AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜಗ್ಗೇಶ್​ರನ್ನು ತೋರಿಸಿ ‘ಇದು ನಮ್ಮ ರಜನಿಕಾಂತ’ ಎಂದು ಅಪ್ಪುಗೆ ಪರಿಚಯಿಸಿದ್ದ ಅಣ್ಣಾವ್ರು; ಪೋಟೋ ಹಿಂದಿನ​ ಕಥೆ

Jaggesh | Puneeth Rajkumar: ಅದು ರಾಘವೇಂದ್ರ ರಾಜ್​ಕುಮಾರ್​ ಅವರ ಮದುವೆಯ ಸಂದರ್ಭ. ಆಗ ಮೊದಲ ಬಾರಿಗೆ ಪುನೀತ್​ ಅವರನ್ನು ಭೇಟಿ ಆಗುವ ಅವಕಾಶ ಜಗ್ಗೇ​ಶ್​ಗೆ ಸಿಕ್ಕಿತ್ತು.

ಜಗ್ಗೇಶ್​ರನ್ನು ತೋರಿಸಿ ‘ಇದು ನಮ್ಮ ರಜನಿಕಾಂತ’ ಎಂದು ಅಪ್ಪುಗೆ ಪರಿಚಯಿಸಿದ್ದ ಅಣ್ಣಾವ್ರು; ಪೋಟೋ ಹಿಂದಿನ​ ಕಥೆ
ಜಗ್ಗೇಶ್​ ಹಂಚಿಕೊಂಡ ಅಪರೂಪದ ಫೋಟೋ
TV9 Web
| Edited By: |

Updated on: Oct 29, 2022 | 12:25 PM

Share

ಇಂದು (ಅ.29) ಪುನೀತ್​ ರಾಜ್​ಕುಮಾರ್​ (Puneeth Rajkumar) ಅವರ ಪುಣ್ಯ ಸ್ಮರಣೆ. ಆ ಪ್ರಯುಕ್ತ ಹಲವು ಬಗೆಯಲ್ಲಿ ಅವರನ್ನು ನೆನಪು ಮಾಡಿಕೊಳ್ಳಲಾಗುತ್ತಿದೆ. ಡಾ. ರಾಜ್​ಕುಮಾರ್​ (Dr Rajkumar) ಕುಟುಂಬದ ಬಗ್ಗೆ ನಟ ಜಗ್ಗೇಶ್ಅವರಿಗೆ ಎಲ್ಲಿಲ್ಲದ ಗೌರವ. ಈ ಬಗ್ಗೆ ಅವರು ಅನೇಕ ಬಾರಿ ಹೇಳಿಕೊಂಡಿದ್ದುಂಟು. ನಟ ಪುನೀತ್​ ರಾಜ್​ಕುಮಾ​ರ್​ ಎಂದರೆ ಜಗ್ಗೇಶ್​ಗೆ ವಿಶೇಷ ಆಭಿಮಾನ. ಆದರೆ ಇಂದು ಅಪ್ಪು ಭೌತಿಕವಾಗಿ ನಮ್ಮೊಂದಿಗೆ ಇಲ್ಲ. ಅವರ ಜೊತೆ ಒಡನಾಡಿದ ಕ್ಷಣಗಳನ್ನು ಎಲ್ಲರೂ ಮೆಲುಕು ಹಾಕುತ್ತಿದ್ದಾರೆ. ಅಪ್ಪು ಅವರನ್ನು ಮೊದಲ ಬಾರಿ ಭೇಟಿಯಾದ ಸಂದರ್ಭವನ್ನು ಜಗ್ಗೇಶ್​ (Jaggesh) ಅವರು ಈಗ ನೆನಪಿಸಿಕೊಂಡಿದ್ದಾರೆ. ಅದರ ಜೊತೆಗೆ ಅವರು ಹಂಚಿಕೊಂಡಿರುವ ಫೋಟೋ ಕೂಡ ಗಮನ ಸೆಳೆಯುತ್ತಿದೆ.

