AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಇಂದಿನಿಂದ ಚಿತ್ರಮಂದಿರಗಳಲ್ಲಿ ಹೌಸ್​ಫುಲ್ ಪ್ರದರ್ಶನಕ್ಕೆ ಅವಕಾಶ; ಜಗ್ಗೇಶ್ ಪುತ್ರ ಗುರುರಾಜ್ ನಟನೆಯ ‘ಕಾಗೆ ಮೊಟ್ಟೆ’ ಬಿಡುಗಡೆ

ಇಂದು ಬಿಡುಗಡೆಯಾಗಿರುವ ನಟ ಜಗ್ಗೇಶ್ ಪುತ್ರ ಗುರುರಾಜ್ ನಟಿಸಿರುವ ‘ಕಾಗೆ ಮೊಟ್ಟೆ’ ಚಿತ್ರವನ್ನು ಪ್ರೇಕ್ಷಕರು ಸಂಭ್ರಮದಿಂದ ಬರಮಾಡಿಕೊಂಡಿದ್ದಾರೆ. ಚಿತ್ರಮಂದಿರಗಳಲ್ಲಿ 100 ಪ್ರತಿಶತ ಭರ್ತಿಗೆ ಅವಕಾಶ ನೀಡಿರುವುದರಿಂದ ಕಳೆಗುಂದಿದ್ದ ಗಾಂಧಿನಗರ ಮತ್ತೆ ಸಂಭ್ರಮದಿಂದ ನಳನಳಿಸುತ್ತಿದೆ.

ಇಂದಿನಿಂದ ಚಿತ್ರಮಂದಿರಗಳಲ್ಲಿ ಹೌಸ್​ಫುಲ್ ಪ್ರದರ್ಶನಕ್ಕೆ ಅವಕಾಶ; ಜಗ್ಗೇಶ್ ಪುತ್ರ ಗುರುರಾಜ್ ನಟನೆಯ ‘ಕಾಗೆ ಮೊಟ್ಟೆ’ ಬಿಡುಗಡೆ
‘ಕಾಗೆ ಮೊಟ್ಟೆ’ ಚಿತ್ರದ ಪೋಸ್ಟರ್
TV9 Web
| Updated By: shivaprasad.hs|

Updated on: Oct 01, 2021 | 11:56 AM

Share

100% ಆಕ್ಯೂಪೆನ್ಸಿಗೆ ಅವಕಾಶ ಸಿಕ್ಕ ಹಿನ್ನೆಲೆಯಲ್ಲಿ ಚಿತ್ರಮಂದಿರಗಳಿಗೆ ಪ್ರೇಕ್ಷಕರು ಮತ್ತೆ ಆಗಮಿಸಿದ್ದಾರೆ. ಇಂದು ತ್ರಿವೇಣಿ ಚಿತ್ರಮಂದಿರದಲ್ಲಿ ಬಿಡುಗಡೆಯಾದ ನವರಸ ನಾಯಕ ಜಗ್ಗೇಶ್ ಪುತ್ರ ಗುರುರಾಜ್ ಅಭಿನಯದ ‘ಕಾಗೆ ಮೊಟ್ಟೆ’ ಚಿತ್ರವನ್ನು ವೀಕ್ಷಿಸಲು ಸಾಕಷ್ಟು ಅಭಿಮಾನಿಗಳು ಧಾವಿಸಿ ಬಂದಿದ್ದಾರೆ. ಚಿತ್ರಮಂದಿರ ಸಂಪೂರ್ಣವಾಗಿ ತೆರೆದಿರುವ ಕುರಿತು ಸಂತಸ ಹಂಚಿಕೊಂಡಿರುವ ಪ್ರೇಕ್ಷಕರು, ‘ಇಷ್ಟು ದಿನ ಈ ಸಂಭ್ರಮ ಮಿಸ್ ಮಾಡಿಕೊಳ್ಳುತ್ತಿದ್ದೆವು’ ಎಂದಿದ್ದಾರೆ. ಚಿತ್ರಮಂದಿರಗಳಲ್ಲಿ ಕೊರೊನಾ ನಿಯಮಗಳನ್ನು ಕಡ್ಡಾಯವಾಗಿ ಪಾಲಿಸಲಾಗುತ್ತಿದ್ದು, ಮಾಸ್ಕ್ ಧರಿಸಿದ್ದರೆ ಮಾತ್ರ ಥಿಯೇಟರ್​ಗೆ ಪ್ರವೇಶ  ನೀಡಲಾಗುತ್ತಿದೆ. ಚಿತ್ರಮಂದಿರಗಳು ಸ್ವಚ್ಛತೆಗೆ ಹೆಚ್ಚು ಒತ್ತನ್ನು ನೀಡಿವೆ.

