AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದರ್ಶನ್​ ವಿವಾದ: ಫ್ಯಾನ್ಸ್​ ಇಟ್ಟ ಬೇಡಿಕೆಗೆ ಒಂದೇ ಮಾತಲ್ಲಿ ಉತ್ತರಿಸಿದ ಜಗ್ಗೇಶ್​

ಒಂದಷ್ಟು ದಿನಗಳ ಕಾಲ ಸೋಷಿಯಲ್​ ಮೀಡಿಯಾದಿಂದ ದೂರ ಉಳಿದುಕೊಂಡಿದ್ದ ಜಗ್ಗೇಶ್​ ಈಗ ಮತ್ತೆ ಸಕ್ರಿಯರಾಗಿದ್ದಾರೆ. ಇತ್ತೀಚೆಗೆ ಅವರು ಇನ್​ಸ್ಟಾಗ್ರಾಮ್​ನಲ್ಲಿ ಒಂದು ವಿಡಿಯೋ ಹಂಚಿಕೊಂಡರು.

ದರ್ಶನ್​ ವಿವಾದ: ಫ್ಯಾನ್ಸ್​ ಇಟ್ಟ ಬೇಡಿಕೆಗೆ ಒಂದೇ ಮಾತಲ್ಲಿ ಉತ್ತರಿಸಿದ ಜಗ್ಗೇಶ್​
ಜಗ್ಗೇಶ್​, ದರ್ಶನ್​
TV9 Web
| Edited By: |

Updated on: Jul 22, 2021 | 8:54 AM

Share

ಹಲವು ಕಾರಣಗಳಿಂದಾಗಿ ನಟ ದರ್ಶನ್​ (Darshan) ಹೆಸರು ವಿವಾದದ ಕೇಂದ್ರ ಬಿಂದು ಆಗಿದೆ. 25 ಕೋಟಿ ರೂ. ವಂಚನೆಯ ಹುನ್ನಾರದಿಂದ ಶುರುವಾಗಿ, ಸಪ್ಲೈಯರ್ ಮೇಲಿನ ಹಲ್ಲೆ (Darshan Assault Case) ತನಕ ಸಾಗಿಬಂದ ಈ ವಿವಾದದ ಬಗ್ಗೆ ಅನೇಕರು ಮಾತನಾಡಿದ್ದಾರೆ. ಇಂದ್ರಜಿತ್ ಲಂಕೇಶ್​ ಸೇರಿದಂತೆ ಕೆಲವರು ದರ್ಶನ್​ ವಿರುದ್ಧ ಗುಡುಗಿದ್ದರೆ, ಅನೇಕ ಅಭಿಮಾನಿಗಳು ಮತ್ತು ಸೆಲೆಬ್ರಿಟಿಗಳು ದರ್ಶನ್​ ಪರವಾಗಿ ಬ್ಯಾಟ್​ ಬೀಸುತ್ತಿದ್ದಾರೆ. ಈ ಬಗ್ಗೆ ಸೋಶಿಯಲ್​ ಮೀಡಿಯಾದಲ್ಲಿ ಚರ್ಚೆ ಜೋರಾಗಿದ್ದು, ನಟ ಜಗ್ಗೇಶ್​ (Jaggesh) ಅವರಿಗೂ ಕೆಲವು ಅಭಿಮಾನಿಗಳು ಪ್ರಶ್ನೆಯೊಂದನ್ನು ಕೇಳಿದ್ದಾರೆ.

ಒಂದಷ್ಟು ದಿನಗಳ ಕಾಲ ಸೋಷಿಯಲ್​ ಮೀಡಿಯಾದಿಂದ ದೂರ ಉಳಿದುಕೊಂಡಿದ್ದ ಜಗ್ಗೇಶ್​ ಈಗ ಮತ್ತೆ ಸಕ್ರಿಯರಾಗಿದ್ದಾರೆ. ಇತ್ತೀಚೆಗೆ ಅವರು ಇನ್​ಸ್ಟಾಗ್ರಾಮ್​ನಲ್ಲಿ ಒಂದು ವಿಡಿಯೋ ಹಂಚಿಕೊಂಡರು. ಈ ಚುಟುಕು ವಿಡಿಯೋದಲ್ಲಿ ಅವರು ತಮ್ಮ ಸಿನಿಮಾ ಪ್ಲ್ಯಾನ್​ಗಳ ಬಗ್ಗೆ ಕಿರು ಮಾಹಿತಿ ನೀಡಿದರು. ಅದಕ್ಕೆ ಕಮೆಂಟ್​ ಮಾಡಿದ ಅಭಿಮಾನಿಯೊಬ್ಬರು ದರ್ಶನ್​ ವಿಚಾರ ಎಳೆದುತಂದರು.

