AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Jaggesh: ಶೂಟಿಂಗ್​ ವೇಳೆ ಜಗ್ಗೇಶ್​ ಮೈಮೇಲಿತ್ತು ನಿಜವಾದ ಹಾವು; ಭಯದಲ್ಲಿ ಬಾಯಿಗೆ ಬಂದಂತೆ ಡೈಲಾಗ್​ ಹೇಳಿದ್ದ ನವರಸ ನಾಯಕ

ಇಂದು ನಾಗರ ಪಂಚಮಿ. ಈ ಹಬ್ಬದಂದು ಅಭಿಮಾನಿಯೋರ್ವ ಜಗ್ಗೇಶ್​ ನಟನೆಯ ‘ಬೇಡ ಕೃಷ್ಣ ರಂಗಿನಾಟ' ಚಿತ್ರದ ದೃಶ್ಯ ಹಂಚಿಕೊಂಡಿದ್ದರು. ಅದರ ಶೂಟಿಂಗ್​ ನೆನಪನ್ನು ಜಗ್ಗೆಶ್ ಬಿಚ್ಚಿಟ್ಟಿದ್ದಾರೆ.

Jaggesh: ಶೂಟಿಂಗ್​ ವೇಳೆ ಜಗ್ಗೇಶ್​ ಮೈಮೇಲಿತ್ತು ನಿಜವಾದ ಹಾವು; ಭಯದಲ್ಲಿ ಬಾಯಿಗೆ ಬಂದಂತೆ ಡೈಲಾಗ್​ ಹೇಳಿದ್ದ ನವರಸ ನಾಯಕ
ನಟ ಜಗ್ಗೇಶ್​
TV9 Web
| Updated By: ರಾಜೇಶ್ ದುಗ್ಗುಮನೆ|

Updated on: Aug 13, 2021 | 3:13 PM

Share

ನಟ ಜಗ್ಗೇಶ್​ ಅವರು ಸೋಶಿಯಲ್​ ಮೀಡಿಯಾದಲ್ಲಿ ತುಂಬಾನೇ ಆ್ಯಕ್ಟಿವ್​. ಅಭಿಮಾನಿಗಳು ಕೇಳುವ ಪ್ರತಿ ಪ್ರಶ್ನೆಗೂ ಅವರ ಕಡೆಯಿಂದ ಉತ್ತರ ಸಿಗುತ್ತದೆ. ಅಭಿಮಾನಿಗಳ ಜತೆ ನಿರಂತರವಾಗಿ ಸಂಪರ್ಕದಲ್ಲಿರೋಕೆ ಅವರು ಟ್ವಿಟರ್​ಅನ್ನು​ ಹೆಚ್ಚು ಬಳಕೆ ಮಾಡುತ್ತಾರೆ. ಇಂದು ನಾಗರ ಪಂಚಮಿ. ಈ ಹಬ್ಬದಂದು ಅಭಿಮಾನಿಯೋರ್ವ ಜಗ್ಗೇಶ್​ ನಟನೆಯ ‘ಬೇಡ ಕೃಷ್ಣ ರಂಗಿನಾಟ’ ಚಿತ್ರದ ದೃಶ್ಯ ಹಂಚಿಕೊಂಡಿದ್ದರು. ಅದರ ಶೂಟಿಂಗ್​ ನೆನಪನ್ನು ಜಗ್ಗೆಶ್ ಬಿಚ್ಚಿಟ್ಟಿದ್ದಾರೆ.

