AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಕಾರಣಾಂತರಗಳಿಂದ ನಿಮ್ಮಿಷ್ಟದ ರಸದೌತಣ ಸ್ವಲ್ಪ ವಿಳಂಬವಾಗುತ್ತಿದೆ’; ಹೊಂಬಾಳೆ ಫಿಲ್ಮ್ಸ್ ಹೊಸ ಘೋಷಣೆ

‘ರಾಘವೇಂದ್ರ ಸ್ಟೋರ್ಸ್​’ ಸಿನಿಮಾ ಟೀಸರ್ ಮೂಲಕ ಸಾಕಷ್ಟು ಗಮನ ಸೆಳೆದಿದೆ. ಈ ಟೀಸರ್​ನಲ್ಲಿ ಹಾಸ್ಯದ ಹೊಳೆ ಹರಿದಿತ್ತು. ಇದೇ ಮೊದಲ ಬಾರಿಗೆ ಜಗ್ಗೇಶ್ ಹಾಗೂ ಸಂತೋಷ್ ಆನಂದ್​ರಾಮ್ ಒಂದಾಗಿದ್ದಾರೆ. ಈ ಕಾಂಬಿನೇಷನ್​ಮೇಲೆ ಸಾಕಷ್ಟು ನಿರೀಕ್ಷೆ ಇದೆ.

‘ಕಾರಣಾಂತರಗಳಿಂದ ನಿಮ್ಮಿಷ್ಟದ ರಸದೌತಣ ಸ್ವಲ್ಪ ವಿಳಂಬವಾಗುತ್ತಿದೆ’; ಹೊಂಬಾಳೆ ಫಿಲ್ಮ್ಸ್ ಹೊಸ ಘೋಷಣೆ
ವಿಜಯ್
TV9 Web
| Edited By: |

Updated on: Jul 18, 2022 | 8:48 PM

Share

ವಿಜಯ್ ಕಿರಗಂದೂರು (Vijay Kirgandur) ಒಡೆತನದ ‘ಹೊಂಬಾಳೆ ಫಿಲ್ಮ್ಸ್​’ (Hombale Films) ಸಾಕಷ್ಟು ಸಿನಿಮಾಗಳನ್ನು ನಿರ್ಮಾಣ ಮಾಡುವ ಕೆಲಸಗಳಲ್ಲಿ ಬ್ಯುಸಿ ಇದೆ. ಕೇವಲ ದೊಡ್ಡ ಬಜೆಟ್ ಚಿತ್ರಗಳನ್ನು ಮಾತ್ರವಲ್ಲದೆ, ಚಿಕ್ಕ ಬಜೆಟ್ ಚಿತ್ರಗಳನ್ನು ಈ ಸಂಸ್ಥೆ ನಿರ್ಮಾಣ ಮಾಡುತ್ತಿದೆ. ‘ಹೊಂಬಾಳೆ ಫಿಲ್ಮ್ಸ್​’ ಅಡಿ ಸಿದ್ಧಗೊಳ್ಳುತ್ತಿರುವ ಪ್ರತಿ ಚಿತ್ರಗಳು ಒಂದಷ್ಟು ಕುತೂಹಲ ಮೂಡಿಸಿವೆ. ಆ ಪೈಕಿ ‘ರಾಘವೇಂದ್ರ ಸ್ಟೋರ್ಸ್​’ ಸಿನಿಮಾ ಕೂಡ ಸಾಕಷ್ಟು ಗಮನ ಸೆಳೆದಿದೆ. ಜಗ್ಗೇಶ್ (Jaggesh) ನಟನೆಯ ಈ ಚಿತ್ರಕ್ಕೆ ಸಂತೋಷ್ ಆನಂದ್​ರಾಮ್ ನಿರ್ದೇಶನ ಮಾಡಿದ್ದಾರೆ. ಈ ಚಿತ್ರದ ರಿಲೀಸ್ ದಿನಾಂಕ ವಿಳಂಬವಾಗುವ ಬಗ್ಗೆ ಚಿತ್ರತಂಡ ಘೋಷಣೆ ಮಾಡಿದೆ.

