Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಗುರುಪ್ರಸಾದ್ ಬಿಜೆಪಿ ವಿರೋಧಿ’: ಡೈರೆಕ್ಟರ್ ಸಾವಿನ ಬಳಿಕ ಸಂಚು ವಿವರಿಸಿದ ಜಗ್ಗೇಶ್​

ನಟ ಜಗ್ಗೇಶ್ ಮತ್ತು ಗುರುಪ್ರಸಾದ್ ಅವರು ಮೂರು ಸಿನಿಮಾಗಳಲ್ಲಿ ಜೊತೆಯಾಗಿ ಕೆಲಸ ಮಾಡಿದ್ದರು. ಈಗ ಗುರುಪ್ರಸಾದ್​ ಸಾವಿನ ಸುದ್ದಿ ಕೇಳಿ ಜಗ್ಗೇಶ್ ಅವರು ಪ್ರತಿಕ್ರಿಯೆ ನೀಡಿದ್ದಾರೆ. ತಮ್ಮ ವಿರುದ್ಧ ಗುರುಪ್ರಸಾದ್ ಮಾಡಿದ್ದ ಹುನ್ನಾರದ ಬಗ್ಗೆ ಜಗ್ಗೇಶ್ ಅವರು ವಿವರಿಸಿದ್ದಾರೆ. ‘ರಂಗನಾಯಕ’ ಸಿನಿಮಾದ ವೇಳೆ ಹೆಚ್ಚಿದ ಮನಸ್ತಾಪದ ಬಗ್ಗೆ ಜಗ್ಗೇಶ್ ಮಾತನಾಡಿದ್ದಾರೆ.

‘ಗುರುಪ್ರಸಾದ್ ಬಿಜೆಪಿ ವಿರೋಧಿ’: ಡೈರೆಕ್ಟರ್ ಸಾವಿನ ಬಳಿಕ ಸಂಚು ವಿವರಿಸಿದ ಜಗ್ಗೇಶ್​
ಜಗ್ಗೇಶ್, ಗುರುಪ್ರಸಾದ್​
Follow us
TV9 Web
| Updated By: ಮದನ್​ ಕುಮಾರ್​

Updated on: Nov 03, 2024 | 4:21 PM

‘ಮಠ’ ಮತ್ತು ‘ಎದ್ದೇಳು ಮಂಜುನಾಥ’ ಸಿನಿಮಾಗಳಿಂದ ಜಗ್ಗೇಶ್​ ಮತ್ತು ಗುರುಪ್ರಸಾದ್ ಅವರು ಕಾಂಬಿನೇಷನ್​ಗೆ ಜನಮೆಚ್ಚುಗೆ ಸಿಕ್ಕಿತ್ತು. ಆದರೆ ‘ರಂಗನಾಯಕ’ ಸಿನಿಮಾದಲ್ಲಿ ಸಮಸ್ಯೆ ಉಂಟಾಯಿತು. ಆ ಸಂದರ್ಭವನ್ನು ಜಗ್ಗೇಶ್ ಈಗ ವಿವರಿಸಿದ್ದಾರೆ. ‘ಆತನ ಬದುಕು ಗೊಂದಲಮಯವಾಗಿತ್ತು. ಆದರೂ ಕೂಡ ನಮ್ಮ ಜೊತೆಗೆ ಕೆಲಸ ಮಾಡಿದ್ದ. ‘ಮಠ’ ಮತ್ತು ‘ಎದ್ದೇಳು ಮಂಜುನಾಥ’ ಎಂಥ ಒಳ್ಳೆಯ ಸಿನಿಮಾಗಳು ಅದನ್ನು ನಾನು ಕೊನೇ ಉಸಿರು ಇರುವ ತನಕ ಮರೆಯೋಕೆ ಆಗಲ್ಲ. ಕಲಾವಿದನಾಗಿ ನಾನು ಆ ಸಿನಿಮಾಗಳನ್ನು ಬಹಳ ಪ್ರೀತಿಸಿದೆ. ಇತ್ತೀಚಿನ ದಿನಗಳಲ್ಲಿ ನನಗೆ ಆತನ ಬಗ್ಗೆ ಗೊತ್ತಾಗಿದ್ದು ಏನೆಂದರೆ, ಆತ ಬಿಜೆಪಿ ವಿರೋಧಿ’ ಎಂದಿದ್ದಾರೆ ಜಗ್ಗೇಶ್.