‘ಪ್ಲೀಸ್​ ಸರ್, ಡಿ ಬಾಸ್​ ಪರವಾಗಿ ಹೇಳಿಕೆ ನೀಡಿ. ನಿಮ್ಮ ನಡುವೆ ಮನಸ್ತಾಪ ಇದ್ದರೂ ಅಭಿಮಾನಿಗಳ ಸಲುವಾಗಿ ಡಿ ಬಾಸ್​ ಜೊತೆ ಕೈ ಜೋಡಿಸಿ’ ಎಂಬ ಕಮೆಂಟ್ ಅಭಿಮಾನಿಗಳಿಂದ ಬಂದಿದೆ. ಅದಕ್ಕೆ ಒಂದೇ ಮಾತಿನಲ್ಲಿ ಜಗ್ಗೇಶ್​ ಉತ್ತರ ನೀಡಿದ್ದಾರೆ. ‘ನನಗೂ ದರ್ಶನ್​ಗೂ ಯಾವ ಮನಸ್ತಾಪವೂ ಇಲ್ಲ. ಆತ ನನ್ನ ಕಲಾಬಂಧು’ ಎಂದು ‘ನವರಸ ನಾಯಕ’ ಪ್ರತಿಕ್ರಿಯಿಸಿದ್ದಾರೆ.​

ಕೆಲವೇ ತಿಂಗಳ ಹಿಂದೆ ದರ್ಶನ್​ ಅಭಿಮಾನಿಗಳ ಬಗ್ಗೆ ಜಗ್ಗೇಶ್​ ಮಾತನಾಡಿದ್ದಾರೆ ಎನ್ನಲಾದ ಆಡಿಯೋ ಕ್ಲಿಪ್​ ವೈರಲ್​ ಆಗಿತ್ತು. ಅದನ್ನು ಕೇಳಿಸಿಕೊಂಡು ಗರಂ ಆಗಿದ್ದ ಡಿ ಬಾಸ್​ ಅಭಿಮಾನಿಗಳು ಜಗ್ಗೇಶ್ ಅವರನ್ನು ಮುತ್ತಿಗೆ ಹಾಕಿ ತರಾಟೆಗೆ ತೆಗೆದುಕೊಂಡಿದ್ದರು. ಆ ಹಿನ್ನೆಲೆಯಲ್ಲಿ ಜಗ್ಗೇಶ್​ ಮತ್ತು ದರ್ಶನ್​ ನಡುವೆ ಮನಸ್ತಾಪ ಇನ್ನೂ ಮುಂದುವರಿಯುತ್ತಿರಬಹುದು ಎಂಬುದು ಕೆಲವರು ಅನುಮಾನವಾಗಿತ್ತು. ಅದಕ್ಕೆ ಈ ಕಮೆಂಟ್​ ಮೂಲಕ ಜಗ್ಗೇಶ್​ ತೆರೆ ಎಳೆದಿದ್ದಾರೆ.

ಕಳೆದ ಕೆಲವು ದಿನಗಳಿಂದ ಜಗ್ಗೇಶ್​ ಅವರು ನಾಲ್ಕು ಒಳ್ಳೆಯ ಸ್ಕ್ರಿಪ್ಟ್​ಗಳನ್ನು ಕೇಳಿದ್ದಾರೆ. ಆ ಪೈಕಿ ಎರಡಕ್ಕೆ ಗ್ರೀನ್​ ಸಿಗ್ನಲ್​ ನೀಡಿದ್ದು, ಇನ್ನೆರಡು ಸ್ಕ್ರಿಪ್ಟ್​ಗಳ ಮಾತುಕತೆ ನಡೆಯುತ್ತಿದೆ ಎಂದು ಅವರು​ ಮಾಹಿತಿ ನೀಡಿದ್ದಾರೆ. ವಿಜಯ್​ ಪ್ರಸಾದ್​ ನಿರ್ದೇಶನದ ‘ತೋತಾಪುರಿ’ ಸಿನಿಮಾ ಕೆಲಸಗಳಲ್ಲಿ ಅವರು ತೊಡಗಿಕೊಂಡಿದ್ದಾರೆ.

ಇದನ್ನೂ ಓದಿ:

‘ದುರ್ಯೋಧನನ ಪಾತ್ರದಿಂದಲೇ ನಟ ದರ್ಶನ್​​ಗೆ ಅಹಂ ಭಾವ ಹೆಚ್ಚಾಗಿದೆ’; ಹೀಗೊಂದು ನಂಬಿಕೆ

ಅಪಘಾತದಲ್ಲಿ ನಟ ಜಗ್ಗೇಶ್​ ಮಗ ಯತಿರಾಜ್​​ ಕಾರಿನ ಮುಂಭಾಗ ಸಂಪೂರ್ಣ ನಜ್ಜುಗುಜ್ಜು; ಇಲ್ಲಿವೆ ಫೋಟೋಗಳು

