AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ರಾಘವೇಂದ್ರ ಸ್ಟೋರ್ಸ್​’ ಚಿತ್ರದ ಟ್ರೇಲರ್​ ಬಿಡುಗಡೆ; ಮದುವೆ ಪ್ರಸಂಗದಿಂದ ನಕ್ಕು ನಗಿಸ್ತಾರೆ ಜಗ್ಗೇಶ್​

Raghavendra Stores Trailer: ಇತ್ತೀಚೆಗೆ ‘ರಾಘವೇಂದ್ರ ಸ್ಟೋರ್ಸ್​’ ಸಿನಿಮಾದ ‘ಸಿಂಗಲ್​ ಸುಂದರ..’ ಹಾಡು ಬಿಡುಗಡೆ ಆಗಿತ್ತು. ಈಗ ಟ್ರೇಲರ್​ ಕೂಡ ಗಮನ ಸೆಳೆಯುತ್ತಿದೆ.

‘ರಾಘವೇಂದ್ರ ಸ್ಟೋರ್ಸ್​’ ಚಿತ್ರದ ಟ್ರೇಲರ್​ ಬಿಡುಗಡೆ; ಮದುವೆ ಪ್ರಸಂಗದಿಂದ ನಕ್ಕು ನಗಿಸ್ತಾರೆ ಜಗ್ಗೇಶ್​
ರಾಘವೇಂದ್ರ ಸ್ಟೋರ್ಸ್
Follow us
ಮದನ್​ ಕುಮಾರ್​
|

Updated on:Apr 17, 2023 | 7:01 PM

ನಟ ಜಗ್ಗೇಶ್​ (Jaggesh) ಅವರು ಸಿನಿಮಾ ಮತ್ತು ರಾಜಕೀಯ ಎರಡೂ ಕ್ಷೇತ್ರಗಳಲ್ಲಿ ಬ್ಯುಸಿ ಆಗಿದ್ದಾರೆ. ಈ ಎರಡೂ ಜವಾಬ್ದಾರಿಯನ್ನು ಅವರು ನಿಭಾಯಿಸುತ್ತಿದ್ದಾರೆ. ಅವರು ನಟಿಸಿರುವ ‘ರಾಘವೇಂದ್ರ ಸ್ಟೋರ್ಸ್​’ ಸಿನಿಮಾ ಮೇಲೆ ಅಭಿಮಾನಿಗಳಿಗೆ ಸಾಕಷ್ಟು ನಿರೀಕ್ಷೆ ಇದೆ. ಈಗ ಈ ಚಿತ್ರದ ಟ್ರೇಲರ್​ ಬಿಡುಗಡೆ ಆಗಿದೆ. ಜಗ್ಗೇಶ್​ ಸಿನಿಮಾ ಎಂದರೆ ಇದರಲ್ಲಿ ಕಾಮಿಡಿ ಇರಲೇಬೇಕು. ‘ರಾಘವೇಂದ್ರ ಸ್ಟೋರ್ಸ್​’ ಕೂಡ ಭರಪೂರ ಕಾಮಿಡಿ ಕಚಗುಳಿ ಇಡುವಂತಹ ಚಿತ್ರ ಎಂಬುದಕ್ಕೆ ಈ ಟ್ರೇಲರ್​ ಸಾಕ್ಷಿ ಒದಗಿಸುತ್ತಿದೆ. ಸಂತೋಷ್​ ಆನಂದ್​ ರಾಮ್​ (Santhosh Ananddram) ಅವರು ಈ ಚಿತ್ರಕ್ಕೆ ನಿರ್ದೇಶನ ಮಾಡಿದ್ದಾಳೆ. ‘ಹೊಂಬಾಳೆ ಫಿಲ್ಮ್ಸ್​’ ಮೂಲಕ ಈ ಸಿನಿಮಾ ನಿರ್ಮಾಣ ಆಗಿದೆ. ಏಪ್ರಿಲ್​ 28ರಂದು ‘ರಾಘವೇಂದ್ರ ಸ್ಟೋರ್ಸ್​’ ಚಿತ್ರ (Raghavendra Stores Movie) ಬಿಡುಗಡೆ ಆಗಲಿದೆ. ರಿಷಬ್​ ಶೆಟ್ಟಿ ಅವರ ಈ ಚಿತ್ರದ ಟ್ರೇಲರ್​ ರಿಲೀಸ್​ ಮಾಡಿ ಶುಭ ಹಾರೈಸಿದ್ದಾರೆ.

