AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Jaggesh’s Son Car Accident: ನಟ ಜಗ್ಗೇಶ್​ ಪುತ್ರ ಯತಿರಾಜ್​ ಇದ್ದ ಕಾರು ಅಪಘಾತ; ಹೈದರಾಬಾದ್​ ರಸ್ತೆಯಲ್ಲಿ ಅವಘಡ

ಬೆಂಗಳೂರು ಹೈದರಾಬಾದ್​ ರಸ್ತೆಯಲ್ಲಿ ಚಲಿಸುವಾಗ ಯತಿರಾಜ್​ ಅವರ ಕಾರು ಮರಕ್ಕೆ ಡಿಕ್ಕಿ ಹೊಡೆದಿರುವುದು ತಿಳಿದುಬಂದಿದೆ. ಅದೃಷ್ಟವಶಾತ್​ ಕಾರಿನಲ್ಲಿದ್ದರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಚಿಕ್ಕಬಳ್ಳಾಪುರ ಸಂಚಾರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದ್ದು ಸ್ಥಳಕ್ಕೆ ಪೊಲೀಸರು ಆಗಮಿಸಿ ಪರಿಶೀಲನೆ ನಡೆಸಿದ್ದಾರೆ.

Jaggesh's Son Car Accident: ನಟ ಜಗ್ಗೇಶ್​ ಪುತ್ರ ಯತಿರಾಜ್​ ಇದ್ದ ಕಾರು ಅಪಘಾತ; ಹೈದರಾಬಾದ್​ ರಸ್ತೆಯಲ್ಲಿ ಅವಘಡ
ಜಗ್ಗೇಶ್​ ಪುತ್ರನಿದ್ದ ಕಾರು ಅಪಘಾತ
Follow us
TV9 Web
| Updated By: guruganesh bhat

Updated on:Jul 01, 2021 | 3:24 PM

ಚಿಕ್ಕಬಳ್ಳಾಪುರ: ಕನ್ನಡ ಚಿತ್ರರಂಗದ ಹಿರಿಯ ನಟ ಜಗ್ಗೇಶ್ ಅವರ ಪುತ್ರ ಯತಿರಾಜ್​ ರಸ್ತೆ ಅಪಘಾತಕ್ಕೆ ತುತ್ತಾಗಿದ್ದಾರೆ. ಯತಿರಾಜ್​ ಅವರ ಕಾರು ಅಪಘಾತಕ್ಕೀಡಾಗಿದ್ದು, ಹೈದರಾಬಾದ್​ ರಸ್ತೆಯಲ್ಲಿ ಘಟನೆ ನಡೆದಿದೆ. ಬೆಂಗಳೂರು ಹೈದರಾಬಾದ್​ ರಸ್ತೆಯಲ್ಲಿ ಚಲಿಸುವಾಗ ಯತಿರಾಜ್​ ಅವರ ಕಾರು ಹೆದ್ದಾರಿಯ ಡಿವೈಡರ್​ಗೆ ಡಿಕ್ಕಿ ಹೊಡೆದಿರುವುದು ತಿಳಿದುಬಂದಿದೆ.

ನಟ ಜಗ್ಗೇಶ್​ ಅವರ ಕಿರಿಯ ಮಗ ಯತಿರಾಜ್​ ಪ್ರಯಾಣಿಸುತ್ತಿದ್ದ ಕಾರು ಚಿಕ್ಕಬಳ್ಳಾಪುರ ತಾಲೂಕಿನ ಅಗಲಗುರ್ಕಿ ಗ್ರಾಮದ ಬಳಿ ಅಪಘಾತಕ್ಕೀಡಾಗಿದೆ. ಹೆದ್ದಾರಿ ಡಿವೈಡರ್​ಗೆ ಡಿಕ್ಕಿ ಹೊಡೆದ ಪರಿಣಾಮ ಕಾರಿನ ಮುಂಭಾಗ ನುಜ್ಜುಗುಜ್ಜಾಗಿದೆ. ಬೆಂಗಳೂರು ಹೈದರಾಬಾದ್ ರಸ್ತೆಯ ಅಗಲಗುರ್ಕಿ ಬಳಿ ಕಾರು ನಿಯಂತ್ರಣ ತಪ್ಪಿದ ಪರಿಣಾಮ ಅವಘಡ ಸಂಭವಿಸಿದ್ದು, ಅದೃಷ್ಟವಶಾತ್​ ಕಾರಿನಲ್ಲಿದ್ದವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಚಿಕ್ಕಬಳ್ಳಾಪುರ ಸಂಚಾರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದ್ದು ಸ್ಥಳಕ್ಕೆ ಪೊಲೀಸರು ಆಗಮಿಸಿ ಪರಿಶೀಲನೆ ನಡೆಸಿದ್ದಾರೆ.