Follow Us
ಸಿಎಂ ಆದೇಶ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎಷ್ಟು ಪಾಲನೆ ಆಗ್ತಿದೆ ನೋಡಿ
ಸಿಎಂ ಆದೇಶ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎಷ್ಟು ಪಾಲನೆ ಆಗ್ತಿದೆ ನೋಡಿ
ಮುಸ್ಲಿಂ ಧರ್ಮಗುರುಗಳಿಂದ ಸಿಎಂ, ಕೆಪಿಸಿಸಿ ಅಧ್ಯಕ್ಷರ ಭೇಟಿ: ಮಹತ್ವದ ಬೇಡಿಕೆ
ಮುಸ್ಲಿಂ ಧರ್ಮಗುರುಗಳಿಂದ ಸಿಎಂ, ಕೆಪಿಸಿಸಿ ಅಧ್ಯಕ್ಷರ ಭೇಟಿ: ಮಹತ್ವದ ಬೇಡಿಕೆ
ಜೆಸ್ಕಾಂ ನಿರ್ಲಕ್ಷ್ಯ: ಬೆಳೆಗೆ ನೀರುಣಿಸಲು ವಿದ್ಯುತ್‌ಗಾಗಿ ರೈತರ ಹರಸಾಹಸ
ಜೆಸ್ಕಾಂ ನಿರ್ಲಕ್ಷ್ಯ: ಬೆಳೆಗೆ ನೀರುಣಿಸಲು ವಿದ್ಯುತ್‌ಗಾಗಿ ರೈತರ ಹರಸಾಹಸ
ಧರ್ಮಸ್ಥಳದಲ್ಲಿ BJP ಶಾಸಕರಿಂದ ಆಣೆ ಪ್ರಮಾಣ: ಪ್ರಿಯಾಂಕ್​​ ಖರ್ಗೆ ವ್ಯಂಗ್ಯ
ಧರ್ಮಸ್ಥಳದಲ್ಲಿ BJP ಶಾಸಕರಿಂದ ಆಣೆ ಪ್ರಮಾಣ: ಪ್ರಿಯಾಂಕ್​​ ಖರ್ಗೆ ವ್ಯಂಗ್ಯ
ವಿದ್ಯಾರ್ಥಿಗಳು ನೀಟ್ ಪರೀಕ್ಷೆಯಿಂದ ವಂಚಿತರಾಗಲು ಕಾಂಗ್ರೆಸ್ ಕಾರಣ ಎಂದ ಅಶೋಕ
ವಿದ್ಯಾರ್ಥಿಗಳು ನೀಟ್ ಪರೀಕ್ಷೆಯಿಂದ ವಂಚಿತರಾಗಲು ಕಾಂಗ್ರೆಸ್ ಕಾರಣ ಎಂದ ಅಶೋಕ
ಎಡೆ ಹೊಡೆಯಲು ಎತ್ತುಗಳಂತೆ ನೊಗಕ್ಕೆ ಹೆಗಲು ಕೊಟ್ಟ ರೈತ ಕುಟುಂಬಸ್ಥರು!
ಎಡೆ ಹೊಡೆಯಲು ಎತ್ತುಗಳಂತೆ ನೊಗಕ್ಕೆ ಹೆಗಲು ಕೊಟ್ಟ ರೈತ ಕುಟುಂಬಸ್ಥರು!
ಅಮೆರಿಕದಿಂದ ಇರಾನ್​ಗೆ 300 ಡಾಲರ್ ಆರ್ಥಿಕ ನೆರವು
ಅಮೆರಿಕದಿಂದ ಇರಾನ್​ಗೆ 300 ಡಾಲರ್ ಆರ್ಥಿಕ ನೆರವು
ಬೆಂಗಳೂರಿನಲ್ಲಿ ನಕಲಿ ನಾಗಸಾಧುಗಳಿಂದ ಉಂಗುರ ಕಳ್ಳತನ
ಬೆಂಗಳೂರಿನಲ್ಲಿ ನಕಲಿ ನಾಗಸಾಧುಗಳಿಂದ ಉಂಗುರ ಕಳ್ಳತನ
ಕೋಲಾರದಲ್ಲಿ ವಾಹನಗಳನ್ನು ತಡೆದು ಮಾವು ಬೆಳೆಗಾರರ ಪ್ರತಿಭಟನೆ!
ಕೋಲಾರದಲ್ಲಿ ವಾಹನಗಳನ್ನು ತಡೆದು ಮಾವು ಬೆಳೆಗಾರರ ಪ್ರತಿಭಟನೆ!
ಬ್ರಹ್ಮರಕೂಟ್ಲು ಟೋಲ್ ಗೇಟ್‌ನಲ್ಲಿ ಸಿಪಿಐಎಂ ಕಾರ್ಯಕರ್ತರ ದಾಂಧಲೆ
ಬ್ರಹ್ಮರಕೂಟ್ಲು ಟೋಲ್ ಗೇಟ್‌ನಲ್ಲಿ ಸಿಪಿಐಎಂ ಕಾರ್ಯಕರ್ತರ ದಾಂಧಲೆ