AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ತೋತಾಪುರಿ’ ಹಿಡಿದು ನಗಿಸಲು ಬಂದ ಜಗ್ಗೇಶ್​; ‘ನೀರ್​ ದೋಸೆ’ ಜೋಡಿಯ ನಗೆ ಹಬ್ಬ

Jaggesh: ‘ನೀರ್​ ದೋಸೆ’ ಸಿನಿಮಾ ಮಾಡಿದ್ದ ನಿರ್ದೇಶಕ ವಿಜಯ್​ ಪ್ರಸಾದ್​ ಮತ್ತು ನಟ ಜಗ್ಗೇಶ್​ ಅವರು ಈಗ ‘ತೋತಾಪುರಿ’ ರುಚಿ ತೋರಿಸಲು ಸಜ್ಜಾಗುತ್ತಿದ್ದಾರೆ. ಈ ಸಿನಿಮಾದ ಟೀಸರ್​ ಪ್ರೋಮೋ ಬಿಡುಗಡೆ ಆಗಿದ್ದು, ಅಭಿಮಾನಿಗಳಿಗೆ ಇಷ್ಟ ಆಗುತ್ತಿದೆ.

‘ತೋತಾಪುರಿ’ ಹಿಡಿದು ನಗಿಸಲು ಬಂದ ಜಗ್ಗೇಶ್​; ‘ನೀರ್​ ದೋಸೆ’ ಜೋಡಿಯ ನಗೆ ಹಬ್ಬ
ಜಗ್ಗೇಶ್
TV9 Web
| Edited By: |

Updated on: Aug 27, 2021 | 9:57 AM

Share

ಇತ್ತೀಚೆಗೆ ನಟ ಜಗ್ಗೇಶ್​ (Jaggesh) ಅವರು ಕೆಲವು ವಿವಾದಗಳ ಕಾರಣದಿಂದ ಅಸಮಾಧಾನಗೊಂಡಿದ್ದರು. ಆದರೆ ಈಗ ಅದನ್ನೆಲ್ಲ ಬದಿಗಿಟ್ಟು ಪ್ರೇಕ್ಷಕರನ್ನು ಮನಸಾರೆ ರಂಜಿಸಲು ಬಂದಿದ್ದಾರೆ. ಅವರು ನಟಿಸಿರುವ ‘ತೋತಾಪುರಿ’ (Thothapuri) ಸಿನಿಮಾದ ಟೀಸರ್​ ಪ್ರೋಮೋ ಬಿಡುಗಡೆ ಆಗಿದ್ದು, ಆ ಮೂಲಕ ಅಭಿಮಾನಿಗಳಿಗೆ ಕಾಮಿಡಿ ಕಚಗುಳಿ ಇಡುತ್ತಿದ್ದಾರೆ. ಈ ಸಿನಿಮಾ ಪ್ರಾರಂಭದಿಂದಲೂ ಸದ್ದು ಮಾಡುತ್ತಿದೆ. ಎರಡು ಭಾಗಗಳಲ್ಲಿ ಬಿಡುಗಡೆಯಾಗಲಿರುವ ಈ ಚಿತ್ರದ ಮೇಲೆ ಅಭಿಮಾನಿಗಳು ಹೆಚ್ಚು ನಿರೀಕ್ಷೆ ಇಟ್ಟುಕೊಂಡಿದ್ದಾರೆ. ಆ ನಿರೀಕ್ಷೆಯನ್ನು ಹೆಚ್ಚಿಸಲು ಶೀಘ್ರದಲ್ಲೇ ಟೀಸರ್​ ಬಿಡುಗಡೆ ಆಗಲಿದೆ.