JAGGESH'S SON CAR ACCIDENT

ಸ್ಥಳಕ್ಕೆ ಆಗಮಿಸಿ ಪರಿಶೀಲಿಸಿದ ಪೊಲೀಸರು

JAGGESH'S SON CAR ACCIDENT

ಜಗ್ಗೇಶ್​ ಪುತ್ರ ಗುರುರಾಜ್​ ಚಲಿಸುತ್ತಿದ್ದ ಕಾರು ಅಪಘಾತ

ಹೈದರಾಬಾದ್​ನಿಂದ ಬೆಂಗಳೂರು ಕಡೆಗೆ ಬರುತ್ತಿದ್ದ KA 51 ME 9339 ಸಂಖ್ಯೆಯ ಬಿಳಿ ಬಣ್ಣದ BMW ಕಾರು ಅಪಘಾತಕ್ಕೆ ತುತ್ತಾಗಿದ್ದು, ಕಾರಿನ ಮುಂಬಾಗ ಸಂಪೂರ್ಣ ನುಜ್ಜುಗುಜ್ಜಾಗಿದೆ. ಜಗ್ಗೇಶ್​ ಪುತ್ರ ಯತಿರಾಜ್ ಪ್ರಾಣಾಪಾಯದಿಂದ ಪಾರಾಗಿದ್ದು, ಕಣ್ಣು ಮತ್ತು ಕಿವಿಯ ಬಳಿ ಸಣ್ಣ, ಪುಟ್ಟ ಗಾಯ ಆಗಿದೆ. ಸದ್ಯ ಗಾಯಕ್ಕೆ ಚಿಕಿತ್ಸೆ ಪಡೆಯಲೆಂದು ಸ್ಥಳಿಯ ಆಸ್ಪತ್ರೆಗೆ ತೆರಳಿದ್ದಾರೆ. ಕಾರಿನ ಟೈರ್ ಏಕಾಏಕಿ ಬ್ಲಾಸ್ಟ್ ಆದ ಕಾರಣ ನಿಯಂತ್ರಣ ತಪ್ಪಿ ಡಿವೈಡರ್​​ಗೆ ಡಿಕ್ಕಿ ಹೊಡೆದಿದೆ ಎಂಬ ಮಾಹಿತಿ ಲಭ್ಯವಾಗಿದೆ. ಅದೃಷ್ಟವಶಾತ್​ ಬೇರೆ ಯಾವುದೇ ವಾಹನಗಳು ಆ ಸಂದರ್ಭದಲ್ಲಿ ವೇಗವಾಗಿ ಬರುತ್ತಿರಲಿಲ್ಲವಾದ್ದರಿಂದ ಯಾವುದೇ ದೊಡ್ಡ ಸಮಸ್ಯೆ ಆಗಿಲ್ಲ.

ಕಾರನ್ನು ಸ್ವತಃ ಯತಿರಾಜ್ ಡ್ರೈವ್ ಮಾಡುತ್ತಿದ್ದರು. ಆದರೆ, ಹೇಗೆ ಅಪಘಾತವಾಯಿತು ಎನ್ನುವ ಬಗ್ಗೆ ನಿಖರವಾದ ಕಾರಣ ತಿಳಿದುಬಂದಿಲ್ಲ. ಸದ್ಯಕ್ಕೆ ಯತಿರಾಜ್ ಅವರ ಆರೋಗ್ಯ ಸ್ಥಿತಿ ಚೆನ್ನಾಗಿದೆ ಎಂದು ಕುಟುಂಬಸ್ಥರು ಮಾಹಿತಿ ನೀಡಿದ್ದಾರೆ. ಯತಿರಾಜ್​ ಬಲಗೈಗೆ ಸಣ್ಣ ಗಾಯವಾಗಿದೆ. ತೀರಾ ಗಂಭೀರ ಗಾಯಗಳೇನೂ ಆಗಿಲ್ಲ. ಹೀಗಾಗಿ ಯಾರೂ ಆತಂಕ ಪಡುವ ಅಗತ್ಯವಿಲ್ಲ ಎಂದು ಜಗ್ಗೇಶ್​ ಕುಟುಂಬದಿಂದ ಮಾಹಿತಿ ಲಭ್ಯವಾಗಿದೆ.

ಇದನ್ನೂ ಓದಿ: ಕಣ್ಮುಚ್ಚಿ ಬಿಡುವಷ್ಟರಲ್ಲಿ ಭೀಕರ ಅಪಘಾತ; ಪ್ರಯಾಣಿಕ ಸ್ಥಳದಲ್ಲೇ ಸಾವು

ಸಂಚಾರಿ ವಿಜಯ್​ ಬಳಿಕ ಮತ್ತೋರ್ವ ನಟನಿಗೆ ರಸ್ತೆ ಅಪಘಾತ; ಆಸ್ಪತ್ರೆಗೆ ದಾಖಲು, ಐಸಿಯುನಲ್ಲಿ ಚಿಕಿತ್ಸೆ

