ಜಗ್ಗೇಶ್​ ಪುತ್ರನ ‘ಕಾಗೆ ಮೊಟ್ಟೆ’ ಸಿನಿಮಾ ರಿಲೀಸ್​ಗೆ ರೆಡಿ; ಗುರುರಾಜ್​ ಚಿತ್ರದಲ್ಲಿ ರಜನಿಕಾಂತ್​ ಸ್ನೇಹಿತ ರಾಜ್ ಬಹದ್ದೂರ್​

| Updated By: ಮದನ್​ ಕುಮಾರ್​

Updated on: Aug 27, 2021 | 4:32 PM

ಲಾಕ್​ಡೌನ್​ಗಿಂತಲೂ ಮುನ್ನವೇ ‘ಕಾಗೆ ಮೊಟ್ಟೆ’ ಸಿನಿಮಾ ರಿಲೀಸ್​ಗೆ ಸಿದ್ಧವಾಗಿತ್ತು. ಈಗ ಕೊರೊನಾ ಎರಡನೇ ಅಲೆ ಕಡಿಮೆ ಆಗುತ್ತಿದ್ದು, ಸೆಪ್ಟೆಂಬರ್​ ಎರಡನೇ ವಾರವೇ ಬಿಡುಗಡೆಗೆ ಸೂಕ್ತ ಎಂದು ನಿರ್ಮಾಪಕರು ನಿರ್ಧರಿಸಿದ್ದಾರೆ.

ಜಗ್ಗೇಶ್​ ಪುತ್ರನ ‘ಕಾಗೆ ಮೊಟ್ಟೆ’ ಸಿನಿಮಾ ರಿಲೀಸ್​ಗೆ ರೆಡಿ; ಗುರುರಾಜ್​ ಚಿತ್ರದಲ್ಲಿ ರಜನಿಕಾಂತ್​ ಸ್ನೇಹಿತ ರಾಜ್ ಬಹದ್ದೂರ್​
ತನುಜಾ, ಗುರುರಾಜ್
Follow us on

ನಟ ಜಗ್ಗೇಶ್​ ಅವರು ಇಬ್ಬರೂ ಪುತ್ರರು ಚಿತ್ರರಂಗದಲ್ಲಿದ್ದಾರೆ. ಆ ಪೈಕಿ ಮೊದಲ ಪುತ್ರ ಗುರುರಾಜ್​ ನಟಿಸಿರುವ ‘ಕಾಗೆ ಮೊಟ್ಟೆ’ ಸಿನಿಮಾ ಬಿಡುಗಡೆಗೆ ಸಜ್ಜಾಗಿದೆ. ಎಲ್ಲವೂ ಅಂದುಕೊಂಡಂತೆ ನಡೆದರೆ ಸೆಪ್ಟೆಂಬರ್ 2ನೇ ವಾರದಲ್ಲಿ ಈ ಸಿನಿಮಾ ಬಿಡುಗಡೆ ಆಗಲಿದೆ. ವಿಶೇಷ ಎಂದರೆ, ಈ ಸಿನಿಮಾದಲ್ಲಿ ರಜನಿಕಾಂತ್​ ಅವರ ಆಪ್ತ ಸ್ನೇಹಿತ ರಾಜ್​ ಬಹದ್ದೂರ್​ ನಟಿಸಿದ್ದಾರೆ. ಮುಸ್ಲಿಂ ವ್ಯಕ್ತಿಯ ಪಾತ್ರದಲ್ಲಿ ಅವರು ಕಾಣಿಸಿಕೊಂಡಿದ್ದಾರೆ. ಆ ಕಾರಣದಿಂದಲೂ ‘ಕಾಗೆ ಮೊಟ್ಟೆ’ ಸಿನಿಮಾ ಮೇಲೆ ಚಿತ್ರಪ್ರೇಮಿಗಳಿಗೆ ಕೌತುಕ ಮೂಡಿದೆ. ‘ಪಿಳ್ಳಾ, ಗೋವಿ, ಕೃಷ್ಣನ ಕಥೆ’ ಎನ್ನುವ ಟ್ಯಾಗ್‌ಲೈನ್ ಈ ಚಿತ್ರಕ್ಕಿದೆ.