ಅದು ರಾಘವೇಂದ್ರ ರಾಜ್​ಕುಮಾರ್​ ಅವರ ಮದುವೆಯ ಸಂದರ್ಭ. ಆಗ ಮೊದಲ ಬಾರಿಗೆ ಪುನೀತ್​ ಅವರನ್ನು ಭೇಟಿ ಆಗುವ ಅವಕಾಶ ಜಗ್ಗೇ​ಶ್​ಗೆ ಸಿಕ್ಕಿತ್ತು. ಆ ಘಟನೆಯನ್ನು ಅವರು ತಮ್ಮದೇ ಸಾಲುಗಳಲ್ಲಿ ವಿವರಿಸಿದ್ದಾರೆ. ಇನ್​ಸ್ಟಾಗ್ರಾಮ್​ನಲ್ಲಿ ಈ ಕುರಿತು ‘ನವರಸ ನಾಯಕ’ ಪೋಸ್ಟ್​ ಮಾಡಿದ್ದಾರೆ. ಇದಕ್ಕೆ ಅಭಿಮಾನಿಗಳು ಬಗೆಬಗೆಯಲ್ಲಿ ಕಮೆಂಟ್​ ಮಾಡುತ್ತಿದ್ದಾರೆ.

ಇದನ್ನೂ ಓದಿ
Image
Puneetha Parva: ‘ಪುನೀತ ಪರ್ವ’ಕ್ಕೆ ಜಗ್ಗೇಶ್​ ಯಾಕೆ ಬರಲಿಲ್ಲ? ‘ನವರಸ ನಾಯಕ’ ನೀಡಿದ ಕಾರಣ ಇಲ್ಲಿದೆ..
Image
Kantara: ‘ಇದು ರಿಷಬ್​ ಮಾಡಿದ ಚಿತ್ರ ಅಲ್ಲ, ದೇವರೇ ಮಾಡ್ಸಿದ್ದು’; ವಿದೇಶದಲ್ಲಿ ‘ಕಾಂತಾರ’ ನೋಡಿ ಜಗ್ಗೇಶ್​ ಪ್ರತಿಕ್ರಿಯೆ
Image
Jaggesh: ‘ಆ ಮಠ ನನ್ನ ಜಾತಿ ನೋಡಿಲ್ಲ, ಶೂದ್ರನಾದ ನನಗೆ ದೊಡ್ಡ ಸ್ಥಾನ ನೀಡಿದೆ’: ಜಗ್ಗೇಶ್​
Image
Totapuri: ಮಂತ್ರಿ ಮಾಲ್​ ಜಾಗ ಮೊದಲು ಏನಾಗಿತ್ತು? ಹಿಂದಿನ ಘಟನೆ ಮೆಲುಕು ಹಾಕಿದ ಜಗ್ಗೇಶ್​

‘ರಾಘಣನ ಮದುವೆಗೆ ಬರಬೇಕು ಎಂದು ವಜ್ರೇಶ್ವರಿ ಮ್ಯಾನೇಜರ್ ಕಂಠೀರವ ಕುಮಾರ್ ತಿಳಿಸಿದ. ಅಣ್ಣನ ಮನೆಯ ಮದುವೆ ಸಡಗರದಲ್ಲಿ ಭಾಗಿಯಾಗುವ ಸೌಭಾಗ್ಯ. ಪರಿಮಳನಿಗೆ ತಯಾರಾಗಲು ಹೇಳಿದೆ. ಆಗ ನನ್ನ ಬಳಿ ಇದ್ದದ್ದು ಬುಲೆಟ್. ಅದನ್ನ ಏರಿ ಪುನೀತ ಫಾರ್ಮ್​ಗೆ ಹೋದೆವು. ಅಣ್ಣನ ಪ್ರೀತಿಗೆ ಏನು ಹೇಳಬೇಕೋ. ‘ಬಾರಯ್ಯ ಬಾ’ ಎಂದು ಕೂಗಿ ಮೈ ಸವರಿ, ಅವರೇ ಕುಡಿಯಲು ಪಾನಿಯ ನೀಡಿದರು. ಬಂದವರಿಗೆಲ್ಲಾ ನನ್ನ ಪರಿಚಯಿಸಿದರು. ಅದರಲ್ಲಿ ನನ್ನ ವಿಶೇಷ ಪುನೀತ್. ‘ಕಂದ ಇದು ಯಾರು ಗೊತ್ತ? ನಮ್ಮ ರಜನಿಕಾಂತ’ ಎಂದರು. ಬಾಲಕ ಪುನೀತ ಆಶ್ಚರ್ಯದಿಂದ ನನ್ನ ನೋಡಿದ. ನನಗೂ ಆತನ ನೋಡಿ ಆನಂದವಾಯಿತು’ ಎಂದು ಜಗ್ಗೇಶ್​ ಬರಹ ಆರಂಭಿಸಿದ್ದಾರೆ.