Published On - 1:13 pm, Thu, 1 July 21

ಬೆಂಗಳೂರಿನ ಜಯನಗರದಲ್ಲಿ ಧರೆಗೆ ಉರುಳಿದ ಮರ
ಬೆಂಗಳೂರಿನ ಜಯನಗರದಲ್ಲಿ ಧರೆಗೆ ಉರುಳಿದ ಮರ
ನೆಲೆಮಂಗಲ: ಮನೆ ಮುಂದೆ ಕಟ್ಟಿದ್ದ ಹಸುಗಳನ್ನ ಕದ್ದು ಪರಾರಿ, ರೈತ ಕಂಗಾಲು
ನೆಲೆಮಂಗಲ: ಮನೆ ಮುಂದೆ ಕಟ್ಟಿದ್ದ ಹಸುಗಳನ್ನ ಕದ್ದು ಪರಾರಿ, ರೈತ ಕಂಗಾಲು
ಗಂಗಾವತಿ ಉಪ ಚುನಾವಣೆಗೆ ಅನ್ಸಾರಿ ಟಿಕೆಟ್ ಬಯಸಿದ್ದರೆ ತಪ್ಪಿಲ್ಲ: ಸಂಗಣ್ಣ
ಗಂಗಾವತಿ ಉಪ ಚುನಾವಣೆಗೆ ಅನ್ಸಾರಿ ಟಿಕೆಟ್ ಬಯಸಿದ್ದರೆ ತಪ್ಪಿಲ್ಲ: ಸಂಗಣ್ಣ
ದೇಶಕ್ಕಿಂತ ದೊಡ್ಡವರು ಯಾರೂ ಇಲ್ಲ, ದೇಶವುಳಿದರೆ ನಾವು ಉಳಿದಂತೆ: ಶಾಸಕ
ದೇಶಕ್ಕಿಂತ ದೊಡ್ಡವರು ಯಾರೂ ಇಲ್ಲ, ದೇಶವುಳಿದರೆ ನಾವು ಉಳಿದಂತೆ: ಶಾಸಕ
ತಿಂಗಳ ಅವಧಿಯಲ್ಲಿ ಭಕ್ತರಿಂದ ಹುಂಡಿಯಲ್ಲಿ ₹59, 28, 876 ಕಾಣಿಕೆ ಸಂಗ್ರಹ
ತಿಂಗಳ ಅವಧಿಯಲ್ಲಿ ಭಕ್ತರಿಂದ ಹುಂಡಿಯಲ್ಲಿ ₹59, 28, 876 ಕಾಣಿಕೆ ಸಂಗ್ರಹ
ಎರಡು ವರ್ಷಗಳಿಂದ ತಮ್ಮಯ್ಯ-ರವಿ ಮಧ್ಯೆ ಆಗಾಗ್ಗೆ ನಡೆಯುತ್ತಿದೆ ಮಾತಿನ ಕಲಹ
ಎರಡು ವರ್ಷಗಳಿಂದ ತಮ್ಮಯ್ಯ-ರವಿ ಮಧ್ಯೆ ಆಗಾಗ್ಗೆ ನಡೆಯುತ್ತಿದೆ ಮಾತಿನ ಕಲಹ
ಡಿಜೆ ಸೌಂಡ್, ಅತಿಯಾದ ಬೆಳಕು ಹೃದಯಾಘಾತಕ್ಕೆ ಕಾರಣವಾಗುತ್ತದೆಯೇ?
ಡಿಜೆ ಸೌಂಡ್, ಅತಿಯಾದ ಬೆಳಕು ಹೃದಯಾಘಾತಕ್ಕೆ ಕಾರಣವಾಗುತ್ತದೆಯೇ?
ಐಪಿಎಲ್: ಬೆಂಗಳೂರಿನ ಈ ರಸ್ತೆಗಳಲ್ಲಿ ಕಿಲೋಮೀಟರ್​ಗಟ್ಟಲೇ ಟ್ರಾಫಿಕ್ ಜಾಮ್
ಐಪಿಎಲ್: ಬೆಂಗಳೂರಿನ ಈ ರಸ್ತೆಗಳಲ್ಲಿ ಕಿಲೋಮೀಟರ್​ಗಟ್ಟಲೇ ಟ್ರಾಫಿಕ್ ಜಾಮ್
ಒಡಿಷಾದಿಂದ ಬಂದಿರುವ ಕೊಹ್ಲಿ ಕಟ್ಟಾಭಿಮಾನಿಗೆ ಟಿಕೆಟ್ ಸಿಕ್ಕಿಲ್ಲ
ಒಡಿಷಾದಿಂದ ಬಂದಿರುವ ಕೊಹ್ಲಿ ಕಟ್ಟಾಭಿಮಾನಿಗೆ ಟಿಕೆಟ್ ಸಿಕ್ಕಿಲ್ಲ
ತಾಳಿ ಕಟ್ಟಿದ ಕೆಲವೇ ಕ್ಷಣದಲ್ಲಿ ಮದುಮಗ ಸಾವು: ಅಸಲಿಗೆ ಆಗಿದ್ದೇನು?
ತಾಳಿ ಕಟ್ಟಿದ ಕೆಲವೇ ಕ್ಷಣದಲ್ಲಿ ಮದುಮಗ ಸಾವು: ಅಸಲಿಗೆ ಆಗಿದ್ದೇನು?