‘ಬೇಡ ಕೃಷ್ಣ ರಂಗಿನಾಟ’ 1994ರಲ್ಲಿ ತೆರೆಗೆ ಬಂದಿತ್ತು. ಈ ಸಿನಿಮಾವನ್ನು  ರಾಜ್‌ ಕಿಶೋರ್ ನಿರ್ದೇಶನ ಮಾಡಿದ್ದರು. ಜಗ್ಗೇಶ್‌ಗೆ ಜೋಡಿಯಾಗಿ ಪಾಯಲ್ ಮಲ್ಹೋತ್ರ ಮತ್ತು ಸಿಂಧುಜಾ ನಟಿಸಿದ್ದರು. ಈ ಸಿನಿಮಾದಲ್ಲಿ ಜಗ್ಗೆಶ್​ ಕತ್ತಿಗೆ ಹಾವನ್ನು ಸುತ್ತಿಕೊಂಡಿರುವ ದೃಶ್ಯ ಬರುತ್ತದೆ. ಈ ವೇಳೆ ಜಗ್ಗೇಶ್​ ಕತ್ತಿನಲ್ಲಿ ನಿಜವಾದ ಹಾವೇ ಇದ್ದಿತ್ತಂತೆ.

ಈ ದೃಶ್ಯದ ಶೂಟಿಂಗ್​ ಬಗ್ಗೆ ಜಗ್ಗೇಶ್​ ಮಾತನಾಡಿದ್ದಾರೆ. ‘ಅದ್ಭುತ ದೃಶ್ಯ. ಆದರೆ, ಅಂದು ಹೃದಯ ಬಾಯಿಗೆ ಬಂದಿತ್ತು. ಕಾರಣ ಆ ಹಾವು ಹಿಡಿದು ಮೂರು ದಿನ ಆಗಿತ್ತು ಅಷ್ಟೇ. ಅಲ್ಲಿ ಆಡಿರುವುದು ಸಂಭಾಷಣೆ ಅಲ್ಲ, ಭಯಕ್ಕೆ ನಿರ್ದೇಶಕನ ಬೈದದ್ದು. ನಂತರ ಡಬ್ಬಿಂಗ್​ನಲ್ಲಿ ಈ ಸಂಭಾಷಣೆ ಹೇಳಿದ್ದು. ಪಾಪ ಈ ಚಿತ್ರದ ನಿರ್ದೇಶಕ ನಮ್ಮ ಗುರುಗಳು ರಾಜಕಿಶೋರ್. ಸತ್ತು 17 ವರ್ಷ ಆಯಿತು. ಅಮರ ಹಳೆ ನೆನಪು’ ಎಂದು ಬರೆದುಕೊಂಡಿದ್ದಾರೆ ಜಗ್ಗೇಶ್​.

ಜಗ್ಗೇಶ್​ ಅವರು ನಾಲ್ಕು ಒಳ್ಳೆಯ ಸ್ಕ್ರಿಪ್ಟ್​ಗಳನ್ನು ಕೇಳಿದ್ದಾರೆ. ಆ ಪೈಕಿ ಎರಡಕ್ಕೆ ಗ್ರೀನ್​ ಸಿಗ್ನಲ್​ ನೀಡಿದ್ದು, ಇನ್ನೆರಡು ಸ್ಕ್ರಿಪ್ಟ್​ಗಳ ಮಾತುಕತೆ ನಡೆಯುತ್ತಿದೆ ಎಂದು ಅವರು​ ಇತ್ತೀಚೆಗೆ ಮಾಹಿತಿ ನೀಡಿದ್ದರು. ವಿಜಯ್​ ಪ್ರಸಾದ್​ ನಿರ್ದೇಶನದ ‘ತೋತಾಪುರಿ’ ಸಿನಿಮಾ ಕೆಲಸಗಳಲ್ಲಿ ಅವರು ತೊಡಗಿಕೊಂಡಿದ್ದಾರೆ.

ಇದನ್ನೂ ಓದಿ: Jaggesh: ಜಗ್ಗೇಶ್​ 10ನೇ ಕ್ಲಾಸ್​ ಅಂಕಪಟ್ಟಿ ವೈರಲ್​; ಅಪ್ಪನಿಂದ ಬಿದ್ದಿತ್ತು ಬೂಟಿನ ಏಟು

ನಟ ಜಗ್ಗೇಶ್​ ನೆನಪಿನ ಪುಟದಲ್ಲಿವೆ ‘ಅಭಿನಯ ಶಾರದೆ’ ಜಯಂತಿ ಜೊತೆ ಕಳೆದ ಸುಂದರ ಕ್ಷಣಗಳು

ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