‘ಕೆಲ ವರ್ಷ ನಂತರ ಅಣ್ಣನ ಜೊತೆ ಕಲಾವಿದ ಸಂಘದ ಕಾರ್ಯಕ್ರಮದಲ್ಲಿ ಪುನೀತ ನರ್ತಿಸಿದ. ಆಗ ಅವನು ಪ್ರೀತಿಸುವ ಹುಡುಗಿ ಬಂದಿದ್ದಾಳೆ ಅಂತ ಅಮ್ಮ ಎಂದರು. ಜನರ ಮದ್ಯೆ ನನ್ನ ಕಣ್ಣಿಗೆ ಅಶ್ವಿನಿ ಕಾಣಲಿಲ್ಲ. ನಂತರ ಮದುವೆ, ಸೂಪರ್ ಸ್ಟಾರ್ ಎಲ್ಲಾ ಆದರೂ ಅದೇನು ವಿಪರೀತ ಇಷ್ಟಪಡುತ್ತಿದ್ದ. ನಮ್ಮ ಸ್ನೇಹ ವರ್ಣಿಸಲಾಗದ ಸಂಕೋಲೆ. ಕಡೆಯ ದಿನಗಳು ಎಂದು ಭಾವಿಸಲಿಲ್ಲ. ನಿರ್ದೇಶಕ ಸಂತೋಷ ಪುನೀತನ ಜೊತೆ ಮಂತ್ರಾಲಯಕ್ಕೆ ಕರೆದುಕೊಂಡು ಹೋದ. ಆ ದಿನ ಮನಬಿಚ್ಚಿ ಮಾತಾಡಿ ನಕ್ಕು ಸಮಯ ಕಳೆದೆವು. ಕಡೆಯ 3 ದಿನದ ಹಿಂದೆ ಪುನೀತ ಮಲ್ಲೇಶ್ವರಕ್ಕೆ ಬಂದ ವಿಷಯವನ್ನು ಯೋಗಿ ತಿಳಿಸಿದ. ಕರೆ ಮಾಡಿದೆ. ಅಣ್ಣ ಮಲ್ಲೇಶ್ವರದಲ್ಲಿ ಇರುವೆ ಎಂದ. ಹಾಗೆ ಎದ್ದು ಕಾರ್ ಡ್ರೈವ್ ಮಾಡಿ ಹೋದೆ. ಪೂಜೆಗೆ ಕುಳಿತು ತೊಡೆ ನೋವಾಗಿದೆ ಹಾಗಾಗಿ ಚಿಕಿತ್ಸೆಗೆ ಬಂದೆ ಎಂದ. ಚಿಕಿತ್ಸೆ ಮುಗಿದ ಮೇಲೆ ಸತೀಶ್, ನಾನು, ಪುನೀತ ಕೆಲ ಸಮಯ ಮಾತಾಡಿ ನಿರ್ಗಮಿಸಿದೆವು’ ಎಂದು ಆ ಘಟನೆಯನ್ನು ಜಗ್ಗೇಶ್​ ನೆನಪಿಸಿಕೊಂಡಿದ್ದಾರೆ.

