಲು ಒಬ್ಬ ಬರುತ್ತಾನೆ ಅವನೇ ದೇವರು. ಬದುಕಲ್ಲಿ ಸಾಧ್ಯವಾದರೆ ಒಬ್ಬರಿಗೆ ಒಳ್ಳೆಯದನ್ನು ಮಾಡಿ. ಅನ್ಯರಿಗೆ ಕೆಡುಕುಬಯಸಿ ಬಾಳಿದರೆ ನಾಶ’ ಎಂದು ಅವರು ಬರೆದಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Published On - 12:18 pm, Thu, 26 October 23

ಬರೋಬ್ಬರಿ 111 ಎಸೆತಗಳು... ಕೆಟ್ಟ ರೀತಿಯಲ್ಲಿ ಔಟಾದ ಕೆಎಲ್ ರಾಹುಲ್
ಬರೋಬ್ಬರಿ 111 ಎಸೆತಗಳು... ಕೆಟ್ಟ ರೀತಿಯಲ್ಲಿ ಔಟಾದ ಕೆಎಲ್ ರಾಹುಲ್
‘ಕೆಡಿ’ ಸಿನಿಮಾ ಶೂಟಿಂಗ್ ಸೆಟ್​ನಲ್ಲಿ ಧ್ರುವ ಸರ್ಜಾ ಗಣೇಶೋತ್ಸವ ಆಚರಣೆ
‘ಕೆಡಿ’ ಸಿನಿಮಾ ಶೂಟಿಂಗ್ ಸೆಟ್​ನಲ್ಲಿ ಧ್ರುವ ಸರ್ಜಾ ಗಣೇಶೋತ್ಸವ ಆಚರಣೆ
ವಿದ್ಯಾರ್ಥಿನಿಯರ ಮೇಲೆ ಗೂಳಿ ದಾಳಿ; ಭಯಾನಕ ದೃಶ್ಯ ಸಿಸಿಟಿವಿಯಲ್ಲಿ ಸೆರೆ
ವಿದ್ಯಾರ್ಥಿನಿಯರ ಮೇಲೆ ಗೂಳಿ ದಾಳಿ; ಭಯಾನಕ ದೃಶ್ಯ ಸಿಸಿಟಿವಿಯಲ್ಲಿ ಸೆರೆ
ಹುಬ್ಬಳ್ಳಿ ಈದ್ಗಾ ಮೈದಾನ ರಾಮಾವತಾರ ಗಣೇಶ ಮೆರವಣಿಗೆಯ ವಿಡಿಯೋ ನೋಡಿ
ಹುಬ್ಬಳ್ಳಿ ಈದ್ಗಾ ಮೈದಾನ ರಾಮಾವತಾರ ಗಣೇಶ ಮೆರವಣಿಗೆಯ ವಿಡಿಯೋ ನೋಡಿ
ಕೋಲಾರ: ಸಂಕಷ್ಟಹರ ಗಣಪತಿ ದೇವಾಲಯದಲ್ಲಿ 10001 ಕರಿಗಡುಬಿನಲ್ಲಿ ಅರಳಿದ ಗಣಪತಿ
ಕೋಲಾರ: ಸಂಕಷ್ಟಹರ ಗಣಪತಿ ದೇವಾಲಯದಲ್ಲಿ 10001 ಕರಿಗಡುಬಿನಲ್ಲಿ ಅರಳಿದ ಗಣಪತಿ
ಗೂಳಿ ದಾಳಿಗೆ ವೃದ್ಧನ ಹೊಟ್ಟೆಯಿಂದ ಹೊರಬಂದ ಕರುಳು; ಸಿಸಿಟಿವಿ ದೃಶ್ಯ
ಗೂಳಿ ದಾಳಿಗೆ ವೃದ್ಧನ ಹೊಟ್ಟೆಯಿಂದ ಹೊರಬಂದ ಕರುಳು; ಸಿಸಿಟಿವಿ ದೃಶ್ಯ
ದರ್ಶನ್​​ ಹಾಗೂ ಪವಿತ್ರಾ ಸಂಬಂಧ ಎಂಥದ್ದು? ಚಾರ್ಜ್​ಶೀಟ್​ನಲ್ಲಿರೋ ಉಲ್ಲೇಖ
ದರ್ಶನ್​​ ಹಾಗೂ ಪವಿತ್ರಾ ಸಂಬಂಧ ಎಂಥದ್ದು? ಚಾರ್ಜ್​ಶೀಟ್​ನಲ್ಲಿರೋ ಉಲ್ಲೇಖ
ಮೈಸೂರಿನಲ್ಲಿ ಗಮನ ಸೆಳೆಯುತ್ತಿವೆ ವಿಶೇಷ ಗಣಪತಿ ವಿಗ್ರಹಗಳು, ವಿಡಿಯೋ ನೋಡಿ
ಮೈಸೂರಿನಲ್ಲಿ ಗಮನ ಸೆಳೆಯುತ್ತಿವೆ ವಿಶೇಷ ಗಣಪತಿ ವಿಗ್ರಹಗಳು, ವಿಡಿಯೋ ನೋಡಿ
ಗಣೇಶ ಚತುರ್ಥಿಯ ಮಹತ್ವ, ಪೂಜೆಗಳನ್ನು ಹೇಗೆ ಮಾಡಬೇಕು? ಈ ವಿಡಿಯೋ ನೋಡಿ
ಗಣೇಶ ಚತುರ್ಥಿಯ ಮಹತ್ವ, ಪೂಜೆಗಳನ್ನು ಹೇಗೆ ಮಾಡಬೇಕು? ಈ ವಿಡಿಯೋ ನೋಡಿ
Nithya Bhavishya: ಗಣೇಶ ಚತುರ್ಥಿ ದಿನದ ರಾಶಿ ಭವಿಷ್ಯ ತಿಳಿಯಿರಿ
Nithya Bhavishya: ಗಣೇಶ ಚತುರ್ಥಿ ದಿನದ ರಾಶಿ ಭವಿಷ್ಯ ತಿಳಿಯಿರಿ