ಮಾಗಡಿ ರಸ್ತೆಯಲ್ಲಿರುವ ವೀರೇಶ್ ಸಿನಿಮಾಸ್​ನಲ್ಲಿಯೂ  ಪ್ರೇಕ್ಷಕರು ಸಂಭ್ರಮದಿಂದ ಆಗಮಿಸುತ್ತಿರುವ ದೃಶ್ಯ ಕಂಡುಬಂದಿದೆ. ಪ್ರೇಕ್ಷಕರು ಟಿಕೆಟ್ ಕೊಳ್ಳಲು ಸರತಿ ಸಾಲಿನಲ್ಲಿ ನಿಂತಿದ್ದು, ದ್ವಾರದಲ್ಲಿ ಸ್ಯಾನಿಟೈಸರ್ ವ್ಯವಸ್ಥೆ ಮಾಡಲಾಗಿದೆ. ಸ್ಕ್ರೀನ್ – 1 ನಲ್ಲಿ ತೆಲುಗಿನ ‘ರಿಪಬ್ಲಿಕ್‌’ ಹಾಗೂ ಸ್ಕ್ರೀನ್- 2ನಲ್ಲಿ ಕನ್ನಡದ ‘ಕಾಗೆಮೊಟ್ಟೆ’ ಚಿತ್ರದ ಪ್ರದರ್ಶನ ನಡೆಯುತ್ತಿದೆ.

‘ಕಾಗೆ ಮೊಟ್ಟೆ’ ಚಿತ್ರದಲ್ಲಿ ಗುರುರಾಜ್ ಜಗ್ಗೇಶ್ ಜೊತೆ ಕೆ. ಮಾದೇಶ್ ಹಾಗೂ ಹೇಮಂತ್ ಕಾಣಿಸಿಕೊಳ್ಳುತ್ತಿದ್ದಾರೆ. ನಟಿ ತನುಜಾ ಅವರು ಈ ಚಿತ್ರದ ನಾಯಕಿ​. ಸಹ ನಿರ್ಮಾಪಕರಾಗಿ ಸುಬ್ಬರಾಯುಡು ಹಾಗೂ ಹೆಚ್.ಎನ್. ಶ್ರೀನಿವಾಸಯ್ಯ ಇವರ ಜೊತೆ ಕೈಜೋಡಿಸಿದ್ದಾರೆ. ಕೊಳ್ಳೇಗಾಲ, ಚಾಮರಾಜನಗರ ಅಲ್ಲದೆ ಬೆಂಗಳೂರಿನ ಹಲವಾರು ಸ್ಲಂಗಳಲ್ಲಿ ಚಿತ್ರದ ಶೂಟಿಂಗ್ ನಡೆಸಲಾಗಿದ್ದು, ಮೂವರು ಹುಡುಗರಿಗೆ ನಗರದಲ್ಲಿ ಬೆನ್ನೆಲುಬಾಗಿ ನಿಲ್ಲುವ ವೇಶ್ಯೆಯ ಪಾತ್ರವನ್ನು ನಟಿ ಸೌಜನ್ಯ ನಿರ್ವಹಿಸಿದ್ದಾರೆ. ಚಿತ್ರದಲ್ಲಿ 2 ಹಾಡುಗಳಿವೆ. ಶ್ರೀವತ್ಸ ಸಂಗೀತ ನಿರ್ದೇಶನ ಮಾಡಿದ್ದಾರೆ. ನಾಗೇಂದ್ರ ಪ್ರಸಾದ್, ಜಯಂತ್ ಕಾಯ್ಕಿಣಿ, ಕವಿರಾಜ್ ಸಾಹಿತ್ಯ ರಚಿಸಿದ್ದಾರೆ. ನಟ ಜಗ್ಗೇಶ್ ಒಂದು ಹಾಡು ಬರೆದಿರುವುದು ಮಾತ್ರವಲ್ಲದೆ, ಅದಕ್ಕೆ ತಾವೇ ದನಿಯಾಗಿದ್ದಾರೆ. ಪಿ.ಎಲ್. ರವಿ ಛಾಯಾಗ್ರಹಣ ಮಾಡಿದ್ದಾರೆ.