‘ಇದಾದ 3 ದಿನಕ್ಕೆ ಪುನೀತ ಹೋಗಿಬಿಟ್ಟ ಅಂದರು. ಹೃದಯ ಒಡೆದು ಚೂರಾಯಿತು. ಜೀವನದ ಆಸಕ್ತಿ, ಬದುಕಿನ ಮೇಲೆ ನಂಬಿಕೆ, ನಾವು ಯಾರು? ಈ ಭೂಮಿಗೆ ಏಕೆ ಬಂದೆವು? ಎಲ್ಲಾ ಇದೆ, ಮುಂದೆ ಇರದು. ಯಾವುದು ಸತ್ಯ? ಯಾವುದು ಮಿತ್ಯ? ನಾನು ಹೇಗೆ ಇರಬೇಕು? ಏನು ಮಾಡಬೇಕು? ಬದುಕು ನಶ್ವರ ಎಂಬ ಅನೇಕ ಪ್ರಶ್ನೆ ನನ್ನ ಕಾಡುತ್ತಿದೆ. ನನ್ನೊಳಗೆ ನಾನು ಬಚ್ಚಿಕೊಂಡು ಸುಮ್ಮನೆ ಇರುವಂತೆ ನಟಿಸಿ ಬದುಕುತ್ತಿರುವೆ. ನನ್ನವರು ಎಂದು ಸಿಕ್ಕಾಗ ಮನಬಿಚ್ಚಿ ಮಾತಾಡುವೆ. ಕೆಲಸ ಇದ್ದಾಗ ಮಾಡುವೆ. ಮಿಕ್ಕಂತೆ ಯಾರಿಗೂ ಸಿಗದೇ ಏಕಾಂತಕ್ಕೆ ಜಾರುವೆ. ಇದು ಪುನೀತ ಸಿಕ್ಕಾಗ, ಇದ್ದಾಗ, ಹೋದಮೇಲೆ ನನ್ನ ಹೃದಯದ ಅನಿಸಿಕೆ’ ಎಂದು ಜಗ್ಗೇಶ್​ ಬರೆದುಕೊಂಡಿದ್ದಾರೆ.

‘ಕಡೆಯ ಮಾತು: ಪುನೀತ, ಅವರ ತಂದೆಯ ಮೀರಿ ಬೆಳೆದು ಉಳಿದ ದೇವಮಾನವ’ ಎಂದು ಜಗ್ಗೇಶ್​ ಅವರು ಬರಹ ಪೂರ್ಣಗೊಳಿಸಿದ್ದಾರೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