‘ರಾಘವೇಂದ್ರ ಸ್ಟೋರ್ಸ್​’ ಸಿನಿಮಾ ಟೀಸರ್ ಮೂಲಕ ಸಾಕಷ್ಟು ಗಮನ ಸೆಳೆದಿದೆ. ಈ ಟೀಸರ್​ನಲ್ಲಿ ಹಾಸ್ಯದ ಹೊಳೆ ಹರಿದಿತ್ತು. ಇದೇ ಮೊದಲ ಬಾರಿಗೆ ಜಗ್ಗೇಶ್ ಹಾಗೂ ಸಂತೋಷ್ ಆನಂದ್​ರಾಮ್ ಒಂದಾಗಿದ್ದಾರೆ. ಈ ಕಾಂಬಿನೇಷನ್​ಮೇಲೆ ಸಾಕಷ್ಟು ನಿರೀಕ್ಷೆ ಇದೆ. ಈ ಚಿತ್ರ ವರಮಹಾಲಕ್ಷ್ಮಿ ಹಬ್ಬದ ಪ್ರಯುಕ್ತ ಆಗಸ್ಟ್ 5ರಂದು ರಿಲೀಸ್ ಆಗಬೇಕಿತ್ತು. ಆದರೆ, ಈಗ ಚಿತ್ರದ ರಿಲೀಸ್ ದಿನಾಂಕ ವಿಳಂಬ ಆಗಿದೆ.

ಇದನ್ನೂ ಓದಿ
Image
ರಸ್ತೆಯಲ್ಲಿ ನನ್ನ ತಂದೆ ಬೂಟ್​ನಲ್ಲಿ ಹೊಡೆಯುತ್ತಿದ್ದರು; ನೆನಪಿನ ಬುತ್ತಿ ತೆರೆದಿಟ್ಟ ಜಗ್ಗೇಶ್
Image
Darling Krishna Birthday: ಬರ್ತ್​ಡೇ ಪ್ರಯುಕ್ತ ಮಾಲ್ಡೀವ್ಸ್​ಗೆ ತೆರಳಿದ ಡಾರ್ಲಿಂಗ್​ ಕೃಷ್ಣ-ಮಿಲನಾ; ಇಲ್ಲಿವೆ ಕ್ಯೂಟ್​ ಜೋಡಿಯ ಫೋಟೋ
Image
‘777 ಚಾರ್ಲಿ’ ಎಷ್ಟು ಲಾಭ ಮಾಡಿದೆ? ಮಾಹಿತಿ ಹಂಚಿಕೊಂಡ ರಕ್ಷಿತ್ ಶೆಟ್ಟಿ
Image
ಆರೆಂಜ್ ಸ್ವಿಮ್​ಸೂಟ್​ನಲ್ಲಿ ಮಿಂಚಿದ ಅನುಷ್ಕಾ ಶರ್ಮಾ; ಇಲ್ಲಿವೆ ಫೋಟೋಗಳು

ಸಿನಿಮಾ ರಿಲೀಸ್ ದಿನಾಂಕ ಘೋಷಣೆ ಮಾಡುವ ಸಂದರ್ಭದಲ್ಲಿ ಹೊಂಬಾಳೆ ಫಿಲ್ಮ್ಸ್​ ಟ್ವೀಟ್ ಒಂದನ್ನು ಮಾಡಿತ್ತು. ‘ವರಮಹಾಲಕ್ಷ್ಮಿಗೆ ನವರಸಗಳ ರಸದೌತಣ ಸವಿಯಲು ಸಿದ್ಧರಾಗಿ, ಇದೇ ಆಗಸ್ಟ್ 05, 2022ರಿಂದ’ ಎಂದು ಬರೆಯಲಾಗಿತ್ತು. ಈಗ ಆ ಟ್ವೀಟ್​ಅನ್ನು ರೀಟ್ವೀಟ್ ಮಾಡಿರುವ ಹೊಂಬಾಳೆ ಫಿಲ್ಮ್ಸ್​‘ಕಾರಣಾಂತರಗಳಿಂದ ನಿಮ್ಮಿಷ್ಟದ ರಸದೌತಣ ಸ್ವಲ್ಪ ವಿಳಂಬವಾಗುತ್ತಿದೆ’ ಎಂದು ಬರೆದುಕೊಂಡಿದೆ.