‘ಗುರುಪ್ರಸಾದ್ ಎಡಪಂಥೀಯ ಚಿಂತಕ. ‘ಇವನ ಮಾನ ಮರ್ಯಾದೆಯೆಲ್ಲ ಹೆಂಗೆ ಹರಾಜು ಹಾಕ್ತೀನಿ ನೋಡುತ್ತಾ ಇರಿ’ ಎಂದು ಅವನು ನನ್ನ ಬಗ್ಗೆ ಹೇಳಿಕೊಂಡಿದ್ದನಂತೆ. ಅದು ನನಗೆ ಗೊತ್ತಾಗಿಹೋಯ್ತು. ನಾನು ತುಂಬಾ ಭಯಭೀತನಾದೆ. ಹಾಗಾಗಿ ನನಗೆ ಸಿನಿಮಾ ತೋರಿಸು ಎಂದೆ. ಆದರೆ ಅವನು ತೋರಿಸಲಿಲ್ಲ. ನನ್ನ ಬಳಿ ಪಿಕ್ಚರ್​ ಕೇಳೋದೆಲ್ಲ ಇಟ್ಕೋಬೇಡಿ. ನಾನು ಪಿಕ್ಚರ್ ತೋರಿಸಿಕೊಂಡು ಕೂರುವವನಲ್ಲ ಅಂತ ಹೇಳಿದ್ದ. ಸಿನಿಮಾ ರಿಲೀಸ್​ ಆದ ಬಳಿಕ ನನ್ನ ಜೀವನದಲ್ಲೇ ಆಗದೇ ಇರುವಷ್ಟು ಅವಮಾನ ಆ ಒಂದು ಸಿನಿಮಾದಿಂದ ಆಯಿತು’ ಎಂದು ಜಗ್ಗೇಶ್ ಅವರು ಹೇಳಿದ್ದಾರೆ.

‘ಎಲ್ಲ ಯಶಸ್ವಿ ವ್ಯಕ್ತಿಗಳಿಗೆ ಶಿಸ್ತು ಪ್ರಧಾನವಾಗಿರುತ್ತದೆ. ನಾನು ಕೂಡ ಹಲವು ಕೆಲಸಗಳನ್ನು ಶ್ರದ್ಧಾ ಭಕ್ತಿಯಿಂದ ಮಾಡಿದೆ. ತಾಳ್ಮೆಯಿಂದ ಕಾದು ನಿಮ್ಮಲ್ಲರ ಕಣ್ಣ ಮುಂದೆ ನವರಸ ನಾಯಕ ಆದೆ. ಎಂಎಲ್​ಎ, ಎಂಎಲ್​ಸಿ, ಸಂಸದ ಆದೆ. ತಾಳ್ಮೆ ಇದ್ದರೆ ಪ್ರತಿಯೊಬ್ಬರಿಗೂ ಯಶಸ್ಸು ಬರುತ್ತದೆ’ ಎಂದಿದ್ದಾರೆ ಜಗ್ಗೇಶ್.

