AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Jaggesh: ಶೂಟಿಂಗ್​ ವೇಳೆ ಜಗ್ಗೇಶ್​ ಮೈಮೇಲಿತ್ತು ನಿಜವಾದ ಹಾವು; ಭಯದಲ್ಲಿ ಬಾಯಿಗೆ ಬಂದಂತೆ ಡೈಲಾಗ್​ ಹೇಳಿದ್ದ ನವರಸ ನಾಯಕ

ಇಂದು ನಾಗರ ಪಂಚಮಿ. ಈ ಹಬ್ಬದಂದು ಅಭಿಮಾನಿಯೋರ್ವ ಜಗ್ಗೇಶ್​ ನಟನೆಯ ‘ಬೇಡ ಕೃಷ್ಣ ರಂಗಿನಾಟ' ಚಿತ್ರದ ದೃಶ್ಯ ಹಂಚಿಕೊಂಡಿದ್ದರು. ಅದರ ಶೂಟಿಂಗ್​ ನೆನಪನ್ನು ಜಗ್ಗೆಶ್ ಬಿಚ್ಚಿಟ್ಟಿದ್ದಾರೆ.

Jaggesh: ಶೂಟಿಂಗ್​ ವೇಳೆ ಜಗ್ಗೇಶ್​ ಮೈಮೇಲಿತ್ತು ನಿಜವಾದ ಹಾವು; ಭಯದಲ್ಲಿ ಬಾಯಿಗೆ ಬಂದಂತೆ ಡೈಲಾಗ್​ ಹೇಳಿದ್ದ ನವರಸ ನಾಯಕ
ನಟ ಜಗ್ಗೇಶ್​
TV9 Web
| Updated By: ರಾಜೇಶ್ ದುಗ್ಗುಮನೆ|

Updated on: Aug 13, 2021 | 3:13 PM

Share

ನಟ ಜಗ್ಗೇಶ್​ ಅವರು ಸೋಶಿಯಲ್​ ಮೀಡಿಯಾದಲ್ಲಿ ತುಂಬಾನೇ ಆ್ಯಕ್ಟಿವ್​. ಅಭಿಮಾನಿಗಳು ಕೇಳುವ ಪ್ರತಿ ಪ್ರಶ್ನೆಗೂ ಅವರ ಕಡೆಯಿಂದ ಉತ್ತರ ಸಿಗುತ್ತದೆ. ಅಭಿಮಾನಿಗಳ ಜತೆ ನಿರಂತರವಾಗಿ ಸಂಪರ್ಕದಲ್ಲಿರೋಕೆ ಅವರು ಟ್ವಿಟರ್​ಅನ್ನು​ ಹೆಚ್ಚು ಬಳಕೆ ಮಾಡುತ್ತಾರೆ. ಇಂದು ನಾಗರ ಪಂಚಮಿ. ಈ ಹಬ್ಬದಂದು ಅಭಿಮಾನಿಯೋರ್ವ ಜಗ್ಗೇಶ್​ ನಟನೆಯ ‘ಬೇಡ ಕೃಷ್ಣ ರಂಗಿನಾಟ’ ಚಿತ್ರದ ದೃಶ್ಯ ಹಂಚಿಕೊಂಡಿದ್ದರು. ಅದರ ಶೂಟಿಂಗ್​ ನೆನಪನ್ನು ಜಗ್ಗೆಶ್ ಬಿಚ್ಚಿಟ್ಟಿದ್ದಾರೆ.

