AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Jaggesh: ಶೂಟಿಂಗ್​ ವೇಳೆ ಜಗ್ಗೇಶ್​ ಮೈಮೇಲಿತ್ತು ನಿಜವಾದ ಹಾವು; ಭಯದಲ್ಲಿ ಬಾಯಿಗೆ ಬಂದಂತೆ ಡೈಲಾಗ್​ ಹೇಳಿದ್ದ ನವರಸ ನಾಯಕ

ಇಂದು ನಾಗರ ಪಂಚಮಿ. ಈ ಹಬ್ಬದಂದು ಅಭಿಮಾನಿಯೋರ್ವ ಜಗ್ಗೇಶ್​ ನಟನೆಯ ‘ಬೇಡ ಕೃಷ್ಣ ರಂಗಿನಾಟ' ಚಿತ್ರದ ದೃಶ್ಯ ಹಂಚಿಕೊಂಡಿದ್ದರು. ಅದರ ಶೂಟಿಂಗ್​ ನೆನಪನ್ನು ಜಗ್ಗೆಶ್ ಬಿಚ್ಚಿಟ್ಟಿದ್ದಾರೆ.

Jaggesh: ಶೂಟಿಂಗ್​ ವೇಳೆ ಜಗ್ಗೇಶ್​ ಮೈಮೇಲಿತ್ತು ನಿಜವಾದ ಹಾವು; ಭಯದಲ್ಲಿ ಬಾಯಿಗೆ ಬಂದಂತೆ ಡೈಲಾಗ್​ ಹೇಳಿದ್ದ ನವರಸ ನಾಯಕ
ನಟ ಜಗ್ಗೇಶ್​
TV9 Web
| Edited By: |

Updated on: Aug 13, 2021 | 3:13 PM

Share

ನಟ ಜಗ್ಗೇಶ್​ ಅವರು ಸೋಶಿಯಲ್​ ಮೀಡಿಯಾದಲ್ಲಿ ತುಂಬಾನೇ ಆ್ಯಕ್ಟಿವ್​. ಅಭಿಮಾನಿಗಳು ಕೇಳುವ ಪ್ರತಿ ಪ್ರಶ್ನೆಗೂ ಅವರ ಕಡೆಯಿಂದ ಉತ್ತರ ಸಿಗುತ್ತದೆ. ಅಭಿಮಾನಿಗಳ ಜತೆ ನಿರಂತರವಾಗಿ ಸಂಪರ್ಕದಲ್ಲಿರೋಕೆ ಅವರು ಟ್ವಿಟರ್​ಅನ್ನು​ ಹೆಚ್ಚು ಬಳಕೆ ಮಾಡುತ್ತಾರೆ. ಇಂದು ನಾಗರ ಪಂಚಮಿ. ಈ ಹಬ್ಬದಂದು ಅಭಿಮಾನಿಯೋರ್ವ ಜಗ್ಗೇಶ್​ ನಟನೆಯ ‘ಬೇಡ ಕೃಷ್ಣ ರಂಗಿನಾಟ’ ಚಿತ್ರದ ದೃಶ್ಯ ಹಂಚಿಕೊಂಡಿದ್ದರು. ಅದರ ಶೂಟಿಂಗ್​ ನೆನಪನ್ನು ಜಗ್ಗೆಶ್ ಬಿಚ್ಚಿಟ್ಟಿದ್ದಾರೆ.

‘ಬೇಡ ಕೃಷ್ಣ ರಂಗಿನಾಟ’ 1994ರಲ್ಲಿ ತೆರೆಗೆ ಬಂದಿತ್ತು. ಈ ಸಿನಿಮಾವನ್ನು  ರಾಜ್‌ ಕಿಶೋರ್ ನಿರ್ದೇಶನ ಮಾಡಿದ್ದರು. ಜಗ್ಗೇಶ್‌ಗೆ ಜೋಡಿಯಾಗಿ ಪಾಯಲ್ ಮಲ್ಹೋತ್ರ ಮತ್ತು ಸಿಂಧುಜಾ ನಟಿಸಿದ್ದರು. ಈ ಸಿನಿಮಾದಲ್ಲಿ ಜಗ್ಗೆಶ್​ ಕತ್ತಿಗೆ ಹಾವನ್ನು ಸುತ್ತಿಕೊಂಡಿರುವ ದೃಶ್ಯ ಬರುತ್ತದೆ. ಈ ವೇಳೆ ಜಗ್ಗೇಶ್​ ಕತ್ತಿನಲ್ಲಿ ನಿಜವಾದ ಹಾವೇ ಇದ್ದಿತ್ತಂತೆ.