ಅಕ್ಟೋಬರ್​ನಲ್ಲಿ ಕನ್ನಡ ಸಿನಿಮಾಗಳ ಸುಗ್ಗಿ: ಸಾಲು ಸಾಲು ಹಬ್ಬಗಳ ನಡುವೆ ಕನ್ನಡ ಪ್ರೇಕ್ಷಕರಿಗೆ ಖ್ಯಾತ ತಾರೆಯರ ಬಹು ನಿರೀಕ್ಷಿತ ಚಿತ್ರಗಳೂ ಬಿಡುಗಡೆಯಾಗುತ್ತಿದ್ದು, ಸಂಭ್ರಮವನ್ನು ಹೆಚ್ಚಿಸಿವೆ. ಅಕ್ಟೋಬರ್ 14ರಂದು ಕಿಚ್ಚ ಸುದೀಪ್ ಅಭಿನಯದ ‘ಕೋಟಿಗೊಬ್ಬ 3’ ಹಾಗೂ ದುನಿಯಾ ವಿಜಯ್ ನಿರ್ದೇಶನ, ನಟನೆಯ ‘ಸಲಗ’ ಚಿತ್ರಗಳು ಬಿಡುಗಡೆಯಾಗುತ್ತಿವೆ. ಅಕ್ಟೋಬರ್ 29ರಂದು ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಅಭಿನಯದ ‘ಭಜರಂಗಿ 2’ ಬಿಡುಗಡೆಯಾಗಲಿದ್ದು, ಅಭಿಮಾನಿಗಳು ಈ ಚಿತ್ರಗಳಿಗಾಗಿ ಕಾತರದಿಂದ ಕಾಯುತ್ತಿದ್ದಾರೆ. ಒಟ್ಟಿನಲ್ಲಿ ಕೊರೊನಾದಿಂದ ಕಳೆಗುಂದಿದ್ದ ಗಾಂಧಿನಗರ ಮತ್ತೆ ಸಂಭ್ರಮದಿಂದ ಚೇತರಿಸಿಕೊಂಡಿರುವುದು ಸಿನಿ ಪ್ರೇಮಮಿಗಳ ಮೊಗದಲ್ಲಿ, ಚಿತ್ರತಂಡಗಳು ಮುಖದಲ್ಲಿ ಸಂತಸ ಮೂಡಿಸಿದೆ.

ಇದನ್ನೂ ಓದಿ:

Jaggesh: ಜಗ್ಗೇಶ್ ಪುತ್ರ ಗುರುರಾಜ್ ಹೇಳಲಿದ್ದಾರೆ ತಂದೆಗೆ ಆಕ್ಷನ್ ಕಟ್; ನವರಸ ನಾಯಕ ಹಂಚಿಕೊಂಡ್ರು ಅಚ್ಚರಿಯ ಮಾಹಿತಿ

‘ಕರೀನಾಗೆ ಸಾಮಾಜಿಕ ಜಾಲತಾಣಗಳ ಬಳಕೆಯ ಕುರಿತು ಸಲಹೆ ನೀಡುವುದಿಲ್ಲ’; ಅದೇ ದಾಂಪತ್ಯದ ಯಶಸ್ಸಿನ ಗುಟ್ಟು ಎಂದ ಸೈಫ್!

ನಾಗ ಚೈತನ್ಯ ಜತೆ ಸಾಯಿ ಪಲ್ಲವಿ ಲಿಪ್​ ಲಾಕ್​ ಮಾಡಿದ್ದು ನಿಜವೇ? ‘ಲವ್​ ಸ್ಟೋರಿ’ ಹಿಂದಿನ ಸತ್ಯ ಬಾಯ್ಬಿಟ್ಟ ನಟಿ

ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