ಜುಲೈ 28ರಂದು ಸುದೀಪ್ ನಟನೆಯ ‘ವಿಕ್ರಾಂತ್ ರೋಣ’ ಸಿನಿಮಾ ರಿಲೀಸ್ ಆಗುತ್ತಿದೆ. ಈ ಚಿತ್ರ ದೊಡ್ಡ ಮಟ್ಟದಲ್ಲಿ ರಿಲೀಸ್ ಆಗುತ್ತಿದೆ. ಇನ್ನು, ಆಗಸ್ಟ್ 13ರಂದು ‘ಗಾಳಿಪಟ 2’ ಸಿನಿಮಾ ಬಿಡುಗಡೆ ಆಗುತ್ತಿದೆ. ಇವೆರಡು ಡೇಟ್​ಗಳ ಮಧ್ಯೆ ‘ರಾಘವೇಂದ್ರ ಸ್ಟೋರ್ಸ್​’ ಸಿನಿಮಾ ರಿಲೀಸ್ ಆದರೆ ಥಿಯೇಟರ್ ಸಮಸ್ಯೆ ಆಗೋದು ಪಕ್ಕಾ. ಈ ಕಾರಣಕ್ಕೆ ಹೊಂಬಾಳೆ ಫಿಲ್ಮ್ಸ್​ ಸಿನಿಮಾ ರಿಲೀಸ್ ದಿನಾಂಕ ವಿಳಂಬವಾಗಿದೆ ಎನ್ನಲಾಗುತ್ತಿದೆ.

ಇದನ್ನೂ ಓದಿ: ರಸ್ತೆಯಲ್ಲಿ ನನ್ನ ತಂದೆ ಬೂಟ್​ನಲ್ಲಿ ಹೊಡೆಯುತ್ತಿದ್ದರು; ನೆನಪಿನ ಬುತ್ತಿ ತೆರೆದಿಟ್ಟ ಜಗ್ಗೇಶ್

ಜಗ್ಗೇಶ್ ಜತೆಗೆ ಶ್ವೇತಾ ಶ್ರೀವಾತ್ಸವ್, ರವಿಶಂಕರ್ ಗೌಡ ಮೊದಲಾದವರು ಈ ಚಿತ್ರದಲ್ಲಿ ನಟಿಸಿದ್ದಾರೆ. ಅಜನೀಶ್ ಲೋಕನಾಥ್ ಸಂಗೀತ ಸಂಯೋಜನೆ ಮಾಡಿದ್ದಾರೆ. ಸಂತೋಷ್ ಆನಂದ್​ರಾಮ್ ಈ ಚಿತ್ರಕ್ಕೆ ಆ್ಯಕ್ಷನ್ ಕಟ್ ಹೇಳಿದ್ದಾರೆ.