ಈ ಪ್ರೋಮೋನಲ್ಲಿ ಜಗ್ಗೇಶ್ ಹಾಗೂ ವಿಜಯ್​ ಪ್ರಸಾದ್ ಮಾತಿನಲ್ಲೇ ಕಚಗುಳಿ ಇಟ್ಟಿದ್ದಾರೆ. ವಿಶೇಷವಾಗಿ ಸಿನಿಮಾದ ಪ್ರಮೋಶನ್ ಮಾಡುವ ಉದ್ದೇಶದಿಂದ ಈ ಟೀಸರ್‌ ಪ್ರೋಮೋವನ್ನು ಶೂಟ್ ಮಾಡಿ ಸುರೇಶ್ ಆರ್ಟ್ಸ್ ಯೂಟ್ಯೂಬ್ ಚಾನಲ್ ಮೂಲಕ ರಿಲೀಸ್ ಮಾಡಿದೆ. ಜಗ್ಗೇಶ್​ ಅಭಿಮಾನಿಗಳಿಗೆ ಈ ಪ್ರಯತ್ನ ಇಷ್ಟ ಆಗುತ್ತಿದೆ. ಇದನ್ನು ಜಗ್ಗೇಶ್​ ಅವರು ತಮ್ಮ ಸೋಶಿಯಲ್​ ಮೀಡಿಯಾ ಖಾತೆಗಳಲ್ಲಿ ಹಂಚಿಕೊಂಡಿದ್ದಾರೆ.

‘ನೀರ್‌ದೋಸೆ’ ಸಿನಿಮಾ ಮೂಲಯ ಯಶಸ್ಸು ಕಂಡ ನಿರ್ದೇಶಕ ವಿಜಯ್​ ಪ್ರಸಾದ್ ಹಾಗೂ ಜಗ್ಗೇಶ್ ‘ತೋತಾಪುರಿ’ ಚಿತ್ರದ ಮೂಲಕ ಮತ್ತೆ ಪ್ರೇಕ್ಷಕರನ್ನು ರಂಜಿಸಲು ಬರುತ್ತಿದ್ದಾರೆ. ಈ ಚಿತ್ರದಲ್ಲಿ ಜಗ್ಗೇಶ್ ಹಾಗೂ ಇತರ ಕಲಾವಿದರ ಗೆಟಪ್ ತುಂಬಾ ವಿಭಿನ್ನವಾಗಿದೆ. 2 ಪಾರ್ಟ್​ಗಳಲ್ಲಿ ಈ ಸಿನಿಮಾ ಬಿಡುಗಡೆ ಆಗಲಿದ್ದು, ಏಕಕಾಲಕ್ಕೆ ಎರಡೂ ಭಾಗದ ಚಿತ್ರೀಕರಣ ಮುಕ್ತಾಯವಾಗಿದೆ.

ಸದ್ಯ ಈ ಚಿತ್ರ ಬಿಡುಗಡೆಯ ಹಂತಕ್ಕೆ ಬಂದು ನಿಂತಿದೆ. ಜಗ್ಗೇಶ್ ಈವರೆಗೂ ನಟಿಸಿರುವ ಚಿತ್ರಗಳಲ್ಲಿ ಇದು ಬಿಗ್ ಬಜೆಟ್ ಸಿನಿಮಾ ಎನ್ನಲಾಗಿದೆ. ಭಾಗ-1 ಭಾಗ-2ರಲ್ಲಿ ಅವರು ಕಾಣಿಸಿಕೊಂಡಿದ್ದು ಕೂಡ ಇದೇ ಮೊದಲು. ಜಗ್ಗೇಶ್ ಸೇರಿದಂತೆ ಚಿತ್ರದಲ್ಲಿ 80ಕ್ಕೂ ಅಧಿಕ ಕಲಾವಿದರು ನಟಿಸಿದ್ದಾರೆ. ಅದಿತಿ ಪ್ರಭುದೇವ, ಡಾಲಿ ಧನಂಜಯ, ಸುಮನ್ ರಂಗನಾಥ್, ದತ್ತಣ್ಣ, ವೀಣಾ ಸುಂದರ್, ಹೇಮಾದತ್ ಸೇರಿದಂತೆ ಅನೇಕರು ಪ್ರಮುಖ ಪಾತ್ರಗಳಲ್ಲಿ ಮಿಂಚಿದ್ದಾರೆ.

