AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜಗ್ಗೇಶ್​ ಪುತ್ರನ ‘ಕಾಗೆ ಮೊಟ್ಟೆ’ ಸಿನಿಮಾ ರಿಲೀಸ್​ಗೆ ರೆಡಿ; ಗುರುರಾಜ್​ ಚಿತ್ರದಲ್ಲಿ ರಜನಿಕಾಂತ್​ ಸ್ನೇಹಿತ ರಾಜ್ ಬಹದ್ದೂರ್​

ಲಾಕ್​ಡೌನ್​ಗಿಂತಲೂ ಮುನ್ನವೇ ‘ಕಾಗೆ ಮೊಟ್ಟೆ’ ಸಿನಿಮಾ ರಿಲೀಸ್​ಗೆ ಸಿದ್ಧವಾಗಿತ್ತು. ಈಗ ಕೊರೊನಾ ಎರಡನೇ ಅಲೆ ಕಡಿಮೆ ಆಗುತ್ತಿದ್ದು, ಸೆಪ್ಟೆಂಬರ್​ ಎರಡನೇ ವಾರವೇ ಬಿಡುಗಡೆಗೆ ಸೂಕ್ತ ಎಂದು ನಿರ್ಮಾಪಕರು ನಿರ್ಧರಿಸಿದ್ದಾರೆ.

ಜಗ್ಗೇಶ್​ ಪುತ್ರನ ‘ಕಾಗೆ ಮೊಟ್ಟೆ’ ಸಿನಿಮಾ ರಿಲೀಸ್​ಗೆ ರೆಡಿ; ಗುರುರಾಜ್​ ಚಿತ್ರದಲ್ಲಿ ರಜನಿಕಾಂತ್​ ಸ್ನೇಹಿತ ರಾಜ್ ಬಹದ್ದೂರ್​
ತನುಜಾ, ಗುರುರಾಜ್
TV9 Web
| Edited By: |

Updated on: Aug 27, 2021 | 4:32 PM

Share

ನಟ ಜಗ್ಗೇಶ್​ ಅವರು ಇಬ್ಬರೂ ಪುತ್ರರು ಚಿತ್ರರಂಗದಲ್ಲಿದ್ದಾರೆ. ಆ ಪೈಕಿ ಮೊದಲ ಪುತ್ರ ಗುರುರಾಜ್​ ನಟಿಸಿರುವ ‘ಕಾಗೆ ಮೊಟ್ಟೆ’ ಸಿನಿಮಾ ಬಿಡುಗಡೆಗೆ ಸಜ್ಜಾಗಿದೆ. ಎಲ್ಲವೂ ಅಂದುಕೊಂಡಂತೆ ನಡೆದರೆ ಸೆಪ್ಟೆಂಬರ್ 2ನೇ ವಾರದಲ್ಲಿ ಈ ಸಿನಿಮಾ ಬಿಡುಗಡೆ ಆಗಲಿದೆ. ವಿಶೇಷ ಎಂದರೆ, ಈ ಸಿನಿಮಾದಲ್ಲಿ ರಜನಿಕಾಂತ್​ ಅವರ ಆಪ್ತ ಸ್ನೇಹಿತ ರಾಜ್​ ಬಹದ್ದೂರ್​ ನಟಿಸಿದ್ದಾರೆ. ಮುಸ್ಲಿಂ ವ್ಯಕ್ತಿಯ ಪಾತ್ರದಲ್ಲಿ ಅವರು ಕಾಣಿಸಿಕೊಂಡಿದ್ದಾರೆ. ಆ ಕಾರಣದಿಂದಲೂ ‘ಕಾಗೆ ಮೊಟ್ಟೆ’ ಸಿನಿಮಾ ಮೇಲೆ ಚಿತ್ರಪ್ರೇಮಿಗಳಿಗೆ ಕೌತುಕ ಮೂಡಿದೆ. ‘ಪಿಳ್ಳಾ, ಗೋವಿ, ಕೃಷ್ಣನ ಕಥೆ’ ಎನ್ನುವ ಟ್ಯಾಗ್‌ಲೈನ್ ಈ ಚಿತ್ರಕ್ಕಿದೆ.