Follow Us
ವಚನಾನಂದ ಸ್ವಾಮೀಜಿ ಉಚ್ಚಾಟನೆ ಮಠದಲ್ಲಿ ತಳ್ಳಾಟ, ನೂಕಾಟ: ಶ್ರೀಗಳಿಗೆ ಗಾಯ
ವಚನಾನಂದ ಸ್ವಾಮೀಜಿ ಉಚ್ಚಾಟನೆ ಮಠದಲ್ಲಿ ತಳ್ಳಾಟ, ನೂಕಾಟ: ಶ್ರೀಗಳಿಗೆ ಗಾಯ
ಹೇಗಿದೆ ನೋಡಿ ಕುಂದಾಪುರದ ವಂಡ್ಸೆ ಶಾಲೆಯ ರೋಬೋಟ್​​ ಟೀಚರ್​​ ಪಾಠ
ಹೇಗಿದೆ ನೋಡಿ ಕುಂದಾಪುರದ ವಂಡ್ಸೆ ಶಾಲೆಯ ರೋಬೋಟ್​​ ಟೀಚರ್​​ ಪಾಠ
ಪತ್ನಿ ಗರ್ಭಿಣಿಯಾಗುತ್ತಿದ್ದಂತೆ ಪತಿಯ ರಂಗೀನಾಟ: ಹೆರಿಗೆಗೆ ಹೋದಾಗ ಮತ್ತೊಂದು
ಪತ್ನಿ ಗರ್ಭಿಣಿಯಾಗುತ್ತಿದ್ದಂತೆ ಪತಿಯ ರಂಗೀನಾಟ: ಹೆರಿಗೆಗೆ ಹೋದಾಗ ಮತ್ತೊಂದು
ಪಂಚಮಸಾಲಿ ಗುರುಪೀಠದಿಂದ ಉಚ್ಛಾಟನೆ ಮಾಡಿರುವ ಬಗ್ಗೆ ವಚನಾನಂದ ಸ್ವಾಮೀಜಿ ಮಾತು
ಪಂಚಮಸಾಲಿ ಗುರುಪೀಠದಿಂದ ಉಚ್ಛಾಟನೆ ಮಾಡಿರುವ ಬಗ್ಗೆ ವಚನಾನಂದ ಸ್ವಾಮೀಜಿ ಮಾತು
ಪಾದಚಾರಿಗಳ ಮೇಲೆ ಎರಗಿದ ಕಾರು; ಸಿಸಿಟಿವಿಯಲ್ಲಿ ಸೆರೆಯಾಯ್ತು ಭೀಕರ ದೃಶ್ಯ
ಪಾದಚಾರಿಗಳ ಮೇಲೆ ಎರಗಿದ ಕಾರು; ಸಿಸಿಟಿವಿಯಲ್ಲಿ ಸೆರೆಯಾಯ್ತು ಭೀಕರ ದೃಶ್ಯ
ಬಸವಜಯ ಮೃತ್ಯುಂಜಯಶ್ರೀ ಲೈಂಗಿಕ ಕಿರುಕುಳ ಪ್ರಕರಣಕ್ಕೆ ಬಿಗ್​​ ಟ್ವಿಸ್ಟ್
ಬಸವಜಯ ಮೃತ್ಯುಂಜಯಶ್ರೀ ಲೈಂಗಿಕ ಕಿರುಕುಳ ಪ್ರಕರಣಕ್ಕೆ ಬಿಗ್​​ ಟ್ವಿಸ್ಟ್
ಹರಿಹರ ಪಂಚಮಸಾಲಿ ಮಠದ ಮುಂದೆ ಭಕ್ತರ ಗಲಾಟೆ!
ಹರಿಹರ ಪಂಚಮಸಾಲಿ ಮಠದ ಮುಂದೆ ಭಕ್ತರ ಗಲಾಟೆ!
ಅಂಕ ಮುಖ್ಯವಲ್ಲ, ಮಗ ಪಾಸಾಗಿದ್ದೇ ದೊಡ್ಡ ಸಂಭ್ರಮ
ಅಂಕ ಮುಖ್ಯವಲ್ಲ, ಮಗ ಪಾಸಾಗಿದ್ದೇ ದೊಡ್ಡ ಸಂಭ್ರಮ
ನ್ಯೂಸ್ ಪೇಪರ್ ವಿತರಕನ ಮೇಲೆ ಬೀದಿ ನಾಯಿ ದಾಳಿ
ನ್ಯೂಸ್ ಪೇಪರ್ ವಿತರಕನ ಮೇಲೆ ಬೀದಿ ನಾಯಿ ದಾಳಿ
ಚಿಕ್ಕಮಗಳೂರು: ತಮ್ಮದೇ ಹೆಸರಿನ ಸೇತುವೆ ಉದ್ಘಾಟಿಸಿದ ಸಿಎಂ ಸಿದ್ದರಾಮಯ್ಯ
ಚಿಕ್ಕಮಗಳೂರು: ತಮ್ಮದೇ ಹೆಸರಿನ ಸೇತುವೆ ಉದ್ಘಾಟಿಸಿದ ಸಿಎಂ ಸಿದ್ದರಾಮಯ್ಯ