ವಯಸ್ಸು 40 ದಾಟಿದರೂ ಮದುವೆ ಆಗದ ವ್ಯಕ್ತಿಯ ಪಾತ್ರದಲ್ಲಿ ಜಗ್ಗೇಶ್​ ನಟಿಸಿದ್ದಾರೆ. ಈ ಪಾತ್ರದ ಹೆಸರು ಹಯವದನ. ಹೇಗಾದರೂ ಮದುವೆ ಆಗಲೇಬೇಕು ಎಂದು ಆತ ಹಠಕ್ಕೆ ಬೀಳುತ್ತಾನೆ. ‘ನಾನು ಹಾಳಾಗಿಹೋಗಿ ರೋಡಿಗೆ ಬಂದ್ರೂ ಪರವಾಗಿಲ್ಲ. ಮದುವೆ ಆಗಲೇಬೇಕು’ ಎಂದು ಡೈಲಾಗ್​ ಹೊಡೆಯುವ ಹಯವದನ ಈ ಸಿನಿಮಾದಲ್ಲಿ ಏನೆಲ್ಲ ಮಾಡ್ತಾನೆ ಎಂದು ತಿಳಿಯುವ ಕೌತುಕ ಮೂಡಿದೆ. ಇತ್ತೀಚೆಗೆ ಈ ಸಿನಿಮಾದ ‘ಸಿಂಗಲ್​ ಸುಂದರ..’ ಹಾಡು ಬಿಡುಗಡೆ ಆಗಿತ್ತು. ಈಗ ಟ್ರೇಲರ್​ ಕೂಡ ಗಮನ ಸೆಳೆಯುತ್ತಿದೆ.

ಇದನ್ನೂ ಓದಿ
Image
‘ಕೆಜಿಎಫ್​ 3’ ಬಗ್ಗೆ ದೊಡ್ಡ ಸುಳಿವು ನೀಡಿದ ‘ಹೊಂಬಾಳೆ’; 1978ರಿಂದ 1981 ತನಕ ರಾಕಿ ಎಲ್ಲಿದ್ದ?
Image
RCB-Hombale: ಬೆಂಗಳೂರಿನ ಖದರ್ ವಿಶ್ವಕ್ಕೆ ಪಸರಿಸಲು ಹೊಂಬಾಳೆ ಜೊತೆ ಕೈಜೋಡಿಸಿದ ಆರ್​ಸಿಬಿ
Image
Kantara 2: ಯುಗಾದಿ ದಿನವೇ ಸಿಹಿ ಸುದ್ದಿ ನೀಡಿದ ರಿಷಬ್​ ಶೆಟ್ಟಿ; ಇಲ್ಲಿದೆ ‘ಕಾಂತಾರ 2’ ಅಪ್​ಡೇಟ್​
Image
Hombale Films: ಮುಂದಿನ 5 ವರ್ಷಗಳಲ್ಲಿ ಚಿತ್ರರಂಗಕ್ಕೆ 3 ಸಾವಿರ ಕೋಟಿ ರೂ. ಹೂಡಿಕೆ; ವಿಜಯ್ ಕಿರಗಂದೂರು ಮಹತ್ವದ ಘೋಷಣೆ

ಇದು ಮದುವೆಗೆ ಸಂಬಂಧಿಸಿರುವ ಕಥೆಯುಳ್ಳ ಚಿತ್ರ ಆದ್ದರಿಂದ ವಿಶೇಷ ರೀತಿಯಲ್ಲಿ ಟೈಟಲ್​ ಕಾರ್ಡ್​ ತೋರಿಸಲಾಗಿದೆ. ಸಂತೋಷ್​ ಆನಂದ್​ ರಾಮ್​ ಅವರನ್ನು ‘ನಿರ್ದೇಶಕ’ ಎಂಬುದರ ಬದಲು ‘ವೆಡ್ಡಿಂಗ್​ ಪ್ಲಾನರ್​’ ಎಂದು ಬರೆಯಲಾಗಿದೆ. ನಿರ್ಮಾಣ ಎಂಬುದರ ಬದಲು ‘ಊಟ, ಉಪಚಾರ – ಹೊಂಬಾಳೆ ಫಿಲ್ಮ್ಸ್​’ ಎಂದು ಬರೆಯಲಾಗಿದೆ. ಶ್ರೀಶಾ ಕುದುವಳ್ಳಿ ಅವರ ಛಾಯಾಗ್ರಹಣವನ್ನು ‘ವಿಡಿಯೋಗ್ರಫಿ’ ಹಾಗೂ ಅಜನೀಶ್​ ಬಿ. ಲೋಕನಾಥ್​ ಅವರ ಸಂಗೀತ ನಿರ್ದೇಶನವನ್ನು ‘ವಾದ್ಯ ಗೋಷ್ಠಿ’ ಎಂದು ಕರೆಯಲಾಗಿದೆ.