ಈ ಸಿನಿಮಾ ಕಥೆ ಏನು?

ಮೂವರು ಲೋಕಲ್ ಹುಡುಗರ ಕಥೆಯನ್ನಿಟ್ಟುಕೊಂಡು ನಿರ್ದೇಶಕ‌ ಚಂದ್ರಹಾಸ ಅವರು ಈ ಚಿತ್ರವನ್ನು ನಿರೂಪಿಸಿದ್ದಾರೆ. ಕಾಗೆ ಶನೀಶ್ವರನ ವಾಹನ. ಶನಿ ಹೆಗಲೇರಿದರೆ ಕೊನೆಯವರೆಗೆ ಬಿಡಲ್ಲ ಎನ್ನುವ ಮಾತಿದೆ. ಹಾಗೆಯೇ, ಈ ಮೂವರು ಹುಡುಗರು ಯಾರ ಹಿಂದೆ ಬಿದ್ದರೂ ಸುಲಭದಲ್ಲಿ ಬಿಡುವವರೇ ಅಲ್ಲ. ಆರಂಭದಲ್ಲಿ ಕೇವಲ ಮೊಟ್ಟೆಯಂತಿರುವ ಇವರು ಬೆಳೆದಮೇಲೆ ಯಾವ ರೀತಿ ಆಗಬಹುದು ಎಂಬ ಪರಿಕಲ್ಪನೆಯೊಂದಿಗೆ ಚಂದ್ರಹಾಸ್ ಅವರು ಈ ಚಿತ್ರವನ್ನು ನಿರ್ದೇಶಿಸಿದ್ದಾರೆ.

ಹಳ್ಳಿಯಲ್ಲಿ ಸಣ್ಣಪುಟ್ಟ ರಾಬರಿ ಮಾಡಿಕೊಂಡು ಜೀವನ ಸಾಗಿಸುತ್ತಿದ್ದ ಈ ಮೂವರು ಹುಡುಗರು ಒಮ್ಮೆ ಒಂದು ದೊಡ್ಡ ಉದ್ದೇಶ ಇಟ್ಟುಕೊಂಡು ಬೆಂಗಳೂರಿಗೆ ಆಗಮಿಸುತ್ತಾರೆ. ಯಾವುದೇ ಹಿನ್ನೆಲೆ ಇಲ್ಲದೆ ಸಿಟಿಗೆ ಬಂದ ಇವರು ತಾವಂದುಕೊಂಡಿದ್ದನ್ನು ಮಾಡುತ್ತಾರೋ, ಇಲ್ಲವೋ ಎನ್ನುವುದೇ ಕಾಗೆ ಮೊಟ್ಟೆ ಚಿತ್ರದ ಕಥಾಹಂದರ.

ಲಾಕ್‌ಡೌನ್‌ಗೂ ಮುಂಚೆಯೇ ರೆಡಿಯಾಗಿದ್ದ ಚಿತ್ರ:

‘ಕಾಗೆ ಮೊಟ್ಟೆ’ ಸಿನಿಮಾದ ಎಲ್ಲ ಕೆಲಸಗಳೂ ಮುಗಿದಿವೆ. ಲಾಕ್​ಡೌನ್​ಗಿಂತಲೂ ಮುನ್ನವೇ ಈ ಸಿನಿಮಾ ರಿಲೀಸ್​ಗೆ ಸಿದ್ಧವಾಗಿತ್ತು. ಈಗ ಕೊರೊನಾ ಎರಡನೇ ಅಲೆ ಕಡಿಮೆ ಆಗುತ್ತಿದ್ದು, ಸೆಪ್ಟೆಂಬರ್​ ಎರಡನೇ ವಾರವೇ ಬಿಡುಗಡೆಗೆ ಸೂಕ್ತ ಎಂದು ನಿರ್ಮಾಪಕರು ನಿರ್ಧರಿಸಿದ್ದಾರೆ. ಈ ಚಿತ್ರದಲ್ಲಿ ಗುರುರಾಜ್ ಜಗ್ಗೇಶ್ ಜೊತೆ ಕೆ. ಮಾದೇಶ್ ಹಾಗೂ ಹೇಮಂತ್ ಅವರು ಫ್ರೆಂಡ್ಸ್​ ಪಾತ್ರದಲ್ಲಿ ನಟಿಸಿದ್ದಾರೆ. ನಟಿ ತನುಜಾ ಅವರು ಈ ಚಿತ್ರದ ಹೀರೋಯಿನ್​. ಸಹ ನಿರ್ಮಾಪಕರಾಗಿ ಸುಬ್ಬರಾಯುಡು ಹಾಗೂ ಹೆಚ್.ಎನ್. ಶ್ರೀನಿವಾಸಯ್ಯ ಇವರ ಜೊತೆ ಕೈಜೋಡಿಸಿದ್ದಾರೆ.