 

ಈ ಸಿನಿಮಾ ಕಥೆ ಏನು?

ಮೂವರು ಲೋಕಲ್ ಹುಡುಗರ ಕಥೆಯನ್ನಿಟ್ಟುಕೊಂಡು ನಿರ್ದೇಶಕ‌ ಚಂದ್ರಹಾಸ ಅವರು ಈ ಚಿತ್ರವನ್ನು ನಿರೂಪಿಸಿದ್ದಾರೆ. ಕಾಗೆ ಶನೀಶ್ವರನ ವಾಹನ. ಶನಿ ಹೆಗಲೇರಿದರೆ ಕೊನೆಯವರೆಗೆ ಬಿಡಲ್ಲ ಎನ್ನುವ ಮಾತಿದೆ. ಹಾಗೆಯೇ, ಈ ಮೂವರು ಹುಡುಗರು ಯಾರ ಹಿಂದೆ ಬಿದ್ದರೂ ಸುಲಭದಲ್ಲಿ ಬಿಡುವವರೇ ಅಲ್ಲ. ಆರಂಭದಲ್ಲಿ ಕೇವಲ ಮೊಟ್ಟೆಯಂತಿರುವ ಇವರು ಬೆಳೆದಮೇಲೆ ಯಾವ ರೀತಿ ಆಗಬಹುದು ಎಂಬ ಪರಿಕಲ್ಪನೆಯೊಂದಿಗೆ ಚಂದ್ರಹಾಸ್ ಅವರು ಈ ಚಿತ್ರವನ್ನು ನಿರ್ದೇಶಿಸಿದ್ದಾರೆ.

ಹಳ್ಳಿಯಲ್ಲಿ ಸಣ್ಣಪುಟ್ಟ ರಾಬರಿ ಮಾಡಿಕೊಂಡು ಜೀವನ ಸಾಗಿಸುತ್ತಿದ್ದ ಈ ಮೂವರು ಹುಡುಗರು ಒಮ್ಮೆ ಒಂದು ದೊಡ್ಡ ಉದ್ದೇಶ ಇಟ್ಟುಕೊಂಡು ಬೆಂಗಳೂರಿಗೆ ಆಗಮಿಸುತ್ತಾರೆ. ಯಾವುದೇ ಹಿನ್ನೆಲೆ ಇಲ್ಲದೆ ಸಿಟಿಗೆ ಬಂದ ಇವರು ತಾವಂದುಕೊಂಡಿದ್ದನ್ನು ಮಾಡುತ್ತಾರೋ, ಇಲ್ಲವೋ ಎನ್ನುವುದೇ ಕಾಗೆ ಮೊಟ್ಟೆ ಚಿತ್ರದ ಕಥಾಹಂದರ.

ಲಾಕ್‌ಡೌನ್‌ಗೂ ಮುಂಚೆಯೇ ರೆಡಿಯಾಗಿದ್ದ ಚಿತ್ರ:

‘ಕಾಗೆ ಮೊಟ್ಟೆ’ ಸಿನಿಮಾದ ಎಲ್ಲ ಕೆಲಸಗಳೂ ಮುಗಿದಿವೆ. ಲಾಕ್​ಡೌನ್​ಗಿಂತಲೂ ಮುನ್ನವೇ ಈ ಸಿನಿಮಾ ರಿಲೀಸ್​ಗೆ ಸಿದ್ಧವಾಗಿತ್ತು. ಈಗ ಕೊರೊನಾ ಎರಡನೇ ಅಲೆ ಕಡಿಮೆ ಆಗುತ್ತಿದ್ದು, ಸೆಪ್ಟೆಂಬರ್​ ಎರಡನೇ ವಾರವೇ ಬಿಡುಗಡೆಗೆ ಸೂಕ್ತ ಎಂದು ನಿರ್ಮಾಪಕರು ನಿರ್ಧರಿಸಿದ್ದಾರೆ. ಈ ಚಿತ್ರದಲ್ಲಿ ಗುರುರಾಜ್ ಜಗ್ಗೇಶ್ ಜೊತೆ ಕೆ. ಮಾದೇಶ್ ಹಾಗೂ ಹೇಮಂತ್ ಅವರು ಫ್ರೆಂಡ್ಸ್​ ಪಾತ್ರದಲ್ಲಿ ನಟಿಸಿದ್ದಾರೆ. ನಟಿ ತನುಜಾ ಅವರು ಈ ಚಿತ್ರದ ಹೀರೋಯಿನ್​. ಸಹ ನಿರ್ಮಾಪಕರಾಗಿ ಸುಬ್ಬರಾಯುಡು ಹಾಗೂ ಹೆಚ್.ಎನ್. ಶ್ರೀನಿವಾಸಯ್ಯ ಇವರ ಜೊತೆ ಕೈಜೋಡಿಸಿದ್ದಾರೆ.

ಹಾಡು ಬರೆದು ದನಿ ನೀಡಿದ ಜಗ್ಗೇಶ್​:

ಕೊಳ್ಳೇಗಾಲ, ಚಾಮರಾಜನಗರ ಅಲ್ಲದೆ ಬೆಂಗಳೂರಿನ ಹಲವಾರು ಸ್ಲಂಗಳಲ್ಲಿ ಚಿತ್ರದ ಶೂಟಿಂಗ್ ನಡೆಸಲಾಗಿದೆ. ಮೂವರು ಹುಡುಗರಿಗೆ ನಗರದಲ್ಲಿ ಬೆನ್ನೆಲುಬಾಗಿ ನಿಲ್ಲುವ ವೇಶ್ಯೆಯ ಪಾತ್ರವನ್ನು ನಟಿ ಸೌಜನ್ಯ ನಿರ್ವಹಿಸಿದ್ದಾರೆ. ಚಿತ್ರದಲ್ಲಿ 2 ಹಾಡುಗಳಿವೆ. ಶ್ರೀವತ್ಸ ಸಂಗೀತ ನಿರ್ದೇಶನ ಮಾಡಿದ್ದಾರೆ. ನಾಗೇಂದ್ರ ಪ್ರಸಾದ್, ಜಯಂತ್ ಕಾಯ್ಕಿಣಿ, ಕವಿರಾಜ್ ಸಾಹಿತ್ಯ ರಚಿಸಿದ್ದಾರೆ. ನಟ ಜಗ್ಗೇಶ್ ಒಂದು ಹಾಡು ಬರೆದಿರುವುದು ಮಾತ್ರವಲ್ಲದೆ, ಅದಕ್ಕೆ ತಾವೇ ದನಿಯಾಗಿದ್ದಾರೆ. ಪಿ.ಎಲ್. ರವಿ ಛಾಯಾಗ್ರಹಣ ಮಾಡಿದ್ದಾರೆ.

ಇದನ್ನೂ ಓದಿ:

‘ತೋತಾಪುರಿ’ ಹಿಡಿದು ನಗಿಸಲು ಬಂದ ಜಗ್ಗೇಶ್​; ‘ನೀರ್​ ದೋಸೆ’ ಜೋಡಿಯ ನಗೆ ಹಬ್ಬ

ದುಡ್ಡಿಲ್ಲದಾಗ ರವಿಚಂದ್ರನ್​ ಬಳಿ 200 ರೂಪಾಯಿ ಕೇಳಿದ್ದ ಜಗ್ಗೇಶ್​; ಕ್ರೇಜಿಸ್ಟಾರ್​ ಉತ್ತರ ಹೇಗಿತ್ತು?