ಇದನ್ನೂ ಓದಿ: ನಿರ್ದೇಶಕ ಗುರುಪ್ರಸಾದ್ ಸಾವಿನ ಹಿಂದಿದೆ 4 ಪ್ರಮುಖ ಅನುಮಾನಗಳು

ಕೊಳೆತ ಸ್ಥಿತಿಯಲ್ಲಿ ಗುರುಪ್ರಸಾದ್ ಅವರ ಶವ ಪತ್ತೆ ಆಗಿದೆ. ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ಇದೆ. ತನಿಖೆ ನಡೆಯುತ್ತಿದೆ. ಗುರುಪ್ರಸಾದ್ ನಿಧನಕ್ಕೆ ಅಭಿಮಾನಿಗಳು ಮತ್ತು ಹಲವು ಸೆಲೆಬ್ರಿಟಿಗಳು ಸಂತಾಪ ಸೂಚಿಸಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ರವಿ ಮೀನ ರಾಶಿಯಲ್ಲಿ ಸಂಚರಿಸುವ ಈ ದಿನದ ರಾಶಿ ಭವಿಷ್ಯ ಇಲ್ಲಿದೆ
ರವಿ ಮೀನ ರಾಶಿಯಲ್ಲಿ ಸಂಚರಿಸುವ ಈ ದಿನದ ರಾಶಿ ಭವಿಷ್ಯ ಇಲ್ಲಿದೆ
‘ಕಾವೇರಿ ಆರತಿ’: ಜಲ ರಕ್ಷಣೆ ಬಗ್ಗೆ ಡಿಕೆ ಶಿವಕುಮಾರ್​​ ಪ್ರತಿಜ್ಞಾವಿಧಿ
‘ಕಾವೇರಿ ಆರತಿ’: ಜಲ ರಕ್ಷಣೆ ಬಗ್ಗೆ ಡಿಕೆ ಶಿವಕುಮಾರ್​​ ಪ್ರತಿಜ್ಞಾವಿಧಿ
ಸ್ಪೀಕರ್ ವರ್ತನೆ ಸರಿಯಾ ತಪ್ಪಾ ಅಂತ ಜನ ತೀರ್ಮಾನಿಸುತ್ತಾರೆ: ಯುಟಿ ಖಾದರ್
ಸ್ಪೀಕರ್ ವರ್ತನೆ ಸರಿಯಾ ತಪ್ಪಾ ಅಂತ ಜನ ತೀರ್ಮಾನಿಸುತ್ತಾರೆ: ಯುಟಿ ಖಾದರ್
ಸರ್ಕಾರದ ಕ್ರಮವನ್ನು ಹೈಕೋರ್ಟ್​​ನಲ್ಲಿ ಪ್ರಶ್ನಿಸುತ್ತೇವೆ: ಬಸನಗೌಡ ಯತ್ನಾಳ್
ಸರ್ಕಾರದ ಕ್ರಮವನ್ನು ಹೈಕೋರ್ಟ್​​ನಲ್ಲಿ ಪ್ರಶ್ನಿಸುತ್ತೇವೆ: ಬಸನಗೌಡ ಯತ್ನಾಳ್
ನಿರ್ದೇಶಕ ಎಟಿ ರಘು ನಿಧನದ ಸುದ್ದಿ ಕೇಳಿ ಆಘಾತ ಆಯಿತು: ದೊಡ್ಡಣ್ಣ
ನಿರ್ದೇಶಕ ಎಟಿ ರಘು ನಿಧನದ ಸುದ್ದಿ ಕೇಳಿ ಆಘಾತ ಆಯಿತು: ದೊಡ್ಡಣ್ಣ
ಸದನದ ಗೌರವ ಕಾಪಾಡಲು ನಾವು ಹೋರಾಟ ಮಾಡಿದ್ದು: ಅಶೋಕ
ಸದನದ ಗೌರವ ಕಾಪಾಡಲು ನಾವು ಹೋರಾಟ ಮಾಡಿದ್ದು: ಅಶೋಕ
ಸಸ್ಪೆಂಡ್ ಮಾಡುವ ಪ್ರಸ್ತಾವನೆ ಮಂಡಿಸಿದ ಸಂಸದೀಯ ವ್ಯವಹಾರಗಳ ಸಚಿವ ಪಾಟೀಲ್
ಸಸ್ಪೆಂಡ್ ಮಾಡುವ ಪ್ರಸ್ತಾವನೆ ಮಂಡಿಸಿದ ಸಂಸದೀಯ ವ್ಯವಹಾರಗಳ ಸಚಿವ ಪಾಟೀಲ್
18 ಬಿಜೆಪಿ ಶಾಸಕರು ಅಮಾನತು: ಕೈಕಾಲು ಹಿಡ್ದು ಮುನಿರತ್ನನ ಹೊರಹಾಕಿದ ಮಾರ್ಷಲ್
18 ಬಿಜೆಪಿ ಶಾಸಕರು ಅಮಾನತು: ಕೈಕಾಲು ಹಿಡ್ದು ಮುನಿರತ್ನನ ಹೊರಹಾಕಿದ ಮಾರ್ಷಲ್
ಭಲೇ ಕಳ್ಳರು! ಜಡ್ಜ್ ಮನೆಗೆ ನುಗ್ಗಿ ಕಳ್ಳತನಕ್ಕೆ ಯತ್ನ, ಖದೀಮರ ವಿಡಿಯೋ ನೋಡಿ
ಭಲೇ ಕಳ್ಳರು! ಜಡ್ಜ್ ಮನೆಗೆ ನುಗ್ಗಿ ಕಳ್ಳತನಕ್ಕೆ ಯತ್ನ, ಖದೀಮರ ವಿಡಿಯೋ ನೋಡಿ
ಸಿದ್ದರಾಮಯ್ಯ ಮತ್ತು ಶಿವಕುಮಾರ್ ಆಗಮನದ ನಂತರ ಹೆಚ್ಚಿದ ಗಲಾಟೆ
ಸಿದ್ದರಾಮಯ್ಯ ಮತ್ತು ಶಿವಕುಮಾರ್ ಆಗಮನದ ನಂತರ ಹೆಚ್ಚಿದ ಗಲಾಟೆ