ಇದನ್ನೂ ಓದಿ: Jaggesh: ಕುಟುಂಬ ಸಮೇತರಾಗಿ ಪ್ರಧಾನಿ ಮೋದಿ ಭೇಟಿ ಮಾಡಿದ ಜಗ್ಗೇಶ್​; ಇಲ್ಲಿದೆ ಫೋಟೋ ಗ್ಯಾಲರಿ

‘ರಾಘವೇಂದ್ರ ಸ್ಟೋರ್ಸ್​’ ಸಿನಿಮಾದಲ್ಲಿ ಜಗ್ಗೇಶ್​ ಜೊತೆ ಶ್ವೇತಾ ಶ್ರೀವಾತ್ಸವ್​, ಅಚ್ಯುತ್​ ಕುಮಾರ್​, ದತ್ತಣ್ಣ, ರವಿಶಂಕರ್​ ಗೌಡ ಮುಂತಾದವರು ನಟಿಸಿದ್ದಾರೆ. ಸಂತೋಷ್​ ಆನಂದ್​ ರಾಮ್​ ಅವರು ಕಾಮಿಡಿ ಪ್ರಯತ್ನಿಸುತ್ತಿರುವುದು ಇದೇ ಮೊದಲು. ಈ ಹಿಂದೆ ‘ಮಿಸ್ಟರ್​ ಆ್ಯಂಡ್​ ಮಿಸಸ್​ ರಾಮಾಚಾರಿ’, ‘ರಾಜಕುಮಾರ’, ‘ಯುವರತ್ನ’ ಸಿನಿಮಾ ನಿರ್ದೇಶಿಸಿದ್ದ ಅವರು ಈಗ ‘ರಾಘವೇಂದ್ರ ಸ್ಟೋರ್ಸ್​’ ಚಿತ್ರಕ್ಕೆ ಆ್ಯಕ್ಷನ್​-ಕಟ್​ ಹೇಳಿದ್ದಾರೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Published On - 7:01 pm, Mon, 17 April 23