ಹಾಡು ಬರೆದು ದನಿ ನೀಡಿದ ಜಗ್ಗೇಶ್​:

ಕೊಳ್ಳೇಗಾಲ, ಚಾಮರಾಜನಗರ ಅಲ್ಲದೆ ಬೆಂಗಳೂರಿನ ಹಲವಾರು ಸ್ಲಂಗಳಲ್ಲಿ ಚಿತ್ರದ ಶೂಟಿಂಗ್ ನಡೆಸಲಾಗಿದೆ. ಮೂವರು ಹುಡುಗರಿಗೆ ನಗರದಲ್ಲಿ ಬೆನ್ನೆಲುಬಾಗಿ ನಿಲ್ಲುವ ವೇಶ್ಯೆಯ ಪಾತ್ರವನ್ನು ನಟಿ ಸೌಜನ್ಯ ನಿರ್ವಹಿಸಿದ್ದಾರೆ. ಚಿತ್ರದಲ್ಲಿ 2 ಹಾಡುಗಳಿವೆ. ಶ್ರೀವತ್ಸ ಸಂಗೀತ ನಿರ್ದೇಶನ ಮಾಡಿದ್ದಾರೆ. ನಾಗೇಂದ್ರ ಪ್ರಸಾದ್, ಜಯಂತ್ ಕಾಯ್ಕಿಣಿ, ಕವಿರಾಜ್ ಸಾಹಿತ್ಯ ರಚಿಸಿದ್ದಾರೆ. ನಟ ಜಗ್ಗೇಶ್ ಒಂದು ಹಾಡು ಬರೆದಿರುವುದು ಮಾತ್ರವಲ್ಲದೆ, ಅದಕ್ಕೆ ತಾವೇ ದನಿಯಾಗಿದ್ದಾರೆ. ಪಿ.ಎಲ್. ರವಿ ಛಾಯಾಗ್ರಹಣ ಮಾಡಿದ್ದಾರೆ.

ಇದನ್ನೂ ಓದಿ:

‘ತೋತಾಪುರಿ’ ಹಿಡಿದು ನಗಿಸಲು ಬಂದ ಜಗ್ಗೇಶ್​; ‘ನೀರ್​ ದೋಸೆ’ ಜೋಡಿಯ ನಗೆ ಹಬ್ಬ

ದುಡ್ಡಿಲ್ಲದಾಗ ರವಿಚಂದ್ರನ್​ ಬಳಿ 200 ರೂಪಾಯಿ ಕೇಳಿದ್ದ ಜಗ್ಗೇಶ್​; ಕ್ರೇಜಿಸ್ಟಾರ್​ ಉತ್ತರ ಹೇಗಿತ್ತು?