ತಾಂತ್ರಿಕತೆಯ ವಿಚಾರದಲ್ಲೂ ಈ ಚಿತ್ರ ಸದ್ದು ಮಾಡುತ್ತಿದೆ. ಹಿಟ್ ಸಿನಿಮಾಗಳನ್ನು ನೀಡಿರುವ ‘ಸುರೇಶ್ ಆರ್ಟ್ಸ್‌’ ಬ್ಯಾನರ್‌ನ ಕೆ.ಎ. ಸುರೇಶ್ ಈ ಚಿತ್ರಕ್ಕೆ ಬಂಡವಾಳ ಹೂಡಿದ್ದಾರೆ. ಜಗ್ಗೇಶ್ ನಟನೆಯ ಎದ್ದೇಳು ಮಂಜುನಾಥ, ನೀರ್‌ ದೋಸೆ ಸಿನಿಮಾಗಳಿಗೆ ಸಂಗೀತ ಸಂಯೋಜಿಸಿದ್ದ ಅನೂಪ್ ಸೀಳಿನ್ ‘ತೋತಾಪುರಿ’ಗೂ ಸಂಗೀತ ನಿರ್ದೇಶನ ಮಾಡಿದ್ದು, ಹಿನ್ನೆಲೆ ಸಂಗೀತದ ಜವಾಬ್ದಾರಿಯನ್ನೂ ನಿಭಾಯಿಸಿದ್ದಾರೆ.

ನಿರಂಜನ್ ಬಾಬು ಛಾಯಾಗ್ರಹಣ, ಸುರೇಶ್ ಅರಸ್ ಸಂಕಲನ ಈ ಚಿತ್ರಕ್ಕಿದೆ. ಮೈಸೂರು, ಶ್ರೀರಂಗಪಟ್ಟಣ, ಮಡಿಕೇರಿ, ಕೇರಳ, ಬೆಂಗಳೂರು ಸುತ್ತಮುತ್ತ ಚಿತ್ರೀಕರಣ ನಡೆಸಲಾಗಿದೆ. ಚಿತ್ರಮಂದಿರಗಳಿಗೆ ಶೇ.100 ಆಸನ ಭರ್ತಿಗೆ ಅವಕಾಶ ಸಿಕ್ಕ ಕೂಡಲೇ ಸಿನಿಮಾ ಬಿಡುಗಡೆ ಮಾಡಲು ತಂಡ ಸಜ್ಜಾಗಿದೆ. ಅದಕ್ಕಾಗಿ ಸರ್ಕಾರದ ಅನುಮತಿಗಾಗಿ ‘ತೋತಾಪುರಿ’ ತಂಡ ಕಾಯುತ್ತಿದೆ.

ಇದನ್ನೂ ಓದಿ:

ದಲಿತ ಸಂಘರ್ಷ ಸಮಿತಿಯ ರಘು ವಿರುದ್ಧ ಬಹಿರಂಗವಾಗಿ ಕಾನೂನು ಸಮರ ಸಾರಿದ ನಟ ಜಗ್ಗೇಶ್​

ಬಾಂಬೆ ಹೀರೋಯಿನ್ ಹೇಗೆ ಮಾತಾಡ್ತಾರೆ? ಮಿಮಿಕ್ರಿ ಮಾಡಿದ ಜಗ್ಗೇಶ್​: ಇಲ್ಲಿದೆ ಮಸ್ತ್​ ಕಾಮಿಡಿ

Follow Us
ದೆಹಲಿಯಲ್ಲಿ ಭಾರಿ ಮಳೆಯಿಂದ ಕಟ್ಟಡ ಕುಸಿತ; ಓರ್ವ ಸಾವು
ದೆಹಲಿಯಲ್ಲಿ ಭಾರಿ ಮಳೆಯಿಂದ ಕಟ್ಟಡ ಕುಸಿತ; ಓರ್ವ ಸಾವು
ಇಂಡೋನೇಷ್ಯಾ ಪ್ರವಾಸ ಮುಗಿಸಿ ಮೆಲ್ಬೋರ್ನ್‌ಗೆ ಬಂದಿಳಿದ ಪ್ರಧಾನಿ ಮೋದಿ
ಇಂಡೋನೇಷ್ಯಾ ಪ್ರವಾಸ ಮುಗಿಸಿ ಮೆಲ್ಬೋರ್ನ್‌ಗೆ ಬಂದಿಳಿದ ಪ್ರಧಾನಿ ಮೋದಿ
ಅನ್ನಭಾಗ್ಯ ಫಲಾನುಭವಿಗಳಿಗೆ ಗುಡ್​ನ್ಯೂಸ್​​: ಶೀಘ್ರದಲ್ಲೇ ಇಂದಿರಾ ಕಿಟ್
ಅನ್ನಭಾಗ್ಯ ಫಲಾನುಭವಿಗಳಿಗೆ ಗುಡ್​ನ್ಯೂಸ್​​: ಶೀಘ್ರದಲ್ಲೇ ಇಂದಿರಾ ಕಿಟ್
ಏಷ್ಯಾಕಪ್ ಟ್ರೋಫಿ ಟೀಂ ಇಂಡಿಯಾ ಕೈ ಸೇರುವುದು ಯಾವಾಗ?
ಏಷ್ಯಾಕಪ್ ಟ್ರೋಫಿ ಟೀಂ ಇಂಡಿಯಾ ಕೈ ಸೇರುವುದು ಯಾವಾಗ?
ಕೆತ್ತಿಕಲ್‌ ಗುಡ್ಡ ಕುಸಿತಕ್ಕೆ ಸ್ಫೋಟಕ ಕಾರಣ ಬಿಚ್ಚಿಟ್ಟ ಪರಿಸರ ತಜ್ಞ
ಕೆತ್ತಿಕಲ್‌ ಗುಡ್ಡ ಕುಸಿತಕ್ಕೆ ಸ್ಫೋಟಕ ಕಾರಣ ಬಿಚ್ಚಿಟ್ಟ ಪರಿಸರ ತಜ್ಞ
ಕನ್ನಡಿಗರ ಬಗ್ಗೆ ಪ್ರೀತಿಯಿಂದ ಮಾತನಾಡಿ ‘ಟಾಕ್ಸಿಕ್’ ನಟಿ ಹುಮಾ ಖುರೇಷಿ
ಕನ್ನಡಿಗರ ಬಗ್ಗೆ ಪ್ರೀತಿಯಿಂದ ಮಾತನಾಡಿ ‘ಟಾಕ್ಸಿಕ್’ ನಟಿ ಹುಮಾ ಖುರೇಷಿ
2 ದಿನ ಕೆರೆಯಲ್ಲಿ ನರಳಾಡಿ ತನ್ನಷ್ಟಕ್ಕೇ ತಾನೆ ಆಚೆ ಬಂದ ಆನೆ
2 ದಿನ ಕೆರೆಯಲ್ಲಿ ನರಳಾಡಿ ತನ್ನಷ್ಟಕ್ಕೇ ತಾನೆ ಆಚೆ ಬಂದ ಆನೆ
ಮತ್ತೊಂದು ಕಲ್ಲು ಗಣಿಗಾರಿಕೆ ದುರಂತ: ಜೆಸಿಬಿ ಮೇಲೆ ಬಿದ್ದ ಬಂಡೆ
ಮತ್ತೊಂದು ಕಲ್ಲು ಗಣಿಗಾರಿಕೆ ದುರಂತ: ಜೆಸಿಬಿ ಮೇಲೆ ಬಿದ್ದ ಬಂಡೆ
ಸಿದ್ದರಾಮಯ್ಯನವರಿಂದ ದೂರ: ವಿಡಿಯೋ ವೈರಲ್ ಬಗ್ಗೆ ಜಾರಕಿಹೊಳಿ ಸ್ಪಷ್ಟನೆ
ಸಿದ್ದರಾಮಯ್ಯನವರಿಂದ ದೂರ: ವಿಡಿಯೋ ವೈರಲ್ ಬಗ್ಗೆ ಜಾರಕಿಹೊಳಿ ಸ್ಪಷ್ಟನೆ
ಜಿಬಿಎ ನಿರ್ಲಕ್ಷ್ಯ: ಹೊಂಡದಲ್ಲಿ ಕಾರಿನ ಚಕ್ರ ಸಿಲುಕಿ ಚಾಲಕನ ಪರದಾಟ
ಜಿಬಿಎ ನಿರ್ಲಕ್ಷ್ಯ: ಹೊಂಡದಲ್ಲಿ ಕಾರಿನ ಚಕ್ರ ಸಿಲುಕಿ ಚಾಲಕನ ಪರದಾಟ