ಈ ದೃಶ್ಯದ ಶೂಟಿಂಗ್​ ಬಗ್ಗೆ ಜಗ್ಗೇಶ್​ ಮಾತನಾಡಿದ್ದಾರೆ. ‘ಅದ್ಭುತ ದೃಶ್ಯ. ಆದರೆ, ಅಂದು ಹೃದಯ ಬಾಯಿಗೆ ಬಂದಿತ್ತು. ಕಾರಣ ಆ ಹಾವು ಹಿಡಿದು ಮೂರು ದಿನ ಆಗಿತ್ತು ಅಷ್ಟೇ. ಅಲ್ಲಿ ಆಡಿರುವುದು ಸಂಭಾಷಣೆ ಅಲ್ಲ, ಭಯಕ್ಕೆ ನಿರ್ದೇಶಕನ ಬೈದದ್ದು. ನಂತರ ಡಬ್ಬಿಂಗ್​ನಲ್ಲಿ ಈ ಸಂಭಾಷಣೆ ಹೇಳಿದ್ದು. ಪಾಪ ಈ ಚಿತ್ರದ ನಿರ್ದೇಶಕ ನಮ್ಮ ಗುರುಗಳು ರಾಜಕಿಶೋರ್. ಸತ್ತು 17 ವರ್ಷ ಆಯಿತು. ಅಮರ ಹಳೆ ನೆನಪು’ ಎಂದು ಬರೆದುಕೊಂಡಿದ್ದಾರೆ ಜಗ್ಗೇಶ್​.

ಜಗ್ಗೇಶ್​ ಅವರು ನಾಲ್ಕು ಒಳ್ಳೆಯ ಸ್ಕ್ರಿಪ್ಟ್​ಗಳನ್ನು ಕೇಳಿದ್ದಾರೆ. ಆ ಪೈಕಿ ಎರಡಕ್ಕೆ ಗ್ರೀನ್​ ಸಿಗ್ನಲ್​ ನೀಡಿದ್ದು, ಇನ್ನೆರಡು ಸ್ಕ್ರಿಪ್ಟ್​ಗಳ ಮಾತುಕತೆ ನಡೆಯುತ್ತಿದೆ ಎಂದು ಅವರು​ ಇತ್ತೀಚೆಗೆ ಮಾಹಿತಿ ನೀಡಿದ್ದರು. ವಿಜಯ್​ ಪ್ರಸಾದ್​ ನಿರ್ದೇಶನದ ‘ತೋತಾಪುರಿ’ ಸಿನಿಮಾ ಕೆಲಸಗಳಲ್ಲಿ ಅವರು ತೊಡಗಿಕೊಂಡಿದ್ದಾರೆ.

ಇದನ್ನೂ ಓದಿ: Jaggesh: ಜಗ್ಗೇಶ್​ 10ನೇ ಕ್ಲಾಸ್​ ಅಂಕಪಟ್ಟಿ ವೈರಲ್​; ಅಪ್ಪನಿಂದ ಬಿದ್ದಿತ್ತು ಬೂಟಿನ ಏಟು