Follow Us
ಇಂದು ಆಷಾಢ ಮಾಸದ ಆಡಿ ಶುಕ್ರವಾರ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಇಂದು ಆಷಾಢ ಮಾಸದ ಆಡಿ ಶುಕ್ರವಾರ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
'ಪೆಲೆಟ್ ಗನ್ ದಾಳಿ ನಡೆದೇ ಇಲ್ಲ'; ರಾಹುಲ್ ಗಾಂಧಿಗೆ ಬಿಜೆಪಿ ಸಂಸದ ತಿರುಗೇಟು
'ಪೆಲೆಟ್ ಗನ್ ದಾಳಿ ನಡೆದೇ ಇಲ್ಲ'; ರಾಹುಲ್ ಗಾಂಧಿಗೆ ಬಿಜೆಪಿ ಸಂಸದ ತಿರುಗೇಟು
ಕರ್ನಾಟಕ ಸಂಪುಟ ವಿಸ್ತರಣೆ ಬಗ್ಗೆ ಕೈ ಹೈಕಮಾಂಡ್ ನಾಯಕರು ಹೇಳಿದ್ದಿಷ್ಟು!
ಕರ್ನಾಟಕ ಸಂಪುಟ ವಿಸ್ತರಣೆ ಬಗ್ಗೆ ಕೈ ಹೈಕಮಾಂಡ್ ನಾಯಕರು ಹೇಳಿದ್ದಿಷ್ಟು!
ರಾಹುಲ್ ಸಭೆ ಅಂತ್ಯ, ಬೆಂಗಳುರಿನತ್ತ ಡಿಕೆಶಿ: ಸಂಪುಟ ವಿಸ್ತರಣೆ ಕಥೆ ಏನಾಯ್ತು
ರಾಹುಲ್ ಸಭೆ ಅಂತ್ಯ, ಬೆಂಗಳುರಿನತ್ತ ಡಿಕೆಶಿ: ಸಂಪುಟ ವಿಸ್ತರಣೆ ಕಥೆ ಏನಾಯ್ತು
ತಾಯಿ ನೆನಪಿಗಾಗಿ ಹೊಸ ವಾಚ್ ರೆಡಿ ಮಾಡಿಸಿದ ಪುತ್ರ ಕುಮಾರಸ್ವಾಮಿ
ತಾಯಿ ನೆನಪಿಗಾಗಿ ಹೊಸ ವಾಚ್ ರೆಡಿ ಮಾಡಿಸಿದ ಪುತ್ರ ಕುಮಾರಸ್ವಾಮಿ
ಅತ್ತೆ ಚೆನ್ನಮ್ಮರ ಜೊತೆಗಿನ ನೆನೆಪು ಹಂಚಿಕೊಂಡ ಸೊಸೆ ಭವಾನಿ ರೇವಣ್ಣ
ಅತ್ತೆ ಚೆನ್ನಮ್ಮರ ಜೊತೆಗಿನ ನೆನೆಪು ಹಂಚಿಕೊಂಡ ಸೊಸೆ ಭವಾನಿ ರೇವಣ್ಣ
ಕಾವೇರಿ ಹೋರಾಟ: ಚಿತ್ರರಂಗದ ಒಗ್ಗಟ್ಟು ಪ್ರಶ್ನಿಸಿದ್ದಕ್ಕೆ ರಾಕ್​ಲೈನ್ ಗರಂ
ಕಾವೇರಿ ಹೋರಾಟ: ಚಿತ್ರರಂಗದ ಒಗ್ಗಟ್ಟು ಪ್ರಶ್ನಿಸಿದ್ದಕ್ಕೆ ರಾಕ್​ಲೈನ್ ಗರಂ
ರೈತರ ಪರ ಚಿತ್ರರಂಗ ಇದ್ದೇ ಇರುತ್ತೆ: ಫಿಲಂ ಚೇಂಬರ್ ಅಧ್ಯಕ್ಷೆ ಜಯಮಾಲ
ರೈತರ ಪರ ಚಿತ್ರರಂಗ ಇದ್ದೇ ಇರುತ್ತೆ: ಫಿಲಂ ಚೇಂಬರ್ ಅಧ್ಯಕ್ಷೆ ಜಯಮಾಲ
ರಾಜ್ಯದ ಮೇಲ್ಮನವಿ ತಿರಸ್ಕರಿಸಿದ CWMA, ಕರ್ನಾಟಕ ಬಂದ್ ಎಚ್ಚರಿಕೆ
ರಾಜ್ಯದ ಮೇಲ್ಮನವಿ ತಿರಸ್ಕರಿಸಿದ CWMA, ಕರ್ನಾಟಕ ಬಂದ್ ಎಚ್ಚರಿಕೆ
ವಿಜಯ್ ಅವರೇ ಬಲವಂತವಾಗಿ ನೀರು ಪಡೆಯಬೇಡಿ: ಪ್ರಥಮ್
ವಿಜಯ್ ಅವರೇ ಬಲವಂತವಾಗಿ ನೀರು ಪಡೆಯಬೇಡಿ: ಪ್ರಥಮ್