ಗಡಿಯಲ್ಲಿ ಸೈನಿಕರಿಗೆ ಸಹಾಯ ಮಾಡಿದ್ದ ಬಾಲಕನಿಗೆ ವಿಶೇಷ ಪುರಸ್ಕಾರ
ಗಡಿಯಲ್ಲಿ ಸೈನಿಕರಿಗೆ ಸಹಾಯ ಮಾಡಿದ್ದ ಬಾಲಕನಿಗೆ ವಿಶೇಷ ಪುರಸ್ಕಾರ
ದೇಶದ ಅತ್ಯುನ್ನತ ಪ್ರಶಸ್ತಿ ಸ್ವೀಕರಿಸಿದ ವೈಭವ್ ಸೂರ್ಯವಂಶಿ
ದೇಶದ ಅತ್ಯುನ್ನತ ಪ್ರಶಸ್ತಿ ಸ್ವೀಕರಿಸಿದ ವೈಭವ್ ಸೂರ್ಯವಂಶಿ
ಉನ್ನಾವ್ ಅತ್ಯಾಚಾರ ಸಂತ್ರಸ್ತೆಯ ಕುಟುಂಬದಿಂದ ನ್ಯಾಯಾಲಯದೆದುರು ಪ್ರತಿಭಟನೆ
ಉನ್ನಾವ್ ಅತ್ಯಾಚಾರ ಸಂತ್ರಸ್ತೆಯ ಕುಟುಂಬದಿಂದ ನ್ಯಾಯಾಲಯದೆದುರು ಪ್ರತಿಭಟನೆ
‘45’ ಸಿನಿಮಾಕ್ಕೆ ಪೈರಸಿ ಕಾಟ: ನಿರ್ಮಾಪಕ ಹೇಳಿದ್ದೇನು?
‘45’ ಸಿನಿಮಾಕ್ಕೆ ಪೈರಸಿ ಕಾಟ: ನಿರ್ಮಾಪಕ ಹೇಳಿದ್ದೇನು?
ಚಿತ್ರದುರ್ಗ ಬಸ್ ದುರಂತಕ್ಕೆ ಬಿಗ್​​​ ಟ್ವಿಸ್ಟ್
ಚಿತ್ರದುರ್ಗ ಬಸ್ ದುರಂತಕ್ಕೆ ಬಿಗ್​​​ ಟ್ವಿಸ್ಟ್
ಶಾಲೆ ಮಕ್ಕಳಿಗೆ ವಿಮಾನದಲ್ಲಿ ಪ್ರವಾಸ: ಮುಖ್ಯ ಶಿಕ್ಷಕರದ್ದೇ ಎಲ್ಲ ಖರ್ಚು!
ಶಾಲೆ ಮಕ್ಕಳಿಗೆ ವಿಮಾನದಲ್ಲಿ ಪ್ರವಾಸ: ಮುಖ್ಯ ಶಿಕ್ಷಕರದ್ದೇ ಎಲ್ಲ ಖರ್ಚು!
ಮೆಟ್ರೋನಲ್ಲಿ ಮೈಮುಟ್ಟಿ ಅಸಭ್ಯ ವರ್ತನೆ: ಕಾಮುಕನ ಕಿರುಕುಳ ಬಿಚ್ಚಿಟ್ಟ ಯುವತಿ
ಮೆಟ್ರೋನಲ್ಲಿ ಮೈಮುಟ್ಟಿ ಅಸಭ್ಯ ವರ್ತನೆ: ಕಾಮುಕನ ಕಿರುಕುಳ ಬಿಚ್ಚಿಟ್ಟ ಯುವತಿ
ಹನಿಮೂನ್ ಟ್ರಿಪ್ ಅರ್ಧದಲ್ಲೇ ವಾಪಸ್ಸಾಗಿ ನವವಧು ಆತ್ಮಹತ್ಯೆ
ಹನಿಮೂನ್ ಟ್ರಿಪ್ ಅರ್ಧದಲ್ಲೇ ವಾಪಸ್ಸಾಗಿ ನವವಧು ಆತ್ಮಹತ್ಯೆ
'ಫಸ್ಟ್​​ ನೈಟ್​​ ದಿನ ಗೊತ್ತಾಯಿತು ಅವನು ಗಂಡಸೇ ಅಲ್ಲ'
'ಫಸ್ಟ್​​ ನೈಟ್​​ ದಿನ ಗೊತ್ತಾಯಿತು ಅವನು ಗಂಡಸೇ ಅಲ್ಲ'
ಇಕ್ಬಾಲ್ ಹುಸೇನ್ ವಿರುದ್ಧ ರೊಚ್ಚಿಗೆದ್ದ ನಗರಸಭೆ ಅಧ್ಯಕ್ಷ! ವಿಡಿಯೋ ನೋಡಿ
ಇಕ್ಬಾಲ್ ಹುಸೇನ್ ವಿರುದ್ಧ ರೊಚ್ಚಿಗೆದ್ದ ನಗರಸಭೆ ಅಧ್ಯಕ್ಷ! ವಿಡಿಯೋ ನೋಡಿ