ಯಾರು ಹೊಣೆ ಅಂತ ಗೊತ್ತಾಗಲು ಇನ್ನೂ 15 ದಿನ ಕಾಯಬೇಕು: ಜಾರಕಿಹೊಳಿ
ಯಾರು ಹೊಣೆ ಅಂತ ಗೊತ್ತಾಗಲು ಇನ್ನೂ 15 ದಿನ ಕಾಯಬೇಕು: ಜಾರಕಿಹೊಳಿ
ಅವನಿಗೆ 25, ಅವಳಿಗೆ 36..OYO ರೂಂಗೆ ಕರೆದೊಯ್ದು ಹತ್ಯೆ: ಅಸಲಿ ಕಾರಣವೇನು?
ಅವನಿಗೆ 25, ಅವಳಿಗೆ 36..OYO ರೂಂಗೆ ಕರೆದೊಯ್ದು ಹತ್ಯೆ: ಅಸಲಿ ಕಾರಣವೇನು?
ಕಳ್ಳನ ಕರಾಮತ್ತು ಸಿಸಿಟಿವಿ ಕೆಮೆರಾದಲ್ಲಿ ಸೆರೆ, ಪೊಲೀಸರಿಗೆ ಅದೇ ಕ್ಲೂ!
ಕಳ್ಳನ ಕರಾಮತ್ತು ಸಿಸಿಟಿವಿ ಕೆಮೆರಾದಲ್ಲಿ ಸೆರೆ, ಪೊಲೀಸರಿಗೆ ಅದೇ ಕ್ಲೂ!
ಡಿಸಿಪಿಗಳ ಜತೆ ಚರ್ಚಿಸಿ ಆರ್​ಸಿಬಿಗೆ ಸತ್ಕಾರ ಕೂಟ ಏರ್ಪಡಿಸಲಾಗಿತ್ತು: ಜೋಶಿ
ಡಿಸಿಪಿಗಳ ಜತೆ ಚರ್ಚಿಸಿ ಆರ್​ಸಿಬಿಗೆ ಸತ್ಕಾರ ಕೂಟ ಏರ್ಪಡಿಸಲಾಗಿತ್ತು: ಜೋಶಿ
ಜನಸಂದಣಿ ಕಂಡು ಕನ್ನಡಿಗರಿಗಾದಂತೆ ಜನಪ್ರತಿನಿಧಿಗಳಿಗೆ ಗಾಬರಿ ಆಗುತ್ತಿಲ್ಲ
ಜನಸಂದಣಿ ಕಂಡು ಕನ್ನಡಿಗರಿಗಾದಂತೆ ಜನಪ್ರತಿನಿಧಿಗಳಿಗೆ ಗಾಬರಿ ಆಗುತ್ತಿಲ್ಲ
ಸುಹಾಸ್ ಕೊಲೆಯಲ್ಲಿ ಕನಿಷ್ಠ 40 ಜನ ಶಾಮೀಲಾಗಿದ್ದಾರೆ: ಪ್ರದೀಪ್ ಸರಿಪಲ್ಲ
ಸುಹಾಸ್ ಕೊಲೆಯಲ್ಲಿ ಕನಿಷ್ಠ 40 ಜನ ಶಾಮೀಲಾಗಿದ್ದಾರೆ: ಪ್ರದೀಪ್ ಸರಿಪಲ್ಲ
ಕಾಲ್ತುಳಿತ: ರಾಜ್ಯಪಾಲರಿಗೆ ಆಹ್ವಾನ ಕೊಟ್ಟಿದ್ಯಾರು? ಡಿಸಿಎಂ ಹೇಳಿದ್ದಿಷ್ಟು
ಕಾಲ್ತುಳಿತ: ರಾಜ್ಯಪಾಲರಿಗೆ ಆಹ್ವಾನ ಕೊಟ್ಟಿದ್ಯಾರು? ಡಿಸಿಎಂ ಹೇಳಿದ್ದಿಷ್ಟು
ಕೊಲೆಯಾದವ ಮತ್ತು ಆರೋಪಿಗಳೆಲ್ಲ ಅಸ್ಸಾಂ ಮೂಲದವರು, ಮದ್ಯದ ಅಮಲಿನಲ್ಲಿ ಹತ್ಯೆ
ಕೊಲೆಯಾದವ ಮತ್ತು ಆರೋಪಿಗಳೆಲ್ಲ ಅಸ್ಸಾಂ ಮೂಲದವರು, ಮದ್ಯದ ಅಮಲಿನಲ್ಲಿ ಹತ್ಯೆ
ಶ್ವೇತಾ ಮನೆ ಬಿಟ್ಟು ಹೋಗ್ತಿದ್ಳು, ನನ್ನಮ್ಮನನ್ನು ಹೊಡೆಯುತ್ತಿದ್ದಳು: ರಘು
ಶ್ವೇತಾ ಮನೆ ಬಿಟ್ಟು ಹೋಗ್ತಿದ್ಳು, ನನ್ನಮ್ಮನನ್ನು ಹೊಡೆಯುತ್ತಿದ್ದಳು: ರಘು
‘ಸರಿಗಮಪ’ ವಿನ್ನರ್ ಶಿವಾನಿಗೆ ಸಿಕ್ಕ ಹಣ ಎಷ್ಟು? ಬಾಳು ಬೆಳಗುಂದಿಗೂ ಬಂಪರ್
‘ಸರಿಗಮಪ’ ವಿನ್ನರ್ ಶಿವಾನಿಗೆ ಸಿಕ್ಕ ಹಣ ಎಷ್ಟು? ಬಾಳು ಬೆಳಗುಂದಿಗೂ ಬಂಪರ್