‘ಬೇಡ ಕೃಷ್ಣ ರಂಗಿನಾಟ’ 1994ರಲ್ಲಿ ತೆರೆಗೆ ಬಂದಿತ್ತು. ಈ ಸಿನಿಮಾವನ್ನು  ರಾಜ್‌ ಕಿಶೋರ್ ನಿರ್ದೇಶನ ಮಾಡಿದ್ದರು. ಜಗ್ಗೇಶ್‌ಗೆ ಜೋಡಿಯಾಗಿ ಪಾಯಲ್ ಮಲ್ಹೋತ್ರ ಮತ್ತು ಸಿಂಧುಜಾ ನಟಿಸಿದ್ದರು. ಈ ಸಿನಿಮಾದಲ್ಲಿ ಜಗ್ಗೆಶ್​ ಕತ್ತಿಗೆ ಹಾವನ್ನು ಸುತ್ತಿಕೊಂಡಿರುವ ದೃಶ್ಯ ಬರುತ್ತದೆ. ಈ ವೇಳೆ ಜಗ್ಗೇಶ್​ ಕತ್ತಿನಲ್ಲಿ ನಿಜವಾದ ಹಾವೇ ಇದ್ದಿತ್ತಂತೆ.

ಈ ದೃಶ್ಯದ ಶೂಟಿಂಗ್​ ಬಗ್ಗೆ ಜಗ್ಗೇಶ್​ ಮಾತನಾಡಿದ್ದಾರೆ. ‘ಅದ್ಭುತ ದೃಶ್ಯ. ಆದರೆ, ಅಂದು ಹೃದಯ ಬಾಯಿಗೆ ಬಂದಿತ್ತು. ಕಾರಣ ಆ ಹಾವು ಹಿಡಿದು ಮೂರು ದಿನ ಆಗಿತ್ತು ಅಷ್ಟೇ. ಅಲ್ಲಿ ಆಡಿರುವುದು ಸಂಭಾಷಣೆ ಅಲ್ಲ, ಭಯಕ್ಕೆ ನಿರ್ದೇಶಕನ ಬೈದದ್ದು. ನಂತರ ಡಬ್ಬಿಂಗ್​ನಲ್ಲಿ ಈ ಸಂಭಾಷಣೆ ಹೇಳಿದ್ದು. ಪಾಪ ಈ ಚಿತ್ರದ ನಿರ್ದೇಶಕ ನಮ್ಮ ಗುರುಗಳು ರಾಜಕಿಶೋರ್. ಸತ್ತು 17 ವರ್ಷ ಆಯಿತು. ಅಮರ ಹಳೆ ನೆನಪು’ ಎಂದು ಬರೆದುಕೊಂಡಿದ್ದಾರೆ ಜಗ್ಗೇಶ್​.

ಜಗ್ಗೇಶ್​ ಅವರು ನಾಲ್ಕು ಒಳ್ಳೆಯ ಸ್ಕ್ರಿಪ್ಟ್​ಗಳನ್ನು ಕೇಳಿದ್ದಾರೆ. ಆ ಪೈಕಿ ಎರಡಕ್ಕೆ ಗ್ರೀನ್​ ಸಿಗ್ನಲ್​ ನೀಡಿದ್ದು, ಇನ್ನೆರಡು ಸ್ಕ್ರಿಪ್ಟ್​ಗಳ ಮಾತುಕತೆ ನಡೆಯುತ್ತಿದೆ ಎಂದು ಅವರು​ ಇತ್ತೀಚೆಗೆ ಮಾಹಿತಿ ನೀಡಿದ್ದರು. ವಿಜಯ್​ ಪ್ರಸಾದ್​ ನಿರ್ದೇಶನದ ‘ತೋತಾಪುರಿ’ ಸಿನಿಮಾ ಕೆಲಸಗಳಲ್ಲಿ ಅವರು ತೊಡಗಿಕೊಂಡಿದ್ದಾರೆ.

ಇದನ್ನೂ ಓದಿ: Jaggesh: ಜಗ್ಗೇಶ್​ 10ನೇ ಕ್ಲಾಸ್​ ಅಂಕಪಟ್ಟಿ ವೈರಲ್​; ಅಪ್ಪನಿಂದ ಬಿದ್ದಿತ್ತು ಬೂಟಿನ ಏಟು

ನಟ ಜಗ್ಗೇಶ್​ ನೆನಪಿನ ಪುಟದಲ್ಲಿವೆ ‘ಅಭಿನಯ ಶಾರದೆ’ ಜಯಂತಿ ಜೊತೆ ಕಳೆದ ಸುಂದರ ಕ್ಷಣಗಳು

ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