ನಟ ಜಗ್ಗೇಶ್​ ನೆನಪಿನ ಪುಟದಲ್ಲಿವೆ ‘ಅಭಿನಯ ಶಾರದೆ’ ಜಯಂತಿ ಜೊತೆ ಕಳೆದ ಸುಂದರ ಕ್ಷಣಗಳು

Follow Us
ಸಿಎಂ ಆದೇಶ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎಷ್ಟು ಪಾಲನೆ ಆಗ್ತಿದೆ ನೋಡಿ
ಸಿಎಂ ಆದೇಶ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎಷ್ಟು ಪಾಲನೆ ಆಗ್ತಿದೆ ನೋಡಿ
ಮುಸ್ಲಿಂ ಧರ್ಮಗುರುಗಳಿಂದ ಸಿಎಂ, ಕೆಪಿಸಿಸಿ ಅಧ್ಯಕ್ಷರ ಭೇಟಿ: ಮಹತ್ವದ ಬೇಡಿಕೆ
ಮುಸ್ಲಿಂ ಧರ್ಮಗುರುಗಳಿಂದ ಸಿಎಂ, ಕೆಪಿಸಿಸಿ ಅಧ್ಯಕ್ಷರ ಭೇಟಿ: ಮಹತ್ವದ ಬೇಡಿಕೆ
ಜೆಸ್ಕಾಂ ನಿರ್ಲಕ್ಷ್ಯ: ಬೆಳೆಗೆ ನೀರುಣಿಸಲು ವಿದ್ಯುತ್‌ಗಾಗಿ ರೈತರ ಹರಸಾಹಸ
ಜೆಸ್ಕಾಂ ನಿರ್ಲಕ್ಷ್ಯ: ಬೆಳೆಗೆ ನೀರುಣಿಸಲು ವಿದ್ಯುತ್‌ಗಾಗಿ ರೈತರ ಹರಸಾಹಸ
ಧರ್ಮಸ್ಥಳದಲ್ಲಿ BJP ಶಾಸಕರಿಂದ ಆಣೆ ಪ್ರಮಾಣ: ಪ್ರಿಯಾಂಕ್​​ ಖರ್ಗೆ ವ್ಯಂಗ್ಯ
ಧರ್ಮಸ್ಥಳದಲ್ಲಿ BJP ಶಾಸಕರಿಂದ ಆಣೆ ಪ್ರಮಾಣ: ಪ್ರಿಯಾಂಕ್​​ ಖರ್ಗೆ ವ್ಯಂಗ್ಯ
ವಿದ್ಯಾರ್ಥಿಗಳು ನೀಟ್ ಪರೀಕ್ಷೆಯಿಂದ ವಂಚಿತರಾಗಲು ಕಾಂಗ್ರೆಸ್ ಕಾರಣ ಎಂದ ಅಶೋಕ
ವಿದ್ಯಾರ್ಥಿಗಳು ನೀಟ್ ಪರೀಕ್ಷೆಯಿಂದ ವಂಚಿತರಾಗಲು ಕಾಂಗ್ರೆಸ್ ಕಾರಣ ಎಂದ ಅಶೋಕ
ಎಡೆ ಹೊಡೆಯಲು ಎತ್ತುಗಳಂತೆ ನೊಗಕ್ಕೆ ಹೆಗಲು ಕೊಟ್ಟ ರೈತ ಕುಟುಂಬಸ್ಥರು!
ಎಡೆ ಹೊಡೆಯಲು ಎತ್ತುಗಳಂತೆ ನೊಗಕ್ಕೆ ಹೆಗಲು ಕೊಟ್ಟ ರೈತ ಕುಟುಂಬಸ್ಥರು!
ಅಮೆರಿಕದಿಂದ ಇರಾನ್​ಗೆ 300 ಡಾಲರ್ ಆರ್ಥಿಕ ನೆರವು
ಅಮೆರಿಕದಿಂದ ಇರಾನ್​ಗೆ 300 ಡಾಲರ್ ಆರ್ಥಿಕ ನೆರವು
ಬೆಂಗಳೂರಿನಲ್ಲಿ ನಕಲಿ ನಾಗಸಾಧುಗಳಿಂದ ಉಂಗುರ ಕಳ್ಳತನ
ಬೆಂಗಳೂರಿನಲ್ಲಿ ನಕಲಿ ನಾಗಸಾಧುಗಳಿಂದ ಉಂಗುರ ಕಳ್ಳತನ
ಕೋಲಾರದಲ್ಲಿ ವಾಹನಗಳನ್ನು ತಡೆದು ಮಾವು ಬೆಳೆಗಾರರ ಪ್ರತಿಭಟನೆ!
ಕೋಲಾರದಲ್ಲಿ ವಾಹನಗಳನ್ನು ತಡೆದು ಮಾವು ಬೆಳೆಗಾರರ ಪ್ರತಿಭಟನೆ!
ಬ್ರಹ್ಮರಕೂಟ್ಲು ಟೋಲ್ ಗೇಟ್‌ನಲ್ಲಿ ಸಿಪಿಐಎಂ ಕಾರ್ಯಕರ್ತರ ದಾಂಧಲೆ
ಬ್ರಹ್ಮರಕೂಟ್ಲು ಟೋಲ್ ಗೇಟ್‌ನಲ್ಲಿ ಸಿಪಿಐಎಂ ಕಾರ್ಯಕರ್ತರ ದಾಂಧಲೆ